Homeಮುಖಪುಟದಲಿತ ಮುಖ್ಯಮಂತ್ರಿ: ಬಿಜೆಪಿಗೆ ಡಾ.ಎಚ್‌.ಸಿ.ಮಹದೇವಪ್ಪ ತಿರುಗೇಟು

ದಲಿತ ಮುಖ್ಯಮಂತ್ರಿ: ಬಿಜೆಪಿಗೆ ಡಾ.ಎಚ್‌.ಸಿ.ಮಹದೇವಪ್ಪ ತಿರುಗೇಟು

ಕಾಂಗ್ರೆಸ್‌ ಪಕ್ಷವು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಪಂಜಾಬ್‌ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಸಿಖ್‌ ದಲಿತ ವ್ಯಕ್ತಿಯಾದ ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು ಕರ್ನಾಟಕದಲ್ಲಿಯೂ ದಲಿತ ಮುಖ್ಯಮಂತ್ರಿ ಚರ್ಚೆಗೆ ಕಾರಣವಾಗಿದೆ.

- Advertisement -
- Advertisement -

ಕಾಂಗ್ರೆಸ್‌ ಪಕ್ಷವು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಪಂಜಾಬ್‌ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಸಿಖ್‌ ದಲಿತ ವ್ಯಕ್ತಿಯಾದ ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು ಕರ್ನಾಟಕದಲ್ಲಿಯೂ ದಲಿತ ಮುಖ್ಯಮಂತ್ರಿ ಚರ್ಚೆಗೆ ಕಾರಣವಾಗಿದೆ.

ದಲಿತ ಮುಖ್ಯಮಂತ್ರಿ ವಿಚಾರದಲ್ಲಿ ಎಲ್ಲ ಪಕ್ಷಗಳೂ ಅನ್ಯಾಯ ಮಾಡಿವೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಪ್ರಬಲ ಲಿಂಗಾಯತ, ಒಕ್ಕಲಿಗ ಸಮುದಾಯದ ವ್ಯಕ್ತಿಗಳೇ ಅತಿ ಹೆಚ್ಚು ಬಾರಿ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳಾಗಿದ್ದಾರೆ. ಯಾವ ಪಕ್ಷವು ಇಲ್ಲಿ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿಲ್ಲ. ರಾಜಕೀಯ ಕೆಸರೆರಚಾಟಕ್ಕೆ ‘ದಲಿತ ಮುಖ್ಯಮಂತ್ರಿ’ ಎಂಬ ಚರ್ಚೆ ಕಾರಣವಾಗುತ್ತದೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು ಪಂಜಾಬ್‌ ವಿದ್ಯಮಾನವನ್ನು ಹಿಡಿದು, ‘ದಲಿತ ಮುಖ್ಯಮಂತ್ರಿ’ ವಿಚಾರವನ್ನು ಪ್ರಸ್ತಾಪಿಸಿ, “ಪಂಜಾಬ್‌ ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕಾಗಿ ಹಗಲುಕನಸು ಕಾಣುತ್ತಿರುವ ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರೇ, ದಲಿತ ಸಿಎಂ ವಿಚಾರದಲ್ಲಿ ನಿಮ್ಮ ನಿಲುವೇನು? ಮಲ್ಲಿಕಾರ್ಜುನ ಖರ್ಗೆ ಮತ್ತು ಪರಮೇಶ್ವರ್ ಅವರ ರಾಜಕೀಯ ಜೀವನವನ್ನು ಮುಗಿಸಿದ ರೀತಿ ಕರ್ನಾಟಕ ಕಾಂಗ್ರೆಸ್‌ನ ಅಂತರಾಳದಲ್ಲಿ ಹುಟ್ಟಿದ ದಲಿತ ಸಿಎಂ ವಾದದ ಭ್ರೂಣ ಹತ್ಯೆ ಮಾಡುತ್ತೀರಾ?” ಎಂದು ಟ್ವೀಟ್ ಮಾಡಿದೆ.

