Homeಮುಖಪುಟದಲಿತ ಮುಖ್ಯಮಂತ್ರಿ: ಬಿಜೆಪಿಗೆ ಡಾ.ಎಚ್‌.ಸಿ.ಮಹದೇವಪ್ಪ ತಿರುಗೇಟು

ದಲಿತ ಮುಖ್ಯಮಂತ್ರಿ: ಬಿಜೆಪಿಗೆ ಡಾ.ಎಚ್‌.ಸಿ.ಮಹದೇವಪ್ಪ ತಿರುಗೇಟು

ಕಾಂಗ್ರೆಸ್‌ ಪಕ್ಷವು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಪಂಜಾಬ್‌ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಸಿಖ್‌ ದಲಿತ ವ್ಯಕ್ತಿಯಾದ ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು ಕರ್ನಾಟಕದಲ್ಲಿಯೂ ದಲಿತ ಮುಖ್ಯಮಂತ್ರಿ ಚರ್ಚೆಗೆ ಕಾರಣವಾಗಿದೆ.

- Advertisement -
- Advertisement -

ಕಾಂಗ್ರೆಸ್‌ ಪಕ್ಷವು ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರನ್ನು ಪಂಜಾಬ್‌ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಸಿಖ್‌ ದಲಿತ ವ್ಯಕ್ತಿಯಾದ ಚರಣ್‌‌ಜಿತ್‌ ಸಿಂಗ್‌ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು ಕರ್ನಾಟಕದಲ್ಲಿಯೂ ದಲಿತ ಮುಖ್ಯಮಂತ್ರಿ ಚರ್ಚೆಗೆ ಕಾರಣವಾಗಿದೆ.

ದಲಿತ ಮುಖ್ಯಮಂತ್ರಿ ವಿಚಾರದಲ್ಲಿ ಎಲ್ಲ ಪಕ್ಷಗಳೂ ಅನ್ಯಾಯ ಮಾಡಿವೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವಾಗಿದೆ. ಪ್ರಬಲ ಲಿಂಗಾಯತ, ಒಕ್ಕಲಿಗ ಸಮುದಾಯದ ವ್ಯಕ್ತಿಗಳೇ ಅತಿ ಹೆಚ್ಚು ಬಾರಿ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳಾಗಿದ್ದಾರೆ. ಯಾವ ಪಕ್ಷವು ಇಲ್ಲಿ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿಲ್ಲ. ರಾಜಕೀಯ ಕೆಸರೆರಚಾಟಕ್ಕೆ ‘ದಲಿತ ಮುಖ್ಯಮಂತ್ರಿ’ ಎಂಬ ಚರ್ಚೆ ಕಾರಣವಾಗುತ್ತದೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು ಪಂಜಾಬ್‌ ವಿದ್ಯಮಾನವನ್ನು ಹಿಡಿದು, ‘ದಲಿತ ಮುಖ್ಯಮಂತ್ರಿ’ ವಿಚಾರವನ್ನು ಪ್ರಸ್ತಾಪಿಸಿ, “ಪಂಜಾಬ್‌ ರಾಜ್ಯದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕಾಗಿ ಹಗಲುಕನಸು ಕಾಣುತ್ತಿರುವ ಸಿದ್ಧರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರೇ, ದಲಿತ ಸಿಎಂ ವಿಚಾರದಲ್ಲಿ ನಿಮ್ಮ ನಿಲುವೇನು? ಮಲ್ಲಿಕಾರ್ಜುನ ಖರ್ಗೆ ಮತ್ತು ಪರಮೇಶ್ವರ್ ಅವರ ರಾಜಕೀಯ ಜೀವನವನ್ನು ಮುಗಿಸಿದ ರೀತಿ ಕರ್ನಾಟಕ ಕಾಂಗ್ರೆಸ್‌ನ ಅಂತರಾಳದಲ್ಲಿ ಹುಟ್ಟಿದ ದಲಿತ ಸಿಎಂ ವಾದದ ಭ್ರೂಣ ಹತ್ಯೆ ಮಾಡುತ್ತೀರಾ?” ಎಂದು ಟ್ವೀಟ್ ಮಾಡಿದೆ.

