Homeಮುಖಪುಟಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಸತತ ಪರಿಶ್ರಮದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ತೇರ್ಗಡೆಯಾದ ಆನಂತರ ಕರ್ನಾಟಕದ ಅತ್ಯುತ್ತಮ ವೈದ್ಯಕೀಯ ಕಾಲೇಜೊಂದರಲ್ಲಿ ಪರಿಶ್ರಮಪಟ್ಟು ಓದಿದ ಹೀರೊ ವೈದ್ಯರವರು.

- Advertisement -
- Advertisement -

ಡಾ. ಕಫೀಲ್‌ಖಾನ್ ಒಬ್ಬ ಹೋರಾಟಗಾರ ವೈದ್ಯ. ಅವರು ನಮ್ಮೆಲ್ಲರಿಗಾಗಿ ಮತ್ತು ಉಜ್ವಲ ಭಾರತಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಬಿಆರ್‌ಡಿ (ಬಾಬಾ ರಾಘವ ದಾಸ್) ಆಸ್ಪತ್ರೆಯಲ್ಲಿ ಗ್ಯಾಸ್ ದುರಂತ ನಡೆದ ದುರ್ದಿನ ನನಗೆ ಕಣ್ಣಿಗೆ ಕಟ್ಟಿದಂತೆ ನೆನಪಿದೆ. ಆಮ್ಲಜನಕದ ಕೊರತೆಯಿಂದಾಗಿ ಅಂದು ಅನೇಕ ಮುಗ್ಧ ಜೀವಗಳು ಕಣ್ಮುಚ್ಚಿದವು. ಸರ್ಕಾರದ ಅಸಮರ್ಥತೆ ಮತ್ತು ಅದಕ್ಷತೆಯಿಂದಾಗಿ ಮಕ್ಕಳು ಮರಣ ಹೊಂದಿದವು. ಈ ಅಮೂಲ್ಯ ಜೀವಗಳನ್ನು ಕಾಪಾಡಲು ಈ ಯುವ ವೈದ್ಯ ಮತ್ತು ಆತನ ತಂಡ ತಮಗೆದುರಾದ ಪ್ರತಿಯೊಂದು ಅಡೆ-ತಡೆಯನ್ನು ಮೆಟ್ಟಿ ಹೋರಾಡಿದರು. ಇಂಥ ದಯನೀಯ ಸನ್ನಿವೇಶವನ್ನು ಎದುರಿಸಬೇಕಾದ ವೈದ್ಯನೊಬ್ಬನಿಗೆ ಇದು ಎಂತಹಾ ಘಾಸಿಗೊಳಿಸುವ ಅನುಭವವೆಂಬುದನ್ನು ನಾವು ಊಹಿಸಬಹುದು ಆದರೂ ಆತ ಎದೆಗುಂದದೇ ತನ್ನ ಸ್ವಂತ ಹಣದಿಂದ ಆಮ್ಲಜನಕದ ಸಿಲಿಂಡರುಗಳನ್ನು ವ್ಯವಸ್ಥೆ ಮಾಡಲು ಲಭ್ಯವಿರುವ ಎಲ್ಲಾ ಬಾಗಿಲುಗಳನ್ನೂ ಬಡಿದರು. ಒಬ್ಬ ಅಪಾರ ಬದ್ಧತೆಯಿರುವ ಮಕ್ಕಳ ವೈದ್ಯರಾಗಿ ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಲಷ್ಟೇ ಅವರು ಪ್ರಯಾಸಪಟ್ಟದ್ದು. ಅವರು ಹೋರಾಟ ನಡೆಸಿ ಅನೇಕ ಜೀವಗಳನ್ನು ಕಾಪಾಡಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿದವು. ಹೀಗಾಗಿ ಬೆಳಗಾಗುವುದರೊಳಗೆ ಅವರೊಬ್ಬ ‘ಹೀರೊ’ ಆಗಿ ಅಥವಾ ಮಕ್ಕಳ ಪಾಲಿನ ದೇವದೂತನಾಗಿ ಉದಯಿಸಿದರು.

