Homeಚಳವಳಿತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಎಲ್ಲೆಡೆ ತೀವ್ರ ಖಂಡನೆ

ತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಎಲ್ಲೆಡೆ ತೀವ್ರ ಖಂಡನೆ

ಸಹಸ್ರಮಾನದ ಅತ್ಯಂತ ಬೌದ್ಧಿಕ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಕೆಲ ಮೂರ್ಖ ಜನರು ಅವರ ಪ್ರತಿಮೆಯನ್ನು ಕೆಡವಿದರು ಆದರೆ ಎಂದಿಗೂ ಅವರ ಉನ್ನತತೆ ಮತ್ತು ಸಿದ್ಧಾಂತವನ್ನು ಮುಟ್ಟಲಾರರು

- Advertisement -
- Advertisement -

ತಮಿಳುನಾಡಿನ ವೇದಾರಣ್ಯಪುರಂ ಎಂಬಲ್ಲಿ ಹಾಡುಹಗಲೇ ಮತೀಯವಾದಿ, ಜಾತಿವಾದಿ ದುಷ್ಕರ್ಮಿಗಳ ಗುಂಪೊಂದು ಅಂಬೇಡ್ಕರ್ ಪ್ರತಿಮೆಯನ್ನು ಭಗ್ನಗೊಳಿಸಿರುವ, ಆ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದೆ. ಅಲ್ಲದೇ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಕೃತ್ಯಕ್ಕೆ ರಾಷ್ಟ್ರಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ.

ಪ್ರತಿ ಬಾರಿಯೂ ಈ ರೀತಿಯ ಘಟನೆ ಸಂಭವಿಸಿದಾಗ, ನಾವು ಡಾ. ಅಂಬೇಡ್ಕರ್ ಅವರ ಮುನ್ನೋಟವನ್ನೇ ಕೊಲ್ಲುತ್ತಿದ್ದೇವೆ. ಇದು ಕೇವಲ ಅವರ ಪ್ರತಿಮೆಯ ಮೇಲಿನ ಆಕ್ರಮಣವಲ್ಲ, ಜಾತಿ, ವರ್ಗ ಮತ್ತು ಲಿಂಗವನ್ನು ಲೆಕ್ಕಿಸದೆ ಎಲ್ಲಾ ಪುರುಷರು ಮತ್ತು ಮಹಿಳೆಯರು ಸಮಾನರು ಎಂಬ ಅವರ ತತ್ವಗಳ ಮೇಲಿನ ಆಕ್ರಮಣವಾಗಿದೆ ಎಂದು ದಲಿತ ಹೋರಾಟಗಾರ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಬೇಸರ ವ್ಯಕ್ತಪಡಿಸಿದ್ದಾರೆ.

ಎಂಎನ್ಎಂ ಪಕ್ಷದ ಮುಖ್ಯಸ್ಥ ಮತ್ತು ಚಿತ್ರನಟ ಕಮಲ್ ಹಾಸನ್ ರವರು “ದೇಶವನ್ನು ವಿಭಜಿಸುವ ಮತ್ತು ಯಾಜಮಾನ್ಯ ಸ್ಥಾಪಿಸುವ ಶಕ್ತಿಗಳು  ಈ ಘಟನೆಗೆ ಕಾರಣವಾಗಿದ್ದಾರೆ” ಎಂದು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿಯ ನಂತರ, ಈಗ ತಮಿಳುನಾಡಿನಲ್ಲಿ ದಲಿತ ಭಾವನೆಗಳಿಗೆ ಧಕ್ಕೆಯಾಗಿದೆ. ರಾಷ್ಟ್ರ ವಿರೋಧಿ ಗೂಂಡಾಗಳು ಅಂಬೇಡ್ಕರ್ ಪ್ರತಿಮೆಯನ್ನು ಕೆಡವಿದ್ದಾರೆ. ಇದು ನಾವು ಬೆಳೆದ ಭಾರತವಲ್ಲ. ದಯವಿಟ್ಟು ನಮ್ಮ ಸಹೋದರ ಮತ್ತು ಸಹೋದರಿಯರ ಮೇಲಿನ ದ್ವೇಷದ ಅಪರಾಧವನ್ನು ನಿಲ್ಲಿಸಿ ಎಂದು ಎನ್.ಎಸ್.ಯು.ಐ ನ ರಾಷ್ಟ್ರೀಯ ಕಾರ್ಯದರ್ಶಿ ವರ್ಧನ್ ಯಾದವ್ ಮನವಿ ಮಾಡಿದ್ದಾರೆ.

