Homeಮುಖಪುಟದಲಿತ ಮುಖ್ಯಮಂತ್ರಿ: ಬಿಜೆಪಿಗೆ ಡಾ.ಎಚ್‌.ಸಿ.ಮಹದೇವಪ್ಪ ತಿರುಗೇಟು

ದಲಿತ ಮುಖ್ಯಮಂತ್ರಿ: ಬಿಜೆಪಿಗೆ ಡಾ.ಎಚ್‌.ಸಿ.ಮಹದೇವಪ್ಪ ತಿರುಗೇಟು

ಕಾಂಗ್ರೆಸ್‌ ಪಕ್ಷವು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಪಂಜಾಬ್‌ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಸಿಖ್‌ ದಲಿತ ವ್ಯಕ್ತಿಯಾದ ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು ಕರ್ನಾಟಕದಲ್ಲಿಯೂ ದಲಿತ ಮುಖ್ಯಮಂತ್ರಿ ಚರ್ಚೆಗೆ ಕಾರಣವಾಗಿದೆ.

- Advertisement -
- Advertisement -

ಕಾಂಗ್ರೆಸ್‌ ಪಕ್ಷವು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಪಂಜಾಬ್‌ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಸಿಖ್‌ ದಲಿತ ವ್ಯಕ್ತಿಯಾದ ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು ಕರ್ನಾಟಕದಲ್ಲಿಯೂ ದಲಿತ ಮುಖ್ಯಮಂತ್ರಿ ಚರ್ಚೆಗೆ ಕಾರಣವಾಗಿದೆ.

ದಲಿತ ಮುಖ್ಯಮಂತ್ರಿ ವಿಚಾರದಲ್ಲಿ ಎಲ್ಲ ಪಕ್ಷಗಳೂ ಅನ್ಯಾಯ ಮಾಡಿವೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಪ್ರಬಲ ಲಿಂಗಾಯತ, ಒಕ್ಕಲಿಗ ಸಮುದಾಯದ ವ್ಯಕ್ತಿಗಳೇ ಅತಿ ಹೆಚ್ಚು ಬಾರಿ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳಾಗಿದ್ದಾರೆ. ಯಾವ ಪಕ್ಷವು ಇಲ್ಲಿ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿಲ್ಲ. ರಾಜಕೀಯ ಕೆಸರೆರಚಾಟಕ್ಕೆ ‘ದಲಿತ ಮುಖ್ಯಮಂತ್ರಿ’ ಎಂಬ ಚರ್ಚೆ ಕಾರಣವಾಗುತ್ತದೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು ಪಂಜಾಬ್‌ ವಿದ್ಯಮಾನವನ್ನು ಹಿಡಿದು, ‘ದಲಿತ ಮುಖ್ಯಮಂತ್ರಿ’ ವಿಚಾರವನ್ನು ಪ್ರಸ್ತಾಪಿಸಿ, “ಪಂಜಾಬ್‌ ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕಾಗಿ ಹಗಲುಕನಸು ಕಾಣುತ್ತಿರುವ ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರೇ, ದಲಿತ ಸಿಎಂ ವಿಚಾರದಲ್ಲಿ ನಿಮ್ಮ ನಿಲುವೇನು? ಮಲ್ಲಿಕಾರ್ಜುನ ಖರ್ಗೆ ಮತ್ತು ಪರಮೇಶ್ವರ್ ಅವರ ರಾಜಕೀಯ ಜೀವನವನ್ನು ಮುಗಿಸಿದ ರೀತಿ ಕರ್ನಾಟಕ ಕಾಂಗ್ರೆಸ್‌ನ ಅಂತರಾಳದಲ್ಲಿ ಹುಟ್ಟಿದ ದಲಿತ ಸಿಎಂ ವಾದದ ಭ್ರೂಣ ಹತ್ಯೆ ಮಾಡುತ್ತೀರಾ?” ಎಂದು ಟ್ವೀಟ್ ಮಾಡಿದೆ.

