Homeಮುಖಪುಟಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ರಾಜಸ್ಥಾನದ ಕೋಟಾದ ಖಜೂರಿ ಗ್ರಾಮದ ಹೈಯರ್ ಸೀನಿಯರ್ ಸೆಕೆಂಡರಿ ಶಾಲೆಯ ಹಲವಾರು ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ ಆರೋಪದಲ್ಲಿ ವಜಾಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್ (SDM) ಕಚೇರಿಯ ಹೊರಗೆ ಜಮಾಯಿಸಿದ ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ತಮ್ಮ ಶಾಲೆಯಿಂದ ಅಮಾನತುಗೊಳಿಸಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಗ್ರಾಮದ ಸರಪಂಚ್ ಸೇರಿದಂತೆ 17 ಮಂದಿಯನ್ನು ಪಟ್ಟಿ ಮಾಡಿ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಇವರು ತಮ್ಮ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ’ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಸಹಿ ಮಾಡಿದ ಜ್ಞಾಪಕ ಪತ್ರವನ್ನು ತಹಸೀಲ್ದಾರ್ ಮತ್ತು ಎಸ್‌ಡಿಎಂ ಅವರಿಗೆ ಹಸ್ತಾಂತರಿಸಲಾಗಿದೆ. ಅಮಾನತುಗೊಂಡಿರುವ ಶಿಕ್ಷಕರ ಮೇಲಿನ ಎಲ್ಲಾ ಆರೋಪಗಳನ್ನು ರದ್ದುಪಡಿಸಿ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳು ಖಜೂರಿನಲ್ಲಿರುವ ತಮ್ಮ ಹಳ್ಳಿಯ ಶಾಲೆಯಿಂದ ಸಂಗೋಡು ಪಟ್ಟಣದ ಎಸ್‌ಡಿಎಂ ಕಚೇರಿಗೆ ಹಲವಾರು ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ನಡೆದುಕೊಂಡು ಬಂದಿದ್ದು, ಸುಳ್ಳು ಆರೋಪ ಮಾಡಿರುವ ಕೆಲ ವಿದ್ಯಾರ್ಥಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಂಗೋಡಿನ ಸೀನಿಯರ್ ಹೈಯರ್ ಸೆಕೆಂಡರಿ ಶಾಲೆಯ ಫಿರೋಜ್ ಖಾನ್, ಮಿರ್ಜಾ ಮುಜಾಹಿದ್ ಮತ್ತು ಶಬಾನಾ ಎಂಬ ಮೂವರು ಮುಸ್ಲಿಂ ಶಿಕ್ಷಕರು ಫೆಬ್ರವರಿ 21ರಂದು ಬುಧವಾರ ಶಿಕ್ಷಣ ಇಲಾಖೆಯಿಂದ ಅಮಾನತು ಆದೇಶವನ್ನು ಸ್ವೀಕರಿಸಿದ್ದಾರೆ. ಕೋಟಾದ ಜಿಲ್ಲಾ ಶಿಕ್ಷಣಾಧಿಕಾರಿ ಈ ಕುರಿತು ಆದೇಶವನ್ನು ಹೊರಡಿಸಿದ್ದರು.

ಈ ನಿರ್ಧಾರವು ಫೆಬ್ರವರಿ 20, ಮಂಗಳವಾರದಂದು ರಾಜ್ಯ ಶಿಕ್ಷಣ ಸಚಿವರ ಭೇಟಿಯ ಸಂದರ್ಭದಲ್ಲಿ ಕೋಟಾದಲ್ಲಿ ಹಿಂದೂ ಬಲಪಂಥೀಯ ಸಂಘಟನೆಗಳ ಸ್ಥಳೀಯ ಒಕ್ಕೂಟವಾದ ಸರ್ವ್ ಹಿಂದೂ ಸಮಾಜ (SHS) ಸಲ್ಲಿಸಿದ ಮನವಿ ಪತ್ರಕ್ಕೆ ಆಧರಿಸಿದೆ. ಇಸ್ಲಾಮಿಕ್ ಜಿಹಾದಿ ಚಟುವಟಿಕೆಗಳು, ಧಾರ್ಮಿಕ ಮತಾಂತರ ಮತ್ತು ಲವ್ ಜಿಹಾದ್‌ ಬಗ್ಗೆ ಶಿಕ್ಷಕರ ಬಗ್ಗೆ ಪತ್ರದಲ್ಲಿ ಆರೋಪಿಸಲಾಗಿತ್ತು.

2020ರಲ್ಲಿ ಮುಸ್ಲಿಂ ಹುಡುಗನನ್ನು ತನ್ನ ಸ್ವಂತ ಇಚ್ಛೆಯಿಂದ ಹಿಂದೂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯೋರ್ವಳು ವಿವಾಹವಾಗಿದ್ದಳು. ಇದಕ್ಕೆ ಮುಸ್ಲಿಮ್‌ ಪ್ರಾದ್ಯಾಪಕರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.  ವಿದ್ಯಾರ್ಥಿನಿಯ ಕುಟುಂಬವು ಆಕೆಯ ಅಂತರ್‌ಧರ್ಮೀಯ ವಿವಾಹದ ಹಿಂದೆ ಈ ಮೂವರು ಮುಸ್ಲಿಂ ಶಿಕ್ಷಕರ ಕೈವಾಡವಿದೆ ಮತ್ತು ಬಲವಂತದ ಮತಾಂತರ ಎಂದು ಆರೋಪಿಸಿದ್ದಾರೆ.

