Homeಚಳವಳಿ2020ರ ವರ್ಷದ ವ್ಯಕ್ತಿಯಾಗಿ ಚಿಂತಕ ಡಾ.ಆನಂದ್ ತೇಲ್ತುಂಬ್ಡೆ ಆಯ್ಕೆ

2020ರ ವರ್ಷದ ವ್ಯಕ್ತಿಯಾಗಿ ಚಿಂತಕ ಡಾ.ಆನಂದ್ ತೇಲ್ತುಂಬ್ಡೆ ಆಯ್ಕೆ

ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಎಂಬ ಪತ್ರಿಕೆಯು 2020ರ ವರ್ಷದ ವ್ಯಕ್ತಿಯಾಗಿ ಡಾ.ಆನಂದ್ ತೇಲ್ತುಂಬ್ಡೆಯವರನ್ನು ಹೆಸರಿಸಿದೆ.

- Advertisement -
- Advertisement -

ಜೈಲಿನಲ್ಲಿರುವ ಭಾರತದ ಹೆಸರಾಂತ ಚಿಂತಕ, IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO, ಅಂಬೇಡ್ಕರ್‌ರವರ ಸಬಂಧಿ ಮತ್ತು ಬೌದ್ಧಿಕ ವಾರಸುದಾರ ಡಾ. ಆನಂದ್‌ ತೇಲ್ತುಂಬ್ಡೆಯವರನ್ನು 2020ರ ವರ್ಷದ ವ್ಯಕ್ತಿಯಾಗಿ ಆಯ್ಕೆ ಮಾಡಲಾಗಿದೆ.

ಪರ್ಯಾಯ ರಾಜಕೀಯವನ್ನು ಪ್ರಸಾರ ಮಾಡುವ ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಎಂಬ ಪತ್ರಿಕೆಯು 2020ರ ವರ್ಷದ ವ್ಯಕ್ತಿಯಾಗಿ ಡಾ.ಆನಂದ್ ತೇಲ್ತುಂಬ್ಡೆಯವರನ್ನು ಹೆಸರಿಸಿದೆ.

ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ  ಬಡ ಭೂಹೀನ ಕೂಲಿಕಾರ್ಮಿಕರ ಕುಟುಂಬದಲ್ಲಿ ಜನಿಸಿದ ಪ್ರೊ. ಆನಂದ್‌ ತೇಲ್ತುಂಬ್ಡೆ ಅವರು ದೇಶದ ಅತ್ಯುತ್ತಮ ವಿದ್ಯಾವಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಅದ್ಭುತ ಶೈಕ್ಷಣಿಕ ಮತ್ತು ವೃತ್ತಿಜೀವನವನ್ನು ಹೊಂದಿದ್ದಾರೆ. ದೇಶದ ಅತ್ಯುನ್ನತ ಗಣ್ಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ಕಂಪನಿಗಳಿಗೆ ನಾಯಕತ್ವ ಕೊಟ್ಟಿದ್ದಾರೆ ಮತ್ತು ಅನೇಕ ಪ್ರಶಸ್ತಿ, ಪುರಸ್ಕಾರಗಳು ಅವರನ್ನು ಹುಡುಕಿಕೊಂಡುಬಂದಿವೆ.

ಇದನ್ನೂ ಓದಿ: IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?

ಭಾರತದಲ್ಲಿನ ಜಾತಿ ಪದ್ದತಿ, ಅಸಮಾನತೆ ಬಗ್ಗೆ, ಅಂಬೇಡ್ಕರ್‌ರವರ ಕುರಿತು 29 ಪುಸ್ತಕಗಳನ್ನು ರಚಿಸಿರುವ ತೇಲ್ತುಂಬ್ಡೆ ಸಾವಿರಾರು ಲೇಖನಗಳನ್ನು ಬರೆದಿದ್ದಾರೆ. ಇಂತಹ ಮಹಾನ್ ಚಿಂತಕನನ್ನು ಸರ್ಕಾರ ಕರಾಳ ಯುಎಪಿಎ ಕಾಯ್ದೆಯಡಿ ಭೀಮಾ ಕೋರೇಂಗಾವ್ ಗಲಭೆಯಲ್ಲಿ ಪಾತ್ರವಹಿಸಿದರು ಎಂದು ಆರೋಪಿಸಿ ಬಂಧಿಸಿ ಜೈಲಿನಲ್ಲಿಟ್ಟಿದೆ. ಬಾಬಾಸಾಹೇಬ್ ಅಂಬೇಡ್ಕರರ ಜನ್ಮದಿನ ಏಪ್ರಿಲ್ 14, 2020ರಂದೇ ಅವರನ್ನು ಬಂಧಿಸಿರುವುದು ದುರಂತ.

