Homeಚಳವಳಿತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಎಲ್ಲೆಡೆ ತೀವ್ರ ಖಂಡನೆ

ತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಎಲ್ಲೆಡೆ ತೀವ್ರ ಖಂಡನೆ

ಸಹಸ್ರಮಾನದ ಅತ್ಯಂತ ಬೌದ್ಧಿಕ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಕೆಲ ಮೂರ್ಖ ಜನರು ಅವರ ಪ್ರತಿಮೆಯನ್ನು ಕೆಡವಿದರು ಆದರೆ ಎಂದಿಗೂ ಅವರ ಉನ್ನತತೆ ಮತ್ತು ಸಿದ್ಧಾಂತವನ್ನು ಮುಟ್ಟಲಾರರು

- Advertisement -
- Advertisement -

ತಮಿಳುನಾಡಿನ ವೇದಾರಣ್ಯಪುರಂ ಎಂಬಲ್ಲಿ ಹಾಡುಹಗಲೇ ಮತೀಯವಾದಿ, ಜಾತಿವಾದಿ ದುಷ್ಕರ್ಮಿಗಳ ಗುಂಪೊಂದು ಅಂಬೇಡ್ಕರ್ ಪ್ರತಿಮೆಯನ್ನು ಭಗ್ನಗೊಳಿಸಿರುವ, ಆ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದೆ. ಅಲ್ಲದೇ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಕೃತ್ಯಕ್ಕೆ ರಾಷ್ಟ್ರಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ.

ಪ್ರತಿ ಬಾರಿಯೂ ಈ ರೀತಿಯ ಘಟನೆ ಸಂಭವಿಸಿದಾಗ, ನಾವು ಡಾ. ಅಂಬೇಡ್ಕರ್ ಅವರ ಮುನ್ನೋಟವನ್ನೇ ಕೊಲ್ಲುತ್ತಿದ್ದೇವೆ. ಇದು ಕೇವಲ ಅವರ ಪ್ರತಿಮೆಯ ಮೇಲಿನ ಆಕ್ರಮಣವಲ್ಲ, ಜಾತಿ, ವರ್ಗ ಮತ್ತು ಲಿಂಗವನ್ನು ಲೆಕ್ಕಿಸದೆ ಎಲ್ಲಾ ಪುರುಷರು ಮತ್ತು ಮಹಿಳೆಯರು ಸಮಾನರು ಎಂಬ ಅವರ ತತ್ವಗಳ ಮೇಲಿನ ಆಕ್ರಮಣವಾಗಿದೆ ಎಂದು ದಲಿತ ಹೋರಾಟಗಾರ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಬೇಸರ ವ್ಯಕ್ತಪಡಿಸಿದ್ದಾರೆ.

ಎಂಎನ್ಎಂ ಪಕ್ಷದ ಮುಖ್ಯಸ್ಥ ಮತ್ತು ಚಿತ್ರನಟ ಕಮಲ್ ಹಾಸನ್ ರವರು “ದೇಶವನ್ನು ವಿಭಜಿಸುವ ಮತ್ತು ಯಾಜಮಾನ್ಯ ಸ್ಥಾಪಿಸುವ ಶಕ್ತಿಗಳು  ಈ ಘಟನೆಗೆ ಕಾರಣವಾಗಿದ್ದಾರೆ” ಎಂದು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿಯ ನಂತರ, ಈಗ ತಮಿಳುನಾಡಿನಲ್ಲಿ ದಲಿತ ಭಾವನೆಗಳಿಗೆ ಧಕ್ಕೆಯಾಗಿದೆ. ರಾಷ್ಟ್ರ ವಿರೋಧಿ ಗೂಂಡಾಗಳು ಅಂಬೇಡ್ಕರ್ ಪ್ರತಿಮೆಯನ್ನು ಕೆಡವಿದ್ದಾರೆ. ಇದು ನಾವು ಬೆಳೆದ ಭಾರತವಲ್ಲ. ದಯವಿಟ್ಟು ನಮ್ಮ ಸಹೋದರ ಮತ್ತು ಸಹೋದರಿಯರ ಮೇಲಿನ ದ್ವೇಷದ ಅಪರಾಧವನ್ನು ನಿಲ್ಲಿಸಿ ಎಂದು ಎನ್.ಎಸ್.ಯು.ಐ ನ ರಾಷ್ಟ್ರೀಯ ಕಾರ್ಯದರ್ಶಿ ವರ್ಧನ್ ಯಾದವ್ ಮನವಿ ಮಾಡಿದ್ದಾರೆ.