ಯೋಗಿ ಅವರಿಗೆ ಈ ವಿಷಯ ತಿಳಿದುಬಂದಾಗ ಜೀವ ಕಳೆದುಕೊಂಡವರಿಗೆ ಪರಿಹಾರ ನೀಡುವುದು ಅಥವಾ ಸರ್ಕಾರದ ವೈಫಲ್ಯಕ್ಕೆ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದಕ್ಕೆ ಬದಲಾಗಿ ಅವರು ಮಾಡಿದ್ದೇನೆಂದರೆ, “ನಿನ್ನನ್ನು ನೀನು ಹೀರೊ ಎಂದು ತಿಳಿದಿದ್ದೀಯಾ, ನಿನ್ನನ್ನು ನೋಡಿಕೊಳ್ಳುತ್ತೇನೆ” ಎಂದದ್ದು. ಡಾ. ಕಫೀಲ್‌ಖಾನ್ ಮತ್ತು ಅವರ ಕುಟುಂಬದವರಿಗೆ ಕಿರುಕುಳ ನೀಡುವ ಮತ್ತು ಅವರನ್ನು ಅಪರಾಧಿಗಳನ್ನಾಗಿಸುವ ಸರಣಿ ಪ್ರಯತ್ನಗಳು ಶುರುವಾಗಿದ್ದು ಅಂದಿನಿಂದಲೇ. ಅವರನ್ನು ಬಲಿಪಶು ಮಾಡಲಾಯಿತು ಮತ್ತು ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಅಂದಿನ ಪ್ರಾಂಶುಪಾಲರು ಮತ್ತವರ ಪತ್ನಿ ಹಾಗೂ ಅವರ ಕೆಲ ಸಹೋದ್ಯೋಗಿ ವೈದ್ಯರು ಮತ್ತು ಸಿಬ್ಬಂದಿಯೊಂದಿಗೆ ಜೈಲಿಗೆ ಕಳುಹಿಸಲಾಯಿತು.

ಅವರನ್ನು ಒಂಭತ್ತು ತಿಂಗಳ ಸುದೀರ್ಘ ಅವಧಿಗೆ ಸೆರೆಮನೆಗೆ ತಳ್ಳಲಾಯಿತು. ಮಕ್ಕಳ ಪ್ರಾಣ ಉಳಿಸಲು ತನ್ನೆಲ್ಲಾ ಶಕ್ತಿಮೀರಿ ಶ್ರಮಿಸಿದ ಅವರನ್ನು ಕರ್ತವ್ಯದಿಂದ ವಜಾಮಾಡಲಾಯಿತು. ಅವರಿಗೆ ಕಿರುಕುಳ ನೀಡುತ್ತಾ ಬಂದಿರುವುದು ಮತ್ತು ಆತನ ಕುಟುಂಬ, ಆತನ ತಾಯಿ, ಹೆಂಡತಿ ಮತ್ತು ಮಕ್ಕಳು ಕಷ್ಟಪಡುವಂತಾಗಿದ್ದು ನಿಜಕ್ಕೂ ದುರಂತ, ಅಕ್ಷಮ್ಯ ಮತ್ತು ಅಮಾನವೀಯ.

ತೊಂದರೆಗೀಡಾದ ಅವರು ನಿರ್ದೋಷಿಯೆಂದು ಸಾಬೀತಾದಮೇಲೂ ಮುಸ್ಲಿಂ ವೈದ್ಯನೆಂಬ ಕಾರಣಕ್ಕೆ ಕಷ್ಟಕೋಟಲೆಗಳು ಕೊನೆಗೊಳ್ಳಲಿಲ್ಲ. ಮುಖ್ಯಮಂತ್ರಿಗಳು ಗೋರಖ್‌ಪುರದಲ್ಲಿ ಹಾಜರಿದ್ದ ಸಂದರ್ಭದಲ್ಲೇ ಗೋರಖನಾಥ ದೇವಸ್ಥಾನದ ಬಳಿಯಲ್ಲಿ ಅವರ ಕಿರಿಯ ಸಹೋದರನಿಗೆ ಪುಂಡರು ಗುಂಡು ಹೊಡೆದರು. ಅಷ್ಟೇ ಅಲ್ಲ ಆಸ್ಪತ್ರೆಯಲ್ಲಿ ಅವರಿಗೆ ಕೂಡಲೇ ಶುಶ್ರೂಷೆ ದೊರೆಯದಂತೆ ತಡೆಯಲು ಪೊಲೀಸರು ಯತ್ನಿಸಿದರು. 2018ರಲ್ಲಿ ಬಹ್ರೈಚ್‌ನಲ್ಲಿ ಎನ್‌ಸೆಫಲೈಟಿಸ್ ಕಾಯಿಲೆಗೀಡಾದ ರೋಗಿಗಳ ಸ್ಥಿತಿಯನ್ನು ಬಹಿರಂಗಗೊಳಿಸಲು ಯತ್ನಿಸಿದ ಅವರನ್ನು ಅವರ ಹಿರಿಯ ಸೋದರ ಅದೀಲ್ ಅಹಮದ್ ಖಾನ್ ಅವರೊಂದಿಗೆ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ಬಂಧಿಸಿದರು. ಇದರಿಂದ ಮತ್ತೊಮ್ಮೆ ಅವರ ಕುಟುಂಬದ ಸದಸ್ಯರು ಕೆಲ ತಿಂಗಳ ಕಾಲ ಮಾನಸಿಕ ಹಿಂಸೆಯನ್ನು ಅನುಭವಿಸುವಂತಾಯಿತು.

