Homeಕರ್ನಾಟಕಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ: ಈ ಮಠಾಧೀಶರಿಗೇನಾಗಿದೆ?

ಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ: ಈ ಮಠಾಧೀಶರಿಗೇನಾಗಿದೆ?

ನೆರೆ ಪರಿಹಾರಕ್ಕೆ, ಕೋವಿಡ್ ಚಿಕಿತ್ಸೆಗೆ ನೀಡಲು ಹಣವಿಲ್ಲದೆ ಪರದಾಡುವ ಸರ್ಕಾರ ಮಠಗಳಿಗೆ ಕಳೆದ ವಾರವಷ್ಟೆ 46 ಕೋಟಿ ಹಣ ತೆತ್ತಿದ್ದು ಗುಟ್ಟೇನಲ್ಲ ಎನ್ನುತ್ತಾರೆ ಹಿರಿಯ ಬರಹಗಾರ ಡಾ.ಬಿ.ಎಲ್ ವೇಣು

- Advertisement -
- Advertisement -

ರಾಜ್ಯದಲ್ಲಿನ ಕೆಲವು ಸ್ವಾಮೀಜಿಗಳು ರಾಜಕಾರಣದ ಉಸಾಬರಿಗೆ ಬಿದ್ದಿರುವ ಕುರಿತು ಓದಿದೆ. ನನಗೂ ಬರೆಯಬೇಕೆನಿಸಿತು. ಮಠಾಧೀಶರುಗಳ ಕುರಿತು ನಾನೇನು ಹೊಸದಾಗಿ ಬರೆಯುತ್ತಿರುವವನಲ್ಲ. “ಮಠಗಳು ದೇಶಕ್ಕೆ ಶಾಪ” ಎಂಬ ಕೃತಿ ಬರೆದು ವಿವಾದಕ್ಕೀಡಾದವನು ನಾನು. ಇತ್ತೀಚೆಗಂತೂ ಮಠಾಧೀಶರುಗಳು ಅದರಲ್ಲಿಯೂ ಸುಪ್ರೀಂ ಪವರ್ ಮುಖ್ಯಮಂತ್ರಿಗಳ ಎದುರೇ ಗೂಳಿಗಳಂತೆ ಗುಟುರು ಹಾಕಿ ತಮ್ಮ ಮಠಕ್ಕೆ ಬೇಕಾದ ಸವಲತ್ತು, ಕೋಟಿಗಟ್ಟಲೆ ಅನುದಾನವನ್ನು ಬೇಡದೆ ಪಡೆಯುವಷ್ಟು ಪ್ರಭಾವಿತರಾಗಿಬಿಟ್ಟಿದ್ದಾರೆ. ಧರ್ಮಾಂಧ ಸರ್ಕಾರವು ಮತಗಳಿಕೆಗಾಗಿ ಮಠಗಳನ್ನು ಓಲೈಸುವ ಗೀಳಿಗೆ ಬಿದ್ದಂತಿದೆ.

ನೆರೆ ಪರಿಹಾರಕ್ಕೆ, ಕೋವಿಡ್ ಚಿಕಿತ್ಸೆಗೆ ನೀಡಲು ಹಣವಿಲ್ಲದೆ ಪರದಾಡುವ ಸರ್ಕಾರ ಮಠಗಳಿಗೆ ಕಳೆದ ವಾರವಷ್ಟೆ 46 ಕೋಟಿ ಹಣ ತೆತ್ತಿದ್ದು ಗುಟ್ಟೇನಲ್ಲ. ಇದೆಲ್ಲಾ ಹಾಳಾಗಿಹೋಗಲಿ ಎಂದರೆ ಮುಖ್ಯಮಂತ್ರಿಗಳ ಎದುರೇ ತಮ್ಮ ಜಾತಿಯವರನ್ನೆ ಮಂತ್ರಿಗಳನ್ನಾಗಿ ಮಾಡಿರೆಂದು ಶಿಪಾರಸ್ ಮಾಡುವುದು, ಮಾಡದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲವೆಂದು ಒಬ್ಬ ಸ್ವಾಮೀಜಿ ಗರಂ ಆದ್ರೆ, ಮತ್ತೊಬ್ಬ, ವೀರಶೈವ ಲಿಂಗಾಯಿತರನ್ನು ’ಪ್ರವರ್ಗ-2ಎ’ಕ್ಕೆ ಸೇರಿಸಿ ಎಂದು ಹುಕುಂ ಮಾಡುತ್ತಾರೆ. ಮಠಾಧೀಶರಿಗೆ ರಾಜಕಾರಣವೇಕೆಂದಿರೋ? ಹಿಂದೆಯೂ ರಾಜರುಗಳಿಗೆ ರಾಜಗುರುಗಳಿದ್ದು ಮಾರ್ಗದರ್ಶನ ಮಾಡುತ್ತಿರಲಿಲ್ಲವೆ ಎಂಬ ಸಬೂಬು ಬೇರೆ.
ನಿಜ ಹಕ್ಕಬುಕ್ಕರಿಗೆ ವಿದ್ಯಾರಣ್ಯ, ಚಂದ್ರಗುಪ್ತನಿಗೆ ಚಾಣಕ್ಯ, ಮದಕರಿನಾಯಕರಿಗೆ ಮರುಘೇಸ್ವಾಮಿಗಳಂಥವರು ಇದ್ದರು. ಅವರೆಂದೂ ತಾವಾಗಿ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದವರಲ್ಲ.

