Homeಕರ್ನಾಟಕಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ: ಈ ಮಠಾಧೀಶರಿಗೇನಾಗಿದೆ?

ಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ: ಈ ಮಠಾಧೀಶರಿಗೇನಾಗಿದೆ?

ನೆರೆ ಪರಿಹಾರಕ್ಕೆ, ಕೋವಿಡ್ ಚಿಕಿತ್ಸೆಗೆ ನೀಡಲು ಹಣವಿಲ್ಲದೆ ಪರದಾಡುವ ಸರ್ಕಾರ ಮಠಗಳಿಗೆ ಕಳೆದ ವಾರವಷ್ಟೆ 46 ಕೋಟಿ ಹಣ ತೆತ್ತಿದ್ದು ಗುಟ್ಟೇನಲ್ಲ ಎನ್ನುತ್ತಾರೆ ಹಿರಿಯ ಬರಹಗಾರ ಡಾ.ಬಿ.ಎಲ್ ವೇಣು

- Advertisement -
- Advertisement -

ರಾಜ್ಯದಲ್ಲಿನ ಕೆಲವು ಸ್ವಾಮೀಜಿಗಳು ರಾಜಕಾರಣದ ಉಸಾಬರಿಗೆ ಬಿದ್ದಿರುವ ಕುರಿತು ಓದಿದೆ. ನನಗೂ ಬರೆಯಬೇಕೆನಿಸಿತು. ಮಠಾಧೀಶರುಗಳ ಕುರಿತು ನಾನೇನು ಹೊಸದಾಗಿ ಬರೆಯುತ್ತಿರುವವನಲ್ಲ. “ಮಠಗಳು ದೇಶಕ್ಕೆ ಶಾಪ” ಎಂಬ ಕೃತಿ ಬರೆದು ವಿವಾದಕ್ಕೀಡಾದವನು ನಾನು. ಇತ್ತೀಚೆಗಂತೂ ಮಠಾಧೀಶರುಗಳು ಅದರಲ್ಲಿಯೂ ಸುಪ್ರೀಂ ಪವರ್ ಮುಖ್ಯಮಂತ್ರಿಗಳ ಎದುರೇ ಗೂಳಿಗಳಂತೆ ಗುಟುರು ಹಾಕಿ ತಮ್ಮ ಮಠಕ್ಕೆ ಬೇಕಾದ ಸವಲತ್ತು, ಕೋಟಿಗಟ್ಟಲೆ ಅನುದಾನವನ್ನು ಬೇಡದೆ ಪಡೆಯುವಷ್ಟು ಪ್ರಭಾವಿತರಾಗಿಬಿಟ್ಟಿದ್ದಾರೆ. ಧರ್ಮಾಂಧ ಸರ್ಕಾರವು ಮತಗಳಿಕೆಗಾಗಿ ಮಠಗಳನ್ನು ಓಲೈಸುವ ಗೀಳಿಗೆ ಬಿದ್ದಂತಿದೆ.

ನೆರೆ ಪರಿಹಾರಕ್ಕೆ, ಕೋವಿಡ್ ಚಿಕಿತ್ಸೆಗೆ ನೀಡಲು ಹಣವಿಲ್ಲದೆ ಪರದಾಡುವ ಸರ್ಕಾರ ಮಠಗಳಿಗೆ ಕಳೆದ ವಾರವಷ್ಟೆ 46 ಕೋಟಿ ಹಣ ತೆತ್ತಿದ್ದು ಗುಟ್ಟೇನಲ್ಲ. ಇದೆಲ್ಲಾ ಹಾಳಾಗಿಹೋಗಲಿ ಎಂದರೆ ಮುಖ್ಯಮಂತ್ರಿಗಳ ಎದುರೇ ತಮ್ಮ ಜಾತಿಯವರನ್ನೆ ಮಂತ್ರಿಗಳನ್ನಾಗಿ ಮಾಡಿರೆಂದು ಶಿಪಾರಸ್ ಮಾಡುವುದು, ಮಾಡದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲವೆಂದು ಒಬ್ಬ ಸ್ವಾಮೀಜಿ ಗರಂ ಆದ್ರೆ, ಮತ್ತೊಬ್ಬ, ವೀರಶೈವ ಲಿಂಗಾಯಿತರನ್ನು ’ಪ್ರವರ್ಗ-2ಎ’ಕ್ಕೆ ಸೇರಿಸಿ ಎಂದು ಹುಕುಂ ಮಾಡುತ್ತಾರೆ. ಮಠಾಧೀಶರಿಗೆ ರಾಜಕಾರಣವೇಕೆಂದಿರೋ? ಹಿಂದೆಯೂ ರಾಜರುಗಳಿಗೆ ರಾಜಗುರುಗಳಿದ್ದು ಮಾರ್ಗದರ್ಶನ ಮಾಡುತ್ತಿರಲಿಲ್ಲವೆ ಎಂಬ ಸಬೂಬು ಬೇರೆ.
ನಿಜ ಹಕ್ಕಬುಕ್ಕರಿಗೆ ವಿದ್ಯಾರಣ್ಯ, ಚಂದ್ರಗುಪ್ತನಿಗೆ ಚಾಣಕ್ಯ, ಮದಕರಿನಾಯಕರಿಗೆ ಮರುಘೇಸ್ವಾಮಿಗಳಂಥವರು ಇದ್ದರು. ಅವರೆಂದೂ ತಾವಾಗಿ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಿದವರಲ್ಲ.

