Homeಕರ್ನಾಟಕಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ: ಈ ಮಠಾಧೀಶರಿಗೇನಾಗಿದೆ?

ಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ: ಈ ಮಠಾಧೀಶರಿಗೇನಾಗಿದೆ?

ನೆರೆ ಪರಿಹಾರಕ್ಕೆ, ಕೋವಿಡ್ ಚಿಕಿತ್ಸೆಗೆ ನೀಡಲು ಹಣವಿಲ್ಲದೆ ಪರದಾಡುವ ಸರ್ಕಾರ ಮಠಗಳಿಗೆ ಕಳೆದ ವಾರವಷ್ಟೆ 46 ಕೋಟಿ ಹಣ ತೆತ್ತಿದ್ದು ಗುಟ್ಟೇನಲ್ಲ ಎನ್ನುತ್ತಾರೆ ಹಿರಿಯ ಬರಹಗಾರ ಡಾ.ಬಿ.ಎಲ್ ವೇಣು

- Advertisement -
- Advertisement -

ರಾಜ್ಯದಲ್ಲಿನ ಕೆಲವು ಸ್ವಾಮೀಜಿಗಳು ರಾಜಕಾರಣದ ಉಸಾಬರಿಗೆ ಬಿದ್ದಿರುವ ಕುರಿತು ಓದಿದೆ. ನನಗೂ ಬರೆಯಬೇಕೆನಿಸಿತು. ಮಠಾಧೀಶರುಗಳ ಕುರಿತು ನಾನೇನು ಹೊಸದಾಗಿ ಬರೆಯುತ್ತಿರುವವನಲ್ಲ. “ಮಠಗಳು ದೇಶಕ್ಕೆ ಶಾಪ” ಎಂಬ ಕೃತಿ ಬರೆದು ವಿವಾದಕ್ಕೀಡಾದವನು ನಾನು. ಇತ್ತೀಚೆಗಂತೂ ಮಠಾಧೀಶರುಗಳು ಅದರಲ್ಲಿಯೂ ಸುಪ್ರೀಂ ಪವರ್ ಮುಖ್ಯಮಂತ್ರಿಗಳ ಎದುರೇ ಗೂಳಿಗಳಂತೆ ಗುಟುರು ಹಾಕಿ ತಮ್ಮ ಮಠಕ್ಕೆ ಬೇಕಾದ ಸವಲತ್ತು, ಕೋಟಿಗಟ್ಟಲೆ ಅನುದಾನವನ್ನು ಬೇಡದೆ ಪಡೆಯುವಷ್ಟು ಪ್ರಭಾವಿತರಾಗಿಬಿಟ್ಟಿದ್ದಾರೆ. ಧರ್ಮಾಂಧ ಸರ್ಕಾರವು ಮತಗಳಿಕೆಗಾಗಿ ಮಠಗಳನ್ನು ಓಲೈಸುವ ಗೀಳಿಗೆ ಬಿದ್ದಂತಿದೆ.

ನೆರೆ ಪರಿಹಾರಕ್ಕೆ, ಕೋವಿಡ್ ಚಿಕಿತ್ಸೆಗೆ ನೀಡಲು ಹಣವಿಲ್ಲದೆ ಪರದಾಡುವ ಸರ್ಕಾರ ಮಠಗಳಿಗೆ ಕಳೆದ ವಾರವಷ್ಟೆ 46 ಕೋಟಿ ಹಣ ತೆತ್ತಿದ್ದು ಗುಟ್ಟೇನಲ್ಲ. ಇದೆಲ್ಲಾ ಹಾಳಾಗಿಹೋಗಲಿ ಎಂದರೆ ಮುಖ್ಯಮಂತ್ರಿಗಳ ಎದುರೇ ತಮ್ಮ ಜಾತಿಯವರನ್ನೆ ಮಂತ್ರಿಗಳನ್ನಾಗಿ ಮಾಡಿರೆಂದು ಶಿಪಾರಸ್ ಮಾಡುವುದು, ಮಾಡದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲವೆಂದು ಒಬ್ಬ ಸ್ವಾಮೀಜಿ ಗರಂ ಆದ್ರೆ, ಮತ್ತೊಬ್ಬ, ವೀರಶೈವ ಲಿಂಗಾಯಿತರನ್ನು ’ಪ್ರವರ್ಗ-2ಎ’ಕ್ಕೆ ಸೇರಿಸಿ ಎಂದು ಹುಕುಂ ಮಾಡುತ್ತಾರೆ. ಮಠಾಧೀಶರಿಗೆ ರಾಜಕಾರಣವೇಕೆಂದಿರೋ? ಹಿಂದೆಯೂ ರಾಜರುಗಳಿಗೆ ರಾಜಗುರುಗಳಿದ್ದು ಮಾರ್ಗದರ್ಶನ ಮಾಡುತ್ತಿರಲಿಲ್ಲವೆ ಎಂಬ ಸಬೂಬು ಬೇರೆ.
ನಿಜ ಹಕ್ಕಬುಕ್ಕರಿಗೆ ವಿದ್ಯಾರಣ್ಯ, ಚಂದ್ರಗುಪ್ತನಿಗೆ ಚಾಣಕ್ಯ, ಮದಕರಿನಾಯಕರಿಗೆ ಮರುಘೇಸ್ವಾಮಿಗಳಂಥವರು ಇದ್ದರು. ಅವರೆಂದೂ ತಾವಾಗಿ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದವರಲ್ಲ.