ಒಬ್ಬ ಅಂಬೇಡ್ಕರ್ ಅವರನ್ನು ಅವಮಾನಿಸಿದರೆ, ಸಾವಿರ ಅಂಬೇಡ್ಕರ್ ರವರು ಹುಟ್ಟಿಬರಲಿದ್ದಾರೆ ಎಂದು ವಂಚಿತ್ ಬಹುಜನ್ ಅಘಾಡಿಯ ಟ್ವಿಟ್ಟರ್ ಅಕೌಂಟ್ ನಿಂದ ಟ್ವೀಟ್ ಮಾಡಲಾಗಿದೆ. ಇದೇ ಘೋಷಣೆಯನ್ನು ಸಾವಿರಾರು ಜನರು ಪೋಸ್ಟ್ ಮಾಡಿದ್ದು ವೈರಲ್ ಆಗಿದೆ.

ಸಹಸ್ರಮಾನದ ಅತ್ಯಂತ ಬೌದ್ಧಿಕ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಕೆಲ ಮೂರ್ಖ ಜನರು ಅವರ ಪ್ರತಿಮೆಯನ್ನು ಕೆಡವಿದರು ಆದರೆ ಎಂದಿಗೂ ಅವರ ಉನ್ನತತೆ ಮತ್ತು ಸಿದ್ಧಾಂತವನ್ನು ಮುಟ್ಟಲಾರರು ಎಂದು ಸರ್ವೇಶ್ ಬಾಬು ಎಂಬುವವರು ಟ್ವೀಟ್ ಮಾಡಿದ್ದಾರೆ.

ಘಟನೆಯ ಸ್ಥಳದಲ್ಲಿ ನಿನ್ನೆಯೇ ಅಂಬೇಡ್ಕರ್ ಪ್ರತಿಮೆಯ ಮರುನಿರ್ಮಾಣ ಮಾಡುವ ಕಾರ್ಯ ಮುಗಿದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಅಂಬೇಡ್ಕರ್ ಅವರ ಆದರ್ಶಗಳನ್ನು ತತ್ವಗಳನ್ನು. ಅವರು ವಿದ್ಯಾ. ಪದವಿ ಕಲಿತಷ್ಠು. ಆ ಮುರ್ಖ ರಿಗೆ. ಓದಲಿಕಾಗಲ್ಲ. ಅವರ ಜ್ಞಾನ ಮತ್ತು ವ್ಯಕ್ತಿತ್ವ ಹಾಗೆ ಆ ಮುರ್ಖ ರಿಗೆ ಬೆಳೆಯಲ್ಲಿ ಕ್ಕಾಗಲ್ಲ.

    • ಅಂಬೇಡ್ಕರ್ ಈ ದೇಶದ ನಿಜವಾದ ದೇವರು.
      ದೇವರ ಮೂರ್ತಿಯನ್ನು ಕೆಡಿಸುವವರು ಸುಟ್ಟುಹೋಗುತಾರೆ. ಜೈಭೀಮ್

  2. ನಾವು ಬಹಜನರು ಸುಮ್ಮನೆ ಇದ್ದೇವೆ ಎಂದರೆ ಅದಕ್ಕೆ ಒಂದು ಅರ್ಥ ಇದೆ ಯಾಕೆಂದರೆ ನಮ್ಮ ಒಳಗೆ ಬುದ್ಧ,ಬಸವ,ಅಂಬೇಡ್ಕರ್ ರವರ ಶಾಂತಿ ನೆಲೆಸಿದೆ ಹಾಗಾಗಿ ಅದನ್ನು ಬಿಟ್ಟು ನಿಂತರೆ ನಮ್ಮ ದೇಶದಲ್ಲಿ ರಕ್ತದೋಕುಳಿ ಆಗುತ್ತೆ. ನಮೋ ಬುದ್ಧಾಯಾ.

