Homeಮುಖಪುಟಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮತಾಂತರ, ಲವ್ ಜಿಹಾದ್ ಆರೋಪದಲ್ಲಿ ಮುಸ್ಲಿಂ ಶಿಕ್ಷಕರ ಅಮಾನತು: ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ರಾಜಸ್ಥಾನದ ಕೋಟಾದ ಖಜೂರಿ ಗ್ರಾಮದ ಹೈಯರ್ ಸೀನಿಯರ್ ಸೆಕೆಂಡರಿ ಶಾಲೆಯ ಹಲವಾರು ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ ಆರೋಪದಲ್ಲಿ ವಜಾಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಉಪ-ಜಿಲ್ಲಾ ಮ್ಯಾಜಿಸ್ಟ್ರೇಟ್ (SDM) ಕಚೇರಿಯ ಹೊರಗೆ ಜಮಾಯಿಸಿದ ವಿದ್ಯಾರ್ಥಿಗಳು ಮೂವರು ಮುಸ್ಲಿಂ ಶಿಕ್ಷಕರನ್ನು ತಮ್ಮ ಶಾಲೆಯಿಂದ ಅಮಾನತುಗೊಳಿಸಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಗ್ರಾಮದ ಸರಪಂಚ್ ಸೇರಿದಂತೆ 17 ಮಂದಿಯನ್ನು ಪಟ್ಟಿ ಮಾಡಿ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಇವರು ತಮ್ಮ ಶಿಕ್ಷಕರನ್ನು ‘ಧಾರ್ಮಿಕ ಮತಾಂತರ ಮತ್ತು ಜಿಹಾದಿ ಚಟುವಟಿಕೆಗಳ’ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳು ಸಹಿ ಮಾಡಿದ ಜ್ಞಾಪಕ ಪತ್ರವನ್ನು ತಹಸೀಲ್ದಾರ್ ಮತ್ತು ಎಸ್‌ಡಿಎಂ ಅವರಿಗೆ ಹಸ್ತಾಂತರಿಸಲಾಗಿದೆ. ಅಮಾನತುಗೊಂಡಿರುವ ಶಿಕ್ಷಕರ ಮೇಲಿನ ಎಲ್ಲಾ ಆರೋಪಗಳನ್ನು ರದ್ದುಪಡಿಸಿ ಅಮಾನತು ಆದೇಶವನ್ನು ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳು ಖಜೂರಿನಲ್ಲಿರುವ ತಮ್ಮ ಹಳ್ಳಿಯ ಶಾಲೆಯಿಂದ ಸಂಗೋಡು ಪಟ್ಟಣದ ಎಸ್‌ಡಿಎಂ ಕಚೇರಿಗೆ ಹಲವಾರು ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ನಡೆದುಕೊಂಡು ಬಂದಿದ್ದು, ಸುಳ್ಳು ಆರೋಪ ಮಾಡಿರುವ ಕೆಲ ವಿದ್ಯಾರ್ಥಿಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಂಗೋಡಿನ ಸೀನಿಯರ್ ಹೈಯರ್ ಸೆಕೆಂಡರಿ ಶಾಲೆಯ ಫಿರೋಜ್ ಖಾನ್, ಮಿರ್ಜಾ ಮುಜಾಹಿದ್ ಮತ್ತು ಶಬಾನಾ ಎಂಬ ಮೂವರು ಮುಸ್ಲಿಂ ಶಿಕ್ಷಕರು ಫೆಬ್ರವರಿ 21ರಂದು ಬುಧವಾರ ಶಿಕ್ಷಣ ಇಲಾಖೆಯಿಂದ ಅಮಾನತು ಆದೇಶವನ್ನು ಸ್ವೀಕರಿಸಿದ್ದಾರೆ. ಕೋಟಾದ ಜಿಲ್ಲಾ ಶಿಕ್ಷಣಾಧಿಕಾರಿ ಈ ಕುರಿತು ಆದೇಶವನ್ನು ಹೊರಡಿಸಿದ್ದರು.