ತಮ್ಮ ಜಾತಿಮತ ಸಮುದಾಯಗಳ ಹಿತಾಕಾಂಕ್ಷಿಗಳಾದವರೂ ಅಲ್ಲ. ಜಾತಿ ಮೀಸಲಾತಿಗಾಗಿ ಒಬ್ಬ ಸ್ವಾಮೀಜಿ ಪಾದಯಾತ್ರೆ ಮಾಡಿದ್ದಲ್ಲದೆ, ಕೇಳಿದಷ್ಟು ಮೀಸಲಾತಿಗೆ ಸಮ್ಮತಿಸದಿದ್ದರೆ ಸಚಿವರಿಂದ ರಾಜಿನಾಮೆ ಕೊಡಿಸುತ್ತೇನೆಂದು ಬೆದರಿಸುತ್ತಾರೆ. ನಿರ್ದಿಷ್ಟ ಸಮುದಾಯಗಳನ್ನು ’ಒಬಿಸಿ’ ಪಟ್ಟಿಗೆ ಸೇರಿಸಿಬಿಡಿ, ’ನಿಮಗೇನೂ ಆಗದು, ಧೈರ್ಯದಿಂದಿರಿ. ನೀವೇ ಮುಂದುವರೆಯುತ್ತೀರಿ’ ಎಂದೆಲ್ಲಾ ಮುಖ್ಯಮಂತ್ರಿಗಳಿಗೆ ಬಹಿರಂಗ ಸಭೆಯಲ್ಲೇ ಸ್ವಾಮೀಜಿಯೊಬ್ಬರು ಅಭಯಹಸ್ತ ತೋರಿದರೆ ಅಲ್ಲಿದ್ದ ಇಬ್ಬರು ಕಾವಿಗಳದ್ದೂ ಕುಮ್ಮಕ್ಕು ಕಂಡು ಬಂತು! ಕೆಲವರಂತೂ ಇಂತಹ ಪಕ್ಷಕ್ಕೆ ಓಟು ಹಾಕಿರೆಂದು ಫರಮಾನು ಹೊರಡಿಸಿ ಗೆಲ್ಲಿಸುವಷ್ಟು ಪ್ರಭಾವಿಗಳು. ಸರ್ಕಾರವನ್ನು ಉರುಳಿಸಬಲ್ಲವೆಂಬಷ್ಟು ಪ್ರಭಾವಿ ಮಠಾಧೀಶರೂ ಹುಟ್ಟಿಕೊಳ್ಳುತ್ತಿರುವಲ್ಲಿ ಇದೇನು ಸರ್ಕಾರದಲ್ಲಿನ ದೌರ್ಬಲ್ಯವೋ? ಮಠಾಧೀಶರುಗಳೇ ಧರ್ಮಾಧರ್ಮಗಳನ್ನು ಮರೆತು ರಾಜಕೀಯ ಲಾಭ ಹಾಗೂ ಬರುವ ಅನುದಾನಕ್ಕಾಗಿ ನಿರ್ಲಜ್ಜರಾಗುತ್ತಿದ್ದಾರೋ ತೋಚದಂತಾಗಿದೆ.