ಒಬ್ಬ ಅಂಬೇಡ್ಕರ್ ಅವರನ್ನು ಅವಮಾನಿಸಿದರೆ, ಸಾವಿರ ಅಂಬೇಡ್ಕರ್ ರವರು ಹುಟ್ಟಿಬರಲಿದ್ದಾರೆ ಎಂದು ವಂಚಿತ್ ಬಹುಜನ್ ಅಘಾಡಿಯ ಟ್ವಿಟ್ಟರ್ ಅಕೌಂಟ್ ನಿಂದ ಟ್ವೀಟ್ ಮಾಡಲಾಗಿದೆ. ಇದೇ ಘೋಷಣೆಯನ್ನು ಸಾವಿರಾರು ಜನರು ಪೋಸ್ಟ್ ಮಾಡಿದ್ದು ವೈರಲ್ ಆಗಿದೆ.

ಸಹಸ್ರಮಾನದ ಅತ್ಯಂತ ಬೌದ್ಧಿಕ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಕೆಲ ಮೂರ್ಖ ಜನರು ಅವರ ಪ್ರತಿಮೆಯನ್ನು ಕೆಡವಿದರು ಆದರೆ ಎಂದಿಗೂ ಅವರ ಉನ್ನತತೆ ಮತ್ತು ಸಿದ್ಧಾಂತವನ್ನು ಮುಟ್ಟಲಾರರು ಎಂದು ಸರ್ವೇಶ್ ಬಾಬು ಎಂಬುವವರು ಟ್ವೀಟ್ ಮಾಡಿದ್ದಾರೆ.

ಘಟನೆಯ ಸ್ಥಳದಲ್ಲಿ ನಿನ್ನೆಯೇ ಅಂಬೇಡ್ಕರ್ ಪ್ರತಿಮೆಯ ಮರುನಿರ್ಮಾಣ ಮಾಡುವ ಕಾರ್ಯ ಮುಗಿದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಅಂಬೇಡ್ಕರ್ ಅವರ ಆದರ್ಶಗಳನ್ನು ತತ್ವಗಳನ್ನು. ಅವರು ವಿದ್ಯಾ. ಪದವಿ ಕಲಿತಷ್ಠು. ಆ ಮುರ್ಖ ರಿಗೆ. ಓದಲಿಕಾಗಲ್ಲ. ಅವರ ಜ್ಞಾನ ಮತ್ತು ವ್ಯಕ್ತಿತ್ವ ಹಾಗೆ ಆ ಮುರ್ಖ ರಿಗೆ ಬೆಳೆಯಲ್ಲಿ ಕ್ಕಾಗಲ್ಲ.

    • ಅಂಬೇಡ್ಕರ್ ಈ ದೇಶದ ನಿಜವಾದ ದೇವರು.
      ದೇವರ ಮೂರ್ತಿಯನ್ನು ಕೆಡಿಸುವವರು ಸುಟ್ಟುಹೋಗುತಾರೆ. ಜೈಭೀಮ್

  2. ನಾವು ಬಹಜನರು ಸುಮ್ಮನೆ ಇದ್ದೇವೆ ಎಂದರೆ ಅದಕ್ಕೆ ಒಂದು ಅರ್ಥ ಇದೆ ಯಾಕೆಂದರೆ ನಮ್ಮ ಒಳಗೆ ಬುದ್ಧ,ಬಸವ,ಅಂಬೇಡ್ಕರ್ ರವರ ಶಾಂತಿ ನೆಲೆಸಿದೆ ಹಾಗಾಗಿ ಅದನ್ನು ಬಿಟ್ಟು ನಿಂತರೆ ನಮ್ಮ ದೇಶದಲ್ಲಿ ರಕ್ತದೋಕುಳಿ ಆಗುತ್ತೆ. ನಮೋ ಬುದ್ಧಾಯಾ.