ತಮ್ಮ ಜಾತಿಮತ ಸಮುದಾಯಗಳ ಹಿತಾಕಾಂಕ್ಷಿಗಳಾದವರೂ ಅಲ್ಲ. ಜಾತಿ ಮೀಸಲಾತಿಗಾಗಿ ಒಬ್ಬ ಸ್ವಾಮೀಜಿ ಪಾದಯಾತ್ರೆ ಮಾಡಿದ್ದಲ್ಲದೆ, ಕೇಳಿದಷ್ಟು ಮೀಸಲಾತಿಗೆ ಸಮ್ಮತಿಸದಿದ್ದರೆ ಸಚಿವರಿಂದ ರಾಜಿನಾಮೆ ಕೊಡಿಸುತ್ತೇನೆಂದು ಬೆದರಿಸುತ್ತಾರೆ. ನಿರ್ದಿಷ್ಟ ಸಮುದಾಯಗಳನ್ನು ’ಒಬಿಸಿ’ ಪಟ್ಟಿಗೆ ಸೇರಿಸಿಬಿಡಿ, ’ನಿಮಗೇನೂ ಆಗದು, ಧೈರ್ಯದಿಂದಿರಿ. ನೀವೇ ಮುಂದುವರೆಯುತ್ತೀರಿ’ ಎಂದೆಲ್ಲಾ ಮುಖ್ಯಮಂತ್ರಿಗಳಿಗೆ ಬಹಿರಂಗ ಸಭೆಯಲ್ಲೇ ಸ್ವಾಮೀಜಿಯೊಬ್ಬರು ಅಭಯಹಸ್ತ ತೋರಿದರೆ ಅಲ್ಲಿದ್ದ ಇಬ್ಬರು ಕಾವಿಗಳದ್ದೂ ಕುಮ್ಮಕ್ಕು ಕಂಡು ಬಂತು! ಕೆಲವರಂತೂ ಇಂತಹ ಪಕ್ಷಕ್ಕೆ ಓಟು ಹಾಕಿರೆಂದು ಫರಮಾನು ಹೊರಡಿಸಿ ಗೆಲ್ಲಿಸುವಷ್ಟು ಪ್ರಭಾವಿಗಳು. ಸರ್ಕಾರವನ್ನು ಉರುಳಿಸಬಲ್ಲವೆಂಬಷ್ಟು ಪ್ರಭಾವಿ ಮಠಾಧೀಶರೂ ಹುಟ್ಟಿಕೊಳ್ಳುತ್ತಿರುವಲ್ಲಿ ಇದೇನು ಸರ್ಕಾರದಲ್ಲಿನ ದೌರ್ಬಲ್ಯವೋ? ಮಠಾಧೀಶರುಗಳೇ ಧರ್ಮಾಧರ್ಮಗಳನ್ನು ಮರೆತು ರಾಜಕೀಯ ಲಾಭ ಹಾಗೂ ಬರುವ ಅನುದಾನಕ್ಕಾಗಿ ನಿರ್ಲಜ್ಜರಾಗುತ್ತಿದ್ದಾರೋ ತೋಚದಂತಾಗಿದೆ.

ಸಾಮಾಜಿಕ ನ್ಯಾಯ, ಜನಪರ ಹೋರಾಟಗಳಲ್ಲಿ ತೊಡಗದ ಸ್ವಾಮೀಜಿಯೊಬ್ಬರು ತಮ್ಮ ಜಾತಿ ಸಮುದಾಯಗಳಿಗೂ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು – ಮೀಸಲಾತಿ ನೀಡಬೇಕೆಂದು ಕೂಡಲ ಸಂಗಮದಿಂದ ಪಾದಯಾತ್ರೆ ಮಾಡುತ್ತೇನೆಂದು ಜಬರ್ ಮಾಡಿದರೆ, ಮತ್ತೊಬ್ಬ ಸ್ವಾಮೀಜಿ ಕಾಗಿನೆಲೆಯಿಂದ ಪಾದಯಾತ್ರೆ ನಡೆಸುತ್ತೇನೆಂದು ಸರ್ಕಾರದ ಪ್ರಾಣ ಹಿಂಡುತ್ತಿದ್ದಾರೆ! ಜಗದಹಿತವನ್ನು ಬಯಸುವವ ಜಗದ್ಗುರು ಎನ್ನುವುದಾದರೆ ಇವರುಗಳಲ್ಲಿ ಯಾರೂ ಜಗದ್ಗುರುಗಳಲ್ಲ. ಎಲ್ಲರೂ ಜಾತಿ ಗುರುಗಳೆ. ಯಾವುದೂ ಜಾತ್ಯತೀತ ಮಠವಲ್ಲ, ಎಲ್ಲವೂ ಜಾತಿಮಠಗಳೇ. ಜಾತಿಗೊಂದು ಮಠಕಟ್ಟಿ ಸರ್ವರಿಗೂ ಸಮಾನತೆ ದೊರಕಿಸಿಕೊಟ್ಟನೆಂದು ಬೀಗುವವರು ಬಸವಣ್ಣ ಜಾತಿವಿನಾಶಕ್ಕೆ ಪಣತೊಟ್ಟು ಸರ್ವ ಜಾತಿಯ ಜನರನ್ನೂ ತನ್ನ ತೆಕ್ಕೆಗೆ ತೆಗೆದುಕೊಂಡು, ಅಂತರ್ಜಾತೀಯ ವಿವಾಹಕ್ಕೆ ನಾಂದಿ ಹಾಡಿದ್ದನ್ನೇ ಮರೆತುಬಿಡುತ್ತಾರೆ.

