Homeಮುಖಪುಟಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಸತತ ಪರಿಶ್ರಮದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ತೇರ್ಗಡೆಯಾದ ಆನಂತರ ಕರ್ನಾಟಕದ ಅತ್ಯುತ್ತಮ ವೈದ್ಯಕೀಯ ಕಾಲೇಜೊಂದರಲ್ಲಿ ಪರಿಶ್ರಮಪಟ್ಟು ಓದಿದ ಹೀರೊ ವೈದ್ಯರವರು.

- Advertisement -
- Advertisement -

ಡಾ. ಕಫೀಲ್‌ಖಾನ್ ಒಬ್ಬ ಹೋರಾಟಗಾರ ವೈದ್ಯ. ಅವರು ನಮ್ಮೆಲ್ಲರಿಗಾಗಿ ಮತ್ತು ಉಜ್ವಲ ಭಾರತಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಬಿಆರ್‌ಡಿ (ಬಾಬಾ ರಾಘವ ದಾಸ್) ಆಸ್ಪತ್ರೆಯಲ್ಲಿ ಗ್ಯಾಸ್ ದುರಂತ ನಡೆದ ದುರ್ದಿನ ನನಗೆ ಕಣ್ಣಿಗೆ ಕಟ್ಟಿದಂತೆ ನೆನಪಿದೆ. ಆಮ್ಲಜನಕದ ಕೊರತೆಯಿಂದಾಗಿ ಅಂದು ಅನೇಕ ಮುಗ್ಧ ಜೀವಗಳು ಕಣ್ಮುಚ್ಚಿದವು. ಸರ್ಕಾರದ ಅಸಮರ್ಥತೆ ಮತ್ತು ಅದಕ್ಷತೆಯಿಂದಾಗಿ ಮಕ್ಕಳು ಮರಣ ಹೊಂದಿದವು. ಈ ಅಮೂಲ್ಯ ಜೀವಗಳನ್ನು ಕಾಪಾಡಲು ಈ ಯುವ ವೈದ್ಯ ಮತ್ತು ಆತನ ತಂಡ ತಮಗೆದುರಾದ ಪ್ರತಿಯೊಂದು ಅಡೆ-ತಡೆಯನ್ನು ಮೆಟ್ಟಿ ಹೋರಾಡಿದರು. ಇಂಥ ದಯನೀಯ ಸನ್ನಿವೇಶವನ್ನು ಎದುರಿಸಬೇಕಾದ ವೈದ್ಯನೊಬ್ಬನಿಗೆ ಇದು ಎಂತಹಾ ಘಾಸಿಗೊಳಿಸುವ ಅನುಭವವೆಂಬುದನ್ನು ನಾವು ಊಹಿಸಬಹುದು ಆದರೂ ಆತ ಎದೆಗುಂದದೇ ತನ್ನ ಸ್ವಂತ ಹಣದಿಂದ ಆಮ್ಲಜನಕದ ಸಿಲಿಂಡರುಗಳನ್ನು ವ್ಯವಸ್ಥೆ ಮಾಡಲು ಲಭ್ಯವಿರುವ ಎಲ್ಲಾ ಬಾಗಿಲುಗಳನ್ನೂ ಬಡಿದರು. ಒಬ್ಬ ಅಪಾರ ಬದ್ಧತೆಯಿರುವ ಮಕ್ಕಳ ವೈದ್ಯರಾಗಿ ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಲಷ್ಟೇ ಅವರು ಪ್ರಯಾಸಪಟ್ಟದ್ದು. ಅವರು ಹೋರಾಟ ನಡೆಸಿ ಅನೇಕ ಜೀವಗಳನ್ನು ಕಾಪಾಡಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿದವು. ಹೀಗಾಗಿ ಬೆಳಗಾಗುವುದರೊಳಗೆ ಅವರೊಬ್ಬ ‘ಹೀರೊ’ ಆಗಿ ಅಥವಾ ಮಕ್ಕಳ ಪಾಲಿನ ದೇವದೂತನಾಗಿ ಉದಯಿಸಿದರು.