ಈ ನಿರ್ಧಾರವು ಫೆಬ್ರವರಿ 20, ಮಂಗಳವಾರದಂದು ರಾಜ್ಯ ಶಿಕ್ಷಣ ಸಚಿವರ ಭೇಟಿಯ ಸಂದರ್ಭದಲ್ಲಿ ಕೋಟಾದಲ್ಲಿ ಹಿಂದೂ ಬಲಪಂಥೀಯ ಸಂಘಟನೆಗಳ ಸ್ಥಳೀಯ ಒಕ್ಕೂಟವಾದ ಸರ್ವ್ ಹಿಂದೂ ಸಮಾಜ (SHS) ಸಲ್ಲಿಸಿದ ಮನವಿ ಪತ್ರಕ್ಕೆ ಆಧರಿಸಿದೆ. ಇಸ್ಲಾಮಿಕ್ ಜಿಹಾದಿ ಚಟುವಟಿಕೆಗಳು, ಧಾರ್ಮಿಕ ಮತಾಂತರ ಮತ್ತು ಲವ್ ಜಿಹಾದ್‌ ಬಗ್ಗೆ ಶಿಕ್ಷಕರ ಬಗ್ಗೆ ಪತ್ರದಲ್ಲಿ ಆರೋಪಿಸಲಾಗಿತ್ತು.

2020ರಲ್ಲಿ ಮುಸ್ಲಿಂ ಹುಡುಗನನ್ನು ತನ್ನ ಸ್ವಂತ ಇಚ್ಛೆಯಿಂದ ಹಿಂದೂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯೋರ್ವಳು ವಿವಾಹವಾಗಿದ್ದಳು. ಇದಕ್ಕೆ ಮುಸ್ಲಿಮ್‌ ಪ್ರಾದ್ಯಾಪಕರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.  ವಿದ್ಯಾರ್ಥಿನಿಯ ಕುಟುಂಬವು ಆಕೆಯ ಅಂತರ್‌ಧರ್ಮೀಯ ವಿವಾಹದ ಹಿಂದೆ ಈ ಮೂವರು ಮುಸ್ಲಿಂ ಶಿಕ್ಷಕರ ಕೈವಾಡವಿದೆ ಮತ್ತು ಬಲವಂತದ ಮತಾಂತರ ಎಂದು ಆರೋಪಿಸಿದ್ದಾರೆ.

ಪ್ರಾಂಶುಪಾಲ ಕಮಲೇಶ್ ಕುಮಾರ್ ಬರ್ವಾ ಅವರು ಅಮಾನತು ಆದೇಶವನ್ನು ಸ್ವೀಕರಿಸಿದ ಅದೇ ದಿನದಲ್ಲಿ ಮೂವರನ್ನು ಬಿಡುಗಡೆ ಮಾಡಿದ್ದಾರೆ. ಹಂಗಾಮಿ ಪ್ರಾಂಶುಪಾಲರು ಮತ್ತು ಶಿಕ್ಷಕರುಗೆ ಸರ್ವ್ ಹಿಂದೂ ಸಮಾಜದ ಆರೋಪಗಳನ್ನು ನಿರಾಕರಿಸಿದ್ದಾರೆ.

