Homeಮುಖಪುಟಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಸತತ ಪರಿಶ್ರಮದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ತೇರ್ಗಡೆಯಾದ ಆನಂತರ ಕರ್ನಾಟಕದ ಅತ್ಯುತ್ತಮ ವೈದ್ಯಕೀಯ ಕಾಲೇಜೊಂದರಲ್ಲಿ ಪರಿಶ್ರಮಪಟ್ಟು ಓದಿದ ಹೀರೊ ವೈದ್ಯರವರು.

- Advertisement -
- Advertisement -

ಡಾ. ಕಫೀಲ್‌ಖಾನ್ ಒಬ್ಬ ಹೋರಾಟಗಾರ ವೈದ್ಯ. ಅವರು ನಮ್ಮೆಲ್ಲರಿಗಾಗಿ ಮತ್ತು ಉಜ್ವಲ ಭಾರತಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಬಿಆರ್‌ಡಿ (ಬಾಬಾ ರಾಘವ ದಾಸ್) ಆಸ್ಪತ್ರೆಯಲ್ಲಿ ಗ್ಯಾಸ್ ದುರಂತ ನಡೆದ ದುರ್ದಿನ ನನಗೆ ಕಣ್ಣಿಗೆ ಕಟ್ಟಿದಂತೆ ನೆನಪಿದೆ. ಆಮ್ಲಜನಕದ ಕೊರತೆಯಿಂದಾಗಿ ಅಂದು ಅನೇಕ ಮುಗ್ಧ ಜೀವಗಳು ಕಣ್ಮುಚ್ಚಿದವು. ಸರ್ಕಾರದ ಅಸಮರ್ಥತೆ ಮತ್ತು ಅದಕ್ಷತೆಯಿಂದಾಗಿ ಮಕ್ಕಳು ಮರಣ ಹೊಂದಿದವು. ಈ ಅಮೂಲ್ಯ ಜೀವಗಳನ್ನು ಕಾಪಾಡಲು ಈ ಯುವ ವೈದ್ಯ ಮತ್ತು ಆತನ ತಂಡ ತಮಗೆದುರಾದ ಪ್ರತಿಯೊಂದು ಅಡೆ-ತಡೆಯನ್ನು ಮೆಟ್ಟಿ ಹೋರಾಡಿದರು. ಇಂಥ ದಯನೀಯ ಸನ್ನಿವೇಶವನ್ನು ಎದುರಿಸಬೇಕಾದ ವೈದ್ಯನೊಬ್ಬನಿಗೆ ಇದು ಎಂತಹಾ ಘಾಸಿಗೊಳಿಸುವ ಅನುಭವವೆಂಬುದನ್ನು ನಾವು ಊಹಿಸಬಹುದು ಆದರೂ ಆತ ಎದೆಗುಂದದೇ ತನ್ನ ಸ್ವಂತ ಹಣದಿಂದ ಆಮ್ಲಜನಕದ ಸಿಲಿಂಡರುಗಳನ್ನು ವ್ಯವಸ್ಥೆ ಮಾಡಲು ಲಭ್ಯವಿರುವ ಎಲ್ಲಾ ಬಾಗಿಲುಗಳನ್ನೂ ಬಡಿದರು. ಒಬ್ಬ ಅಪಾರ ಬದ್ಧತೆಯಿರುವ ಮಕ್ಕಳ ವೈದ್ಯರಾಗಿ ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಲಷ್ಟೇ ಅವರು ಪ್ರಯಾಸಪಟ್ಟದ್ದು. ಅವರು ಹೋರಾಟ ನಡೆಸಿ ಅನೇಕ ಜೀವಗಳನ್ನು ಕಾಪಾಡಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿದವು. ಹೀಗಾಗಿ ಬೆಳಗಾಗುವುದರೊಳಗೆ ಅವರೊಬ್ಬ ‘ಹೀರೊ’ ಆಗಿ ಅಥವಾ ಮಕ್ಕಳ ಪಾಲಿನ ದೇವದೂತನಾಗಿ ಉದಯಿಸಿದರು.

