Homeಮುಖಪುಟಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಸತತ ಪರಿಶ್ರಮದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ತೇರ್ಗಡೆಯಾದ ಆನಂತರ ಕರ್ನಾಟಕದ ಅತ್ಯುತ್ತಮ ವೈದ್ಯಕೀಯ ಕಾಲೇಜೊಂದರಲ್ಲಿ ಪರಿಶ್ರಮಪಟ್ಟು ಓದಿದ ಹೀರೊ ವೈದ್ಯರವರು.

- Advertisement -
- Advertisement -

ಡಾ. ಕಫೀಲ್‌ಖಾನ್ ಒಬ್ಬ ಹೋರಾಟಗಾರ ವೈದ್ಯ. ಅವರು ನಮ್ಮೆಲ್ಲರಿಗಾಗಿ ಮತ್ತು ಉಜ್ವಲ ಭಾರತಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಬಿಆರ್‌ಡಿ (ಬಾಬಾ ರಾಘವ ದಾಸ್) ಆಸ್ಪತ್ರೆಯಲ್ಲಿ ಗ್ಯಾಸ್ ದುರಂತ ನಡೆದ ದುರ್ದಿನ ನನಗೆ ಕಣ್ಣಿಗೆ ಕಟ್ಟಿದಂತೆ ನೆನಪಿದೆ. ಆಮ್ಲಜನಕದ ಕೊರತೆಯಿಂದಾಗಿ ಅಂದು ಅನೇಕ ಮುಗ್ಧ ಜೀವಗಳು ಕಣ್ಮುಚ್ಚಿದವು. ಸರ್ಕಾರದ ಅಸಮರ್ಥತೆ ಮತ್ತು ಅದಕ್ಷತೆಯಿಂದಾಗಿ ಮಕ್ಕಳು ಮರಣ ಹೊಂದಿದವು. ಈ ಅಮೂಲ್ಯ ಜೀವಗಳನ್ನು ಕಾಪಾಡಲು ಈ ಯುವ ವೈದ್ಯ ಮತ್ತು ಆತನ ತಂಡ ತಮಗೆದುರಾದ ಪ್ರತಿಯೊಂದು ಅಡೆ-ತಡೆಯನ್ನು ಮೆಟ್ಟಿ ಹೋರಾಡಿದರು. ಇಂಥ ದಯನೀಯ ಸನ್ನಿವೇಶವನ್ನು ಎದುರಿಸಬೇಕಾದ ವೈದ್ಯನೊಬ್ಬನಿಗೆ ಇದು ಎಂತಹಾ ಘಾಸಿಗೊಳಿಸುವ ಅನುಭವವೆಂಬುದನ್ನು ನಾವು ಊಹಿಸಬಹುದು ಆದರೂ ಆತ ಎದೆಗುಂದದೇ ತನ್ನ ಸ್ವಂತ ಹಣದಿಂದ ಆಮ್ಲಜನಕದ ಸಿಲಿಂಡರುಗಳನ್ನು ವ್ಯವಸ್ಥೆ ಮಾಡಲು ಲಭ್ಯವಿರುವ ಎಲ್ಲಾ ಬಾಗಿಲುಗಳನ್ನೂ ಬಡಿದರು. ಒಬ್ಬ ಅಪಾರ ಬದ್ಧತೆಯಿರುವ ಮಕ್ಕಳ ವೈದ್ಯರಾಗಿ ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಲಷ್ಟೇ ಅವರು ಪ್ರಯಾಸಪಟ್ಟದ್ದು. ಅವರು ಹೋರಾಟ ನಡೆಸಿ ಅನೇಕ ಜೀವಗಳನ್ನು ಕಾಪಾಡಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿದವು. ಹೀಗಾಗಿ ಬೆಳಗಾಗುವುದರೊಳಗೆ ಅವರೊಬ್ಬ ‘ಹೀರೊ’ ಆಗಿ ಅಥವಾ ಮಕ್ಕಳ ಪಾಲಿನ ದೇವದೂತನಾಗಿ ಉದಯಿಸಿದರು.

