Homeಚಳವಳಿತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಎಲ್ಲೆಡೆ ತೀವ್ರ ಖಂಡನೆ

ತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಎಲ್ಲೆಡೆ ತೀವ್ರ ಖಂಡನೆ

ಸಹಸ್ರಮಾನದ ಅತ್ಯಂತ ಬೌದ್ಧಿಕ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಕೆಲ ಮೂರ್ಖ ಜನರು ಅವರ ಪ್ರತಿಮೆಯನ್ನು ಕೆಡವಿದರು ಆದರೆ ಎಂದಿಗೂ ಅವರ ಉನ್ನತತೆ ಮತ್ತು ಸಿದ್ಧಾಂತವನ್ನು ಮುಟ್ಟಲಾರರು

- Advertisement -
- Advertisement -

ತಮಿಳುನಾಡಿನ ವೇದಾರಣ್ಯಪುರಂ ಎಂಬಲ್ಲಿ ಹಾಡುಹಗಲೇ ಮತೀಯವಾದಿ, ಜಾತಿವಾದಿ ದುಷ್ಕರ್ಮಿಗಳ ಗುಂಪೊಂದು ಅಂಬೇಡ್ಕರ್ ಪ್ರತಿಮೆಯನ್ನು ಭಗ್ನಗೊಳಿಸಿರುವ, ಆ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದೆ. ಅಲ್ಲದೇ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಕೃತ್ಯಕ್ಕೆ ರಾಷ್ಟ್ರಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ.

ಪ್ರತಿ ಬಾರಿಯೂ ಈ ರೀತಿಯ ಘಟನೆ ಸಂಭವಿಸಿದಾಗ, ನಾವು ಡಾ. ಅಂಬೇಡ್ಕರ್ ಅವರ ಮುನ್ನೋಟವನ್ನೇ ಕೊಲ್ಲುತ್ತಿದ್ದೇವೆ. ಇದು ಕೇವಲ ಅವರ ಪ್ರತಿಮೆಯ ಮೇಲಿನ ಆಕ್ರಮಣವಲ್ಲ, ಜಾತಿ, ವರ್ಗ ಮತ್ತು ಲಿಂಗವನ್ನು ಲೆಕ್ಕಿಸದೆ ಎಲ್ಲಾ ಪುರುಷರು ಮತ್ತು ಮಹಿಳೆಯರು ಸಮಾನರು ಎಂಬ ಅವರ ತತ್ವಗಳ ಮೇಲಿನ ಆಕ್ರಮಣವಾಗಿದೆ ಎಂದು ದಲಿತ ಹೋರಾಟಗಾರ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಬೇಸರ ವ್ಯಕ್ತಪಡಿಸಿದ್ದಾರೆ.

ಎಂಎನ್ಎಂ ಪಕ್ಷದ ಮುಖ್ಯಸ್ಥ ಮತ್ತು ಚಿತ್ರನಟ ಕಮಲ್ ಹಾಸನ್ ರವರು “ದೇಶವನ್ನು ವಿಭಜಿಸುವ ಮತ್ತು ಯಾಜಮಾನ್ಯ ಸ್ಥಾಪಿಸುವ ಶಕ್ತಿಗಳು  ಈ ಘಟನೆಗೆ ಕಾರಣವಾಗಿದ್ದಾರೆ” ಎಂದು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿಯ ನಂತರ, ಈಗ ತಮಿಳುನಾಡಿನಲ್ಲಿ ದಲಿತ ಭಾವನೆಗಳಿಗೆ ಧಕ್ಕೆಯಾಗಿದೆ. ರಾಷ್ಟ್ರ ವಿರೋಧಿ ಗೂಂಡಾಗಳು ಅಂಬೇಡ್ಕರ್ ಪ್ರತಿಮೆಯನ್ನು ಕೆಡವಿದ್ದಾರೆ. ಇದು ನಾವು ಬೆಳೆದ ಭಾರತವಲ್ಲ. ದಯವಿಟ್ಟು ನಮ್ಮ ಸಹೋದರ ಮತ್ತು ಸಹೋದರಿಯರ ಮೇಲಿನ ದ್ವೇಷದ ಅಪರಾಧವನ್ನು ನಿಲ್ಲಿಸಿ ಎಂದು ಎನ್.ಎಸ್.ಯು.ಐ ನ ರಾಷ್ಟ್ರೀಯ ಕಾರ್ಯದರ್ಶಿ ವರ್ಧನ್ ಯಾದವ್ ಮನವಿ ಮಾಡಿದ್ದಾರೆ.

