Homeಮುಖಪುಟಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ರಾಜಸ್ಥಾನದ ಕೋಟಾದ ಖಜೂರಿ ಗ್ರಾಮದ ಹೈಯರ್ ಸೀನಿಯರ್ ಸೆಕೆಂಡರಿ ಶಾಲೆಯ ಹಲವಾರು ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ ಆರೋಪದಲ್ಲಿ ವಜಾಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್ (SDM) ಕಚೇರಿಯ ಹೊರಗೆ ಜಮಾಯಿಸಿದ ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ತಮ್ಮ ಶಾಲೆಯಿಂದ ಅಮಾನತುಗೊಳಿಸಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಗ್ರಾಮದ ಸರಪಂಚ್ ಸೇರಿದಂತೆ 17 ಮಂದಿಯನ್ನು ಪಟ್ಟಿ ಮಾಡಿ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಇವರು ತಮ್ಮ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ’ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಸಹಿ ಮಾಡಿದ ಜ್ಞಾಪಕ ಪತ್ರವನ್ನು ತಹಸೀಲ್ದಾರ್ ಮತ್ತು ಎಸ್‌ಡಿಎಂ ಅವರಿಗೆ ಹಸ್ತಾಂತರಿಸಲಾಗಿದೆ. ಅಮಾನತುಗೊಂಡಿರುವ ಶಿಕ್ಷಕರ ಮೇಲಿನ ಎಲ್ಲಾ ಆರೋಪಗಳನ್ನು ರದ್ದುಪಡಿಸಿ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳು ಖಜೂರಿನಲ್ಲಿರುವ ತಮ್ಮ ಹಳ್ಳಿಯ ಶಾಲೆಯಿಂದ ಸಂಗೋಡು ಪಟ್ಟಣದ ಎಸ್‌ಡಿಎಂ ಕಚೇರಿಗೆ ಹಲವಾರು ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ನಡೆದುಕೊಂಡು ಬಂದಿದ್ದು, ಸುಳ್ಳು ಆರೋಪ ಮಾಡಿರುವ ಕೆಲ ವಿದ್ಯಾರ್ಥಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಂಗೋಡಿನ ಸೀನಿಯರ್ ಹೈಯರ್ ಸೆಕೆಂಡರಿ ಶಾಲೆಯ ಫಿರೋಜ್ ಖಾನ್, ಮಿರ್ಜಾ ಮುಜಾಹಿದ್ ಮತ್ತು ಶಬಾನಾ ಎಂಬ ಮೂವರು ಮುಸ್ಲಿಂ ಶಿಕ್ಷಕರು ಫೆಬ್ರವರಿ 21ರಂದು ಬುಧವಾರ ಶಿಕ್ಷಣ ಇಲಾಖೆಯಿಂದ ಅಮಾನತು ಆದೇಶವನ್ನು ಸ್ವೀಕರಿಸಿದ್ದಾರೆ. ಕೋಟಾದ ಜಿಲ್ಲಾ ಶಿಕ್ಷಣಾಧಿಕಾರಿ ಈ ಕುರಿತು ಆದೇಶವನ್ನು ಹೊರಡಿಸಿದ್ದರು.

ಈ ನಿರ್ಧಾರವು ಫೆಬ್ರವರಿ 20, ಮಂಗಳವಾರದಂದು ರಾಜ್ಯ ಶಿಕ್ಷಣ ಸಚಿವರ ಭೇಟಿಯ ಸಂದರ್ಭದಲ್ಲಿ ಕೋಟಾದಲ್ಲಿ ಹಿಂದೂ ಬಲಪಂಥೀಯ ಸಂಘಟನೆಗಳ ಸ್ಥಳೀಯ ಒಕ್ಕೂಟವಾದ ಸರ್ವ್ ಹಿಂದೂ ಸಮಾಜ (SHS) ಸಲ್ಲಿಸಿದ ಮನವಿ ಪತ್ರಕ್ಕೆ ಆಧರಿಸಿದೆ. ಇಸ್ಲಾಮಿಕ್ ಜಿಹಾದಿ ಚಟುವಟಿಕೆಗಳು, ಧಾರ್ಮಿಕ ಮತಾಂತರ ಮತ್ತು ಲವ್ ಜಿಹಾದ್‌ ಬಗ್ಗೆ ಶಿಕ್ಷಕರ ಬಗ್ಗೆ ಪತ್ರದಲ್ಲಿ ಆರೋಪಿಸಲಾಗಿತ್ತು.

2020ರಲ್ಲಿ ಮುಸ್ಲಿಂ ಹುಡುಗನನ್ನು ತನ್ನ ಸ್ವಂತ ಇಚ್ಛೆಯಿಂದ ಹಿಂದೂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯೋರ್ವಳು ವಿವಾಹವಾಗಿದ್ದಳು. ಇದಕ್ಕೆ ಮುಸ್ಲಿಮ್‌ ಪ್ರಾದ್ಯಾಪಕರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.  ವಿದ್ಯಾರ್ಥಿನಿಯ ಕುಟುಂಬವು ಆಕೆಯ ಅಂತರ್‌ಧರ್ಮೀಯ ವಿವಾಹದ ಹಿಂದೆ ಈ ಮೂವರು ಮುಸ್ಲಿಂ ಶಿಕ್ಷಕರ ಕೈವಾಡವಿದೆ ಮತ್ತು ಬಲವಂತದ ಮತಾಂತರ ಎಂದು ಆರೋಪಿಸಿದ್ದಾರೆ.

