Homeಚಳವಳಿತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಎಲ್ಲೆಡೆ ತೀವ್ರ ಖಂಡನೆ

ತಮಿಳುನಾಡಿನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಎಲ್ಲೆಡೆ ತೀವ್ರ ಖಂಡನೆ

ಸಹಸ್ರಮಾನದ ಅತ್ಯಂತ ಬೌದ್ಧಿಕ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಕೆಲ ಮೂರ್ಖ ಜನರು ಅವರ ಪ್ರತಿಮೆಯನ್ನು ಕೆಡವಿದರು ಆದರೆ ಎಂದಿಗೂ ಅವರ ಉನ್ನತತೆ ಮತ್ತು ಸಿದ್ಧಾಂತವನ್ನು ಮುಟ್ಟಲಾರರು

- Advertisement -
- Advertisement -

ತಮಿಳುನಾಡಿನ ವೇದಾರಣ್ಯಪುರಂ ಎಂಬಲ್ಲಿ ಹಾಡುಹಗಲೇ ಮತೀಯವಾದಿ, ಜಾತಿವಾದಿ ದುಷ್ಕರ್ಮಿಗಳ ಗುಂಪೊಂದು ಅಂಬೇಡ್ಕರ್ ಪ್ರತಿಮೆಯನ್ನು ಭಗ್ನಗೊಳಿಸಿರುವ, ಆ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದೆ. ಅಲ್ಲದೇ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವ ಕೃತ್ಯಕ್ಕೆ ರಾಷ್ಟ್ರಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ.

ಪ್ರತಿ ಬಾರಿಯೂ ಈ ರೀತಿಯ ಘಟನೆ ಸಂಭವಿಸಿದಾಗ, ನಾವು ಡಾ. ಅಂಬೇಡ್ಕರ್ ಅವರ ಮುನ್ನೋಟವನ್ನೇ ಕೊಲ್ಲುತ್ತಿದ್ದೇವೆ. ಇದು ಕೇವಲ ಅವರ ಪ್ರತಿಮೆಯ ಮೇಲಿನ ಆಕ್ರಮಣವಲ್ಲ, ಜಾತಿ, ವರ್ಗ ಮತ್ತು ಲಿಂಗವನ್ನು ಲೆಕ್ಕಿಸದೆ ಎಲ್ಲಾ ಪುರುಷರು ಮತ್ತು ಮಹಿಳೆಯರು ಸಮಾನರು ಎಂಬ ಅವರ ತತ್ವಗಳ ಮೇಲಿನ ಆಕ್ರಮಣವಾಗಿದೆ ಎಂದು ದಲಿತ ಹೋರಾಟಗಾರ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಬೇಸರ ವ್ಯಕ್ತಪಡಿಸಿದ್ದಾರೆ.

ಎಂಎನ್ಎಂ ಪಕ್ಷದ ಮುಖ್ಯಸ್ಥ ಮತ್ತು ಚಿತ್ರನಟ ಕಮಲ್ ಹಾಸನ್ ರವರು “ದೇಶವನ್ನು ವಿಭಜಿಸುವ ಮತ್ತು ಯಾಜಮಾನ್ಯ ಸ್ಥಾಪಿಸುವ ಶಕ್ತಿಗಳು  ಈ ಘಟನೆಗೆ ಕಾರಣವಾಗಿದ್ದಾರೆ” ಎಂದು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿಯ ನಂತರ, ಈಗ ತಮಿಳುನಾಡಿನಲ್ಲಿ ದಲಿತ ಭಾವನೆಗಳಿಗೆ ಧಕ್ಕೆಯಾಗಿದೆ. ರಾಷ್ಟ್ರ ವಿರೋಧಿ ಗೂಂಡಾಗಳು ಅಂಬೇಡ್ಕರ್ ಪ್ರತಿಮೆಯನ್ನು ಕೆಡವಿದ್ದಾರೆ. ಇದು ನಾವು ಬೆಳೆದ ಭಾರತವಲ್ಲ. ದಯವಿಟ್ಟು ನಮ್ಮ ಸಹೋದರ ಮತ್ತು ಸಹೋದರಿಯರ ಮೇಲಿನ ದ್ವೇಷದ ಅಪರಾಧವನ್ನು ನಿಲ್ಲಿಸಿ ಎಂದು ಎನ್.ಎಸ್.ಯು.ಐ ನ ರಾಷ್ಟ್ರೀಯ ಕಾರ್ಯದರ್ಶಿ ವರ್ಧನ್ ಯಾದವ್ ಮನವಿ ಮಾಡಿದ್ದಾರೆ.

