Homeಚಳವಳಿತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಎಲ್ಲೆಡೆ ತೀವ್ರ ಖಂಡನೆ

ತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಎಲ್ಲೆಡೆ ತೀವ್ರ ಖಂಡನೆ

ಸಹಸ್ರಮಾನದ ಅತ್ಯಂತ ಬೌದ್ಧಿಕ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಕೆಲ ಮೂರ್ಖ ಜನರು ಅವರ ಪ್ರತಿಮೆಯನ್ನು ಕೆಡವಿದರು ಆದರೆ ಎಂದಿಗೂ ಅವರ ಉನ್ನತತೆ ಮತ್ತು ಸಿದ್ಧಾಂತವನ್ನು ಮುಟ್ಟಲಾರರು

- Advertisement -
- Advertisement -

ತಮಿಳುನಾಡಿನ ವೇದಾರಣ್ಯಪುರಂ ಎಂಬಲ್ಲಿ ಹಾಡುಹಗಲೇ ಮತೀಯವಾದಿ, ಜಾತಿವಾದಿ ದುಷ್ಕರ್ಮಿಗಳ ಗುಂಪೊಂದು ಅಂಬೇಡ್ಕರ್ ಪ್ರತಿಮೆಯನ್ನು ಭಗ್ನಗೊಳಿಸಿರುವ, ಆ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದೆ. ಅಲ್ಲದೇ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಕೃತ್ಯಕ್ಕೆ ರಾಷ್ಟ್ರಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ.

ಪ್ರತಿ ಬಾರಿಯೂ ಈ ರೀತಿಯ ಘಟನೆ ಸಂಭವಿಸಿದಾಗ, ನಾವು ಡಾ. ಅಂಬೇಡ್ಕರ್ ಅವರ ಮುನ್ನೋಟವನ್ನೇ ಕೊಲ್ಲುತ್ತಿದ್ದೇವೆ. ಇದು ಕೇವಲ ಅವರ ಪ್ರತಿಮೆಯ ಮೇಲಿನ ಆಕ್ರಮಣವಲ್ಲ, ಜಾತಿ, ವರ್ಗ ಮತ್ತು ಲಿಂಗವನ್ನು ಲೆಕ್ಕಿಸದೆ ಎಲ್ಲಾ ಪುರುಷರು ಮತ್ತು ಮಹಿಳೆಯರು ಸಮಾನರು ಎಂಬ ಅವರ ತತ್ವಗಳ ಮೇಲಿನ ಆಕ್ರಮಣವಾಗಿದೆ ಎಂದು ದಲಿತ ಹೋರಾಟಗಾರ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಬೇಸರ ವ್ಯಕ್ತಪಡಿಸಿದ್ದಾರೆ.

ಎಂಎನ್ಎಂ ಪಕ್ಷದ ಮುಖ್ಯಸ್ಥ ಮತ್ತು ಚಿತ್ರನಟ ಕಮಲ್ ಹಾಸನ್ ರವರು “ದೇಶವನ್ನು ವಿಭಜಿಸುವ ಮತ್ತು ಯಾಜಮಾನ್ಯ ಸ್ಥಾಪಿಸುವ ಶಕ್ತಿಗಳು  ಈ ಘಟನೆಗೆ ಕಾರಣವಾಗಿದ್ದಾರೆ” ಎಂದು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿಯ ನಂತರ, ಈಗ ತಮಿಳುನಾಡಿನಲ್ಲಿ ದಲಿತ ಭಾವನೆಗಳಿಗೆ ಧಕ್ಕೆಯಾಗಿದೆ. ರಾಷ್ಟ್ರ ವಿರೋಧಿ ಗೂಂಡಾಗಳು ಅಂಬೇಡ್ಕರ್ ಪ್ರತಿಮೆಯನ್ನು ಕೆಡವಿದ್ದಾರೆ. ಇದು ನಾವು ಬೆಳೆದ ಭಾರತವಲ್ಲ. ದಯವಿಟ್ಟು ನಮ್ಮ ಸಹೋದರ ಮತ್ತು ಸಹೋದರಿಯರ ಮೇಲಿನ ದ್ವೇಷದ ಅಪರಾಧವನ್ನು ನಿಲ್ಲಿಸಿ ಎಂದು ಎನ್.ಎಸ್.ಯು.ಐ ನ ರಾಷ್ಟ್ರೀಯ ಕಾರ್ಯದರ್ಶಿ ವರ್ಧನ್ ಯಾದವ್ ಮನವಿ ಮಾಡಿದ್ದಾರೆ.

