Homeಮುಖಪುಟಸಿಎಎ ವಿರುದ್ಧ ಮಾತನಾಡಿದ್ದಕ್ಕಾಗಿ ಡಾ. ಕಫೀಲ್ ಖಾನ್ ಮೇಲೆ ಕೇಸು, ಬಂಧನ

ಸಿಎಎ ವಿರುದ್ಧ ಮಾತನಾಡಿದ್ದಕ್ಕಾಗಿ ಡಾ. ಕಫೀಲ್ ಖಾನ್ ಮೇಲೆ ಕೇಸು, ಬಂಧನ

ಎನ್‌ಎಸ್‌ಎ ಅಡಿಯಲ್ಲಿ, ವ್ಯಕ್ತಿಯು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಪೊಲೀಸ್‌ ಅಧಿಕಾರಿಗಳು ಭಾವಿಸಿದರೆ ಆ ವ್ಯಕ್ತಿಯನ್ನು ದೀರ್ಘಾವಧಿಯವರೆಗೆ ಬಂಧನದಲ್ಲಿಡಬಹುದಾಗಿದೆ.

- Advertisement -
- Advertisement -

ಉತ್ತರ ಪ್ರದೇಶ ಸರ್ಕಾರವು ಸಿಎಎ ವಿರೋಧಿ ಭಾಷಣ ಮಾಡಿದ್ದಕ್ಕಾಗಿ ಡಾ. ಕಫೀಲ್ ಖಾನ್ ಅವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ.

2019 ರ ಡಿಸೆಂಬರ್ 12 ರಂದು ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (ಎಎಂಯು) ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಾಡಿದ ಭಾಷಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಗೋರಖ್‌ಪುರದ ವೈದ್ಯ ಡಾ.ಕಫೀಲ್ ಖಾನ್ ವಿರುದ್ಧ ಉತ್ತರ ಪ್ರದೇಶ ಸರ್ಕಾರ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಮೇಲೆ ಕೇಸು ದಾಖಲಿಸಿದ್ದಾರೆ.

ಎನ್‌ಎಸ್‌ಎ ಅಡಿಯಲ್ಲಿ, ವ್ಯಕ್ತಿಯು ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಪೊಲೀಸ್‌ ಅಧಿಕಾರಿಗಳು ಭಾವಿಸಿದರೆ ಆ ವ್ಯಕ್ತಿಯನ್ನು ದೀರ್ಘಾವಧಿಯವರೆಗೆ ಬಂಧನದಲ್ಲಿಡಬಹುದಾಗಿದೆ.

ಅಪರಾಧ ವಿಭಾಗದ ಎಸ್‌ಪಿ ಡಾ.ಅರವಿಂದ್ ಅವರು ಎನ್‌ಎಸ್‌ಎ ಅಡಿಯಲ್ಲಿ ವೈದ್ಯರನ್ನು ಬಂಧಿಸಲು ಸಾಕಷ್ಟು ಆಧಾರಗಳಿವೆ ಎಂದು ಹೇಳಿದ್ದಾರೆ.

ಅಲಿಘರ್‌ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 12 ರಂದು ಸಿಎಎ ವಿರೋಧಿ ಪ್ರತಿಭಟನೆ ವೇಳೆ ವಿವಾದಾತ್ಮಕ ಭಾಷಣ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಶಿಶುವೈದ್ಯ ಕಫೀಲ್ ಖಾನ್ ಅವರನ್ನು ಬಂಧಿಸಲಾಯಿತು. ಸೋಮವಾರ ಅವರಿಗೆ ಜಾಮೀನು ನೀಡಲಾಗಿದ್ದರೂ, ಇನ್ನೂ ಅವರನ್ನು ಬಿಡುಗಡೆ ಮಾಡಿಲ್ಲ ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮುಂಬೈ ನಗರಕ್ಕೆ ಆಗಮಿಸಿದಾಗ ವಿಮಾನ ನಿಲ್ದಾಣದಲ್ಲಿ ಮುಂಬೈ ಪೊಲೀಸರ ನೆರವಿನೊಂದಿಗೆ ಜನವರಿ 29 ರಂದು ಕಫೀಲ್‌ರನ್ನು ಬಂಧಿಸಲಾಗಿತ್ತು.

ಫೆಬ್ರವರಿ 14ರ ಶುಕ್ರವಾರ, ಖಾನ್ ಅವರ ಪತ್ನಿ ಡಾ. ಸಬಿಸ್ಟಾ ಖಾನ್ ಅವರು ತಮ್ಮ ಅಧಿಕೃತ ಹ್ಯಾಂಡಲ್‌ನಿಂದ ಎನ್‌ಎಸ್‌ಎ ಅಡಿಯಲ್ಲಿ ಖಾನ್‌ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಯಾವುದೇ ಕಾರಣವಿಲ್ಲದೆ ಕಫೀಲ್‌ಗೆ ಕಿರುಕುಳ ನೀಡಲಾಗುತ್ತಿದೆ ಎಂದು ಸಬಿಸ್ಟಾ ಆರೋಪಿಸಿದ್ದಾರೆ.

ಡಿಸೆಂಬರ್ 13 ರಂದು ಮುಂಬೈನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 153-ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಖಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅವರನ್ನು ಮುಂಬಯಿಯ ಸಹರ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು.
ಫೆಬ್ರವರಿ 10 ರಂದು ಕಫೀಲ್‌ಗೆ ಜಾಮೀನು ನೀಡಲಾಗಿದ್ದರೂ, ಅವರನ್ನು ಇನ್ನೂ ಮಥುರಾ ಜೈಲಿನಿಂದ ಬಿಡುಗಡೆ ಮಾಡಿಲ್ಲ.

ಆಗಸ್ಟ್ 2017 ರಲ್ಲಿ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಲ್ಲಿ ಒಂದು ವಾರದಲ್ಲಿ 60 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಆರೋಪದ ಮೇಲೆ ವೈದ್ಯರನ್ನು ಈ ಹಿಂದೆ ಬಂಧಿಸಲಾಗಿತ್ತು. ಮಕ್ಕಳ ವಾರ್ಡ್‌ನಲ್ಲಿ ಅಲ್ಪ ಪ್ರಮಾಣದ ಆಮ್ಲಜನಕವಿದ್ದುದು ಆ ಸಮಯದಲ್ಲಿ ಸಾವಿಗೆ ಕಾರಣವೆಂದು ಆರೋಪಿಸಲಾಯಿತು.

ಅವರು 2017 ರ ಆಮ್ಲಜನಕ ದುರಂತದಿಂದ ಗೋರಖ್‌ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜಿನಿಂದ ಅಮಾನತುಗೊಂಡಿದ್ದಾರೆ. ರಾಜ್ಯ ಸರ್ಕಾರದ ತನಿಖೆಯು ಕಫೀಲ್‌ ಖಾನ್ ಮೇಲಿನ ಎಲ್ಲಾ ಪ್ರಮುಖ ಆರೋಪಗಳನ್ನು ತೆರವುಗೊಳಿಸಿದ ನಂತರವೂ ಅವರನ್ನು ಅಮಾನತುಗೊಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...