Homeಮುಖಪುಟದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ದೇಶದ ಸಾಕ್ಷಿಪ್ರಜ್ಞೆ ಬಾಬಾಸಾಹೇಬರ ಬೌದ್ಧಿಕ ವಾರಸುದಾರ: ಚಿಂತಕ ಆನಂದ್ ತೇಲ್ತುಂಬ್ಡೆ

ಗಾಂಧೀಜಿಯ ಬರಹಗಳನ್ನು ಬಹಳ ಗೌರವದಿಂದ ಓದುವುದೇ ಅಲ್ಲದೇ, ಗಾಂಧಿಯವರನ್ನು ಭಾರತೀಯ ಸಮಾಜ ಮತ್ತಷ್ಟು ಪರಿಣಿತಿಯಿಂದ ಅಂದಾಜು ಮಾಡಬೇಕೆಂದು ತೇಲ್ತುಂಬ್ಡೆ ವಾದಿಸುತ್ತಾರೆ.

- Advertisement -
- Advertisement -

ಸ್ವಾತಂತ್ರ‍್ಯಾನಂತರದಲ್ಲಿ ಅತಿ ಬಡ ದಲಿತ ಕುಟುಂಬದಲ್ಲಿ ಹುಟ್ಟಿದ ಆನಂದ್ ತೇಲ್ತುಂಬ್ಡೆ ಡಾ. ಅಂಬೇಡ್ಕರ್ ಚಿಂತನೆಗಳಿಂದ ಸ್ಪೂರ್ತಿ ಪಡೆದು ಕೇವಲ ತನ್ನ ಸ್ವಂತಶಕ್ತಿಯಿಂದ ಅತ್ಯಂತ ಪ್ರತಿಭಾವಂತನಾದ ಚಿಂತಕನಾಗಿ ಬೆಳೆದರು. ಬಹುಶಃ ನನಗೆ ತಿಳಿದಂತೆ ಅಂಬೇಡ್ಕರ್ ಬರಹಗಳನ್ನು ಅಷ್ಟು ಸಂಪೂರ್ಣವಾಗಿ ಓದಿದವರು ಬಹಳ ಕಡಿಮೆ. ಆನಂದ್ ಅಂಬೇಡ್ಕರ್‌ರನ್ನು ಆಳವಾಗಿ ಅಧ್ಯಯನ ಮಾಡಿದ್ದೇ ಅಲ್ಲದೇ ಮಾರ್ಕ್ಸಿಸಂಅನ್ನು ಕೂಡ ಆಳವಾಗಿ ಅಧ್ಯಯನ ಮಾಡಿದವರು. ಮಾರ್ಕ್ಸಿಸಂನ ಚಾರಿತ್ರಿಕ, ತಾತ್ವಿಕ, ನೈತಿಕ ದೃಷ್ಟಿಕೋನಗಳನ್ನು ಹೆಚ್ಚು ಸಮಗ್ರವಾಗಿ ಹೆಚ್ಚು ಸೂಕ್ಷ್ಮವಾಗಿ ಅಧ್ಯಯನ ಮಾಡಿದವರು. ಬಹಳ ಆಶ್ಚರ್ಯವೆಂದರೆ ಗಾಂಧೀಜಿಯ ಬರಹಗಳನ್ನು ಬಹಳ ಗೌರವದಿಂದ ಓದುವುದೇ ಅಲ್ಲದೇ, ಗಾಂಧಿಯವರನ್ನು ಭಾರತೀಯ ಸಮಾಜ ಮತ್ತಷ್ಟು ಪರಿಣಿತಿಯಿಂದ ಅಂದಾಜು ಮಾಡಬೇಕೆಂದು ತೇಲ್ತುಂಬ್ಡೆ ವಾದಿಸುತ್ತಾರೆ. ಈ ಮೂರು ಚಿಂತನೆಗಳ ಧಾರೆಗಳ ಪ್ರಭಾವದಿಂದ ಅವರು ರಚಿಸಿದ 29 ಪುಸ್ತಕಗಳನ್ನು ನೋಡಬಹುದು. ಈ ಪುಸ್ತಕಗಳೆಲ್ಲಾ ಆನಂದ್ ಅವರ ಬೌದ್ಧಿಕ ಶಿಖರಕ್ಕೆ ಕನ್ನಡಿಯಾಗಿವೆ.