ಸತತ ಪರಿಶ್ರಮದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ತೇರ್ಗಡೆಯಾದ ಆನಂತರ ಕರ್ನಾಟಕದ ಅತ್ಯುತ್ತಮ ವೈದ್ಯಕೀಯ ಕಾಲೇಜೊಂದರಲ್ಲಿ ಪರಿಶ್ರಮಪಟ್ಟು ಓದಿದ ಹೀರೊ ವೈದ್ಯರವರು. ಭಾರತದ ಜನರಿಗೆ ಸೇವೆ ಸಲ್ಲಿಸುವುದನ್ನೇ ತನ್ನ ಬದುಕಿನ ಗುರಿ ಮತ್ತು ಧ್ಯೇಯವಾಗಿಸಿಕೊಂಡ ವೈದ್ಯರು. ವಿಕೋಪಗಳಿಗೀಡಾದಾಗ ಭಾರತದ ಬಹುಪಾಲು ಎಲ್ಲಾ ರಾಜ್ಯಗಳಲ್ಲೂ ಅವರು ಹಲವಾರು ಆರೋಗ್ಯ ಶಿಬಿರಗಳನ್ನು ನಡೆಸಿದ್ದಾರೆ. ಬಿಹಾರದ ಚಮ್ಕಿ ಜ್ವರ ಪೀಡಿತರು, ಅಸ್ಸಾಂನ ಪ್ರವಾಹಪೀಡಿತ ಪ್ರದೇಶಗಳು, ಉತ್ತರಪ್ರದೇಶದ ಗ್ರಾಮೀಣಾ ಪ್ರಾಂತ್ಯಗಳ ಮೂಲೆ ಮುಡುಕುಗಳಲ್ಲೂ ಅವರು ಶಿಬಿರಗಳನ್ನು ನಡೆಸಿದ್ದಾರೆ. ತಮ್ಮ ಜೀವವನ್ನೇ ಪಣಕ್ಕೊಡ್ಡಿ ದೇಶಸೇವೆ ಮಾಡಿದ್ದಾರೆ. ಸಮಸ್ತ ವೈದ್ಯಕೀಯ ಸಮುದಾಯ ಅವರ ಬಗ್ಗೆ ಹೆಮ್ಮೆಪಡುವಂತೆ ಮಾಡಿದ್ದಾರೆ.

ಕೊರೊನಾ ಸಾಂಕ್ರಾಮಿಕ ಜೀವಗಳನ್ನು ಬಲಿತೆಗೆದುಕೊಳ್ಳುತ್ತಿರುವ ಹೊತ್ತಲ್ಲಿ ಭಾರತಕ್ಕೆ ಸ್ವಚ್ಛ ಮನಸ್ಸಿನ, ಅತ್ಯಂತ ಪ್ರತಿಭಾನ್ವಿತ ಮತ್ತು ಪ್ರಾಮಾಣಿಕನಾದ ಶ್ರಮಜೀವಿ ಮಕ್ಕಳ ವೈದ್ಯನ ಅಗತ್ಯವಿದೆ.
ಆದರೆ ಈ ಕರ್ತವ್ಯನಿಷ್ಠ, ಪ್ರಾಮಾಣಿಕ ನಾಗರಿಕನೀಗ ಸೆರೆಮನೆಯಲ್ಲಿ ಕೊಳೆಯುತ್ತಿದ್ದಾರೆ. ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಟೆಯೇ ಅವರಲ್ಲಿರುವ ದೋಷ. ಇಂತಹ ಅತ್ಯುತ್ತಮ ವ್ಯಕ್ತಿಯೊಬ್ಬ ದೇಶಕ್ಕೆ ಹೇಗೆ ಬೆದರಿಕೆಯಾಗುತ್ತಾನೆ ಎಂಬ ಬಗ್ಗೆ ಕೊಂಚ ಯೋಚಿಸಿ.

– ಅದೀಲ್ ಖಾನ್
ಕನ್ನಡಕ್ಕೆ: ಮಾಧವಿ


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...