ಒಬ್ಬ ಅಂಬೇಡ್ಕರ್ ಅವರನ್ನು ಅವಮಾನಿಸಿದರೆ, ಸಾವಿರ ಅಂಬೇಡ್ಕರ್ ರವರು ಹುಟ್ಟಿಬರಲಿದ್ದಾರೆ ಎಂದು ವಂಚಿತ್ ಬಹುಜನ್ ಅಘಾಡಿಯ ಟ್ವಿಟ್ಟರ್ ಅಕೌಂಟ್ ನಿಂದ ಟ್ವೀಟ್ ಮಾಡಲಾಗಿದೆ. ಇದೇ ಘೋಷಣೆಯನ್ನು ಸಾವಿರಾರು ಜನರು ಪೋಸ್ಟ್ ಮಾಡಿದ್ದು ವೈರಲ್ ಆಗಿದೆ.

ಸಹಸ್ರಮಾನದ ಅತ್ಯಂತ ಬೌದ್ಧಿಕ ವ್ಯಕ್ತಿ ಅಂಬೇಡ್ಕರ್ ಆಗಿದ್ದಾರೆ. ಕೆಲ ಮೂರ್ಖ ಜನರು ಅವರ ಪ್ರತಿಮೆಯನ್ನು ಕೆಡವಿದರು ಆದರೆ ಎಂದಿಗೂ ಅವರ ಉನ್ನತತೆ ಮತ್ತು ಸಿದ್ಧಾಂತವನ್ನು ಮುಟ್ಟಲಾರರು ಎಂದು ಸರ್ವೇಶ್ ಬಾಬು ಎಂಬುವವರು ಟ್ವೀಟ್ ಮಾಡಿದ್ದಾರೆ.

ಘಟನೆಯ ಸ್ಥಳದಲ್ಲಿ ನಿನ್ನೆಯೇ ಅಂಬೇಡ್ಕರ್ ಪ್ರತಿಮೆಯ ಮರುನಿರ್ಮಾಣ ಮಾಡುವ ಕಾರ್ಯ ಮುಗಿದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಅಂಬೇಡ್ಕರ್ ಅವರ ಆದರ್ಶಗಳನ್ನು ತತ್ವಗಳನ್ನು. ಅವರು ವಿದ್ಯಾ. ಪದವಿ ಕಲಿತಷ್ಠು. ಆ ಮುರ್ಖ ರಿಗೆ. ಓದಲಿಕಾಗಲ್ಲ. ಅವರ ಜ್ಞಾನ ಮತ್ತು ವ್ಯಕ್ತಿತ್ವ ಹಾಗೆ ಆ ಮುರ್ಖ ರಿಗೆ ಬೆಳೆಯಲ್ಲಿ ಕ್ಕಾಗಲ್ಲ.

    • ಅಂಬೇಡ್ಕರ್ ಈ ದೇಶದ ನಿಜವಾದ ದೇವರು.
      ದೇವರ ಮೂರ್ತಿಯನ್ನು ಕೆಡಿಸುವವರು ಸುಟ್ಟುಹೋಗುತಾರೆ. ಜೈಭೀಮ್

  2. ನಾವು ಬಹಜನರು ಸುಮ್ಮನೆ ಇದ್ದೇವೆ ಎಂದರೆ ಅದಕ್ಕೆ ಒಂದು ಅರ್ಥ ಇದೆ ಯಾಕೆಂದರೆ ನಮ್ಮ ಒಳಗೆ ಬುದ್ಧ,ಬಸವ,ಅಂಬೇಡ್ಕರ್ ರವರ ಶಾಂತಿ ನೆಲೆಸಿದೆ ಹಾಗಾಗಿ ಅದನ್ನು ಬಿಟ್ಟು ನಿಂತರೆ ನಮ್ಮ ದೇಶದಲ್ಲಿ ರಕ್ತದೋಕುಳಿ ಆಗುತ್ತೆ. ನಮೋ ಬುದ್ಧಾಯಾ.