ಆನಂದ್ ಚಿಕ್ಕಂದಿನಿಂದಲೇ ಬಹಳ ಚುರುಕಾದ ವಿದ್ಯಾರ್ಥಿ. ಕಡು ಬಡತನದ ಕಾರಣಕ್ಕೆ ರಜೆಯಲ್ಲಿ ಮನೆಗಳಿಗೆ ಸುಣ್ಣ ಬಳಿಯಲು ಹೋಗಿ ಅದರಿಂದ ಬಂದ ಹಣದಿಂದ ವಿದ್ಯಾಭ್ಯಾಸ ಮಾಡಿದರು. ಒಮ್ಮೆ ನಾನು ಆನಂದ್ ಅವರ ತಾಯಿಯನ್ನು ಭೇಟಿಯಾದಾಗ ನಿಮ್ಮ ಮಗನಿಗೆ ಹೆಸರು ಪ್ರತಿಷ್ಟೆ ಎಲ್ಲಾ ಇದೆ, ಒಳ್ಳೆಯ ಮಗನಿಗೆ ತಾಯಿ ನೀವು ಅಂದಾಗ ನನ್ನ ಮುಖವನ್ನೆಲ್ಲಾ ತನ್ನ ಕೈಗಳಿಂದ ಅಪ್ಯಾಯಮಾನವಾಗಿ ಸವರಿದಳು. ಆ ತಾಯಿ ಮನಸ್ಸೆಲ್ಲಾ ಪ್ರೀತಿ ತುಂಬಿದ ಮನುಷ್ಯಳಂತೆ ಕಂಡರು. ಆನಂದ್ ಎಲೆಕ್ಟ್ರೀಕಲ್ ಇಂಜಿನಿಯರಿಂಗ್‌ನಲ್ಲಿ ಪದವೀಧರರು. ಆ ನಂತರ ಬಾಂಬೆ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದರು. ಇದರ ಜೊತೆಗೆ ಪ್ರತಿಷ್ಠಿತ ಅಹ್ಮದಾಬಾದ್ ಐ.ಐ.ಎಮ್‌ನಿಂದ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಪಡೆದರು. ಆಧುನಿಕ ಐ.ಟಿ ರಂಗದಲ್ಲಿ ಮೆಗಾ ಅನಾಲಿಟಿಕ್ಸ್‌ನಲ್ಲಿ ಪ್ರಾವಿಣ್ಯತೆ ಗಳಿಸಿದರು. ಕೆಲಕಾಲ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡಿದರು. ಅವರಿಗಿರುವ ಅನುಭವವನ್ನು ನೋಡಿ ಭಾರತ ಸರ್ಕಾರ ಅವರಿಗೆ ಪೆಟ್ರೋನೆಟ್ ಇಂಡಿಯಾ ಲಿಮಿಟೆಡ್‌ನಲ್ಲಿ ಜವಾಬ್ದಾರಿಯನ್ನು ನೀಡಿತು. ಈ ಅಪಾರವಾದ ಅನುಭವದಿಂದ ಮತ್ತೊಂದು ಪ್ರತಿಷ್ಠಿತ ಐಐಟಿ ಗೋರಕ್‌ಪುರ್‌ನಲ್ಲಿ ಪ್ರಾಧ್ಯಾಪಕರಾಗಿ ಆಹ್ವಾನಿಸಿ, ಮ್ಯಾನೇಜ್‌ಮೆಂಟ್ ಎಕಾನಾಮಿಕ್ಸ್ ಬೋಧನೆಯ ಜವಬ್ದಾರಿಯನ್ನು ನೀಡಿತು. ಅಲ್ಲಿ ಕೆಲಸ ನಿರ್ವಹಿಸುತ್ತಿರುವಾಗಲೇ ಗೋವಾ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್ ಮೆಗಾ ಅನಾಲಿಟಿಕ್ಸ್ ಬೋಧಿಸುವುದಕ್ಕೆ ಆಹ್ವಾನಿಸಿತು. ಈ ವಲಯದಲ್ಲಿ ಪ್ರಾವೀಣ್ಯತೆ ಹೊಂದಿದ ಕೇವಲ ಇಪ್ಪತ್ತು ಜನ ನಿಪುಣರಲ್ಲಿ ಆನಂದ್ ಒಬ್ಬರು. ನಿಜಕ್ಕೂ ಈ ಅರ್ಹತೆಗಳಿಂದಲೇ ಕರ್ನಾಟಕದ ವಿಶ್ವವಿದ್ಯಾಲಯವು ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಆನಂದ್ ಈ ವಲಯಗಳಿಗೆ ಸೀಮಿತವಾಗಿದ್ದರೆ ಬಹುಶಃ ಭಾರತ ಸರ್ಕಾರ ಅವರಿಗೆ ಪದ್ಮ ಪ್ರಶಸ್ತಿಗಳನ್ನೇ ಕೊಡುತ್ತಿತ್ತು. ಆನಂದ್ ಅವರಿಗೆ ಇರುವ ಸಾಮಾಜಿಕ ಹಿನ್ನೆಲೆಯ ಕಾರಣ ಸಮಾಜದಲ್ಲಿ ಇರುವ ತಾರತಮ್ಯ, ಅಸಮಾನತೆ, ಬಡತನ, ಜಾತಿಪದ್ಧತಿ, ನಿರುದ್ಯೋಗ, ಭೂಮಿ ಸಮಸ್ಯೆ, ಜಾಗತೀಕರಣ, ಸಾಮ್ರಾಜ್ಯಶಾಹಿ ಲೂಟಿ, ಭೂಸ್ವಾಮ್ಯ ಸಂಬಂದಗಳು, ಶಿಕ್ಷಣ, ಆರೋಗ್ಯದಂತಹ ಸಮಸ್ಯೆಗಳ ಮೇಲೆ ಸ್ಪಂದಿಸುತ್ತಾ ಬಂದರು. ಒಂದು ಕಡೆ ತಮ್ಮ ಅನಲಿಟಿಕ್ಸ್ ಜವಾಬ್ದಾರಿಯನ್ನು ನಿರ್ವಹಿಸುತ್ತಾ ನಿರಂತರವಾಗಿ ಈ ಸಮಸ್ಯೆಗಳೆಲ್ಲವುಗಳ ಮೇಲೆ ಬರೆದರು. ಉದಾಹರಣೆಗೆ ಅವರು ರಚಿಸಿದ ಗುಣಮಟ್ಟದ ಪುಸ್ತಕ ಖೈರ್ಲಾಂಜಿ ಕೇವಲ ಹತ್ತು ದಿನಗಳಲ್ಲಿ ಬರೆದದ್ದು. ಅದು ಚೈನಾದ ಬೀಜಿಂಗ್‌ನಿಂದ ಕೀನ್ಯಾಗೆ ಪ್ರಯಾಣಿಸುತ್ತಾ ವಿಮಾನದಲ್ಲಿ, ವಿಮಾನಾಶ್ರಯದಲ್ಲಿ ಕಳೆದ ಸಮಯದಲ್ಲಿ ಬರೆದರು. ನವಯಾನ ಎನ್ನುವ ಪ್ರಕಾಶಕ ಸಂಸ್ಥೆಯ ಮುಖ್ಯಸ್ಥ ಎಸ್.ಆನಂದ್ ಈ ವಿಷಯವನ್ನು ಪ್ರಸ್ತಾಪಿಸುತ್ತಾ ಆನಂದ್ ಬಹಳ ಸೃಜನಶೀಲರೆನ್ನುತ್ತಾರೆ.