  3. ಅಜ್ಞಾನದ ಅವಿವೇಕಿಗಳು
    ಬೀದಿಯಲ್ಲಿ ಹುಟ್ಟಿದ ಬಿಕಾರಿ ಮಕ್ಳೇ…
    ನೀವು ಅಂಬೇಡ್ಕರ್ ರವರ ಮೂರ್ತಿಗೆ ಅವಮಾನ ಮಾಡಿರಬಹುದು, ಆದ್ರೆ ಅವರ ಸಮತೆಯ ರಾಜ್ಯದ ನಿರ್ಮಾಣದ ಕಲ್ಪನೆ ಚಿಂತನೆಗಳು ವಿಚಾರಕ್ಕಲ್ಲ.ನೀವು ಏನುಮಾಡಿದರೂ,ಅದು ನಿಮ್ಮ ಅಂತ್ಯದ ವನವಾಸ
    ಈ ದೇಶದಲ್ಲಿ ಸಾವಿರಾರೂ ಅಂಬೇಡ್ಕರ್ ರವರು ಇದ್ದಾರೆ ಅವ್ರು ನಿಮ್ಮನ್ನು ಸುಮ್ನೆ ಬಿಡಲ್ಲ

  4. ಅಂಬೇಡ್ಕರ್ ಅವರ ಆದರ್ಶಗಳನ್ನು ತತ್ವಗಳನ್ನು. ಅವರು ವಿದ್ಯಾ. ಪದವಿ ಕಲಿತಷ್ಠು. ಆ ಮುರ್ಖ ರಿಗೆ. ಓದಲಿಕಾಗಲ್ಲ. ಅವರ ಜ್ಞಾನ ಮತ್ತು ವ್ಯಕ್ತಿತ್ವ ಹಾಗೆ ಆ ಮುರ್ಖ ರಿಗೆ ಬೆಳೆಯಲ್ಲಿ ಕ್ಕಾಗಲ್ಲ. ನಾವು ಬಹಜನರು ಸುಮ್ಮನೆ ಇದ್ದೇವೆ ಎಂದರೆ ಅದಕ್ಕೆ ಒಂದು ಅರ್ಥ ಇದೆ ಯಾಕೆಂದರೆ ನಮ್ಮ ಒಳಗೆ ಬುದ್ಧ,ಬಸವ,ಅಂಬೇಡ್ಕರ್ ರವರ ಶಾಂತಿ ನೆಲೆಸಿದೆ ಹಾಗಾಗಿ ಅದನ್ನು ಬಿಟ್ಟು ನಿಂತರೆ ನಮ್ಮ ದೇಶದಲ್ಲಿ ರಕ್ತದೋಕುಳಿ ಆಗುತ್ತೆ.
    ಜೈಭೀಮ್

  5. ನಮ್ಮ ಬಹುಜನರಲ್ಲಿ ಕಡಿಮೆ ಇದ್ದ ಜಾಗೃತಿ, ನಮ್ಮತನವನ್ನು ನೀವೇ ಎಚ್ಚರಿಸುತ್ತಿದ್ದೀರಿ… ಇದು ಒಳ್ಳೆಯ ಲಕ್ಷಣವೆ.. ಆದರೆ ಸಂವಿಧಾನ ವಿರೋಧಿಗಳಿಗೆ ಮತ್ತು ಅಸಮಾನತೆಯ ಪ್ರತಿಪಾದಕರಿಗೆ ಪಾಠ ಕಲಿಸುವ ಹಾಗೆ ನೀವೆ ಮಾಡ್ತಿದ್ದೀರ…
    *ಶಾಂತಿ ಪಾಲನೆಯಲ್ಲಿ ಬುದ್ಧನ ತಾಳ್ಮೆ ಇದೆ ಆದರೆ ಅಶೋಕನ ಶೌರ್ಯ ನಮ್ಮಲ್ಲಿ ಇನ್ನೂ ಹಾಗೇ ಇದೆ…* ಅಂದು ಅಶೋಕ್ ಬಿಸಾಡಿದ ಕತ್ತಿ ತೆಗೆದುಕೊಂಡರೆ ಆಗೋದು ಎರಡೇ…
    ಎರಡನೆ ಕಳಿಂಗ ಯುದ್ಧ ಅಥವಾ ಎರಡನೇ ಕೊರೆಗಾಂವ್ ಯುದ್ಧ… ಆಯ್ಕೆ ನಿಮ್ಮದೆ…

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...