ಮುಂದುವರಿದು, “ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವರಿಷ್ಠರ ದ್ವಿಮುಖ ನೀತಿಯ ಬಗ್ಗೆ ಏನೆನ್ನಬೇಕು? ಪಂಜಾಬ್‌ನಲ್ಲಿ ಚರಣಜಿತ್ ಅವರಿಗೆ ಪಟ್ಟಕಟ್ಟಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದೇವೆ ಎಂದು ಬೀಗುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ದಲಿತ ಸಿಎಂ ವಾದ ಹಾಗೂ ದಲಿತ ನಾಯಕರನ್ನು ಮೂಲೆಗುಂಪು ಮಾಡಿ ಮೌನಕ್ಕೆ ಶರಣಾಗಿದ್ದಾರೆ” ಎಂದು ಬಿಜೆಪಿ ಹೇಳಿದೆ.

ಇದಕ್ಕೆ ತಮ್ಮ ಫೇಸ್‌ಬುಕ್‌ ಖಾತೆಯ ಮೂಲಕ  ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, “ಸದಾ ಮೌಢ್ಯತೆ ಮತ್ತು ಮತೀಯವಾದವನ್ನೇ ಉಸಿರಾಡುತ್ತಿರುವ ಬಿಜೆಪಿಗರು ದಲಿತರನ್ನು ಸಿಎಂ ಮಾಡುವುದಿರಲಿ, ಅವರಿಗೆ ಸರಿಯಾಗಿ ಗೌರವವನ್ನೂ ನೀಡಲು ಹಿಂದೆ ಮುಂದೆ ನೋಡುತ್ತಾರೆ. ದಲಿತರ ಬದುಕಿನ ಘನತೆ ಮತ್ತು ಅವರ ಹಕ್ಕುಗಳಿಗೆ ವಿರುದ್ಧವಾಗಿರುವಂತಹ ಅಮಾನವೀಯ ವಾತಾವರಣವನ್ನು ನಿರ್ಮಿಸಿದ್ದಾರೆ. ಇದೇ ಮತೀಯವಾದಿಗಳು ಇದೀಗ ದಲಿತ ಸಿ.ಎಂ. ಹೆಸರಿನಲ್ಲಿ ದಲಿತರ ಒಗ್ಗಟ್ಟನ್ನು ಒಡೆಯುವ ಕೆಲಸವನ್ನು ಮಾಡುತ್ತಿರುವುದು ಹಾಸ್ಯಾಸ್ಪದ ಮತ್ತು ಅಪಾಯಕಾರಿ ಬೆಳವಣಿಗೆ” ಎಂದಿದ್ದಾರೆ.

“ಈಗಾಗಲೇ ಹಲವು ರಾಜ್ಯಗಳಲ್ಲಿ ಇವರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡುವ ಅವಕಾಶ ಸಿಕ್ಕರೂ ಮುಖ್ಯಮಂತ್ರಿ ಮಾಡದೇ ಕಾಂಗ್ರೆಸ್ ಪಕ್ಷದ ಒಗ್ಗಟ್ಟನ್ನು ಒಡೆಯುವ ಕೆಲಸ ಮಾಡುತ್ತಿರುವ ಬಿಜೆಪಿಗರು ಎಂದಿಗೂ ದಲಿತರ ಬದುಕಿನ ಹಿತದ ಬಗ್ಗೆ ಯೋಚಿಸುವುದು ಕನಸಿನ ಮಾತು. ಭಾರತದ ವಿವಿಧ ರಾಜ್ಯಗಳಲ್ಲಿ ಅವಕಾಶ ಸಿಕ್ಕಾಗಲೆಲ್ಲ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಬದ್ಧತೆ ತೋರಿರುವುದು ಕಾಂಗ್ರೆಸ್ ಪಕ್ಷ ಎಂಬುದನ್ನು ಎಲ್ಲರೂ ನೆನಪಿಡಬೇಕು” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...