ಬ್ರಾಹ್ಮಣ್ಯದ ಸಿದ್ಧಾಂತ, ಜಾತಿ ವ್ಯವಸ್ಥೆ, ನಿಯೋ ಲಿಬರಲಿಸಂ, ಭೂಮಾಲೀಕತ್ವ, ಎಲ್ಲದಕ್ಕೂ ಮಿಗಿಲು ದೇಶದಲ್ಲಿ ಬಲಗೊಳ್ಳುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ಮೇಲೆ ಅವರು ಗಹನ ಚಿಂತನೆಯುಳ್ಳ ಬರಹಗಳನ್ನು ಬರೆದದ್ದೆ ಅಲ್ಲದೇ, ದೇಶದಲ್ಲಿರುವ ಬಡ ಸಮುದಾಯಗಳಿಗೆ ಡಾ.ಅಂಬೇಡ್ಕರ್ ಸೂಚಿಸಿದ ಹಾಗೆ ಸುಶಿಕ್ಷಿತರನ್ನಾಗಿ ಮಾಡುವ ಜವಾಬ್ದಾರಿಯನ್ನು ತಲೆಯ ಮೇಲೆ ಹಾಕಿಕೊಂಡರು. ಬಡ ಸಮುದಾಯಗಳ ಮೇಲೆ, ದಲಿತರ ಮೇಲೆ ದಾಳಿಗಳು ನಡೆದರೆ ಆನಂದ್ ಖುದ್ದಾಗಿ ಅಲ್ಲಿಗೆ ಹೋಗಿ ಅವರ ಪರ ನಿಂತರು. ಹಳೆಯ ಮೆಹಬೂಬನಗರ್ ಜಿಲ್ಲೆಯ ಪಾತಪಲ್ಲೆ ಗ್ರಾಮದಲ್ಲಿ ದಲಿತರ ಮೇಲೆ ಬೋಯ ಸಮುದಾಯ ದಾಳಿ ಮಾಡಿದಾಗ ಎರಡು ಬಾರಿ ಊರಿಗೆ ತೆರಳಿ, ಹೋರಾಡಿ ನ್ಯಾಯ ಸಿಗುವ ಹಾಗೆ ಕೆಲಸ ಮಾಡಿದರು. ಡಾ.ಅಂಬೇಡ್ಕರ್ ಕುಟುಂಬದ ಸದಸ್ಯ ಬಂದರು ಎನ್ನುವುದು ದೊಡ್ಡ ಸುದ್ದಿಯಾಯಿತು. ನಾನು ಪಾತಪಲ್ಲೆಗೆ ಹೋದಾಗ ಬೋಯ ಸಮುದಾಯದವರು ಅಂಬೇಡ್ಕರ್ ಮೊಮ್ಮಗ ಬರುವಷ್ಟು ಅಪರಾಧ ನಾವು ಏನು ಮಾಡಿದ್ದೇವೆ ಎಂದರು. ಆನಂದ್ ಬಂದ ಕಾರಣದಿಂದ ಜಿಲ್ಲಾ ಆಡಳಿತ ಕೂಡ ಸ್ಪಂದಿಸಿತು. ಇದು ಕೇವಲ ಒಂದು ಉದಾಹರಣೆ. ಇಷ್ಟು ಅಪರೂಪವಾದ ವ್ಯಕ್ತಿಯನ್ನು ಯುಎಪಿಎ ಕಾಯ್ದೆಯ ಕೆಳಗೆ ಬಂಧಿಸುವುದು ಎಂದರೆ ದೇಶ ಯಾವ ದಿಕ್ಕಿಗೆ ಹೋಗುತ್ತಿದೆ ಎಂಬುದನ್ನು ಸ್ಪಷ್ಟವಾಗಿ ನೋಡಬಹುದು.

