Homeಮುಖಪುಟರಾಜ್ಯದ ಹೊಸ ಸಚಿವಾಲಯಕ್ಕೆ ಡಾ. ಅಂಬೇಡ್ಕರ್‌ ಹೆಸರು: ತೆಲಂಗಾಣ ಸಿಎಂ ಕೆಸಿಆರ್ ಘೋಷಣೆ

ರಾಜ್ಯದ ಹೊಸ ಸಚಿವಾಲಯಕ್ಕೆ ಡಾ. ಅಂಬೇಡ್ಕರ್‌ ಹೆಸರು: ತೆಲಂಗಾಣ ಸಿಎಂ ಕೆಸಿಆರ್ ಘೋಷಣೆ

ದಸರಾ ಹಬ್ಬದ ವೇಳೆಗೆ ನೂತನ ಸಚಿವಾಲಯ ಸಂಕೀರ್ಣದ ಸಿದ್ಧಗೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿದೆ

- Advertisement -
- Advertisement -

ಹೊಸದಾಗಿ ನಿರ್ಮಿಸಲಾದ ತೆಲಂಗಾಣ ರಾಜ್ಯ ಸಚಿವಾಲಯಕ್ಕೆ ಭಾರತದ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ಇಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರು ಗುರುವಾರ ಘೋಷಿಸಿದ್ದಾರೆ. ದಸರಾ ಹಬ್ಬದ ವೇಳೆಗೆ ಸಿದ್ಧಗೊಳ್ಳುವ ಗುರಿಯೊಂದಿಗೆ ನೂತನ ಸಚಿವಾಲಯ ಸಂಕೀರ್ಣದ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ತಮ್ಮ ಸರ್ಕಾರದ ಈ ನಿರ್ಧಾರವನ್ನು ಜಾರಿಗೆ ತರುವಂತೆ ತೆಲಂಗಾಣ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರು ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ತಿಗೆ ಅಂಬೇಡ್ಕರ್‌ ಅವರ ಹೆಸರನ್ನು ಇಡಬೇಕು ಎಂದು ಪ್ರಧಾನಿ ಮೋದಿಗೆ ಮನವಿ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, “ಸಾಮಾಜಿಕ ಹೋರಾಟಗಾರ ಮತ್ತು ದಾರ್ಶನಿಕ ಡಾ.ಅಂಬೇಡ್ಕರ್ ಅವರ ಹೆಸರನ್ನು ಸಚಿವಾಲಯಕ್ಕೆ ಇಡುವುದು ತೆಲಂಗಾಣದ ಜನರಿಗೆ ಹೆಮ್ಮೆಯ ಸಂಗತಿಯಾಗಿದೆ” ಎಂದು ಹೇಳಿದ್ದಾರೆ.

“ಅಂಬೇಡ್ಕರ್ ಅವರು ವಿವಿಧತೆಯಲ್ಲಿ ಏಕತೆ ಮತ್ತು ಎಲ್ಲರಿಗೂ ಸಮಾನತೆಯ ಕನಸು ಕಂಡಿದ್ದರು. ತೆಲಂಗಾಣ ಸರ್ಕಾರವು ಎಲ್ಲಾ ಕ್ಷೇತ್ರಗಳಲ್ಲಿ ಎಲ್ಲಾ ವರ್ಗಗಳಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ಅವರ ತತ್ವದಿಂದ ನಡೆಸುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಸಂಸತ್‌ ಕಟ್ಟಡಕ್ಕೆ ‘ಅಂಬೇಡ್ಕರ್‌’ ಹೆಸರಿಡಿ: ಕೇಂದ್ರಕ್ಕೆ ತೆಲಂಗಾಣ ಸರ್ಕಾರ ಒತ್ತಾಯ

ರಾಜ್ಯದ ಹೊಸ ಸಚಿವಾಲಯಕ್ಕೆ ಅಂಬೇಡ್ಕರ್ ಅವರ ಹೆಸರನ್ನು ಇಡುವುದಾಗಿ ಘೋಷಿಸಿದ ಮುಖ್ಯಮಂತ್ರಿ, “ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ತಿಗೆ ಅಂಬೇಡ್ಕರ್‌ ಅವರ ಹೆಸರು ಇಡಬೇಕು ಎಂಬ ತೆಲಂಗಾಣ ಸರ್ಕಾರದ ಬೇಡಿಕೆಯನ್ನು ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತೇನೆ” ಎಂದು ಹೇಳಿದ್ದಾರೆ.

ಭಾರತದ ನೂತನ ಸಂಸತ್ ಭವನಕ್ಕೆ ಡಾ.ಅಂಬೇಡ್ಕರ್ ಅವರ ಹೆಸರಿಡುವ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯವನ್ನು ತೆಲಂಗಾಣ ಸರ್ಕಾರವು ಈಗಾಗಲೆ ಅಂಗೀಕರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...