ಪ್ರಾಂಶುಪಾಲ ಕಮಲೇಶ್ ಕುಮಾರ್ ಬರ್ವಾ ಅವರು ಅಮಾನತು ಆದೇಶವನ್ನು ಸ್ವೀಕರಿಸಿದ ಅದೇ ದಿನದಲ್ಲಿ ಮೂವರನ್ನು ಬಿಡುಗಡೆ ಮಾಡಿದ್ದಾರೆ. ಹಂಗಾಮಿ ಪ್ರಾಂಶುಪಾಲರು ಮತ್ತು ಶಿಕ್ಷಕರುಗೆ ಸರ್ವ್ ಹಿಂದೂ ಸಮಾಜದ ಆರೋಪಗಳನ್ನು ನಿರಾಕರಿಸಿದ್ದಾರೆ.

ಶಾಲೆಯಲ್ಲಿನ 15 ಶಿಕ್ಷಕರಲ್ಲಿ 12 ಮಂದಿ ಹಿಂದೂಗಳಾಗಿದ್ದರು. ಅವರು ಜಿಲ್ಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದು, ಅಮಾನತುಗೊಂಡಿರುವ ಶಿಕ್ಷಕರು ‘ಧರ್ಮ ಪರಿವರ್ತನೆ,’ ‘ಲವ್ ಜಿಹಾದ್’ ಅಥವಾ ‘ನಮಾಜ್’ ನಂತಹ ಯಾವುದೇ ಚಟುವಟಿಕೆಯನ್ನು ಮಾಡಿಲ್ಲ ಎಂದು ಪತ್ರದಲ್ಲಿ ಸಮರ್ಥಿಸಿಕೊಂಡಿದ್ದಾರೆ. ಶಾಲೆಯಲ್ಲಿ ಕೇವಲ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಮತ್ತು ಯಾವುದೇ ‘ಧಾರ್ಮಿಕ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಶಿಕ್ಷಕರು ಒತ್ತಿ ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಕಮಲೇಶ್ ಸಿಂಗ್ ಬೆರ್ವಾ ಅವರು ಮಾತನಾಡಿದ್ದು, ಮೂವರೂ ಶಿಕ್ಷಕರು ಬಹಳ ದಕ್ಷರು, ಮುಜಾಹಿದ್ ಮಿರ್ಜಾ ಪಿಟಿ ಶಿಕ್ಷಕ, ಫಿರೋಜ್ ಖಾನ್ ಪ್ರಾಥಮಿಕ ಶಾಲಾ ಶಿಕ್ಷಕ ಮತ್ತು ಶಬಾನಾ ಮೇಡಮ್ ಅಕ್ಟೋಬರ್‌ನಲ್ಲಿ ಶಾಲೆಗೆ ಸೇರಿದವರು. ನಾನು 2021ರಲ್ಲಿ ಶಾಲೆಗೆ ಸೇರಿದ್ದೇನೆ ಮತ್ತು ಅಂದಿನಿಂದ ಅಮಾನತುಗೊಂಡ ಶಿಕ್ಷಕರು ಸೇರಿದಂತೆ ಯಾವುದೇ ಶಿಕ್ಷಕರ ಅಸಾಮಾನ್ಯ ನಡವಳಿಕೆ ಅಥವಾ ದುರ್ನಡತೆಯನ್ನು ನಾನು ಗಮನಿಸಿಲ್ಲ, ಅವರು ಶಿಕ್ಷಕರಾಗಿದ್ದು, ಯಾವುದೇ ಪಕ್ಷಪಾತವಿಲ್ಲದೆ ತಮ್ಮ ವಿಷಯಗಳನ್ನು ಚೆನ್ನಾಗಿ ಕಲಿಸುತ್ತಾರೆ. ಇದು ಅತ್ಯಂತ ದುರದೃಷ್ಟಕರ. ಈ ಶಿಕ್ಷಕರ ವಿರುದ್ಧ ಇಂತಹ ಆರೋಪಗಳ ಬಗ್ಗೆ ತಿಳಿದು ಆಶ್ಚರ್ಯವಾಯಿತು ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಫೆಬ್ರವರಿ 24ರಂದು ರಾಜಸ್ಥಾನದ ಕೋಟಾ ಜಿಲ್ಲೆಯ ಸಂಗೋಡ್ ಬ್ಲಾಕ್‌ನ ಖಜೂರಿ ಗ್ರಾಮದಲ್ಲಿ ತಮ್ಮ ಶಾಲೆಯ ಹೊರಗೆ ಮೂವರು ಮುಸ್ಲಿಂ ಶಿಕ್ಷಕರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಇಚ್ಛೆಯಿಂದ ಇಲ್ಲಿದ್ದೇವೆ ಮತ್ತು ನಮ್ಮ ಶಿಕ್ಷಕರ ಅಮಾನತು ಆದೇಶಗಳನ್ನು ಹಿಂತೆಗೆದುಕೊಂಡ ನಂತರ ಮತ್ತೆ ತರಗತಿಗೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...