Homeಚಳವಳಿ2020ರ ವರ್ಷದ ವ್ಯಕ್ತಿಯಾಗಿ ಚಿಂತಕ ಡಾ.ಆನಂದ್ ತೇಲ್ತುಂಬ್ಡೆ ಆಯ್ಕೆ

2020ರ ವರ್ಷದ ವ್ಯಕ್ತಿಯಾಗಿ ಚಿಂತಕ ಡಾ.ಆನಂದ್ ತೇಲ್ತುಂಬ್ಡೆ ಆಯ್ಕೆ

ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಎಂಬ ಪತ್ರಿಕೆಯು 2020ರ ವರ್ಷದ ವ್ಯಕ್ತಿಯಾಗಿ ಡಾ.ಆನಂದ್ ತೇಲ್ತುಂಬ್ಡೆಯವರನ್ನು ಹೆಸರಿಸಿದೆ.

- Advertisement -
- Advertisement -

ಜೈಲಿನಲ್ಲಿರುವ ಭಾರತದ ಹೆಸರಾಂತ ಚಿಂತಕ, IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO, ಅಂಬೇಡ್ಕರ್‌ರವರ ಸಬಂಧಿ ಮತ್ತು ಬೌದ್ಧಿಕ ವಾರಸುದಾರ ಡಾ. ಆನಂದ್‌ ತೇಲ್ತುಂಬ್ಡೆಯವರನ್ನು 2020ರ ವರ್ಷದ ವ್ಯಕ್ತಿಯಾಗಿ ಆಯ್ಕೆ ಮಾಡಲಾಗಿದೆ.

ಪರ್ಯಾಯ ರಾಜಕೀಯವನ್ನು ಪ್ರಸಾರ ಮಾಡುವ ವ್ಯಾಂಕೋವರ್ ಮೂಲದ ಆನ್‌ಲೈನ್ ನಿಯತಕಾಲಿಕ ರ್ಯಾಡಿಕಲ್ ದೇಸಿ ಎಂಬ ಪತ್ರಿಕೆಯು 2020ರ ವರ್ಷದ ವ್ಯಕ್ತಿಯಾಗಿ ಡಾ.ಆನಂದ್ ತೇಲ್ತುಂಬ್ಡೆಯವರನ್ನು ಹೆಸರಿಸಿದೆ.

ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ  ಬಡ ಭೂಹೀನ ಕೂಲಿಕಾರ್ಮಿಕರ ಕುಟುಂಬದಲ್ಲಿ ಜನಿಸಿದ ಪ್ರೊ. ಆನಂದ್‌ ತೇಲ್ತುಂಬ್ಡೆ ಅವರು ದೇಶದ ಅತ್ಯುತ್ತಮ ವಿದ್ಯಾವಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಅದ್ಭುತ ಶೈಕ್ಷಣಿಕ ಮತ್ತು ವೃತ್ತಿಜೀವನವನ್ನು ಹೊಂದಿದ್ದಾರೆ. ದೇಶದ ಅತ್ಯುನ್ನತ ಗಣ್ಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ಕಂಪನಿಗಳಿಗೆ ನಾಯಕತ್ವ ಕೊಟ್ಟಿದ್ದಾರೆ ಮತ್ತು ಅನೇಕ ಪ್ರಶಸ್ತಿ, ಪುರಸ್ಕಾರಗಳು ಅವರನ್ನು ಹುಡುಕಿಕೊಂಡುಬಂದಿವೆ.

ಇದನ್ನೂ ಓದಿ: IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?

ಭಾರತದಲ್ಲಿನ ಜಾತಿ ಪದ್ದತಿ, ಅಸಮಾನತೆ ಬಗ್ಗೆ, ಅಂಬೇಡ್ಕರ್‌ರವರ ಕುರಿತು 29 ಪುಸ್ತಕಗಳನ್ನು ರಚಿಸಿರುವ ತೇಲ್ತುಂಬ್ಡೆ ಸಾವಿರಾರು ಲೇಖನಗಳನ್ನು ಬರೆದಿದ್ದಾರೆ. ಇಂತಹ ಮಹಾನ್ ಚಿಂತಕನನ್ನು ಸರ್ಕಾರ ಕರಾಳ ಯುಎಪಿಎ ಕಾಯ್ದೆಯಡಿ ಭೀಮಾ ಕೋರೇಂಗಾವ್ ಗಲಭೆಯಲ್ಲಿ ಪಾತ್ರವಹಿಸಿದರು ಎಂದು ಆರೋಪಿಸಿ ಬಂಧಿಸಿ ಜೈಲಿನಲ್ಲಿಟ್ಟಿದೆ. ಬಾಬಾಸಾಹೇಬ್ ಅಂಬೇಡ್ಕರರ ಜನ್ಮದಿನ ಏಪ್ರಿಲ್ 14, 2020ರಂದೇ ಅವರನ್ನು ಬಂಧಿಸಿರುವುದು ದುರಂತ.