ಯೋಗಿ ಅವರಿಗೆ ಈ ವಿಷಯ ತಿಳಿದುಬಂದಾಗ ಜೀವ ಕಳೆದುಕೊಂಡವರಿಗೆ ಪರಿಹಾರ ನೀಡುವುದು ಅಥವಾ ಸರ್ಕಾರದ ವೈಫಲ್ಯಕ್ಕೆ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದಕ್ಕೆ ಬದಲಾಗಿ ಅವರು ಮಾಡಿದ್ದೇನೆಂದರೆ, “ನಿನ್ನನ್ನು ನೀನು ಹೀರೊ ಎಂದು ತಿಳಿದಿದ್ದೀಯಾ, ನಿನ್ನನ್ನು ನೋಡಿಕೊಳ್ಳುತ್ತೇನೆ” ಎಂದದ್ದು. ಡಾ. ಕಫೀಲ್‌ಖಾನ್ ಮತ್ತು ಅವರ ಕುಟುಂಬದವರಿಗೆ ಕಿರುಕುಳ ನೀಡುವ ಮತ್ತು ಅವರನ್ನು ಅಪರಾಧಿಗಳನ್ನಾಗಿಸುವ ಸರಣಿ ಪ್ರಯತ್ನಗಳು ಶುರುವಾಗಿದ್ದು ಅಂದಿನಿಂದಲೇ. ಅವರನ್ನು ಬಲಿಪಶು ಮಾಡಲಾಯಿತು ಮತ್ತು ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಅಂದಿನ ಪ್ರಾಂಶುಪಾಲರು ಮತ್ತವರ ಪತ್ನಿ ಹಾಗೂ ಅವರ ಕೆಲ ಸಹೋದ್ಯೋಗಿ ವೈದ್ಯರು ಮತ್ತು ಸಿಬ್ಬಂದಿಯೊಂದಿಗೆ ಜೈಲಿಗೆ ಕಳುಹಿಸಲಾಯಿತು.

ಅವರನ್ನು ಒಂಭತ್ತು ತಿಂಗಳ ಸುದೀರ್ಘ ಅವಧಿಗೆ ಸೆರೆಮನೆಗೆ ತಳ್ಳಲಾಯಿತು. ಮಕ್ಕಳ ಪ್ರಾಣ ಉಳಿಸಲು ತನ್ನೆಲ್ಲಾ ಶಕ್ತಿಮೀರಿ ಶ್ರಮಿಸಿದ ಅವರನ್ನು ಕರ್ತವ್ಯದಿಂದ ವಜಾಮಾಡಲಾಯಿತು. ಅವರಿಗೆ ಕಿರುಕುಳ ನೀಡುತ್ತಾ ಬಂದಿರುವುದು ಮತ್ತು ಆತನ ಕುಟುಂಬ, ಆತನ ತಾಯಿ, ಹೆಂಡತಿ ಮತ್ತು ಮಕ್ಕಳು ಕಷ್ಟಪಡುವಂತಾಗಿದ್ದು ನಿಜಕ್ಕೂ ದುರಂತ, ಅಕ್ಷಮ್ಯ ಮತ್ತು ಅಮಾನವೀಯ.

ತೊಂದರೆಗೀಡಾದ ಅವರು ನಿರ್ದೋಷಿಯೆಂದು ಸಾಬೀತಾದಮೇಲೂ ಮುಸ್ಲಿಂ ವೈದ್ಯನೆಂಬ ಕಾರಣಕ್ಕೆ ಕಷ್ಟಕೋಟಲೆಗಳು ಕೊನೆಗೊಳ್ಳಲಿಲ್ಲ. ಮುಖ್ಯಮಂತ್ರಿಗಳು ಗೋರಖ್‌ಪುರದಲ್ಲಿ ಹಾಜರಿದ್ದ ಸಂದರ್ಭದಲ್ಲೇ ಗೋರಖನಾಥ ದೇವಸ್ಥಾನದ ಬಳಿಯಲ್ಲಿ ಅವರ ಕಿರಿಯ ಸಹೋದರನಿಗೆ ಪುಂಡರು ಗುಂಡು ಹೊಡೆದರು. ಅಷ್ಟೇ ಅಲ್ಲ ಆಸ್ಪತ್ರೆಯಲ್ಲಿ ಅವರಿಗೆ ಕೂಡಲೇ ಶುಶ್ರೂಷೆ ದೊರೆಯದಂತೆ ತಡೆಯಲು ಪೊಲೀಸರು ಯತ್ನಿಸಿದರು. 2018ರಲ್ಲಿ ಬಹ್ರೈಚ್‌ನಲ್ಲಿ ಎನ್‌ಸೆಫಲೈಟಿಸ್ ಕಾಯಿಲೆಗೀಡಾದ ರೋಗಿಗಳ ಸ್ಥಿತಿಯನ್ನು ಬಹಿರಂಗಗೊಳಿಸಲು ಯತ್ನಿಸಿದ ಅವರನ್ನು ಅವರ ಹಿರಿಯ ಸೋದರ ಅದೀಲ್ ಅಹಮದ್ ಖಾನ್ ಅವರೊಂದಿಗೆ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ಬಂಧಿಸಿದರು. ಇದರಿಂದ ಮತ್ತೊಮ್ಮೆ ಅವರ ಕುಟುಂಬದ ಸದಸ್ಯರು ಕೆಲ ತಿಂಗಳ ಕಾಲ ಮಾನಸಿಕ ಹಿಂಸೆಯನ್ನು ಅನುಭವಿಸುವಂತಾಯಿತು.