ಶಾಲೆಯಲ್ಲಿನ 15 ಶಿಕ್ಷಕರಲ್ಲಿ 12 ಮಂದಿ ಹಿಂದೂಗಳಾಗಿದ್ದರು. ಅವರು ಜಿಲ್ಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದು, ಅಮಾನತುಗೊಂಡಿರುವ ಶಿಕ್ಷಕರು ‘ಧರ್ಮ ಪರಿವರ್ತನೆ,’ ‘ಲವ್ ಜಿಹಾದ್’ ಅಥವಾ ‘ನಮಾಜ್’ ನಂತಹ ಯಾವುದೇ ಚಟುವಟಿಕೆಯನ್ನು ಮಾಡಿಲ್ಲ ಎಂದು ಪತ್ರದಲ್ಲಿ ಸಮರ್ಥಿಸಿಕೊಂಡಿದ್ದಾರೆ. ಶಾಲೆಯಲ್ಲಿ ಕೇವಲ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಮತ್ತು ಯಾವುದೇ ‘ಧಾರ್ಮಿಕ ಚಟುವಟಿಕೆಗಳು ನಡೆಯುವುದಿಲ್ಲ ಎಂದು ಶಿಕ್ಷಕರು ಒತ್ತಿ ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಕಮಲೇಶ್ ಸಿಂಗ್ ಬೆರ್ವಾ ಅವರು ಮಾತನಾಡಿದ್ದು, ಮೂವರೂ ಶಿಕ್ಷಕರು ಬಹಳ ದಕ್ಷರು, ಮುಜಾಹಿದ್ ಮಿರ್ಜಾ ಪಿಟಿ ಶಿಕ್ಷಕ, ಫಿರೋಜ್ ಖಾನ್ ಪ್ರಾಥಮಿಕ ಶಾಲಾ ಶಿಕ್ಷಕ ಮತ್ತು ಶಬಾನಾ ಮೇಡಮ್ ಅಕ್ಟೋಬರ್‌ನಲ್ಲಿ ಶಾಲೆಗೆ ಸೇರಿದವರು. ನಾನು 2021ರಲ್ಲಿ ಶಾಲೆಗೆ ಸೇರಿದ್ದೇನೆ ಮತ್ತು ಅಂದಿನಿಂದ ಅಮಾನತುಗೊಂಡ ಶಿಕ್ಷಕರು ಸೇರಿದಂತೆ ಯಾವುದೇ ಶಿಕ್ಷಕರ ಅಸಾಮಾನ್ಯ ನಡವಳಿಕೆ ಅಥವಾ ದುರ್ನಡತೆಯನ್ನು ನಾನು ಗಮನಿಸಿಲ್ಲ, ಅವರು ಶಿಕ್ಷಕರಾಗಿದ್ದು, ಯಾವುದೇ ಪಕ್ಷಪಾತವಿಲ್ಲದೆ ತಮ್ಮ ವಿಷಯಗಳನ್ನು ಚೆನ್ನಾಗಿ ಕಲಿಸುತ್ತಾರೆ. ಇದು ಅತ್ಯಂತ ದುರದೃಷ್ಟಕರ. ಈ ಶಿಕ್ಷಕರ ವಿರುದ್ಧ ಇಂತಹ ಆರೋಪಗಳ ಬಗ್ಗೆ ತಿಳಿದು ಆಶ್ಚರ್ಯವಾಯಿತು ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಫೆಬ್ರವರಿ 24ರಂದು ರಾಜಸ್ಥಾನದ ಕೋಟಾ ಜಿಲ್ಲೆಯ ಸಂಗೋಡ್ ಬ್ಲಾಕ್‌ನ ಖಜೂರಿ ಗ್ರಾಮದಲ್ಲಿ ತಮ್ಮ ಶಾಲೆಯ ಹೊರಗೆ ಮೂವರು ಮುಸ್ಲಿಂ ಶಿಕ್ಷಕರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಹಲವಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ನಾವು ಸ್ವಇಚ್ಛೆಯಿಂದ ಇಲ್ಲಿದ್ದೇವೆ ಮತ್ತು ನಮ್ಮ ಶಿಕ್ಷಕರ ಅಮಾನತು ಆದೇಶಗಳನ್ನು ಹಿಂತೆಗೆದುಕೊಂಡ ನಂತರ ಮತ್ತೆ ತರಗತಿಗೆ ಹೋಗುತ್ತೇವೆ ಎಂದು ಪಟ್ಟು ಹಿಡಿದಿದ್ದರು.

ಇದನ್ನು ಓದಿ: ‘ಸಂವಿಧಾನ, ಏಕತಾ ಸಮಾವೇಶ’ಕ್ಕೆ ಕರ್ನಾಟಕ ಸರಕಾರ ಆಹ್ವಾನಿಸಿದ್ದ UK ಪ್ರಾಧ್ಯಾಪಕಿಗೆ ಭಾರತಕ್ಕೆ ಪ್ರವೇಶ ನಿರಾಕರಣೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...