Homeಚಳವಳಿತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಎಲ್ಲೆಡೆ ತೀವ್ರ ಖಂಡನೆ

ತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಎಲ್ಲೆಡೆ ತೀವ್ರ ಖಂಡನೆ

ಸಹಸ್ರಮಾನದ ಅತ್ಯಂತ ಬೌದ್ಧಿಕ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಕೆಲ ಮೂರ್ಖ ಜನರು ಅವರ ಪ್ರತಿಮೆಯನ್ನು ಕೆಡವಿದರು ಆದರೆ ಎಂದಿಗೂ ಅವರ ಉನ್ನತತೆ ಮತ್ತು ಸಿದ್ಧಾಂತವನ್ನು ಮುಟ್ಟಲಾರರು

- Advertisement -
- Advertisement -

ತಮಿಳುನಾಡಿನ ವೇದಾರಣ್ಯಪುರಂ ಎಂಬಲ್ಲಿ ಹಾಡುಹಗಲೇ ಮತೀಯವಾದಿ, ಜಾತಿವಾದಿ ದುಷ್ಕರ್ಮಿಗಳ ಗುಂಪೊಂದು ಅಂಬೇಡ್ಕರ್ ಪ್ರತಿಮೆಯನ್ನು ಭಗ್ನಗೊಳಿಸಿರುವ, ಆ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದೆ. ಅಲ್ಲದೇ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಕೃತ್ಯಕ್ಕೆ ರಾಷ್ಟ್ರಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ.

ಪ್ರತಿ ಬಾರಿಯೂ ಈ ರೀತಿಯ ಘಟನೆ ಸಂಭವಿಸಿದಾಗ, ನಾವು ಡಾ. ಅಂಬೇಡ್ಕರ್ ಅವರ ಮುನ್ನೋಟವನ್ನೇ ಕೊಲ್ಲುತ್ತಿದ್ದೇವೆ. ಇದು ಕೇವಲ ಅವರ ಪ್ರತಿಮೆಯ ಮೇಲಿನ ಆಕ್ರಮಣವಲ್ಲ, ಜಾತಿ, ವರ್ಗ ಮತ್ತು ಲಿಂಗವನ್ನು ಲೆಕ್ಕಿಸದೆ ಎಲ್ಲಾ ಪುರುಷರು ಮತ್ತು ಮಹಿಳೆಯರು ಸಮಾನರು ಎಂಬ ಅವರ ತತ್ವಗಳ ಮೇಲಿನ ಆಕ್ರಮಣವಾಗಿದೆ ಎಂದು ದಲಿತ ಹೋರಾಟಗಾರ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಬೇಸರ ವ್ಯಕ್ತಪಡಿಸಿದ್ದಾರೆ.

ಎಂಎನ್ಎಂ ಪಕ್ಷದ ಮುಖ್ಯಸ್ಥ ಮತ್ತು ಚಿತ್ರನಟ ಕಮಲ್ ಹಾಸನ್ ರವರು “ದೇಶವನ್ನು ವಿಭಜಿಸುವ ಮತ್ತು ಯಾಜಮಾನ್ಯ ಸ್ಥಾಪಿಸುವ ಶಕ್ತಿಗಳು  ಈ ಘಟನೆಗೆ ಕಾರಣವಾಗಿದ್ದಾರೆ” ಎಂದು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿಯ ನಂತರ, ಈಗ ತಮಿಳುನಾಡಿನಲ್ಲಿ ದಲಿತ ಭಾವನೆಗಳಿಗೆ ಧಕ್ಕೆಯಾಗಿದೆ. ರಾಷ್ಟ್ರ ವಿರೋಧಿ ಗೂಂಡಾಗಳು ಅಂಬೇಡ್ಕರ್ ಪ್ರತಿಮೆಯನ್ನು ಕೆಡವಿದ್ದಾರೆ. ಇದು ನಾವು ಬೆಳೆದ ಭಾರತವಲ್ಲ. ದಯವಿಟ್ಟು ನಮ್ಮ ಸಹೋದರ ಮತ್ತು ಸಹೋದರಿಯರ ಮೇಲಿನ ದ್ವೇಷದ ಅಪರಾಧವನ್ನು ನಿಲ್ಲಿಸಿ ಎಂದು ಎನ್.ಎಸ್.ಯು.ಐ ನ ರಾಷ್ಟ್ರೀಯ ಕಾರ್ಯದರ್ಶಿ ವರ್ಧನ್ ಯಾದವ್ ಮನವಿ ಮಾಡಿದ್ದಾರೆ.

ಒಬ್ಬ ಅಂಬೇಡ್ಕರ್ ಅವರನ್ನು ಅವಮಾನಿಸಿದರೆ, ಸಾವಿರ ಅಂಬೇಡ್ಕರ್ ರವರು ಹುಟ್ಟಿಬರಲಿದ್ದಾರೆ ಎಂದು ವಂಚಿತ್ ಬಹುಜನ್ ಅಘಾಡಿಯ ಟ್ವಿಟ್ಟರ್ ಅಕೌಂಟ್ ನಿಂದ ಟ್ವೀಟ್ ಮಾಡಲಾಗಿದೆ. ಇದೇ ಘೋಷಣೆಯನ್ನು ಸಾವಿರಾರು ಜನರು ಪೋಸ್ಟ್ ಮಾಡಿದ್ದು ವೈರಲ್ ಆಗಿದೆ.

ಸಹಸ್ರಮಾನದ ಅತ್ಯಂತ ಬೌದ್ಧಿಕ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಕೆಲ ಮೂರ್ಖ ಜನರು ಅವರ ಪ್ರತಿಮೆಯನ್ನು ಕೆಡವಿದರು ಆದರೆ ಎಂದಿಗೂ ಅವರ ಉನ್ನತತೆ ಮತ್ತು ಸಿದ್ಧಾಂತವನ್ನು ಮುಟ್ಟಲಾರರು ಎಂದು ಸರ್ವೇಶ್ ಬಾಬು ಎಂಬುವವರು ಟ್ವೀಟ್ ಮಾಡಿದ್ದಾರೆ.

ಘಟನೆಯ ಸ್ಥಳದಲ್ಲಿ ನಿನ್ನೆಯೇ ಅಂಬೇಡ್ಕರ್ ಪ್ರತಿಮೆಯ ಮರುನಿರ್ಮಾಣ ಮಾಡುವ ಕಾರ್ಯ ಮುಗಿದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಅಂಬೇಡ್ಕರ್ ಅವರ ಆದರ್ಶಗಳನ್ನು ತತ್ವಗಳನ್ನು. ಅವರು ವಿದ್ಯಾ. ಪದವಿ ಕಲಿತಷ್ಠು. ಆ ಮುರ್ಖ ರಿಗೆ. ಓದಲಿಕಾಗಲ್ಲ. ಅವರ ಜ್ಞಾನ ಮತ್ತು ವ್ಯಕ್ತಿತ್ವ ಹಾಗೆ ಆ ಮುರ್ಖ ರಿಗೆ ಬೆಳೆಯಲ್ಲಿ ಕ್ಕಾಗಲ್ಲ.

    • ಅಂಬೇಡ್ಕರ್ ಈ ದೇಶದ ನಿಜವಾದ ದೇವರು.
      ದೇವರ ಮೂರ್ತಿಯನ್ನು ಕೆಡಿಸುವವರು ಸುಟ್ಟುಹೋಗುತಾರೆ. ಜೈಭೀಮ್

  2. ನಾವು ಬಹಜನರು ಸುಮ್ಮನೆ ಇದ್ದೇವೆ ಎಂದರೆ ಅದಕ್ಕೆ ಒಂದು ಅರ್ಥ ಇದೆ ಯಾಕೆಂದರೆ ನಮ್ಮ ಒಳಗೆ ಬುದ್ಧ,ಬಸವ,ಅಂಬೇಡ್ಕರ್ ರವರ ಶಾಂತಿ ನೆಲೆಸಿದೆ ಹಾಗಾಗಿ ಅದನ್ನು ಬಿಟ್ಟು ನಿಂತರೆ ನಮ್ಮ ದೇಶದಲ್ಲಿ ರಕ್ತದೋಕುಳಿ ಆಗುತ್ತೆ. ನಮೋ ಬುದ್ಧಾಯಾ.