ಇಷ್ಟಕ್ಕೂ ಆನಂದ್ ಮಾಡಿದ ಅಪರಾಧವೇನು, ಅವರ ಮೇಲೆ ಹೊರೆಸಿದ ಅಪರಾಧವೇನಾಗಿತ್ತು? ಅವರ ಮೇಲೆ ಹೊರೆಸಿದ ಅಪರಾಧ ಭೀಮಾ ಕೊರೆಗಾಂವ್ ಘಟನೆಯ ಜೊತೆ ಸಂಬಂಧವಿದೆ, ಭೀಮಾ ಕೊರೆಗಾಂವ್ ಮಾವೋಯಿಸ್ಟ್ ಪಕ್ಷದ ಬೆಂಬಲದಿಂದ ನಡೆಯಿತೆನ್ನುವುದು ಪ್ರಧಾನವಾದ ಆರೋಪ. ಭೀಮಾ ಕೋರೆಗಾಂವ್ ನಿಜಕ್ಕೂ ಬಾಬಾ ಸಾಹೇಬ್ ಅಂಬೇಡ್ಕರ್ ರಾಜಕೀಯ ಹೋರಾಟದ ಶ್ರಮದ ಭಾಗ. ಅಂದಾಜು ಎರಡು ಶತಮಾನಗಳ ಕೆಳಗೆ ಬ್ರಾಹ್ಮಣ ಪೇಶ್ವೆಗಳನ್ನು ಸೋಲಿಸಿದ ಬ್ರಿಟಿಷ್ ಸೈನ್ಯದಲ್ಲಿ ದಲಿತರು ಮುಖ್ಯವಾದ ಪಾತ್ರ ನಿರ್ವಹಿಸಿದರು. ಈ ಘಟನೆಯ ಮೂಲಕ ದಲಿತರಲ್ಲಿ ಚೈತನ್ಯವನ್ನು, ಆತ್ಮವಿಶ್ವಾಸವನ್ನು ಬೆಳೆಸಬಹುದೆಂದು ಅಂಬೇಡ್ಕರ್ ಚಿಂತಿಸಿದರು. ಯಾವ ವರ್ಷವೂ ಇಲ್ಲದೇ 2018ರಲ್ಲಿಯೇ ಇದು ವಿವಾದಾಸ್ಪದವಾಗಿ ಬದಲಾಯಿತು. ಕೇಂದ್ರ, ಮಹಾರಾಷ್ಟ್ರ ಬಿಜೆಪಿ ಸರ್ಕಾರಗಳು ಇದನ್ನು ಬಳಸಿಕೊಂಡು ದೇಶದಲ್ಲಿನ ಹನ್ನೆರಡು ಅತ್ಯಂತ ಪ್ರತಿಭಾವಂತರನ್ನು ಅರೆಸ್ಟ್ ಮಾಡಿತು.