ಪ್ರಾಂಶುಪಾಲ ಕಮಲೇಶ್ ಕುಮಾರ್ ಬರ್ವಾ ಅವರು ಅಮಾನತು ಆದೇಶವನ್ನು ಸ್ವೀಕರಿಸಿದ ಅದೇ ದಿನದಲ್ಲಿ ಮೂವರನ್ನು ಬಿಡುಗಡೆ ಮಾಡಿದ್ದಾರೆ. ಹಂಗಾಮಿ ಪ್ರಾಂಶುಪಾಲರು ಮತ್ತು ಶಿಕ್ಷಕರುಗೆ ಸರ್ವ್ ಹಿಂದೂ ಸಮಾಜದ ಆರೋಪಗಳನ್ನು ನಿರಾಕರಿಸಿದ್ದಾರೆ.

ಶಾಲೆಯಲ್ಲಿನ 15 ಶಿಕ್ಷಕರಲ್ಲಿ 12 ಮಂದಿ ಹಿಂದೂಗಳಾಗಿದ್ದರು. ಅವರು ಜಿಲ್ಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದು, ಅಮಾನತುಗೊಂಡಿರುವ ಶಿಕ್ಷಕರು ‘ಧರ್ಮ ಪರಿವರ್ತನೆ,’ ‘ಲವ್ ಜಿಹಾದ್’ ಅಥವಾ ‘ನಮಾಜ್’ ನಂತಹ ಯಾವುದೇ ಚಟುವಟಿಕೆಯನ್ನು ಮಾಡಿಲ್ಲ ಎಂದು ಪತ್ರದಲ್ಲಿ ಸಮರ್ಥಿಸಿಕೊಂಡಿದ್ದಾರೆ. ಶಾಲೆಯಲ್ಲಿ ಕೇವಲ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಮತ್ತು ಯಾವುದೇ ‘ಧಾರ್ಮಿಕ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಶಿಕ್ಷಕರು ಒತ್ತಿ ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಕಮಲೇಶ್ ಸಿಂಗ್ ಬೆರ್ವಾ ಅವರು ಮಾತನಾಡಿದ್ದು, ಮೂವರೂ ಶಿಕ್ಷಕರು ಬಹಳ ದಕ್ಷರು, ಮುಜಾಹಿದ್ ಮಿರ್ಜಾ ಪಿಟಿ ಶಿಕ್ಷಕ, ಫಿರೋಜ್ ಖಾನ್ ಪ್ರಾಥಮಿಕ ಶಾಲಾ ಶಿಕ್ಷಕ ಮತ್ತು ಶಬಾನಾ ಮೇಡಮ್ ಅಕ್ಟೋಬರ್‌ನಲ್ಲಿ ಶಾಲೆಗೆ ಸೇರಿದವರು. ನಾನು 2021ರಲ್ಲಿ ಶಾಲೆಗೆ ಸೇರಿದ್ದೇನೆ ಮತ್ತು ಅಂದಿನಿಂದ ಅಮಾನತುಗೊಂಡ ಶಿಕ್ಷಕರು ಸೇರಿದಂತೆ ಯಾವುದೇ ಶಿಕ್ಷಕರ ಅಸಾಮಾನ್ಯ ನಡವಳಿಕೆ ಅಥವಾ ದುರ್ನಡತೆಯನ್ನು ನಾನು ಗಮನಿಸಿಲ್ಲ, ಅವರು ಶಿಕ್ಷಕರಾಗಿದ್ದು, ಯಾವುದೇ ಪಕ್ಷಪಾತವಿಲ್ಲದೆ ತಮ್ಮ ವಿಷಯಗಳನ್ನು ಚೆನ್ನಾಗಿ ಕಲಿಸುತ್ತಾರೆ. ಇದು ಅತ್ಯಂತ ದುರದೃಷ್ಟಕರ. ಈ ಶಿಕ್ಷಕರ ವಿರುದ್ಧ ಇಂತಹ ಆರೋಪಗಳ ಬಗ್ಗೆ ತಿಳಿದು ಆಶ್ಚರ್ಯವಾಯಿತು ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಫೆಬ್ರವರಿ 24ರಂದು ರಾಜಸ್ಥಾನದ ಕೋಟಾ ಜಿಲ್ಲೆಯ ಸಂಗೋಡ್ ಬ್ಲಾಕ್‌ನ ಖಜೂರಿ ಗ್ರಾಮದಲ್ಲಿ ತಮ್ಮ ಶಾಲೆಯ ಹೊರಗೆ ಮೂವರು ಮುಸ್ಲಿಂ ಶಿಕ್ಷಕರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಇಚ್ಛೆಯಿಂದ ಇಲ್ಲಿದ್ದೇವೆ ಮತ್ತು ನಮ್ಮ ಶಿಕ್ಷಕರ ಅಮಾನತು ಆದೇಶಗಳನ್ನು ಹಿಂತೆಗೆದುಕೊಂಡ ನಂತರ ಮತ್ತೆ ತರಗತಿಗೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...