ಸತತ ಪರಿಶ್ರಮದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ತೇರ್ಗಡೆಯಾದ ಆನಂತರ ಕರ್ನಾಟಕದ ಅತ್ಯುತ್ತಮ ವೈದ್ಯಕೀಯ ಕಾಲೇಜೊಂದರಲ್ಲಿ ಪರಿಶ್ರಮಪಟ್ಟು ಓದಿದ ಹೀರೊ ವೈದ್ಯರವರು. ಭಾರತದ ಜನರಿಗೆ ಸೇವೆ ಸಲ್ಲಿಸುವುದನ್ನೇ ತನ್ನ ಬದುಕಿನ ಗುರಿ ಮತ್ತು ಧ್ಯೇಯವಾಗಿಸಿಕೊಂಡ ವೈದ್ಯರು. ವಿಕೋಪಗಳಿಗೀಡಾದಾಗ ಭಾರತದ ಬಹುಪಾಲು ಎಲ್ಲಾ ರಾಜ್ಯಗಳಲ್ಲೂ ಅವರು ಹಲವಾರು ಆರೋಗ್ಯ ಶಿಬಿರಗಳನ್ನು ನಡೆಸಿದ್ದಾರೆ. ಬಿಹಾರದ ಚಮ್ಕಿ ಜ್ವರ ಪೀಡಿತರು, ಅಸ್ಸಾಂನ ಪ್ರವಾಹಪೀಡಿತ ಪ್ರದೇಶಗಳು, ಉತ್ತರಪ್ರದೇಶದ ಗ್ರಾಮೀಣಾ ಪ್ರಾಂತ್ಯಗಳ ಮೂಲೆ ಮುಡುಕುಗಳಲ್ಲೂ ಅವರು ಶಿಬಿರಗಳನ್ನು ನಡೆಸಿದ್ದಾರೆ. ತಮ್ಮ ಜೀವವನ್ನೇ ಪಣಕ್ಕೊಡ್ಡಿ ದೇಶಸೇವೆ ಮಾಡಿದ್ದಾರೆ. ಸಮಸ್ತ ವೈದ್ಯಕೀಯ ಸಮುದಾಯ ಅವರ ಬಗ್ಗೆ ಹೆಮ್ಮೆಪಡುವಂತೆ ಮಾಡಿದ್ದಾರೆ.

ಕೊರೊನಾ ಸಾಂಕ್ರಾಮಿಕ ಜೀವಗಳನ್ನು ಬಲಿತೆಗೆದುಕೊಳ್ಳುತ್ತಿರುವ ಹೊತ್ತಲ್ಲಿ ಭಾರತಕ್ಕೆ ಸ್ವಚ್ಛ ಮನಸ್ಸಿನ, ಅತ್ಯಂತ ಪ್ರತಿಭಾನ್ವಿತ ಮತ್ತು ಪ್ರಾಮಾಣಿಕನಾದ ಶ್ರಮಜೀವಿ ಮಕ್ಕಳ ವೈದ್ಯನ ಅಗತ್ಯವಿದೆ.
ಆದರೆ ಈ ಕರ್ತವ್ಯನಿಷ್ಠ, ಪ್ರಾಮಾಣಿಕ ನಾಗರಿಕನೀಗ ಸೆರೆಮನೆಯಲ್ಲಿ ಕೊಳೆಯುತ್ತಿದ್ದಾರೆ. ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಟೆಯೇ ಅವರಲ್ಲಿರುವ ದೋಷ. ಇಂತಹ ಅತ್ಯುತ್ತಮ ವ್ಯಕ್ತಿಯೊಬ್ಬ ದೇಶಕ್ಕೆ ಹೇಗೆ ಬೆದರಿಕೆಯಾಗುತ್ತಾನೆ ಎಂಬ ಬಗ್ಗೆ ಕೊಂಚ ಯೋಚಿಸಿ.

– ಅದೀಲ್ ಖಾನ್
ಕನ್ನಡಕ್ಕೆ: ಮಾಧವಿ


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...