Homeಮುಖಪುಟಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ರಾಜಸ್ಥಾನದ ಕೋಟಾದ ಖಜೂರಿ ಗ್ರಾಮದ ಹೈಯರ್ ಸೀನಿಯರ್ ಸೆಕೆಂಡರಿ ಶಾಲೆಯ ಹಲವಾರು ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ ಆರೋಪದಲ್ಲಿ ವಜಾಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್ (SDM) ಕಚೇರಿಯ ಹೊರಗೆ ಜಮಾಯಿಸಿದ ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ತಮ್ಮ ಶಾಲೆಯಿಂದ ಅಮಾನತುಗೊಳಿಸಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಗ್ರಾಮದ ಸರಪಂಚ್ ಸೇರಿದಂತೆ 17 ಮಂದಿಯನ್ನು ಪಟ್ಟಿ ಮಾಡಿ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಇವರು ತಮ್ಮ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ’ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಸಹಿ ಮಾಡಿದ ಜ್ಞಾಪಕ ಪತ್ರವನ್ನು ತಹಸೀಲ್ದಾರ್ ಮತ್ತು ಎಸ್‌ಡಿಎಂ ಅವರಿಗೆ ಹಸ್ತಾಂತರಿಸಲಾಗಿದೆ. ಅಮಾನತುಗೊಂಡಿರುವ ಶಿಕ್ಷಕರ ಮೇಲಿನ ಎಲ್ಲಾ ಆರೋಪಗಳನ್ನು ರದ್ದುಪಡಿಸಿ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳು ಖಜೂರಿನಲ್ಲಿರುವ ತಮ್ಮ ಹಳ್ಳಿಯ ಶಾಲೆಯಿಂದ ಸಂಗೋಡು ಪಟ್ಟಣದ ಎಸ್‌ಡಿಎಂ ಕಚೇರಿಗೆ ಹಲವಾರು ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ನಡೆದುಕೊಂಡು ಬಂದಿದ್ದು, ಸುಳ್ಳು ಆರೋಪ ಮಾಡಿರುವ ಕೆಲ ವಿದ್ಯಾರ್ಥಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಂಗೋಡಿನ ಸೀನಿಯರ್ ಹೈಯರ್ ಸೆಕೆಂಡರಿ ಶಾಲೆಯ ಫಿರೋಜ್ ಖಾನ್, ಮಿರ್ಜಾ ಮುಜಾಹಿದ್ ಮತ್ತು ಶಬಾನಾ ಎಂಬ ಮೂವರು ಮುಸ್ಲಿಂ ಶಿಕ್ಷಕರು ಫೆಬ್ರವರಿ 21ರಂದು ಬುಧವಾರ ಶಿಕ್ಷಣ ಇಲಾಖೆಯಿಂದ ಅಮಾನತು ಆದೇಶವನ್ನು ಸ್ವೀಕರಿಸಿದ್ದಾರೆ. ಕೋಟಾದ ಜಿಲ್ಲಾ ಶಿಕ್ಷಣಾಧಿಕಾರಿ ಈ ಕುರಿತು ಆದೇಶವನ್ನು ಹೊರಡಿಸಿದ್ದರು.

ಈ ನಿರ್ಧಾರವು ಫೆಬ್ರವರಿ 20, ಮಂಗಳವಾರದಂದು ರಾಜ್ಯ ಶಿಕ್ಷಣ ಸಚಿವರ ಭೇಟಿಯ ಸಂದರ್ಭದಲ್ಲಿ ಕೋಟಾದಲ್ಲಿ ಹಿಂದೂ ಬಲಪಂಥೀಯ ಸಂಘಟನೆಗಳ ಸ್ಥಳೀಯ ಒಕ್ಕೂಟವಾದ ಸರ್ವ್ ಹಿಂದೂ ಸಮಾಜ (SHS) ಸಲ್ಲಿಸಿದ ಮನವಿ ಪತ್ರಕ್ಕೆ ಆಧರಿಸಿದೆ. ಇಸ್ಲಾಮಿಕ್ ಜಿಹಾದಿ ಚಟುವಟಿಕೆಗಳು, ಧಾರ್ಮಿಕ ಮತಾಂತರ ಮತ್ತು ಲವ್ ಜಿಹಾದ್‌ ಬಗ್ಗೆ ಶಿಕ್ಷಕರ ಬಗ್ಗೆ ಪತ್ರದಲ್ಲಿ ಆರೋಪಿಸಲಾಗಿತ್ತು.

2020ರಲ್ಲಿ ಮುಸ್ಲಿಂ ಹುಡುಗನನ್ನು ತನ್ನ ಸ್ವಂತ ಇಚ್ಛೆಯಿಂದ ಹಿಂದೂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯೋರ್ವಳು ವಿವಾಹವಾಗಿದ್ದಳು. ಇದಕ್ಕೆ ಮುಸ್ಲಿಮ್‌ ಪ್ರಾದ್ಯಾಪಕರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.  ವಿದ್ಯಾರ್ಥಿನಿಯ ಕುಟುಂಬವು ಆಕೆಯ ಅಂತರ್‌ಧರ್ಮೀಯ ವಿವಾಹದ ಹಿಂದೆ ಈ ಮೂವರು ಮುಸ್ಲಿಂ ಶಿಕ್ಷಕರ ಕೈವಾಡವಿದೆ ಮತ್ತು ಬಲವಂತದ ಮತಾಂತರ ಎಂದು ಆರೋಪಿಸಿದ್ದಾರೆ.