ಯೋಗಿ ಅವರಿಗೆ ಈ ವಿಷಯ ತಿಳಿದುಬಂದಾಗ ಜೀವ ಕಳೆದುಕೊಂಡವರಿಗೆ ಪರಿಹಾರ ನೀಡುವುದು ಅಥವಾ ಸರ್ಕಾರದ ವೈಫಲ್ಯಕ್ಕೆ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದಕ್ಕೆ ಬದಲಾಗಿ ಅವರು ಮಾಡಿದ್ದೇನೆಂದರೆ, “ನಿನ್ನನ್ನು ನೀನು ಹೀರೊ ಎಂದು ತಿಳಿದಿದ್ದೀಯಾ, ನಿನ್ನನ್ನು ನೋಡಿಕೊಳ್ಳುತ್ತೇನೆ” ಎಂದದ್ದು. ಡಾ. ಕಫೀಲ್‌ಖಾನ್ ಮತ್ತು ಅವರ ಕುಟುಂಬದವರಿಗೆ ಕಿರುಕುಳ ನೀಡುವ ಮತ್ತು ಅವರನ್ನು ಅಪರಾಧಿಗಳನ್ನಾಗಿಸುವ ಸರಣಿ ಪ್ರಯತ್ನಗಳು ಶುರುವಾಗಿದ್ದು ಅಂದಿನಿಂದಲೇ. ಅವರನ್ನು ಬಲಿಪಶು ಮಾಡಲಾಯಿತು ಮತ್ತು ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಅಂದಿನ ಪ್ರಾಂಶುಪಾಲರು ಮತ್ತವರ ಪತ್ನಿ ಹಾಗೂ ಅವರ ಕೆಲ ಸಹೋದ್ಯೋಗಿ ವೈದ್ಯರು ಮತ್ತು ಸಿಬ್ಬಂದಿಯೊಂದಿಗೆ ಜೈಲಿಗೆ ಕಳುಹಿಸಲಾಯಿತು.

ಅವರನ್ನು ಒಂಭತ್ತು ತಿಂಗಳ ಸುದೀರ್ಘ ಅವಧಿಗೆ ಸೆರೆಮನೆಗೆ ತಳ್ಳಲಾಯಿತು. ಮಕ್ಕಳ ಪ್ರಾಣ ಉಳಿಸಲು ತನ್ನೆಲ್ಲಾ ಶಕ್ತಿಮೀರಿ ಶ್ರಮಿಸಿದ ಅವರನ್ನು ಕರ್ತವ್ಯದಿಂದ ವಜಾಮಾಡಲಾಯಿತು. ಅವರಿಗೆ ಕಿರುಕುಳ ನೀಡುತ್ತಾ ಬಂದಿರುವುದು ಮತ್ತು ಆತನ ಕುಟುಂಬ, ಆತನ ತಾಯಿ, ಹೆಂಡತಿ ಮತ್ತು ಮಕ್ಕಳು ಕಷ್ಟಪಡುವಂತಾಗಿದ್ದು ನಿಜಕ್ಕೂ ದುರಂತ, ಅಕ್ಷಮ್ಯ ಮತ್ತು ಅಮಾನವೀಯ.

ತೊಂದರೆಗೀಡಾದ ಅವರು ನಿರ್ದೋಷಿಯೆಂದು ಸಾಬೀತಾದಮೇಲೂ ಮುಸ್ಲಿಂ ವೈದ್ಯನೆಂಬ ಕಾರಣಕ್ಕೆ ಕಷ್ಟಕೋಟಲೆಗಳು ಕೊನೆಗೊಳ್ಳಲಿಲ್ಲ. ಮುಖ್ಯಮಂತ್ರಿಗಳು ಗೋರಖ್‌ಪುರದಲ್ಲಿ ಹಾಜರಿದ್ದ ಸಂದರ್ಭದಲ್ಲೇ ಗೋರಖನಾಥ ದೇವಸ್ಥಾನದ ಬಳಿಯಲ್ಲಿ ಅವರ ಕಿರಿಯ ಸಹೋದರನಿಗೆ ಪುಂಡರು ಗುಂಡು ಹೊಡೆದರು. ಅಷ್ಟೇ ಅಲ್ಲ ಆಸ್ಪತ್ರೆಯಲ್ಲಿ ಅವರಿಗೆ ಕೂಡಲೇ ಶುಶ್ರೂಷೆ ದೊರೆಯದಂತೆ ತಡೆಯಲು ಪೊಲೀಸರು ಯತ್ನಿಸಿದರು. 2018ರಲ್ಲಿ ಬಹ್ರೈಚ್‌ನಲ್ಲಿ ಎನ್‌ಸೆಫಲೈಟಿಸ್ ಕಾಯಿಲೆಗೀಡಾದ ರೋಗಿಗಳ ಸ್ಥಿತಿಯನ್ನು ಬಹಿರಂಗಗೊಳಿಸಲು ಯತ್ನಿಸಿದ ಅವರನ್ನು ಅವರ ಹಿರಿಯ ಸೋದರ ಅದೀಲ್ ಅಹಮದ್ ಖಾನ್ ಅವರೊಂದಿಗೆ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ಬಂಧಿಸಿದರು. ಇದರಿಂದ ಮತ್ತೊಮ್ಮೆ ಅವರ ಕುಟುಂಬದ ಸದಸ್ಯರು ಕೆಲ ತಿಂಗಳ ಕಾಲ ಮಾನಸಿಕ ಹಿಂಸೆಯನ್ನು ಅನುಭವಿಸುವಂತಾಯಿತು.