ಮರೆಯಲಿ ಬಿಡಿ. ತಮ್ಮ ಸಮುದಾಯಗಳ ಶ್ರೇಯಸ್ಸಿಗೆ ಬಹಿರಂಗವಾಗಿಯೇ ಬ್ಲಾಕ್‌ಮೇಲ್‌ಗಿಳಿದ ಈ ಕಾವಿಧಾರಿಗಳ ಕಾವಿ ಕಿತ್ತೆಸೆದು ಖಾದಿ ಧರಿಸಿ ಕಣಕ್ಕಿಳಿದು ತಮ್ಮ ತಮ್ಮ ಸಮುದಾಯವನ್ನು ಸಂರಕ್ಷಿಸಲಿ. ಕಾವಿಗೆ ಮಾತ್ರ ಕಳಂಕ ತರುವುದು ಬೇಡ, ಬೇಕಾದರೆ ಉತ್ತರಪ್ರದೇಶದಲ್ಲಿನ ಯೋಗಿ ಆದಿತ್ಯನಾಥ ಇದ್ದಾರೆ, ಉಮಾಭಾರತಿ, ಸಾಕ್ಷಿ ಮಹಾರಾಜರಂತೆ ಚುನಾವಣೆಗೇ ಇಳಿದುಬಿಡಲಿ. ಎಡಬಿಡಂಗಿತನ ತೋರದೆ ನೇರವಾಗಿ ರಾಜಕೀಯಕ್ಕೆ ಜಂಪ್ ಮಾಡಿ ಸರ್ಕಾರ ರಚಿಸುವ ಹಂತಕ್ಕೇ ಹೋಗಲಿ.

ರಾಜ್ಯದಲ್ಲಿನ ಕಾವಿ ಮತ್ತು ಖಾದಿಗಳು ಕನಿಷ್ಟ ಅಂತರವನ್ನಾದರೂ ಕಾಯ್ದುಕೊಂಡರೆ ಉಭಯತ್ರರಿಗೂ, ನಾಡಿಗೂ ಶುಭ. ಇಷ್ಟಾದರೂ ಇವರುಗಳಲ್ಲಾದರೂ ಒಗ್ಗಟ್ಟು ಉಂಟೋ! ಕಾವಿಗಳ ಕೈಗೇ ಸದ್ಭಕ್ತರು ಅಧಿಕಾರ ಕೊಟ್ಟರೆ ಸರ್ಕಾರ ನಡೆಸಿಯಾರೆ? ಸ್ವಾಮಿಗಳ ನಡೆ ಪ್ರಜಾಪ್ರಭುತ್ವದಲ್ಲಿ ನೋಡುವರ ಎದುರು ನಗೆಪಾಟಲಾಗದೆ ಮಾದರಿಯಾಗಿರಬೇಕಲ್ಲವೆ.

  • ಡಾ. ಬಿ. ಎಲ್. ವೇಣು

ಐತಿಹಾಸಿಕ ಕಾದಂಬರಿಗಳ ಮೂಲಕ ಜನಪ್ರಿಯರಾಗಿರುವ ಲೇಖಕ ಬಿ.ಎಲ್. ವೇಣು. ರಂಗಭೂಮಿ ಹಿನ್ನೆಲೆಯ ಅವರು ಇತಿಹಾಸ ಮತ್ತು ಸಂಶೋಧನೆಗಳಲ್ಲಿ ಪ್ರೀತಿ ಹೊಂದಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ರೈತ ಹೊರಾಟವನ್ನು ಬೆಂಬಲಿಸಿ ಉಪವಾಸ ಸತ್ಯಾಗ್ರಹ ಕೈಗೊಂಡ ಡಿಎಂಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...