ಮುಂದುವರಿದು, “ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವರಿಷ್ಠರ ದ್ವಿಮುಖ ನೀತಿಯ ಬಗ್ಗೆ ಏನೆನ್ನಬೇಕು? ಪಂಜಾಬ್‌ನಲ್ಲಿ ಚರಣಜಿತ್ ಅವರಿಗೆ ಪಟ್ಟಕಟ್ಟಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದ್ದೇವೆ ಎಂದು ಬೀಗುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ದಲಿತ ಸಿಎಂ ವಾದ ಹಾಗೂ ದಲಿತ ನಾಯಕರನ್ನು ಮೂಲೆಗುಂಪು ಮಾಡಿ ಮೌನಕ್ಕೆ ಶರಣಾಗಿದ್ದಾರೆ” ಎಂದು ಬಿಜೆಪಿ ಹೇಳಿದೆ.

ಇದಕ್ಕೆ ತಮ್ಮ ಫೇಸ್‌ಬುಕ್‌ ಖಾತೆಯ ಮೂಲಕ  ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, “ಸದಾ ಮೌಢ್ಯತೆ ಮತ್ತು ಮತೀಯವಾದವನ್ನೇ ಉಸಿರಾಡುತ್ತಿರುವ ಬಿಜೆಪಿಗರು ದಲಿತರನ್ನು ಸಿಎಂ ಮಾಡುವುದಿರಲಿ, ಅವರಿಗೆ ಸರಿಯಾಗಿ ಗೌರವವನ್ನೂ ನೀಡಲು ಹಿಂದೆ ಮುಂದೆ ನೋಡುತ್ತಾರೆ. ದಲಿತರ ಬದುಕಿನ ಘನತೆ ಮತ್ತು ಅವರ ಹಕ್ಕುಗಳಿಗೆ ವಿರುದ್ಧವಾಗಿರುವಂತಹ ಅಮಾನವೀಯ ವಾತಾವರಣವನ್ನು ನಿರ್ಮಿಸಿದ್ದಾರೆ. ಇದೇ ಮತೀಯವಾದಿಗಳು ಇದೀಗ ದಲಿತ ಸಿ.ಎಂ. ಹೆಸರಿನಲ್ಲಿ ದಲಿತರ ಒಗ್ಗಟ್ಟನ್ನು ಒಡೆಯುವ ಕೆಲಸವನ್ನು ಮಾಡುತ್ತಿರುವುದು ಹಾಸ್ಯಾಸ್ಪದ ಮತ್ತು ಅಪಾಯಕಾರಿ ಬೆಳವಣಿಗೆ” ಎಂದಿದ್ದಾರೆ.

“ಈಗಾಗಲೇ ಹಲವು ರಾಜ್ಯಗಳಲ್ಲಿ ಇವರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡುವ ಅವಕಾಶ ಸಿಕ್ಕರೂ ಮುಖ್ಯಮಂತ್ರಿ ಮಾಡದೇ ಕಾಂಗ್ರೆಸ್ ಪಕ್ಷದ ಒಗ್ಗಟ್ಟನ್ನು ಒಡೆಯುವ ಕೆಲಸ ಮಾಡುತ್ತಿರುವ ಬಿಜೆಪಿಗರು ಎಂದಿಗೂ ದಲಿತರ ಬದುಕಿನ ಹಿತದ ಬಗ್ಗೆ ಯೋಚಿಸುವುದು ಕನಸಿನ ಮಾತು. ಭಾರತದ ವಿವಿಧ ರಾಜ್ಯಗಳಲ್ಲಿ ಅವಕಾಶ ಸಿಕ್ಕಾಗಲೆಲ್ಲ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಬದ್ಧತೆ ತೋರಿರುವುದು ಕಾಂಗ್ರೆಸ್ ಪಕ್ಷ ಎಂಬುದನ್ನು ಎಲ್ಲರೂ ನೆನಪಿಡಬೇಕು” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಪಂಜಾಬ್‌‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್‌ ಉರುಳಿಸಿದ ರಾಜಕೀಯ ದಾಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...