Homeಮುಖಪುಟಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ 'ರಾಜ್‌ಗೃಹ' ಮೇಲೆ ದಾಳಿ, ಧ್ವಂಸ

ಡಾ.ಬಿ.ಆರ್.ಅಂಬೇಡ್ಕರ್‌ರವರ ಮುಂಬೈ ಮನೆ ‘ರಾಜ್‌ಗೃಹ’ ಮೇಲೆ ದಾಳಿ, ಧ್ವಂಸ

ಪ್ರಕಾಶ್ ಅಂಬೇಡ್ಕರ್ ಅವರ ಕುಟುಂಬ ಸದಸ್ಯರು ಸಹ ಈ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ ಹೆಚ್ಚಿನ ಭಾಗವನ್ನು ಡಾ. ಅಂಬೇಡ್ಕರ್ ಅವರ ಪುಸ್ತಕಗಳು ಮತ್ತು ಇತರ ವಸ್ತುಗಳಿಗೆ ವಸ್ತು ಸಂಗ್ರಹಾಲಯವಾಗಿ ಬಳಸಲಾಗುತ್ತಿದೆ.

- Advertisement -
- Advertisement -

ಮುಂಬೈನ ದಾದರ್ ಪ್ರದೇಶದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಮನೆ ‘ರಾಜ್‌ಗೃಹ’ ಮೇಲೆ ಇಬ್ಬರು ಅಪರಿಚಿತ ಕಿಡಿಗೇಡಿಗಳು ಮಂಗಳವಾರ ಸಂಜೆ ದಾಳಿ ನಡೆಸಿ ಧ್ವಂಸ ಮಾಡಿದ್ದಾರೆ. ಮನೆಯ ಕಿಟಕಿ ಗಾಜುಗಳು ಮತ್ತು ಸಿಸಿಟಿವಿ ಕ್ಯಾಮೆರ ಮೇಲೆ ಮನಬಂದಂತೆ ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಮನೆ ಮುಂದಿನ ಗಿಡಗಳನ್ನು ಕಿತ್ತೆಸೆದು ಚೆಲ್ಲಾಪಿಲ್ಲಿ ಮಾಡಲಾಗಿದೆ.

“ರಾಜ್‌ಗೃಹದ ಸಿಸಿಟಿವಿ ಕ್ಯಾಮೆರಾಗಳು ಮತ್ತು ಇತರ ವಸ್ತುಗಳನ್ನು ಧ್ವಂಸ ಮಾಡಲು ಇಬ್ಬರು ಪ್ರಯತ್ನಿಸಿದ್ದಾರೆ ಎಂಬುದು ನಿಜ. ಪೊಲೀಸರು ಪರಿಶೀಲಿಸುತ್ತಿದ್ದಾರೆ. ಎಲ್ಲಾ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ ಮತ್ತು ವಿಚಾರಣೆ ನಡೆಯುತ್ತಿದೆ” ಎಂದು ಡಾ.ಅಂಬೇಡ್ಕರ್ ಅವರ ಮೊಮ್ಮಗ ಮತ್ತು ವಂಚಿತ್ ಬಹುಜನ ಅಗಾಡಿ ಮುಖಂಡ ಪ್ರಕಾಶ್ ಅಂಬೇಡ್ಕರ್ ವಿಡಿಯೋ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಘಟನೆಯನ್ನು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ತೀವ್ರವಾಗಿ ಖಂಡಿಸಿದ್ದು, ಪೊಲೀಸರು ಈ ಪ್ರಕರಣವನ್ನು ಆದ್ಯತೆಯ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ. ಅಪರಾಧಿಗಳು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

‘ರಾಜ್‌ಗೃಹ’

ಡಾ.ಬಿ.ಆರ್.ಅಂಬೇಡ್ಕರ್ ಅವರ ಮನೆ ‘ರಾಜ್‌ಗೃಹ’ ಮೇಲಿನ ವಿಧ್ವಂಸಕ ಕೃತ್ಯಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

ಇದು ದುಷ್ಟ ಮನೋಭಾವದ ಸಮಾಜ ವಿರೋಧಿ ಕೃತ್ಯವಾಗಿದೆ. ಪೊಲೀಸರು ತಕ್ಷಣ ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲಿಯೇ ಪತ್ತೆ ಹಚ್ಚಲಾಗುವುದು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದರು.