ಆನಂದ್
Photo Credit: Counter Currents

ಬ್ರಾಹ್ಮಣ್ಯದ ಸಿದ್ಧಾಂತ, ಜಾತಿ ವ್ಯವಸ್ಥೆ, ನಿಯೋ ಲಿಬರಲಿಜಂ, ಭೂಮಾಲೀಕತ್ವ, ಎಲ್ಲದಕ್ಕೂ ಮಿಗಿಲು ದೇಶದಲ್ಲಿ ಬಲಗೊಳ್ಳುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ಮೇಲೆ ಅವರು ಆಳವಾದ ಬರವಣಿಗೆಗಳನ್ನು ಬರೆದದ್ದೆ ಅಲ್ಲದೇ, ದೇಶದಲ್ಲಿರುವ ಬಡ ಸಮುದಾಯಗಳಿಗೆ ಡಾ.ಅಂಬೇಡ್ಕರ್ ಸೂಚಿಸಿದ ಹಾಗೆ ಸುಶಿಕ್ಷಿತರನ್ನಾಗಿ ಮಾಡುವ ಜವಾಬ್ದಾರಿ ತಲೆಯ ಮೇಲೆ ಹಾಕಿಕೊಂಡರು. ಬಡ ಸಮುದಾಯಗಳ ಮೇಲೆ ಪ್ರತ್ಯೇಕವಾಗಿ ದಲಿತರ ಮೇಲೆ ದಾಳಿಗಳು ನಡೆದರೆ ಆನಂದ್ ಖುದ್ದಾಗಿ ಅಲ್ಲಿಗೆ ಹೋಗಿ ಅವರ ಪರ ನಿಂತರು.

ಸದಾ ಬಡಜನರ ಪರವಾಗಿ ಮತ್ತು ಪ್ರಭುತ್ವದ ಹಿಂಸಾಚಾರದ ವಿರುದ್ಧ ದನಿಯೆತ್ತುತ್ತಿದ್ದ ಆನಂದ್‌ ತೇಲ್ತುಂಬ್ಡೆಯವರನ್ನು ಬಲಪಂಥೀಯ ಸರ್ಕಾರ ಬೇಕಂತಲೇ ಬಂಧಿಸಿ ಜೈಲಿನಲ್ಲಿಟ್ಟಿದೆ. ಇದೇ ರೀತಿಯ ಹತ್ತಾರು ಚಿಂತಕರನ್ನು ಸರ್ಕಾರ ಬಂಧಿಸಿದೆ. ಆದರೆ ದೇಶಾದ್ಯಂತ ಅವರ ಪರವಾಗಿ ಕೂಗು ಕೇಳಿಬರುತ್ತಿದೆ. ಈ ರೀತಿಯ ಪತ್ರಿಕೆಗಳು ಅವರನ್ನು ವರ್ಷದ ವ್ಯಕ್ತಿಯಾಗಿ ಆಯ್ಕೆಮಾಡಿ ಗೌರವ ಸಲ್ಲಿಸುತ್ತಿವೆ.


ಇದನ್ನೂ ಓದಿ: ಆನಂದ್‌ ತೇಲ್‌ತುಂಬ್ಡೆ: ಬಂಧನದಲ್ಲಿ ಅಂಬೇಡ್ಕರ್ ಆತ್ಮಬಂಧು

ಇದನ್ನೂ ಓದಿ: ತಮ್ಮ ಬಂಧನಕ್ಕೂ ಮುಂಚೆ ಭಾರತೀಯರನ್ನು ಉದ್ದೇಶಿಸಿ ಪ್ರೊ. ಆನಂದ್‌ ತೇಲ್ತುಂಬ್ಡೆ ಬರೆದ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...