OBSERVE 16TH MAY AS JUSTICE DAY STAND WITH DR. ANAND TELTUMBDE AND OTHER ACTIVISTS

ಮೌಲ್ಯಗಳುಳ್ಳ, ಮೌಲಿಕ ಬದುಕು ನಡೆಸುತ್ತಿರುವ, ವ್ಯವಸ್ಥೆಯ ಜೊತೆ ರಾಜಿಯಾದರೇ ಅದೆಷ್ಟೋ ಬಿರುದು, ಪದವಿಗಳನ್ನಾದರೂ ಪಡೆದು ಜೀವನದಲ್ಲಿ ಸುಖವಾಗಿ ಬದುಕಬಲ್ಲವರಾಗಿದ್ದ ಆ 12 ಜನರು ಇಂದು ಈ ರೀತಿಯಲ್ಲಿ ಜೈಲಿನಲ್ಲಿ ಬಂಧಿಗಳಾಗಿದ್ದಾರೆ. ಮೊದಲಿಗೆ ಒಂಬತ್ತು ಮಂದಿಯನ್ನು ಪೂನಾ ಪೋಲಿಸರು ಬಂಧಿಸಿದರು. ಇದರಲ್ಲಿ ಆನಂದ್ ತೇಲ್ತುಂಬ್ಡೆ, ಗೌತಮ್ ನವಲಖ ಹೊರಗಡೆ ಇದ್ದುಬಿಟ್ಟಿದ್ದರು. ಆನಂದ್ ವಿಷಯದಲ್ಲಿ ಬಾಂಬೆ ಹೈಕೋರ್ಟ್, ಹಾಗೆಯೇ ನೌಲಾಖ ವಿಷಯದಲ್ಲಿ ದೆಹಲಿ ಹೈಕೋರ್ಟ್ ಕೆಲವು ತಾಂತ್ರಿಕ ಲೋಪಗಳಿಂದ ಸ್ಟೇ ಕೊಟ್ಟಿದ್ದರು. ಈ ಸ್ಟೇ ಮುಂದುವರೆಯುತ್ತಿರುವ ಸಮಯದಲ್ಲೇ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರದ ಅಧಿಕಾರ ಹೋಯಿತು. ಹೊಸದಾಗಿ ಅಧಿಕಾರಕ್ಕೆ ಬಂದ ಸರ್ಕಾರದ ಪಾಲುದಾರರನ್ನು ನಾವು ಭೇಟಿಯಾಗಿದ್ದೆವು. ಭೀಮಾ ಕೊರೇಗಾಂವ್ ಘಟನೆ ಹಾಗೂ ಪ್ರಧಾನಮಂತ್ರಿ ಮೇಲೆ ಹತ್ಯೆಗೆ ಪಿತೂರಿ ಎನ್ನುವುದು ಕೇವಲ ಕಾಲ್ಪನಿಕ, ಇವು ಅಮಾಯಕರ ಮೇಲೆ ಹಾಕಿದ ಕೇಸುಗಳೆಂದು ಎನ್.ಸಿ.ಪಿ ಹಿರಿಯ ನಾಯಕ ಶರದ್ ಪವಾರ್ ನಮ್ಮೊಡನೆ ಹೇಳಿದ್ದರು.

ಇದಾದ ಕೆಲವೇ ದಿನಗಳಲ್ಲಿ, ಪ್ರಕರಣ ದಾಖಲಾದ 18ತಿಂಗಳ ನಂತರ ಕೇಂದ್ರ ಸರ್ಕಾರವು ಈ ಒಟ್ಟು ಪ್ರಕರಣಗಳನ್ನು ಮಹಾರಾಷ್ಟ್ರ ಸರ್ಕಾರದ ವ್ಯಾಪ್ತಿಯಿಂದ ತೆಗೆದು ತಾವೇ ಇದನ್ನು ಎನ್.ಐ.ಎ ಮುಖಾಂತರ ನಿಭಾಯಿಸುತ್ತೇವೆಂದು ತಮ್ಮ ವ್ಯಾಪ್ತಿಗೆ ತೆಗೆದುಕೊಂಡಿತು. ಈ ನಿರ್ಣಯದ ನಂತರ ಆನಂದ್ ತೇಲ್ತುಂಬ್ಡೆ, ಗೌತಮ್ ನೌಲಾಖ ಅವರ ಬಂಧನಕ್ಕಿದ್ದ ತಡೆಯಾಜ್ಞೆ ತೆರವಾಗಿ ಈಗ ಬಂಧವಾಗಿದ್ದಾರೆ.