ಅಂಬೇಡ್ಕರ್ ಅವರ ಕೆಲಸ ಮತ್ತು ಸಿದ್ಧಾಂತವು ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ. ಜನರಲ್ಲಿರುವ ಈ ನಂಬಿಕೆಯನ್ನು ತೆಗೆದುಹಾಕಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.

ಅಂಬೇಡ್ಕರ್‌ರವರ ಹಿಂದಿನ ಮನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಿಡಿಗೇಡಿಗಳು ಓಡಿಹೋಗುವ ಮೊದಲು ಕಾಂಪೌಂಡ್‌ನಲ್ಲಿದ್ದ ಹೂವಿನ ಮಡಿಕೆಗಳನ್ನು ಒಡೆಯುವುದನ್ನು ತೋರಿಸುತ್ತದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಕುರಿತು ಮಾತುಂಗ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

‘ರಾಜ್‌ಗೃಹ’

ದಾದರ್‌ನ ಹಿಂದೂ ಕಾಲೋನಿಯಲ್ಲಿರುವ ಎರಡು ಅಂತಸ್ತಿನ ಪಾರಂಪರಿಕ ಬಂಗಲೆಯಲ್ಲಿ ಅಂಬೇಡ್ಕರ್ ಮ್ಯೂಸಿಯಂ ಇದೆ, ಅಲ್ಲಿ ಬಾಬಾಸಾಹೇಬರ ಪುಸ್ತಕಗಳು, ಭಾವಚಿತ್ರ, ಚಿತಾಭಸ್ಮ ಮತ್ತು ಹಡಗುಗಳು ಕಲಾಕೃತಿಗಳು ಇವೆ.

ಪ್ರಕಾಶ್ ಅಂಬೇಡ್ಕರ್ ಅವರ ಕುಟುಂಬ ಸದಸ್ಯರು ಸಹ ಈ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಅದರಲ್ಲಿ ಹೆಚ್ಚಿನ ಭಾಗವನ್ನು ಡಾ. ಅಂಬೇಡ್ಕರ್ ಅವರ ಪುಸ್ತಕಗಳು ಮತ್ತು ಇತರ ವಸ್ತುಗಳಿಗೆ ವಸ್ತು ಸಂಗ್ರಹಾಲಯವಾಗಿ ಬಳಸಲಾಗುತ್ತಿದೆ.

ಈ ಘಟನೆಯು ಮಹಾರಾಷ್ಟ್ರದಲ್ಲಿ ದಲಿತರ ಪ್ರತಿಭಟನೆಯನ್ನು ಪ್ರಚೋದಿಸಬಹುದೆಂದು ಭಾವಿಸಿ ಪ್ರಕಾಶ್ ಅಂಬೇಡ್ಕರ್ ಅವರು ಶಾಂತಿಗಾಗಿ ಮನವಿ ಮಾಡಿದ್ದಾರೆ.

“ನಾನು ಎಲ್ಲರೂ ಶಾಂತವಾಗಿರಲು ಮನವಿ ಮಾಡುತ್ತೇನೆ. ಘಟನೆಯ ನಂತರ ಪೊಲೀಸರು ಅತ್ಯಂತ ವೇಗವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ರಾಜ್‌ಗೃಹ’ ಸುತ್ತ ಯಾರೂ ಗುಂಪುಗೂಡಬಾರದೆಂದು ನಾನು ವಿನಂತಿಸುತ್ತೇನೆ” ಎಂದು ಪ್ರಕಾಶ್ ಅಂಬೇಡ್ಕರ್ ಹೇಳಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಿಎಂ ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಅವರು ಅಪರಾಧಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕನ್ನಡ ಖಾಸಗಿ ಚಾನೆಲ್ ಮಾಲಕರು ಪ್ರತಿ ಜಿಲ್ಲೆಯಲ್ಲಿ ಕೊರೊನಾ ಆಸ್ಪತ್ರೆ ಕಟ್ಟುತ್ತಿರುವುದು ನಿಜವೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...