ಮುಂದುವರಿದು, “ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವರಿಷ್ಠರ ದ್ವಿಮುಖ ನೀತಿಯ ಬಗ್ಗೆ ಏನೆನ್ನಬೇಕು? ಪಂಜಾಬ್‌ನಲ್ಲಿ ಚರಣಜಿತ್ ಅವರಿಗೆ ಪಟ್ಟಕಟ್ಟಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದೇವೆ ಎಂದು ಬೀಗುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ದಲಿತ ಸಿಎಂ ವಾದ ಹಾಗೂ ದಲಿತ ನಾಯಕರನ್ನು ಮೂಲೆಗುಂಪು ಮಾಡಿ ಮೌನಕ್ಕೆ ಶರಣಾಗಿದ್ದಾರೆ” ಎಂದು ಬಿಜೆಪಿ ಹೇಳಿದೆ.

ಇದಕ್ಕೆ ತಮ್ಮ ಫೇಸ್‌ಬುಕ್‌ ಖಾತೆಯ ಮೂಲಕ  ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, “ಸದಾ ಮೌಢ್ಯತೆ ಮತ್ತು ಮತೀಯವಾದವನ್ನೇ ಉಸಿರಾಡುತ್ತಿರುವ ಬಿಜೆಪಿಗರು ದಲಿತರನ್ನು ಸಿಎಂ ಮಾಡುವುದಿರಲಿ, ಅವರಿಗೆ ಸರಿಯಾಗಿ ಗೌರವವನ್ನೂ ನೀಡಲು ಹಿಂದೆ ಮುಂದೆ ನೋಡುತ್ತಾರೆ. ದಲಿತರ ಬದುಕಿನ ಘನತೆ ಮತ್ತು ಅವರ ಹಕ್ಕುಗಳಿಗೆ ವಿರುದ್ಧವಾಗಿರುವಂತಹ ಅಮಾನವೀಯ ವಾತಾವರಣವನ್ನು ನಿರ್ಮಿಸಿದ್ದಾರೆ. ಇದೇ ಮತೀಯವಾದಿಗಳು ಇದೀಗ ದಲಿತ ಸಿ.ಎಂ. ಹೆಸರಿನಲ್ಲಿ ದಲಿತರ ಒಗ್ಗಟ್ಟನ್ನು ಒಡೆಯುವ ಕೆಲಸವನ್ನು ಮಾಡುತ್ತಿರುವುದು ಹಾಸ್ಯಾಸ್ಪದ ಮತ್ತು ಅಪಾಯಕಾರಿ ಬೆಳವಣಿಗೆ” ಎಂದಿದ್ದಾರೆ.

“ಈಗಾಗಲೇ ಹಲವು ರಾಜ್ಯಗಳಲ್ಲಿ ಇವರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡುವ ಅವಕಾಶ ಸಿಕ್ಕರೂ ಮುಖ್ಯಮಂತ್ರಿ ಮಾಡದೇ ಕಾಂಗ್ರೆಸ್ ಪಕ್ಷದ ಒಗ್ಗಟ್ಟನ್ನು ಒಡೆಯುವ ಕೆಲಸ ಮಾಡುತ್ತಿರುವ ಬಿಜೆಪಿಗರು ಎಂದಿಗೂ ದಲಿತರ ಬದುಕಿನ ಹಿತದ ಬಗ್ಗೆ ಯೋಚಿಸುವುದು ಕನಸಿನ ಮಾತು. ಭಾರತದ ವಿವಿಧ ರಾಜ್ಯಗಳಲ್ಲಿ ಅವಕಾಶ ಸಿಕ್ಕಾಗಲೆಲ್ಲ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಬದ್ಧತೆ ತೋರಿರುವುದು ಕಾಂಗ್ರೆಸ್ ಪಕ್ಷ ಎಂಬುದನ್ನು ಎಲ್ಲರೂ ನೆನಪಿಡಬೇಕು” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...