ಸಾಮಾಜಿಕ ನ್ಯಾಯ, ಜನಪರ ಹೋರಾಟಗಳಲ್ಲಿ ತೊಡಗದ ಸ್ವಾಮೀಜಿಯೊಬ್ಬರು ತಮ್ಮ ಜಾತಿ ಸಮುದಾಯಗಳಿಗೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು – ಮೀಸಲಾತಿ ನೀಡಬೇಕೆಂದು ಕೂಡಲ ಸಂಗಮದಿಂದ ಪಾದಯಾತ್ರೆ ಮಾಡುತ್ತೇನೆಂದು ಜಬರ್ ಮಾಡಿದರೆ, ಮತ್ತೊಬ್ಬ ಸ್ವಾಮೀಜಿ ಕಾಗಿನೆಲೆಯಿಂದ ಪಾದಯಾತ್ರೆ ನಡೆಸುತ್ತೇನೆಂದು ಸರ್ಕಾರದ ಪ್ರಾಣ ಹಿಂಡುತ್ತಿದ್ದಾರೆ! ಜಗದಹಿತವನ್ನು ಬಯಸುವವ ಜಗದ್ಗುರು ಎನ್ನುವುದಾದರೆ ಇವರುಗಳಲ್ಲಿ ಯಾರೂ ಜಗದ್ಗುರುಗಳಲ್ಲ. ಎಲ್ಲರೂ ಜಾತಿ ಗುರುಗಳೆ. ಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ. ಜಾತಿಗೊಂದು ಮಠಕಟ್ಟಿ ಸರ್ವರಿಗೂ ಸಮಾನತೆ ದೊರಕಿಸಿಕೊಟ್ಟನೆಂದು ಬೀಗುವವರು ಬಸವಣ್ಣ ಜಾತಿವಿನಾಶಕ್ಕೆ ಪಣತೊಟ್ಟು ಸರ್ವ ಜಾತಿಯ ಜನರನ್ನೂ ತನ್ನ ತೆಕ್ಕೆಗೆ ತೆಗೆದುಕೊಂಡು, ಅಂತರ್ಜಾತೀಯ ವಿವಾಹಕ್ಕೆ ನಾಂದಿ ಹಾಡಿದ್ದನ್ನೇ ಮರೆತುಬಿಡುತ್ತಾರೆ.

ಮರೆಯಲಿ ಬಿಡಿ. ತಮ್ಮ ಸಮುದಾಯಗಳ ಶ್ರೇಯಸ್ಸಿಗೆ ಬಹಿರಂಗವಾಗಿಯೇ ಬ್ಲಾಕ್‌ಮೇಲ್‌ಗಿಳಿದ ಈ ಕಾವಿಧಾರಿಗಳ ಕಾವಿ ಕಿತ್ತೆಸೆದು ಖಾದಿ ಧರಿಸಿ ಕಣಕ್ಕಿಳಿದು ತಮ್ಮ ತಮ್ಮ ಸಮುದಾಯವನ್ನು ಸಂರಕ್ಷಿಸಲಿ. ಕಾವಿಗೆ ಮಾತ್ರ ಕಳಂಕ ತರುವುದು ಬೇಡ, ಬೇಕಾದರೆ ಉತ್ತರಪ್ರದೇಶದಲ್ಲಿನ ಯೋಗಿ ಆದಿತ್ಯನಾಥ ಇದ್ದಾರೆ, ಉಮಾಭಾರತಿ, ಸಾಕ್ಷಿ ಮಹಾರಾಜರಂತೆ ಚುನಾವಣೆಗೇ ಇಳಿದುಬಿಡಲಿ. ಎಡಬಿಡಂಗಿತನ ತೋರದೆ ನೇರವಾಗಿ ರಾಜಕೀಯಕ್ಕೆ ಜಂಪ್ ಮಾಡಿ ಸರ್ಕಾರ ರಚಿಸುವ ಹಂತಕ್ಕೇ ಹೋಗಲಿ.

ರಾಜ್ಯದಲ್ಲಿನ ಕಾವಿ ಮತ್ತು ಖಾದಿಗಳು ಕನಿಷ್ಟ ಅಂತರವನ್ನಾದರೂ ಕಾಯ್ದುಕೊಂಡರೆ ಉಭಯತ್ರರಿಗೂ, ನಾಡಿಗೂ ಶುಭ. ಇಷ್ಟಾದರೂ ಇವರುಗಳಲ್ಲಾದರೂ ಒಗ್ಗಟ್ಟು ಉಂಟೋ! ಕಾವಿಗಳ ಕೈಗೇ ಸದ್ಭಕ್ತರು ಅಧಿಕಾರ ಕೊಟ್ಟರೆ ಸರ್ಕಾರ ನಡೆಸಿಯಾರೆ? ಸ್ವಾಮಿಗಳ ನಡೆ ಪ್ರಜಾಪ್ರಭುತ್ವದಲ್ಲಿ ನೋಡುವರ ಎದುರು ನಗೆಪಾಟಲಾಗದೆ ಮಾದರಿಯಾಗಿರಬೇಕಲ್ಲವೆ.

  • ಡಾ. ಬಿ. ಎಲ್. ವೇಣು

ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ರೈತ ಹೊರಾಟವನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ಕೈಗೊಂಡ ಡಿಎಂಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...