ಒಬ್ಬ ಅಂಬೇಡ್ಕರ್ ಅವರನ್ನು ಅವಮಾನಿಸಿದರೆ, ಸಾವಿರ ಅಂಬೇಡ್ಕರ್ ರವರು ಹುಟ್ಟಿಬರಲಿದ್ದಾರೆ ಎಂದು ವಂಚಿತ್ ಬಹುಜನ್ ಅಘಾಡಿಯ ಟ್ವಿಟ್ಟರ್ ಅಕೌಂಟ್ ನಿಂದ ಟ್ವೀಟ್ ಮಾಡಲಾಗಿದೆ. ಇದೇ ಘೋಷಣೆಯನ್ನು ಸಾವಿರಾರು ಜನರು ಪೋಸ್ಟ್ ಮಾಡಿದ್ದು ವೈರಲ್ ಆಗಿದೆ.

ಸಹಸ್ರಮಾನದ ಅತ್ಯಂತ ಬೌದ್ಧಿಕ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಕೆಲ ಮೂರ್ಖ ಜನರು ಅವರ ಪ್ರತಿಮೆಯನ್ನು ಕೆಡವಿದರು ಆದರೆ ಎಂದಿಗೂ ಅವರ ಉನ್ನತತೆ ಮತ್ತು ಸಿದ್ಧಾಂತವನ್ನು ಮುಟ್ಟಲಾರರು ಎಂದು ಸರ್ವೇಶ್ ಬಾಬು ಎಂಬುವವರು ಟ್ವೀಟ್ ಮಾಡಿದ್ದಾರೆ.

ಘಟನೆಯ ಸ್ಥಳದಲ್ಲಿ ನಿನ್ನೆಯೇ ಅಂಬೇಡ್ಕರ್ ಪ್ರತಿಮೆಯ ಮರುನಿರ್ಮಾಣ ಮಾಡುವ ಕಾರ್ಯ ಮುಗಿದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಅಂಬೇಡ್ಕರ್ ಅವರ ಆದರ್ಶಗಳನ್ನು ತತ್ವಗಳನ್ನು. ಅವರು ವಿದ್ಯಾ. ಪದವಿ ಕಲಿತಷ್ಠು. ಆ ಮುರ್ಖ ರಿಗೆ. ಓದಲಿಕಾಗಲ್ಲ. ಅವರ ಜ್ಞಾನ ಮತ್ತು ವ್ಯಕ್ತಿತ್ವ ಹಾಗೆ ಆ ಮುರ್ಖ ರಿಗೆ ಬೆಳೆಯಲ್ಲಿ ಕ್ಕಾಗಲ್ಲ.

    • ಅಂಬೇಡ್ಕರ್ ಈ ದೇಶದ ನಿಜವಾದ ದೇವರು.
      ದೇವರ ಮೂರ್ತಿಯನ್ನು ಕೆಡಿಸುವವರು ಸುಟ್ಟುಹೋಗುತಾರೆ. ಜೈಭೀಮ್

  2. ನಾವು ಬಹಜನರು ಸುಮ್ಮನೆ ಇದ್ದೇವೆ ಎಂದರೆ ಅದಕ್ಕೆ ಒಂದು ಅರ್ಥ ಇದೆ ಯಾಕೆಂದರೆ ನಮ್ಮ ಒಳಗೆ ಬುದ್ಧ,ಬಸವ,ಅಂಬೇಡ್ಕರ್ ರವರ ಶಾಂತಿ ನೆಲೆಸಿದೆ ಹಾಗಾಗಿ ಅದನ್ನು ಬಿಟ್ಟು ನಿಂತರೆ ನಮ್ಮ ದೇಶದಲ್ಲಿ ರಕ್ತದೋಕುಳಿ ಆಗುತ್ತೆ. ನಮೋ ಬುದ್ಧಾಯಾ.

