Homeಚಳವಳಿ2020ರ ವರ್ಷದ ವ್ಯಕ್ತಿಯಾಗಿ ಚಿಂತಕ ಡಾ.ಆನಂದ್ ತೇಲ್ತುಂಬ್ಡೆ ಆಯ್ಕೆ

2020ರ ವರ್ಷದ ವ್ಯಕ್ತಿಯಾಗಿ ಚಿಂತಕ ಡಾ.ಆನಂದ್ ತೇಲ್ತುಂಬ್ಡೆ ಆಯ್ಕೆ

ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಎಂಬ ಪತ್ರಿಕೆಯು 2020ರ ವರ್ಷದ ವ್ಯಕ್ತಿಯಾಗಿ ಡಾ.ಆನಂದ್ ತೇಲ್ತುಂಬ್ಡೆಯವರನ್ನು ಹೆಸರಿಸಿದೆ.

- Advertisement -
- Advertisement -

ಜೈಲಿನಲ್ಲಿರುವ ಭಾರತದ ಹೆಸರಾಂತ ಚಿಂತಕ, IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO, ಅಂಬೇಡ್ಕರ್‌ರವರ ಸಬಂಧಿ ಮತ್ತು ಬೌದ್ಧಿಕ ವಾರಸುದಾರ ಡಾ. ಆನಂದ್‌ ತೇಲ್ತುಂಬ್ಡೆಯವರನ್ನು 2020ರ ವರ್ಷದ ವ್ಯಕ್ತಿಯಾಗಿ ಆಯ್ಕೆ ಮಾಡಲಾಗಿದೆ.

ಪರ್ಯಾಯ ರಾಜಕೀಯವನ್ನು ಪ್ರಸಾರ ಮಾಡುವ ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಎಂಬ ಪತ್ರಿಕೆಯು 2020ರ ವರ್ಷದ ವ್ಯಕ್ತಿಯಾಗಿ ಡಾ.ಆನಂದ್ ತೇಲ್ತುಂಬ್ಡೆಯವರನ್ನು ಹೆಸರಿಸಿದೆ.

ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ  ಬಡ ಭೂಹೀನ ಕೂಲಿಕಾರ್ಮಿಕರ ಕುಟುಂಬದಲ್ಲಿ ಜನಿಸಿದ ಪ್ರೊ. ಆನಂದ್‌ ತೇಲ್ತುಂಬ್ಡೆ ಅವರು ದೇಶದ ಅತ್ಯುತ್ತಮ ವಿದ್ಯಾವಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಅದ್ಭುತ ಶೈಕ್ಷಣಿಕ ಮತ್ತು ವೃತ್ತಿಜೀವನವನ್ನು ಹೊಂದಿದ್ದಾರೆ. ದೇಶದ ಅತ್ಯುನ್ನತ ಗಣ್ಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ಕಂಪನಿಗಳಿಗೆ ನಾಯಕತ್ವ ಕೊಟ್ಟಿದ್ದಾರೆ ಮತ್ತು ಅನೇಕ ಪ್ರಶಸ್ತಿ, ಪುರಸ್ಕಾರಗಳು ಅವರನ್ನು ಹುಡುಕಿಕೊಂಡುಬಂದಿವೆ.

ಇದನ್ನೂ ಓದಿ: IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?

ಭಾರತದಲ್ಲಿನ ಜಾತಿ ಪದ್ದತಿ, ಅಸಮಾನತೆ ಬಗ್ಗೆ, ಅಂಬೇಡ್ಕರ್‌ರವರ ಕುರಿತು 29 ಪುಸ್ತಕಗಳನ್ನು ರಚಿಸಿರುವ ತೇಲ್ತುಂಬ್ಡೆ ಸಾವಿರಾರು ಲೇಖನಗಳನ್ನು ಬರೆದಿದ್ದಾರೆ. ಇಂತಹ ಮಹಾನ್ ಚಿಂತಕನನ್ನು ಸರ್ಕಾರ ಕರಾಳ ಯುಎಪಿಎ ಕಾಯ್ದೆಯಡಿ ಭೀಮಾ ಕೋರೇಂಗಾವ್ ಗಲಭೆಯಲ್ಲಿ ಪಾತ್ರವಹಿಸಿದರು ಎಂದು ಆರೋಪಿಸಿ ಬಂಧಿಸಿ ಜೈಲಿನಲ್ಲಿಟ್ಟಿದೆ. ಬಾಬಾಸಾಹೇಬ್ ಅಂಬೇಡ್ಕರರ ಜನ್ಮದಿನ ಏಪ್ರಿಲ್ 14, 2020ರಂದೇ ಅವರನ್ನು ಬಂಧಿಸಿರುವುದು ದುರಂತ.