  3. ಅಜ್ಞಾನದ ಅವಿವೇಕಿಗಳು
    ಬೀದಿಯಲ್ಲಿ ಹುಟ್ಟಿದ ಬಿಕಾರಿ ಮಕ್ಳೇ…
    ನೀವು ಅಂಬೇಡ್ಕರ್ ರವರ ಮೂರ್ತಿಗೆ ಅವಮಾನ ಮಾಡಿರಬಹುದು, ಆದ್ರೆ ಅವರ ಸಮತೆಯ ರಾಜ್ಯದ ನಿರ್ಮಾಣದ ಕಲ್ಪನೆ ಚಿಂತನೆಗಳು ವಿಚಾರಕ್ಕಲ್ಲ.ನೀವು ಏನುಮಾಡಿದರೂ,ಅದು ನಿಮ್ಮ ಅಂತ್ಯದ ವನವಾಸ
    ಈ ದೇಶದಲ್ಲಿ ಸಾವಿರಾರೂ ಅಂಬೇಡ್ಕರ್ ರವರು ಇದ್ದಾರೆ ಅವ್ರು ನಿಮ್ಮನ್ನು ಸುಮ್ನೆ ಬಿಡಲ್ಲ

  4. ಅಂಬೇಡ್ಕರ್ ಅವರ ಆದರ್ಶಗಳನ್ನು ತತ್ವಗಳನ್ನು. ಅವರು ವಿದ್ಯಾ. ಪದವಿ ಕಲಿತಷ್ಠು. ಆ ಮುರ್ಖ ರಿಗೆ. ಓದಲಿಕಾಗಲ್ಲ. ಅವರ ಜ್ಞಾನ ಮತ್ತು ವ್ಯಕ್ತಿತ್ವ ಹಾಗೆ ಆ ಮುರ್ಖ ರಿಗೆ ಬೆಳೆಯಲ್ಲಿ ಕ್ಕಾಗಲ್ಲ. ನಾವು ಬಹಜನರು ಸುಮ್ಮನೆ ಇದ್ದೇವೆ ಎಂದರೆ ಅದಕ್ಕೆ ಒಂದು ಅರ್ಥ ಇದೆ ಯಾಕೆಂದರೆ ನಮ್ಮ ಒಳಗೆ ಬುದ್ಧ,ಬಸವ,ಅಂಬೇಡ್ಕರ್ ರವರ ಶಾಂತಿ ನೆಲೆಸಿದೆ ಹಾಗಾಗಿ ಅದನ್ನು ಬಿಟ್ಟು ನಿಂತರೆ ನಮ್ಮ ದೇಶದಲ್ಲಿ ರಕ್ತದೋಕುಳಿ ಆಗುತ್ತೆ.
    ಜೈಭೀಮ್

  5. ನಮ್ಮ ಬಹುಜನರಲ್ಲಿ ಕಡಿಮೆ ಇದ್ದ ಜಾಗೃತಿ, ನಮ್ಮತನವನ್ನು ನೀವೇ ಎಚ್ಚರಿಸುತ್ತಿದ್ದೀರಿ… ಇದು ಒಳ್ಳೆಯ ಲಕ್ಷಣವೆ.. ಆದರೆ ಸಂವಿಧಾನ ವಿರೋಧಿಗಳಿಗೆ ಮತ್ತು ಅಸಮಾನತೆಯ ಪ್ರತಿಪಾದಕರಿಗೆ ಪಾಠ ಕಲಿಸುವ ಹಾಗೆ ನೀವೆ ಮಾಡ್ತಿದ್ದೀರ…
    *ಶಾಂತಿ ಪಾಲನೆಯಲ್ಲಿ ಬುದ್ಧನ ತಾಳ್ಮೆ ಇದೆ ಆದರೆ ಅಶೋಕನ ಶೌರ್ಯ ನಮ್ಮಲ್ಲಿ ಇನ್ನೂ ಹಾಗೇ ಇದೆ…* ಅಂದು ಅಶೋಕ್ ಬಿಸಾಡಿದ ಕತ್ತಿ ತೆಗೆದುಕೊಂಡರೆ ಆಗೋದು ಎರಡೇ…
    ಎರಡನೆ ಕಳಿಂಗ ಯುದ್ಧ ಅಥವಾ ಎರಡನೇ ಕೊರೆಗಾಂವ್ ಯುದ್ಧ… ಆಯ್ಕೆ ನಿಮ್ಮದೆ…

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...