ಸತತ ಪರಿಶ್ರಮದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ತೇರ್ಗಡೆಯಾದ ಆನಂತರ ಕರ್ನಾಟಕದ ಅತ್ಯುತ್ತಮ ವೈದ್ಯಕೀಯ ಕಾಲೇಜೊಂದರಲ್ಲಿ ಪರಿಶ್ರಮಪಟ್ಟು ಓದಿದ ಹೀರೊ ವೈದ್ಯರವರು. ಭಾರತದ ಜನರಿಗೆ ಸೇವೆ ಸಲ್ಲಿಸುವುದನ್ನೇ ತನ್ನ ಬದುಕಿನ ಗುರಿ ಮತ್ತು ಧ್ಯೇಯವಾಗಿಸಿಕೊಂಡ ವೈದ್ಯರು. ವಿಕೋಪಗಳಿಗೀಡಾದಾಗ ಭಾರತದ ಬಹುಪಾಲು ಎಲ್ಲಾ ರಾಜ್ಯಗಳಲ್ಲೂ ಅವರು ಹಲವಾರು ಆರೋಗ್ಯ ಶಿಬಿರಗಳನ್ನು ನಡೆಸಿದ್ದಾರೆ. ಬಿಹಾರದ ಚಮ್ಕಿ ಜ್ವರ ಪೀಡಿತರು, ಅಸ್ಸಾಂನ ಪ್ರವಾಹಪೀಡಿತ ಪ್ರದೇಶಗಳು, ಉತ್ತರಪ್ರದೇಶದ ಗ್ರಾಮೀಣಾ ಪ್ರಾಂತ್ಯಗಳ ಮೂಲೆ ಮುಡುಕುಗಳಲ್ಲೂ ಅವರು ಶಿಬಿರಗಳನ್ನು ನಡೆಸಿದ್ದಾರೆ. ತಮ್ಮ ಜೀವವನ್ನೇ ಪಣಕ್ಕೊಡ್ಡಿ ದೇಶಸೇವೆ ಮಾಡಿದ್ದಾರೆ. ಸಮಸ್ತ ವೈದ್ಯಕೀಯ ಸಮುದಾಯ ಅವರ ಬಗ್ಗೆ ಹೆಮ್ಮೆಪಡುವಂತೆ ಮಾಡಿದ್ದಾರೆ.

ಕೊರೊನಾ ಸಾಂಕ್ರಾಮಿಕ ಜೀವಗಳನ್ನು ಬಲಿತೆಗೆದುಕೊಳ್ಳುತ್ತಿರುವ ಹೊತ್ತಲ್ಲಿ ಭಾರತಕ್ಕೆ ಸ್ವಚ್ಛ ಮನಸ್ಸಿನ, ಅತ್ಯಂತ ಪ್ರತಿಭಾನ್ವಿತ ಮತ್ತು ಪ್ರಾಮಾಣಿಕನಾದ ಶ್ರಮಜೀವಿ ಮಕ್ಕಳ ವೈದ್ಯನ ಅಗತ್ಯವಿದೆ.
ಆದರೆ ಈ ಕರ್ತವ್ಯನಿಷ್ಠ, ಪ್ರಾಮಾಣಿಕ ನಾಗರಿಕನೀಗ ಸೆರೆಮನೆಯಲ್ಲಿ ಕೊಳೆಯುತ್ತಿದ್ದಾರೆ. ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಟೆಯೇ ಅವರಲ್ಲಿರುವ ದೋಷ. ಇಂತಹ ಅತ್ಯುತ್ತಮ ವ್ಯಕ್ತಿಯೊಬ್ಬ ದೇಶಕ್ಕೆ ಹೇಗೆ ಬೆದರಿಕೆಯಾಗುತ್ತಾನೆ ಎಂಬ ಬಗ್ಗೆ ಕೊಂಚ ಯೋಚಿಸಿ.

– ಅದೀಲ್ ಖಾನ್
ಕನ್ನಡಕ್ಕೆ: ಮಾಧವಿ


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...