ಆನಂದ್
Photo Credit: Counter Currents

ಬ್ರಾಹ್ಮಣ್ಯದ ಸಿದ್ಧಾಂತ, ಜಾತಿ ವ್ಯವಸ್ಥೆ, ನಿಯೋ ಲಿಬರಲಿಜಂ, ಭೂಮಾಲೀಕತ್ವ, ಎಲ್ಲದಕ್ಕೂ ಮಿಗಿಲು ದೇಶದಲ್ಲಿ ಬಲಗೊಳ್ಳುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ಮೇಲೆ ಅವರು ಆಳವಾದ ಬರವಣಿಗೆಗಳನ್ನು ಬರೆದದ್ದೆ ಅಲ್ಲದೇ, ದೇಶದಲ್ಲಿರುವ ಬಡ ಸಮುದಾಯಗಳಿಗೆ ಡಾ.ಅಂಬೇಡ್ಕರ್ ಸೂಚಿಸಿದ ಹಾಗೆ ಸುಶಿಕ್ಷಿತರನ್ನಾಗಿ ಮಾಡುವ ಜವಾಬ್ದಾರಿ ತಲೆಯ ಮೇಲೆ ಹಾಕಿಕೊಂಡರು. ಬಡ ಸಮುದಾಯಗಳ ಮೇಲೆ ಪ್ರತ್ಯೇಕವಾಗಿ ದಲಿತರ ಮೇಲೆ ದಾಳಿಗಳು ನಡೆದರೆ ಆನಂದ್ ಖುದ್ದಾಗಿ ಅಲ್ಲಿಗೆ ಹೋಗಿ ಅವರ ಪರ ನಿಂತರು.

ಸದಾ ಬಡಜನರ ಪರವಾಗಿ ಮತ್ತು ಪ್ರಭುತ್ವದ ಹಿಂಸಾಚಾರದ ವಿರುದ್ಧ ದನಿಯೆತ್ತುತ್ತಿದ್ದ ಆನಂದ್‌ ತೇಲ್ತುಂಬ್ಡೆಯವರನ್ನು ಬಲಪಂಥೀಯ ಸರ್ಕಾರ ಬೇಕಂತಲೇ ಬಂಧಿಸಿ ಜೈಲಿನಲ್ಲಿಟ್ಟಿದೆ. ಇದೇ ರೀತಿಯ ಹತ್ತಾರು ಚಿಂತಕರನ್ನು ಸರ್ಕಾರ ಬಂಧಿಸಿದೆ. ಆದರೆ ದೇಶಾದ್ಯಂತ ಅವರ ಪರವಾಗಿ ಕೂಗು ಕೇಳಿಬರುತ್ತಿದೆ. ಈ ರೀತಿಯ ಪತ್ರಿಕೆಗಳು ಅವರನ್ನು ವರ್ಷದ ವ್ಯಕ್ತಿಯಾಗಿ ಆಯ್ಕೆಮಾಡಿ ಗೌರವ ಸಲ್ಲಿಸುತ್ತಿವೆ.


ಇದನ್ನೂ ಓದಿ: ಆನಂದ್‌ ತೇಲ್‌ತುಂಬ್ಡೆ: ಬಂಧನದಲ್ಲಿ ಅಂಬೇಡ್ಕರ್ ಆತ್ಮಬಂಧು

ಇದನ್ನೂ ಓದಿ: ತಮ್ಮ ಬಂಧನಕ್ಕೂ ಮುಂಚೆ ಭಾರತೀಯರನ್ನು ಉದ್ದೇಶಿಸಿ ಪ್ರೊ. ಆನಂದ್‌ ತೇಲ್ತುಂಬ್ಡೆ ಬರೆದ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...