  3. ಅಜ್ಞಾನದ ಅವಿವೇಕಿಗಳು
    ಬೀದಿಯಲ್ಲಿ ಹುಟ್ಟಿದ ಬಿಕಾರಿ ಮಕ್ಳೇ…
    ನೀವು ಅಂಬೇಡ್ಕರ್ ರವರ ಮೂರ್ತಿಗೆ ಅವಮಾನ ಮಾಡಿರಬಹುದು, ಆದ್ರೆ ಅವರ ಸಮತೆಯ ರಾಜ್ಯದ ನಿರ್ಮಾಣದ ಕಲ್ಪನೆ ಚಿಂತನೆಗಳು ವಿಚಾರಕ್ಕಲ್ಲ.ನೀವು ಏನುಮಾಡಿದರೂ,ಅದು ನಿಮ್ಮ ಅಂತ್ಯದ ವನವಾಸ
    ಈ ದೇಶದಲ್ಲಿ ಸಾವಿರಾರೂ ಅಂಬೇಡ್ಕರ್ ರವರು ಇದ್ದಾರೆ ಅವ್ರು ನಿಮ್ಮನ್ನು ಸುಮ್ನೆ ಬಿಡಲ್ಲ

  4. ಅಂಬೇಡ್ಕರ್ ಅವರ ಆದರ್ಶಗಳನ್ನು ತತ್ವಗಳನ್ನು. ಅವರು ವಿದ್ಯಾ. ಪದವಿ ಕಲಿತಷ್ಠು. ಆ ಮುರ್ಖ ರಿಗೆ. ಓದಲಿಕಾಗಲ್ಲ. ಅವರ ಜ್ಞಾನ ಮತ್ತು ವ್ಯಕ್ತಿತ್ವ ಹಾಗೆ ಆ ಮುರ್ಖ ರಿಗೆ ಬೆಳೆಯಲ್ಲಿ ಕ್ಕಾಗಲ್ಲ. ನಾವು ಬಹಜನರು ಸುಮ್ಮನೆ ಇದ್ದೇವೆ ಎಂದರೆ ಅದಕ್ಕೆ ಒಂದು ಅರ್ಥ ಇದೆ ಯಾಕೆಂದರೆ ನಮ್ಮ ಒಳಗೆ ಬುದ್ಧ,ಬಸವ,ಅಂಬೇಡ್ಕರ್ ರವರ ಶಾಂತಿ ನೆಲೆಸಿದೆ ಹಾಗಾಗಿ ಅದನ್ನು ಬಿಟ್ಟು ನಿಂತರೆ ನಮ್ಮ ದೇಶದಲ್ಲಿ ರಕ್ತದೋಕುಳಿ ಆಗುತ್ತೆ.
    ಜೈಭೀಮ್

  5. ನಮ್ಮ ಬಹುಜನರಲ್ಲಿ ಕಡಿಮೆ ಇದ್ದ ಜಾಗೃತಿ, ನಮ್ಮತನವನ್ನು ನೀವೇ ಎಚ್ಚರಿಸುತ್ತಿದ್ದೀರಿ… ಇದು ಒಳ್ಳೆಯ ಲಕ್ಷಣವೆ.. ಆದರೆ ಸಂವಿಧಾನ ವಿರೋಧಿಗಳಿಗೆ ಮತ್ತು ಅಸಮಾನತೆಯ ಪ್ರತಿಪಾದಕರಿಗೆ ಪಾಠ ಕಲಿಸುವ ಹಾಗೆ ನೀವೆ ಮಾಡ್ತಿದ್ದೀರ…
    *ಶಾಂತಿ ಪಾಲನೆಯಲ್ಲಿ ಬುದ್ಧನ ತಾಳ್ಮೆ ಇದೆ ಆದರೆ ಅಶೋಕನ ಶೌರ್ಯ ನಮ್ಮಲ್ಲಿ ಇನ್ನೂ ಹಾಗೇ ಇದೆ…* ಅಂದು ಅಶೋಕ್ ಬಿಸಾಡಿದ ಕತ್ತಿ ತೆಗೆದುಕೊಂಡರೆ ಆಗೋದು ಎರಡೇ…
    ಎರಡನೆ ಕಳಿಂಗ ಯುದ್ಧ ಅಥವಾ ಎರಡನೇ ಕೊರೆಗಾಂವ್ ಯುದ್ಧ… ಆಯ್ಕೆ ನಿಮ್ಮದೆ…

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...