ಯೋಗಿ ಅವರಿಗೆ ಈ ವಿಷಯ ತಿಳಿದುಬಂದಾಗ ಜೀವ ಕಳೆದುಕೊಂಡವರಿಗೆ ಪರಿಹಾರ ನೀಡುವುದು ಅಥವಾ ಸರ್ಕಾರದ ವೈಫಲ್ಯಕ್ಕೆ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದಕ್ಕೆ ಬದಲಾಗಿ ಅವರು ಮಾಡಿದ್ದೇನೆಂದರೆ, “ನಿನ್ನನ್ನು ನೀನು ಹೀರೊ ಎಂದು ತಿಳಿದಿದ್ದೀಯಾ, ನಿನ್ನನ್ನು ನೋಡಿಕೊಳ್ಳುತ್ತೇನೆ” ಎಂದದ್ದು. ಡಾ. ಕಫೀಲ್‌ಖಾನ್ ಮತ್ತು ಅವರ ಕುಟುಂಬದವರಿಗೆ ಕಿರುಕುಳ ನೀಡುವ ಮತ್ತು ಅವರನ್ನು ಅಪರಾಧಿಗಳನ್ನಾಗಿಸುವ ಸರಣಿ ಪ್ರಯತ್ನಗಳು ಶುರುವಾಗಿದ್ದು ಅಂದಿನಿಂದಲೇ. ಅವರನ್ನು ಬಲಿಪಶು ಮಾಡಲಾಯಿತು ಮತ್ತು ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಅಂದಿನ ಪ್ರಾಂಶುಪಾಲರು ಮತ್ತವರ ಪತ್ನಿ ಹಾಗೂ ಅವರ ಕೆಲ ಸಹೋದ್ಯೋಗಿ ವೈದ್ಯರು ಮತ್ತು ಸಿಬ್ಬಂದಿಯೊಂದಿಗೆ ಜೈಲಿಗೆ ಕಳುಹಿಸಲಾಯಿತು.

ಅವರನ್ನು ಒಂಭತ್ತು ತಿಂಗಳ ಸುದೀರ್ಘ ಅವಧಿಗೆ ಸೆರೆಮನೆಗೆ ತಳ್ಳಲಾಯಿತು. ಮಕ್ಕಳ ಪ್ರಾಣ ಉಳಿಸಲು ತನ್ನೆಲ್ಲಾ ಶಕ್ತಿಮೀರಿ ಶ್ರಮಿಸಿದ ಅವರನ್ನು ಕರ್ತವ್ಯದಿಂದ ವಜಾಮಾಡಲಾಯಿತು. ಅವರಿಗೆ ಕಿರುಕುಳ ನೀಡುತ್ತಾ ಬಂದಿರುವುದು ಮತ್ತು ಆತನ ಕುಟುಂಬ, ಆತನ ತಾಯಿ, ಹೆಂಡತಿ ಮತ್ತು ಮಕ್ಕಳು ಕಷ್ಟಪಡುವಂತಾಗಿದ್ದು ನಿಜಕ್ಕೂ ದುರಂತ, ಅಕ್ಷಮ್ಯ ಮತ್ತು ಅಮಾನವೀಯ.

ತೊಂದರೆಗೀಡಾದ ಅವರು ನಿರ್ದೋಷಿಯೆಂದು ಸಾಬೀತಾದಮೇಲೂ ಮುಸ್ಲಿಂ ವೈದ್ಯನೆಂಬ ಕಾರಣಕ್ಕೆ ಕಷ್ಟಕೋಟಲೆಗಳು ಕೊನೆಗೊಳ್ಳಲಿಲ್ಲ. ಮುಖ್ಯಮಂತ್ರಿಗಳು ಗೋರಖ್‌ಪುರದಲ್ಲಿ ಹಾಜರಿದ್ದ ಸಂದರ್ಭದಲ್ಲೇ ಗೋರಖನಾಥ ದೇವಸ್ಥಾನದ ಬಳಿಯಲ್ಲಿ ಅವರ ಕಿರಿಯ ಸಹೋದರನಿಗೆ ಪುಂಡರು ಗುಂಡು ಹೊಡೆದರು. ಅಷ್ಟೇ ಅಲ್ಲ ಆಸ್ಪತ್ರೆಯಲ್ಲಿ ಅವರಿಗೆ ಕೂಡಲೇ ಶುಶ್ರೂಷೆ ದೊರೆಯದಂತೆ ತಡೆಯಲು ಪೊಲೀಸರು ಯತ್ನಿಸಿದರು. 2018ರಲ್ಲಿ ಬಹ್ರೈಚ್‌ನಲ್ಲಿ ಎನ್‌ಸೆಫಲೈಟಿಸ್ ಕಾಯಿಲೆಗೀಡಾದ ರೋಗಿಗಳ ಸ್ಥಿತಿಯನ್ನು ಬಹಿರಂಗಗೊಳಿಸಲು ಯತ್ನಿಸಿದ ಅವರನ್ನು ಅವರ ಹಿರಿಯ ಸೋದರ ಅದೀಲ್ ಅಹಮದ್ ಖಾನ್ ಅವರೊಂದಿಗೆ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ಬಂಧಿಸಿದರು. ಇದರಿಂದ ಮತ್ತೊಮ್ಮೆ ಅವರ ಕುಟುಂಬದ ಸದಸ್ಯರು ಕೆಲ ತಿಂಗಳ ಕಾಲ ಮಾನಸಿಕ ಹಿಂಸೆಯನ್ನು ಅನುಭವಿಸುವಂತಾಯಿತು.