ತಮ್ಮ ಜಾತಿಮತ ಸಮುದಾಯಗಳ ಹಿತಾಕಾಂಕ್ಷಿಗಳಾದವರೂ ಅಲ್ಲ. ಜಾತಿ ಮೀಸಲಾತಿಗಾಗಿ ಒಬ್ಬ ಸ್ವಾಮೀಜಿ ಪಾದಯಾತ್ರೆ ಮಾಡಿದ್ದಲ್ಲದೆ, ಕೇಳಿದಷ್ಟು ಮೀಸಲಾತಿಗೆ ಸಮ್ಮತಿಸದಿದ್ದರೆ ಸಚಿವರಿಂದ ರಾಜಿನಾಮೆ ಕೊಡಿಸುತ್ತೇನೆಂದು ಬೆದರಿಸುತ್ತಾರೆ. ನಿರ್ದಿಷ್ಟ ಸಮುದಾಯಗಳನ್ನು ’ಒಬಿಸಿ’ ಪಟ್ಟಿಗೆ ಸೇರಿಸಿಬಿಡಿ, ’ನಿಮಗೇನೂ ಆಗದು, ಧೈರ್ಯದಿಂದಿರಿ. ನೀವೇ ಮುಂದುವರೆಯುತ್ತೀರಿ’ ಎಂದೆಲ್ಲಾ ಮುಖ್ಯಮಂತ್ರಿಗಳಿಗೆ ಬಹಿರಂಗ ಸಭೆಯಲ್ಲೇ ಸ್ವಾಮೀಜಿಯೊಬ್ಬರು ಅಭಯಹಸ್ತ ತೋರಿದರೆ ಅಲ್ಲಿದ್ದ ಇಬ್ಬರು ಕಾವಿಗಳದ್ದೂ ಕುಮ್ಮಕ್ಕು ಕಂಡು ಬಂತು! ಕೆಲವರಂತೂ ಇಂತಹ ಪಕ್ಷಕ್ಕೆ ಓಟು ಹಾಕಿರೆಂದು ಫರಮಾನು ಹೊರಡಿಸಿ ಗೆಲ್ಲಿಸುವಷ್ಟು ಪ್ರಭಾವಿಗಳು. ಸರ್ಕಾರವನ್ನು ಉರುಳಿಸಬಲ್ಲವೆಂಬಷ್ಟು ಪ್ರಭಾವಿ ಮಠಾಧೀಶರೂ ಹುಟ್ಟಿಕೊಳ್ಳುತ್ತಿರುವಲ್ಲಿ ಇದೇನು ಸರ್ಕಾರದಲ್ಲಿನ ದೌರ್ಬಲ್ಯವೋ? ಮಠಾಧೀಶರುಗಳೇ ಧರ್ಮಾಧರ್ಮಗಳನ್ನು ಮರೆತು ರಾಜಕೀಯ ಲಾಭ ಹಾಗೂ ಬರುವ ಅನುದಾನಕ್ಕಾಗಿ ನಿರ್ಲಜ್ಜರಾಗುತ್ತಿದ್ದಾರೋ ತೋಚದಂತಾಗಿದೆ.