ಆನಂದ್ ಅವರ ಬಂಧನವನ್ನು ದೇಶದೆಲ್ಲೆಡೆ ಅಲ್ಲದೇ, ಅಂತಾರಾಷ್ಟ್ರೀಯವಾಗಿಯೂ ಚಿಂತಕರು ಜನಸಾಮಾನ್ಯರು ಖಂಡಿಸಿದ್ದಾರೆ. ನೋಮ್ ಚಾಮ್ಸ್ಕಿ ಸೇರಿದಂತೆ ಹಲವು ವಿದ್ವಾಂಸರು ಈ ಬಂಧನದ ವಿರುದ್ಧ ಪ್ರತಿಭಟಿಸಿದರು. ಕಾಕತಾಳೀಯವೇ ಆದರೂ ಬಾಬಾ ಸಾಹೇಬ್ ಅಂಬೇಡ್ಕರ್ 129ರ ಜಯಂತಿಯ ದಿನವೇ ಡಾ.ಅಂಬೇಡ್ಕರ್ ಕುಟುಂಬ ಸದಸ್ಯ ಮತ್ತು ಅವರ ಬೌದ್ಧಿಕ ವಾರಸುದಾರ ಹಾಗೂ ಚಿಂತಕ ಆನಂದ್ ತೇಲ್ತುಂಬ್ಡೆ ಜೈಲಿಗೆ ಹೋಗಬೇಕಾಗಿ ಬಂದಿದ್ದು ಒಂದು ಐತಿಹಾಸಿಕ ದುರಂತ. ಒಂದು ಕಡೆ ಅಂಬೇಡ್ಕರ್‌ವರಿಗೆ ಗೌರವ ಸೂಚಿಸುತ್ತಲೇ ಆತನ ಕುಟುಂಬ ಸದಸ್ಯನನ್ನು ಜೈಲು ಪಾಲು ಮಾಡುತ್ತಿರುವುದರಲ್ಲಿ ಸರ್ಕಾರದ ದ್ವಂದ್ವ ನೀತಿ ಕಾಣಿಸುತ್ತದೆ ಎಂದು ಆನಂದ್ ಹೇಳಿರುವುದು ಎಲ್ಲರನ್ನು ಆಲೋಚಿಸುವಂತೆ ಮಾಡುತ್ತಿದೆ. ದೇಶವು ತನ್ನ ಸ್ವಭಾವವನ್ನ ತನಗೆ ತಿಳಿಯದ ಹಾಗೆಯೇ ಬಹಿರಂಗಪಡಿಸುತ್ತದೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ನಿದರ್ಶನದ ಅವಶ್ಯಕತೆ ಇಲ್ಲ.

ಪ್ರೊ. ಜಿ. ಹರಗೋಪಾಲ್,
ಹಿರಿಯ ಚಿಂತಕ ಮತ್ತು ರಾಜಕೀಯ ಶಾಸ್ತ್ರಜ್ಞ. ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದಲ್ಲದೆ, ಬೆಂಗಳೂರಿನ ಎನ್‌ಎಲ್‌ಎಸ್‌ಐಯು ಸೇರಿದಂತೆ ದೇಶ ವಿದೇಶದ ಹಲವು ವಿಶ್ವವಿದ್ಯಾಲಯಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದ್ದಾರೆ. ಮಾನವ ಹಕ್ಕುಗಳ ಕಾರ್ಯಕರ್ತರಾಗಿ ಹಲವು ಚಳವಳಿಗಳನ್ನು ಮುನ್ನಡೆಸಿದ್ದಾರೆ.

ಅನುವಾದ: ಅನಿಲ್‌ಕುಮಾರ್ ಚಿಕ್ಕದಾಳವಟ್ಟ


ಇದನ್ನೂ ಓದಿ: ಬೆಳದಿಂಗಳು ಕತ್ತಲೆಗೆ ಜಾರಿದಾಗ : ಕ್ರಾಂತಿಕಾರಿ ಕವಿ ವರವರ ರಾವ್ ಜೀವನ ಚಿತ್ರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...