ಒಬ್ಬ ಅಂಬೇಡ್ಕರ್ ಅವರನ್ನು ಅವಮಾನಿಸಿದರೆ, ಸಾವಿರ ಅಂಬೇಡ್ಕರ್ ರವರು ಹುಟ್ಟಿಬರಲಿದ್ದಾರೆ ಎಂದು ವಂಚಿತ್ ಬಹುಜನ್ ಅಘಾಡಿಯ ಟ್ವಿಟ್ಟರ್ ಅಕೌಂಟ್ ನಿಂದ ಟ್ವೀಟ್ ಮಾಡಲಾಗಿದೆ. ಇದೇ ಘೋಷಣೆಯನ್ನು ಸಾವಿರಾರು ಜನರು ಪೋಸ್ಟ್ ಮಾಡಿದ್ದು ವೈರಲ್ ಆಗಿದೆ.

ಸಹಸ್ರಮಾನದ ಅತ್ಯಂತ ಬೌದ್ಧಿಕ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಕೆಲ ಮೂರ್ಖ ಜನರು ಅವರ ಪ್ರತಿಮೆಯನ್ನು ಕೆಡವಿದರು ಆದರೆ ಎಂದಿಗೂ ಅವರ ಉನ್ನತತೆ ಮತ್ತು ಸಿದ್ಧಾಂತವನ್ನು ಮುಟ್ಟಲಾರರು ಎಂದು ಸರ್ವೇಶ್ ಬಾಬು ಎಂಬುವವರು ಟ್ವೀಟ್ ಮಾಡಿದ್ದಾರೆ.

ಘಟನೆಯ ಸ್ಥಳದಲ್ಲಿ ನಿನ್ನೆಯೇ ಅಂಬೇಡ್ಕರ್ ಪ್ರತಿಮೆಯ ಮರುನಿರ್ಮಾಣ ಮಾಡುವ ಕಾರ್ಯ ಮುಗಿದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಅಂಬೇಡ್ಕರ್ ಅವರ ಆದರ್ಶಗಳನ್ನು ತತ್ವಗಳನ್ನು. ಅವರು ವಿದ್ಯಾ. ಪದವಿ ಕಲಿತಷ್ಠು. ಆ ಮುರ್ಖ ರಿಗೆ. ಓದಲಿಕಾಗಲ್ಲ. ಅವರ ಜ್ಞಾನ ಮತ್ತು ವ್ಯಕ್ತಿತ್ವ ಹಾಗೆ ಆ ಮುರ್ಖ ರಿಗೆ ಬೆಳೆಯಲ್ಲಿ ಕ್ಕಾಗಲ್ಲ.

    • ಅಂಬೇಡ್ಕರ್ ಈ ದೇಶದ ನಿಜವಾದ ದೇವರು.
      ದೇವರ ಮೂರ್ತಿಯನ್ನು ಕೆಡಿಸುವವರು ಸುಟ್ಟುಹೋಗುತಾರೆ. ಜೈಭೀಮ್

  2. ನಾವು ಬಹಜನರು ಸುಮ್ಮನೆ ಇದ್ದೇವೆ ಎಂದರೆ ಅದಕ್ಕೆ ಒಂದು ಅರ್ಥ ಇದೆ ಯಾಕೆಂದರೆ ನಮ್ಮ ಒಳಗೆ ಬುದ್ಧ,ಬಸವ,ಅಂಬೇಡ್ಕರ್ ರವರ ಶಾಂತಿ ನೆಲೆಸಿದೆ ಹಾಗಾಗಿ ಅದನ್ನು ಬಿಟ್ಟು ನಿಂತರೆ ನಮ್ಮ ದೇಶದಲ್ಲಿ ರಕ್ತದೋಕುಳಿ ಆಗುತ್ತೆ. ನಮೋ ಬುದ್ಧಾಯಾ.

