Homeಮುಖಪುಟಸಿಎಎ ವಿರುದ್ಧ ಮಾತನಾಡಿದ್ದಕ್ಕಾಗಿ ಡಾ. ಕಫೀಲ್ ಖಾನ್ ಮೇಲೆ ಕೇಸು, ಬಂಧನ

ಸಿಎಎ ವಿರುದ್ಧ ಮಾತನಾಡಿದ್ದಕ್ಕಾಗಿ ಡಾ. ಕಫೀಲ್ ಖಾನ್ ಮೇಲೆ ಕೇಸು, ಬಂಧನ

ಎನ್‌ಎಸ್‌ಎ ಅಡಿಯಲ್ಲಿ, ವ್ಯಕ್ತಿಯು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಪೊಲೀಸ್‌ ಅಧಿಕಾರಿಗಳು ಭಾವಿಸಿದರೆ ಆ ವ್ಯಕ್ತಿಯನ್ನು ದೀರ್ಘಾವಧಿಯವರೆಗೆ ಬಂಧನದಲ್ಲಿಡಬಹುದಾಗಿದೆ.

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ಸಿಎಎ ವಿರೋಧಿ ಭಾಷಣ ಮಾಡಿದ್ದಕ್ಕಾಗಿ ಡಾ. ಕಫೀಲ್ ಖಾನ್ ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ.

2019 ರ ಡಿಸೆಂಬರ್ 12 ರಂದು ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (ಎಎಂಯು) ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಾಡಿದ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಗೋರಖ್‌ಪುರದ ವೈದ್ಯ ಡಾ.ಕಫೀಲ್ ಖಾನ್ ವಿರುದ್ಧ ಉತ್ತರ ಪ್ರದೇಶ ಸರ್ಕಾರ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಮೇಲೆ ಕೇಸು ದಾಖಲಿಸಿದ್ದಾರೆ.

ಎನ್‌ಎಸ್‌ಎ ಅಡಿಯಲ್ಲಿ, ವ್ಯಕ್ತಿಯು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಪೊಲೀಸ್‌ ಅಧಿಕಾರಿಗಳು ಭಾವಿಸಿದರೆ ಆ ವ್ಯಕ್ತಿಯನ್ನು ದೀರ್ಘಾವಧಿಯವರೆಗೆ ಬಂಧನದಲ್ಲಿಡಬಹುದಾಗಿದೆ.

ಅಪರಾಧ ವಿಭಾಗದ ಎಸ್‌ಪಿ ಡಾ.ಅರವಿಂದ್ ಅವರು ಎನ್‌ಎಸ್‌ಎ ಅಡಿಯಲ್ಲಿ ವೈದ್ಯರನ್ನು ಬಂಧಿಸಲು ಸಾಕಷ್ಟು ಆಧಾರಗಳಿವೆ ಎಂದು ಹೇಳಿದ್ದಾರೆ.

ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 12 ರಂದು ಸಿಎಎ ವಿರೋಧಿ ಪ್ರತಿಭಟನೆ ವೇಳೆ ವಿವಾದಾತ್ಮಕ ಭಾಷಣ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಶಿಶುವೈದ್ಯ ಕಫೀಲ್ ಖಾನ್ ಅವರನ್ನು ಬಂಧಿಸಲಾಯಿತು. ಸೋಮವಾರ ಅವರಿಗೆ ಜಾಮೀನು ನೀಡಲಾಗಿದ್ದರೂ, ಇನ್ನೂ ಅವರನ್ನು ಬಿಡುಗಡೆ ಮಾಡಿಲ್ಲ ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮುಂಬೈ ನಗರಕ್ಕೆ ಆಗಮಿಸಿದಾಗ ವಿಮಾನ ನಿಲ್ದಾಣದಲ್ಲಿ ಮುಂಬೈ ಪೊಲೀಸರ ನೆರವಿನೊಂದಿಗೆ ಜನವರಿ 29 ರಂದು ಕಫೀಲ್‌ರನ್ನು ಬಂಧಿಸಲಾಗಿತ್ತು.

ಫೆಬ್ರವರಿ 14ರ ಶುಕ್ರವಾರ, ಖಾನ್ ಅವರ ಪತ್ನಿ ಡಾ. ಸಬಿಸ್ಟಾ ಖಾನ್ ಅವರು ತಮ್ಮ ಅಧಿಕೃತ ಹ್ಯಾಂಡಲ್‌ನಿಂದ ಎನ್‌ಎಸ್‌ಎ ಅಡಿಯಲ್ಲಿ ಖಾನ್‌ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಯಾವುದೇ ಕಾರಣವಿಲ್ಲದೆ ಕಫೀಲ್‌ಗೆ ಕಿರುಕುಳ ನೀಡಲಾಗುತ್ತಿದೆ ಎಂದು ಸಬಿಸ್ಟಾ ಆರೋಪಿಸಿದ್ದಾರೆ.

ಡಿಸೆಂಬರ್ 13 ರಂದು ಮುಂಬೈನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 153-ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಖಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅವರನ್ನು ಮುಂಬಯಿಯ ಸಹರ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು.
ಫೆಬ್ರವರಿ 10 ರಂದು ಕಫೀಲ್‌ಗೆ ಜಾಮೀನು ನೀಡಲಾಗಿದ್ದರೂ, ಅವರನ್ನು ಇನ್ನೂ ಮಥುರಾ ಜೈಲಿನಿಂದ ಬಿಡುಗಡೆ ಮಾಡಿಲ್ಲ.

ಆಗಸ್ಟ್ 2017 ರಲ್ಲಿ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲಿ ಒಂದು ವಾರದಲ್ಲಿ 60 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಆರೋಪದ ಮೇಲೆ ವೈದ್ಯರನ್ನು ಈ ಹಿಂದೆ ಬಂಧಿಸಲಾಗಿತ್ತು. ಮಕ್ಕಳ ವಾರ್ಡ್‌ನಲ್ಲಿ ಅಲ್ಪ ಪ್ರಮಾಣದ ಆಮ್ಲಜನಕವಿದ್ದುದು ಆ ಸಮಯದಲ್ಲಿ ಸಾವಿಗೆ ಕಾರಣವೆಂದು ಆರೋಪಿಸಲಾಯಿತು.

ಅವರು 2017 ರ ಆಮ್ಲಜನಕ ದುರಂತದಿಂದ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಿಂದ ಅಮಾನತುಗೊಂಡಿದ್ದಾರೆ. ರಾಜ್ಯ ಸರ್ಕಾರದ ತನಿಖೆಯು ಕಫೀಲ್‌ ಖಾನ್ ಮೇಲಿನ ಎಲ್ಲಾ ಪ್ರಮುಖ ಆರೋಪಗಳನ್ನು ತೆರವುಗೊಳಿಸಿದ ನಂತರವೂ ಅವರನ್ನು ಅಮಾನತುಗೊಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...