ಸಾಮಾಜಿಕ ನ್ಯಾಯ, ಜನಪರ ಹೋರಾಟಗಳಲ್ಲಿ ತೊಡಗದ ಸ್ವಾಮೀಜಿಯೊಬ್ಬರು ತಮ್ಮ ಜಾತಿ ಸಮುದಾಯಗಳಿಗೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು – ಮೀಸಲಾತಿ ನೀಡಬೇಕೆಂದು ಕೂಡಲ ಸಂಗಮದಿಂದ ಪಾದಯಾತ್ರೆ ಮಾಡುತ್ತೇನೆಂದು ಜಬರ್ ಮಾಡಿದರೆ, ಮತ್ತೊಬ್ಬ ಸ್ವಾಮೀಜಿ ಕಾಗಿನೆಲೆಯಿಂದ ಪಾದಯಾತ್ರೆ ನಡೆಸುತ್ತೇನೆಂದು ಸರ್ಕಾರದ ಪ್ರಾಣ ಹಿಂಡುತ್ತಿದ್ದಾರೆ! ಜಗದಹಿತವನ್ನು ಬಯಸುವವ ಜಗದ್ಗುರು ಎನ್ನುವುದಾದರೆ ಇವರುಗಳಲ್ಲಿ ಯಾರೂ ಜಗದ್ಗುರುಗಳಲ್ಲ. ಎಲ್ಲರೂ ಜಾತಿ ಗುರುಗಳೆ. ಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ. ಜಾತಿಗೊಂದು ಮಠಕಟ್ಟಿ ಸರ್ವರಿಗೂ ಸಮಾನತೆ ದೊರಕಿಸಿಕೊಟ್ಟನೆಂದು ಬೀಗುವವರು ಬಸವಣ್ಣ ಜಾತಿವಿನಾಶಕ್ಕೆ ಪಣತೊಟ್ಟು ಸರ್ವ ಜಾತಿಯ ಜನರನ್ನೂ ತನ್ನ ತೆಕ್ಕೆಗೆ ತೆಗೆದುಕೊಂಡು, ಅಂತರ್ಜಾತೀಯ ವಿವಾಹಕ್ಕೆ ನಾಂದಿ ಹಾಡಿದ್ದನ್ನೇ ಮರೆತುಬಿಡುತ್ತಾರೆ.

ಮರೆಯಲಿ ಬಿಡಿ. ತಮ್ಮ ಸಮುದಾಯಗಳ ಶ್ರೇಯಸ್ಸಿಗೆ ಬಹಿರಂಗವಾಗಿಯೇ ಬ್ಲಾಕ್‌ಮೇಲ್‌ಗಿಳಿದ ಈ ಕಾವಿಧಾರಿಗಳ ಕಾವಿ ಕಿತ್ತೆಸೆದು ಖಾದಿ ಧರಿಸಿ ಕಣಕ್ಕಿಳಿದು ತಮ್ಮ ತಮ್ಮ ಸಮುದಾಯವನ್ನು ಸಂರಕ್ಷಿಸಲಿ. ಕಾವಿಗೆ ಮಾತ್ರ ಕಳಂಕ ತರುವುದು ಬೇಡ, ಬೇಕಾದರೆ ಉತ್ತರಪ್ರದೇಶದಲ್ಲಿನ ಯೋಗಿ ಆದಿತ್ಯನಾಥ ಇದ್ದಾರೆ, ಉಮಾಭಾರತಿ, ಸಾಕ್ಷಿ ಮಹಾರಾಜರಂತೆ ಚುನಾವಣೆಗೇ ಇಳಿದುಬಿಡಲಿ. ಎಡಬಿಡಂಗಿತನ ತೋರದೆ ನೇರವಾಗಿ ರಾಜಕೀಯಕ್ಕೆ ಜಂಪ್ ಮಾಡಿ ಸರ್ಕಾರ ರಚಿಸುವ ಹಂತಕ್ಕೇ ಹೋಗಲಿ.

ರಾಜ್ಯದಲ್ಲಿನ ಕಾವಿ ಮತ್ತು ಖಾದಿಗಳು ಕನಿಷ್ಟ ಅಂತರವನ್ನಾದರೂ ಕಾಯ್ದುಕೊಂಡರೆ ಉಭಯತ್ರರಿಗೂ, ನಾಡಿಗೂ ಶುಭ. ಇಷ್ಟಾದರೂ ಇವರುಗಳಲ್ಲಾದರೂ ಒಗ್ಗಟ್ಟು ಉಂಟೋ! ಕಾವಿಗಳ ಕೈಗೇ ಸದ್ಭಕ್ತರು ಅಧಿಕಾರ ಕೊಟ್ಟರೆ ಸರ್ಕಾರ ನಡೆಸಿಯಾರೆ? ಸ್ವಾಮಿಗಳ ನಡೆ ಪ್ರಜಾಪ್ರಭುತ್ವದಲ್ಲಿ ನೋಡುವರ ಎದುರು ನಗೆಪಾಟಲಾಗದೆ ಮಾದರಿಯಾಗಿರಬೇಕಲ್ಲವೆ.

  • ಡಾ. ಬಿ. ಎಲ್. ವೇಣು

ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ರೈತ ಹೊರಾಟವನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ಕೈಗೊಂಡ ಡಿಎಂಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....