  3. ಅಜ್ಞಾನದ ಅವಿವೇಕಿಗಳು
    ಬೀದಿಯಲ್ಲಿ ಹುಟ್ಟಿದ ಬಿಕಾರಿ ಮಕ್ಳೇ…
    ನೀವು ಅಂಬೇಡ್ಕರ್ ರವರ ಮೂರ್ತಿಗೆ ಅವಮಾನ ಮಾಡಿರಬಹುದು, ಆದ್ರೆ ಅವರ ಸಮತೆಯ ರಾಜ್ಯದ ನಿರ್ಮಾಣದ ಕಲ್ಪನೆ ಚಿಂತನೆಗಳು ವಿಚಾರಕ್ಕಲ್ಲ.ನೀವು ಏನುಮಾಡಿದರೂ,ಅದು ನಿಮ್ಮ ಅಂತ್ಯದ ವನವಾಸ
    ಈ ದೇಶದಲ್ಲಿ ಸಾವಿರಾರೂ ಅಂಬೇಡ್ಕರ್ ರವರು ಇದ್ದಾರೆ ಅವ್ರು ನಿಮ್ಮನ್ನು ಸುಮ್ನೆ ಬಿಡಲ್ಲ

  4. ಅಂಬೇಡ್ಕರ್ ಅವರ ಆದರ್ಶಗಳನ್ನು ತತ್ವಗಳನ್ನು. ಅವರು ವಿದ್ಯಾ. ಪದವಿ ಕಲಿತಷ್ಠು. ಆ ಮುರ್ಖ ರಿಗೆ. ಓದಲಿಕಾಗಲ್ಲ. ಅವರ ಜ್ಞಾನ ಮತ್ತು ವ್ಯಕ್ತಿತ್ವ ಹಾಗೆ ಆ ಮುರ್ಖ ರಿಗೆ ಬೆಳೆಯಲ್ಲಿ ಕ್ಕಾಗಲ್ಲ. ನಾವು ಬಹಜನರು ಸುಮ್ಮನೆ ಇದ್ದೇವೆ ಎಂದರೆ ಅದಕ್ಕೆ ಒಂದು ಅರ್ಥ ಇದೆ ಯಾಕೆಂದರೆ ನಮ್ಮ ಒಳಗೆ ಬುದ್ಧ,ಬಸವ,ಅಂಬೇಡ್ಕರ್ ರವರ ಶಾಂತಿ ನೆಲೆಸಿದೆ ಹಾಗಾಗಿ ಅದನ್ನು ಬಿಟ್ಟು ನಿಂತರೆ ನಮ್ಮ ದೇಶದಲ್ಲಿ ರಕ್ತದೋಕುಳಿ ಆಗುತ್ತೆ.
    ಜೈಭೀಮ್

  5. ನಮ್ಮ ಬಹುಜನರಲ್ಲಿ ಕಡಿಮೆ ಇದ್ದ ಜಾಗೃತಿ, ನಮ್ಮತನವನ್ನು ನೀವೇ ಎಚ್ಚರಿಸುತ್ತಿದ್ದೀರಿ… ಇದು ಒಳ್ಳೆಯ ಲಕ್ಷಣವೆ.. ಆದರೆ ಸಂವಿಧಾನ ವಿರೋಧಿಗಳಿಗೆ ಮತ್ತು ಅಸಮಾನತೆಯ ಪ್ರತಿಪಾದಕರಿಗೆ ಪಾಠ ಕಲಿಸುವ ಹಾಗೆ ನೀವೆ ಮಾಡ್ತಿದ್ದೀರ…
    *ಶಾಂತಿ ಪಾಲನೆಯಲ್ಲಿ ಬುದ್ಧನ ತಾಳ್ಮೆ ಇದೆ ಆದರೆ ಅಶೋಕನ ಶೌರ್ಯ ನಮ್ಮಲ್ಲಿ ಇನ್ನೂ ಹಾಗೇ ಇದೆ…* ಅಂದು ಅಶೋಕ್ ಬಿಸಾಡಿದ ಕತ್ತಿ ತೆಗೆದುಕೊಂಡರೆ ಆಗೋದು ಎರಡೇ…
    ಎರಡನೆ ಕಳಿಂಗ ಯುದ್ಧ ಅಥವಾ ಎರಡನೇ ಕೊರೆಗಾಂವ್ ಯುದ್ಧ… ಆಯ್ಕೆ ನಿಮ್ಮದೆ…

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...