  3. ಅಜ್ಞಾನದ ಅವಿವೇಕಿಗಳು
    ಬೀದಿಯಲ್ಲಿ ಹುಟ್ಟಿದ ಬಿಕಾರಿ ಮಕ್ಳೇ…
    ನೀವು ಅಂಬೇಡ್ಕರ್ ರವರ ಮೂರ್ತಿಗೆ ಅವಮಾನ ಮಾಡಿರಬಹುದು, ಆದ್ರೆ ಅವರ ಸಮತೆಯ ರಾಜ್ಯದ ನಿರ್ಮಾಣದ ಕಲ್ಪನೆ ಚಿಂತನೆಗಳು ವಿಚಾರಕ್ಕಲ್ಲ.ನೀವು ಏನುಮಾಡಿದರೂ,ಅದು ನಿಮ್ಮ ಅಂತ್ಯದ ವನವಾಸ
    ಈ ದೇಶದಲ್ಲಿ ಸಾವಿರಾರೂ ಅಂಬೇಡ್ಕರ್ ರವರು ಇದ್ದಾರೆ ಅವ್ರು ನಿಮ್ಮನ್ನು ಸುಮ್ನೆ ಬಿಡಲ್ಲ

  4. ಅಂಬೇಡ್ಕರ್ ಅವರ ಆದರ್ಶಗಳನ್ನು ತತ್ವಗಳನ್ನು. ಅವರು ವಿದ್ಯಾ. ಪದವಿ ಕಲಿತಷ್ಠು. ಆ ಮುರ್ಖ ರಿಗೆ. ಓದಲಿಕಾಗಲ್ಲ. ಅವರ ಜ್ಞಾನ ಮತ್ತು ವ್ಯಕ್ತಿತ್ವ ಹಾಗೆ ಆ ಮುರ್ಖ ರಿಗೆ ಬೆಳೆಯಲ್ಲಿ ಕ್ಕಾಗಲ್ಲ. ನಾವು ಬಹಜನರು ಸುಮ್ಮನೆ ಇದ್ದೇವೆ ಎಂದರೆ ಅದಕ್ಕೆ ಒಂದು ಅರ್ಥ ಇದೆ ಯಾಕೆಂದರೆ ನಮ್ಮ ಒಳಗೆ ಬುದ್ಧ,ಬಸವ,ಅಂಬೇಡ್ಕರ್ ರವರ ಶಾಂತಿ ನೆಲೆಸಿದೆ ಹಾಗಾಗಿ ಅದನ್ನು ಬಿಟ್ಟು ನಿಂತರೆ ನಮ್ಮ ದೇಶದಲ್ಲಿ ರಕ್ತದೋಕುಳಿ ಆಗುತ್ತೆ.
    ಜೈಭೀಮ್

  5. ನಮ್ಮ ಬಹುಜನರಲ್ಲಿ ಕಡಿಮೆ ಇದ್ದ ಜಾಗೃತಿ, ನಮ್ಮತನವನ್ನು ನೀವೇ ಎಚ್ಚರಿಸುತ್ತಿದ್ದೀರಿ… ಇದು ಒಳ್ಳೆಯ ಲಕ್ಷಣವೆ.. ಆದರೆ ಸಂವಿಧಾನ ವಿರೋಧಿಗಳಿಗೆ ಮತ್ತು ಅಸಮಾನತೆಯ ಪ್ರತಿಪಾದಕರಿಗೆ ಪಾಠ ಕಲಿಸುವ ಹಾಗೆ ನೀವೆ ಮಾಡ್ತಿದ್ದೀರ…
    *ಶಾಂತಿ ಪಾಲನೆಯಲ್ಲಿ ಬುದ್ಧನ ತಾಳ್ಮೆ ಇದೆ ಆದರೆ ಅಶೋಕನ ಶೌರ್ಯ ನಮ್ಮಲ್ಲಿ ಇನ್ನೂ ಹಾಗೇ ಇದೆ…* ಅಂದು ಅಶೋಕ್ ಬಿಸಾಡಿದ ಕತ್ತಿ ತೆಗೆದುಕೊಂಡರೆ ಆಗೋದು ಎರಡೇ…
    ಎರಡನೆ ಕಳಿಂಗ ಯುದ್ಧ ಅಥವಾ ಎರಡನೇ ಕೊರೆಗಾಂವ್ ಯುದ್ಧ… ಆಯ್ಕೆ ನಿಮ್ಮದೆ…

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...