ಪ್ರಾಂಶುಪಾಲ ಕಮಲೇಶ್ ಕುಮಾರ್ ಬರ್ವಾ ಅವರು ಅಮಾನತು ಆದೇಶವನ್ನು ಸ್ವೀಕರಿಸಿದ ಅದೇ ದಿನದಲ್ಲಿ ಮೂವರನ್ನು ಬಿಡುಗಡೆ ಮಾಡಿದ್ದಾರೆ. ಹಂಗಾಮಿ ಪ್ರಾಂಶುಪಾಲರು ಮತ್ತು ಶಿಕ್ಷಕರುಗೆ ಸರ್ವ್ ಹಿಂದೂ ಸಮಾಜದ ಆರೋಪಗಳನ್ನು ನಿರಾಕರಿಸಿದ್ದಾರೆ.

ಶಾಲೆಯಲ್ಲಿನ 15 ಶಿಕ್ಷಕರಲ್ಲಿ 12 ಮಂದಿ ಹಿಂದೂಗಳಾಗಿದ್ದರು. ಅವರು ಜಿಲ್ಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದು, ಅಮಾನತುಗೊಂಡಿರುವ ಶಿಕ್ಷಕರು ‘ಧರ್ಮ ಪರಿವರ್ತನೆ,’ ‘ಲವ್ ಜಿಹಾದ್’ ಅಥವಾ ‘ನಮಾಜ್’ ನಂತಹ ಯಾವುದೇ ಚಟುವಟಿಕೆಯನ್ನು ಮಾಡಿಲ್ಲ ಎಂದು ಪತ್ರದಲ್ಲಿ ಸಮರ್ಥಿಸಿಕೊಂಡಿದ್ದಾರೆ. ಶಾಲೆಯಲ್ಲಿ ಕೇವಲ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಮತ್ತು ಯಾವುದೇ ‘ಧಾರ್ಮಿಕ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಶಿಕ್ಷಕರು ಒತ್ತಿ ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಕಮಲೇಶ್ ಸಿಂಗ್ ಬೆರ್ವಾ ಅವರು ಮಾತನಾಡಿದ್ದು, ಮೂವರೂ ಶಿಕ್ಷಕರು ಬಹಳ ದಕ್ಷರು, ಮುಜಾಹಿದ್ ಮಿರ್ಜಾ ಪಿಟಿ ಶಿಕ್ಷಕ, ಫಿರೋಜ್ ಖಾನ್ ಪ್ರಾಥಮಿಕ ಶಾಲಾ ಶಿಕ್ಷಕ ಮತ್ತು ಶಬಾನಾ ಮೇಡಮ್ ಅಕ್ಟೋಬರ್‌ನಲ್ಲಿ ಶಾಲೆಗೆ ಸೇರಿದವರು. ನಾನು 2021ರಲ್ಲಿ ಶಾಲೆಗೆ ಸೇರಿದ್ದೇನೆ ಮತ್ತು ಅಂದಿನಿಂದ ಅಮಾನತುಗೊಂಡ ಶಿಕ್ಷಕರು ಸೇರಿದಂತೆ ಯಾವುದೇ ಶಿಕ್ಷಕರ ಅಸಾಮಾನ್ಯ ನಡವಳಿಕೆ ಅಥವಾ ದುರ್ನಡತೆಯನ್ನು ನಾನು ಗಮನಿಸಿಲ್ಲ, ಅವರು ಶಿಕ್ಷಕರಾಗಿದ್ದು, ಯಾವುದೇ ಪಕ್ಷಪಾತವಿಲ್ಲದೆ ತಮ್ಮ ವಿಷಯಗಳನ್ನು ಚೆನ್ನಾಗಿ ಕಲಿಸುತ್ತಾರೆ. ಇದು ಅತ್ಯಂತ ದುರದೃಷ್ಟಕರ. ಈ ಶಿಕ್ಷಕರ ವಿರುದ್ಧ ಇಂತಹ ಆರೋಪಗಳ ಬಗ್ಗೆ ತಿಳಿದು ಆಶ್ಚರ್ಯವಾಯಿತು ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಫೆಬ್ರವರಿ 24ರಂದು ರಾಜಸ್ಥಾನದ ಕೋಟಾ ಜಿಲ್ಲೆಯ ಸಂಗೋಡ್ ಬ್ಲಾಕ್‌ನ ಖಜೂರಿ ಗ್ರಾಮದಲ್ಲಿ ತಮ್ಮ ಶಾಲೆಯ ಹೊರಗೆ ಮೂವರು ಮುಸ್ಲಿಂ ಶಿಕ್ಷಕರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಇಚ್ಛೆಯಿಂದ ಇಲ್ಲಿದ್ದೇವೆ ಮತ್ತು ನಮ್ಮ ಶಿಕ್ಷಕರ ಅಮಾನತು ಆದೇಶಗಳನ್ನು ಹಿಂತೆಗೆದುಕೊಂಡ ನಂತರ ಮತ್ತೆ ತರಗತಿಗೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...