ಸತತ ಪರಿಶ್ರಮದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ತೇರ್ಗಡೆಯಾದ ಆನಂತರ ಕರ್ನಾಟಕದ ಅತ್ಯುತ್ತಮ ವೈದ್ಯಕೀಯ ಕಾಲೇಜೊಂದರಲ್ಲಿ ಪರಿಶ್ರಮಪಟ್ಟು ಓದಿದ ಹೀರೊ ವೈದ್ಯರವರು. ಭಾರತದ ಜನರಿಗೆ ಸೇವೆ ಸಲ್ಲಿಸುವುದನ್ನೇ ತನ್ನ ಬದುಕಿನ ಗುರಿ ಮತ್ತು ಧ್ಯೇಯವಾಗಿಸಿಕೊಂಡ ವೈದ್ಯರು. ವಿಕೋಪಗಳಿಗೀಡಾದಾಗ ಭಾರತದ ಬಹುಪಾಲು ಎಲ್ಲಾ ರಾಜ್ಯಗಳಲ್ಲೂ ಅವರು ಹಲವಾರು ಆರೋಗ್ಯ ಶಿಬಿರಗಳನ್ನು ನಡೆಸಿದ್ದಾರೆ. ಬಿಹಾರದ ಚಮ್ಕಿ ಜ್ವರ ಪೀಡಿತರು, ಅಸ್ಸಾಂನ ಪ್ರವಾಹಪೀಡಿತ ಪ್ರದೇಶಗಳು, ಉತ್ತರಪ್ರದೇಶದ ಗ್ರಾಮೀಣಾ ಪ್ರಾಂತ್ಯಗಳ ಮೂಲೆ ಮುಡುಕುಗಳಲ್ಲೂ ಅವರು ಶಿಬಿರಗಳನ್ನು ನಡೆಸಿದ್ದಾರೆ. ತಮ್ಮ ಜೀವವನ್ನೇ ಪಣಕ್ಕೊಡ್ಡಿ ದೇಶಸೇವೆ ಮಾಡಿದ್ದಾರೆ. ಸಮಸ್ತ ವೈದ್ಯಕೀಯ ಸಮುದಾಯ ಅವರ ಬಗ್ಗೆ ಹೆಮ್ಮೆಪಡುವಂತೆ ಮಾಡಿದ್ದಾರೆ.

ಕೊರೊನಾ ಸಾಂಕ್ರಾಮಿಕ ಜೀವಗಳನ್ನು ಬಲಿತೆಗೆದುಕೊಳ್ಳುತ್ತಿರುವ ಹೊತ್ತಲ್ಲಿ ಭಾರತಕ್ಕೆ ಸ್ವಚ್ಛ ಮನಸ್ಸಿನ, ಅತ್ಯಂತ ಪ್ರತಿಭಾನ್ವಿತ ಮತ್ತು ಪ್ರಾಮಾಣಿಕನಾದ ಶ್ರಮಜೀವಿ ಮಕ್ಕಳ ವೈದ್ಯನ ಅಗತ್ಯವಿದೆ.
ಆದರೆ ಈ ಕರ್ತವ್ಯನಿಷ್ಠ, ಪ್ರಾಮಾಣಿಕ ನಾಗರಿಕನೀಗ ಸೆರೆಮನೆಯಲ್ಲಿ ಕೊಳೆಯುತ್ತಿದ್ದಾರೆ. ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಟೆಯೇ ಅವರಲ್ಲಿರುವ ದೋಷ. ಇಂತಹ ಅತ್ಯುತ್ತಮ ವ್ಯಕ್ತಿಯೊಬ್ಬ ದೇಶಕ್ಕೆ ಹೇಗೆ ಬೆದರಿಕೆಯಾಗುತ್ತಾನೆ ಎಂಬ ಬಗ್ಗೆ ಕೊಂಚ ಯೋಚಿಸಿ.

– ಅದೀಲ್ ಖಾನ್
ಕನ್ನಡಕ್ಕೆ: ಮಾಧವಿ


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...