  3. ಅಜ್ಞಾನದ ಅವಿವೇಕಿಗಳು
    ಬೀದಿಯಲ್ಲಿ ಹುಟ್ಟಿದ ಬಿಕಾರಿ ಮಕ್ಳೇ…
    ನೀವು ಅಂಬೇಡ್ಕರ್ ರವರ ಮೂರ್ತಿಗೆ ಅವಮಾನ ಮಾಡಿರಬಹುದು, ಆದ್ರೆ ಅವರ ಸಮತೆಯ ರಾಜ್ಯದ ನಿರ್ಮಾಣದ ಕಲ್ಪನೆ ಚಿಂತನೆಗಳು ವಿಚಾರಕ್ಕಲ್ಲ.ನೀವು ಏನುಮಾಡಿದರೂ,ಅದು ನಿಮ್ಮ ಅಂತ್ಯದ ವನವಾಸ
    ಈ ದೇಶದಲ್ಲಿ ಸಾವಿರಾರೂ ಅಂಬೇಡ್ಕರ್ ರವರು ಇದ್ದಾರೆ ಅವ್ರು ನಿಮ್ಮನ್ನು ಸುಮ್ನೆ ಬಿಡಲ್ಲ

  4. ಅಂಬೇಡ್ಕರ್ ಅವರ ಆದರ್ಶಗಳನ್ನು ತತ್ವಗಳನ್ನು. ಅವರು ವಿದ್ಯಾ. ಪದವಿ ಕಲಿತಷ್ಠು. ಆ ಮುರ್ಖ ರಿಗೆ. ಓದಲಿಕಾಗಲ್ಲ. ಅವರ ಜ್ಞಾನ ಮತ್ತು ವ್ಯಕ್ತಿತ್ವ ಹಾಗೆ ಆ ಮುರ್ಖ ರಿಗೆ ಬೆಳೆಯಲ್ಲಿ ಕ್ಕಾಗಲ್ಲ. ನಾವು ಬಹಜನರು ಸುಮ್ಮನೆ ಇದ್ದೇವೆ ಎಂದರೆ ಅದಕ್ಕೆ ಒಂದು ಅರ್ಥ ಇದೆ ಯಾಕೆಂದರೆ ನಮ್ಮ ಒಳಗೆ ಬುದ್ಧ,ಬಸವ,ಅಂಬೇಡ್ಕರ್ ರವರ ಶಾಂತಿ ನೆಲೆಸಿದೆ ಹಾಗಾಗಿ ಅದನ್ನು ಬಿಟ್ಟು ನಿಂತರೆ ನಮ್ಮ ದೇಶದಲ್ಲಿ ರಕ್ತದೋಕುಳಿ ಆಗುತ್ತೆ.
    ಜೈಭೀಮ್

  5. ನಮ್ಮ ಬಹುಜನರಲ್ಲಿ ಕಡಿಮೆ ಇದ್ದ ಜಾಗೃತಿ, ನಮ್ಮತನವನ್ನು ನೀವೇ ಎಚ್ಚರಿಸುತ್ತಿದ್ದೀರಿ… ಇದು ಒಳ್ಳೆಯ ಲಕ್ಷಣವೆ.. ಆದರೆ ಸಂವಿಧಾನ ವಿರೋಧಿಗಳಿಗೆ ಮತ್ತು ಅಸಮಾನತೆಯ ಪ್ರತಿಪಾದಕರಿಗೆ ಪಾಠ ಕಲಿಸುವ ಹಾಗೆ ನೀವೆ ಮಾಡ್ತಿದ್ದೀರ…
    *ಶಾಂತಿ ಪಾಲನೆಯಲ್ಲಿ ಬುದ್ಧನ ತಾಳ್ಮೆ ಇದೆ ಆದರೆ ಅಶೋಕನ ಶೌರ್ಯ ನಮ್ಮಲ್ಲಿ ಇನ್ನೂ ಹಾಗೇ ಇದೆ…* ಅಂದು ಅಶೋಕ್ ಬಿಸಾಡಿದ ಕತ್ತಿ ತೆಗೆದುಕೊಂಡರೆ ಆಗೋದು ಎರಡೇ…
    ಎರಡನೆ ಕಳಿಂಗ ಯುದ್ಧ ಅಥವಾ ಎರಡನೇ ಕೊರೆಗಾಂವ್ ಯುದ್ಧ… ಆಯ್ಕೆ ನಿಮ್ಮದೆ…

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...