ಆನಂದ್
Photo Credit: Counter Currents

ಬ್ರಾಹ್ಮಣ್ಯದ ಸಿದ್ಧಾಂತ, ಜಾತಿ ವ್ಯವಸ್ಥೆ, ನಿಯೋ ಲಿಬರಲಿಜಂ, ಭೂಮಾಲೀಕತ್ವ, ಎಲ್ಲದಕ್ಕೂ ಮಿಗಿಲು ದೇಶದಲ್ಲಿ ಬಲಗೊಳ್ಳುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ಮೇಲೆ ಅವರು ಆಳವಾದ ಬರವಣಿಗೆಗಳನ್ನು ಬರೆದದ್ದೆ ಅಲ್ಲದೇ, ದೇಶದಲ್ಲಿರುವ ಬಡ ಸಮುದಾಯಗಳಿಗೆ ಡಾ.ಅಂಬೇಡ್ಕರ್ ಸೂಚಿಸಿದ ಹಾಗೆ ಸುಶಿಕ್ಷಿತರನ್ನಾಗಿ ಮಾಡುವ ಜವಾಬ್ದಾರಿ ತಲೆಯ ಮೇಲೆ ಹಾಕಿಕೊಂಡರು. ಬಡ ಸಮುದಾಯಗಳ ಮೇಲೆ ಪ್ರತ್ಯೇಕವಾಗಿ ದಲಿತರ ಮೇಲೆ ದಾಳಿಗಳು ನಡೆದರೆ ಆನಂದ್ ಖುದ್ದಾಗಿ ಅಲ್ಲಿಗೆ ಹೋಗಿ ಅವರ ಪರ ನಿಂತರು.

ಸದಾ ಬಡಜನರ ಪರವಾಗಿ ಮತ್ತು ಪ್ರಭುತ್ವದ ಹಿಂಸಾಚಾರದ ವಿರುದ್ಧ ದನಿಯೆತ್ತುತ್ತಿದ್ದ ಆನಂದ್‌ ತೇಲ್ತುಂಬ್ಡೆಯವರನ್ನು ಬಲಪಂಥೀಯ ಸರ್ಕಾರ ಬೇಕಂತಲೇ ಬಂಧಿಸಿ ಜೈಲಿನಲ್ಲಿಟ್ಟಿದೆ. ಇದೇ ರೀತಿಯ ಹತ್ತಾರು ಚಿಂತಕರನ್ನು ಸರ್ಕಾರ ಬಂಧಿಸಿದೆ. ಆದರೆ ದೇಶಾದ್ಯಂತ ಅವರ ಪರವಾಗಿ ಕೂಗು ಕೇಳಿಬರುತ್ತಿದೆ. ಈ ರೀತಿಯ ಪತ್ರಿಕೆಗಳು ಅವರನ್ನು ವರ್ಷದ ವ್ಯಕ್ತಿಯಾಗಿ ಆಯ್ಕೆಮಾಡಿ ಗೌರವ ಸಲ್ಲಿಸುತ್ತಿವೆ.


ಇದನ್ನೂ ಓದಿ: ಆನಂದ್‌ ತೇಲ್‌ತುಂಬ್ಡೆ: ಬಂಧನದಲ್ಲಿ ಅಂಬೇಡ್ಕರ್ ಆತ್ಮಬಂಧು

ಇದನ್ನೂ ಓದಿ: ತಮ್ಮ ಬಂಧನಕ್ಕೂ ಮುಂಚೆ ಭಾರತೀಯರನ್ನು ಉದ್ದೇಶಿಸಿ ಪ್ರೊ. ಆನಂದ್‌ ತೇಲ್ತುಂಬ್ಡೆ ಬರೆದ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...