Homeಮುಖಪುಟಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಸತತ ಪರಿಶ್ರಮದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ತೇರ್ಗಡೆಯಾದ ಆನಂತರ ಕರ್ನಾಟಕದ ಅತ್ಯುತ್ತಮ ವೈದ್ಯಕೀಯ ಕಾಲೇಜೊಂದರಲ್ಲಿ ಪರಿಶ್ರಮಪಟ್ಟು ಓದಿದ ಹೀರೊ ವೈದ್ಯರವರು.

- Advertisement -
- Advertisement -

ಡಾ. ಕಫೀಲ್‌ಖಾನ್ ಒಬ್ಬ ಹೋರಾಟಗಾರ ವೈದ್ಯ. ಅವರು ನಮ್ಮೆಲ್ಲರಿಗಾಗಿ ಮತ್ತು ಉಜ್ವಲ ಭಾರತಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಬಿಆರ್‌ಡಿ (ಬಾಬಾ ರಾಘವ ದಾಸ್) ಆಸ್ಪತ್ರೆಯಲ್ಲಿ ಗ್ಯಾಸ್ ದುರಂತ ನಡೆದ ದುರ್ದಿನ ನನಗೆ ಕಣ್ಣಿಗೆ ಕಟ್ಟಿದಂತೆ ನೆನಪಿದೆ. ಆಮ್ಲಜನಕದ ಕೊರತೆಯಿಂದಾಗಿ ಅಂದು ಅನೇಕ ಮುಗ್ಧ ಜೀವಗಳು ಕಣ್ಮುಚ್ಚಿದವು. ಸರ್ಕಾರದ ಅಸಮರ್ಥತೆ ಮತ್ತು ಅದಕ್ಷತೆಯಿಂದಾಗಿ ಮಕ್ಕಳು ಮರಣ ಹೊಂದಿದವು. ಈ ಅಮೂಲ್ಯ ಜೀವಗಳನ್ನು ಕಾಪಾಡಲು ಈ ಯುವ ವೈದ್ಯ ಮತ್ತು ಆತನ ತಂಡ ತಮಗೆದುರಾದ ಪ್ರತಿಯೊಂದು ಅಡೆ-ತಡೆಯನ್ನು ಮೆಟ್ಟಿ ಹೋರಾಡಿದರು. ಇಂಥ ದಯನೀಯ ಸನ್ನಿವೇಶವನ್ನು ಎದುರಿಸಬೇಕಾದ ವೈದ್ಯನೊಬ್ಬನಿಗೆ ಇದು ಎಂತಹಾ ಘಾಸಿಗೊಳಿಸುವ ಅನುಭವವೆಂಬುದನ್ನು ನಾವು ಊಹಿಸಬಹುದು ಆದರೂ ಆತ ಎದೆಗುಂದದೇ ತನ್ನ ಸ್ವಂತ ಹಣದಿಂದ ಆಮ್ಲಜನಕದ ಸಿಲಿಂಡರುಗಳನ್ನು ವ್ಯವಸ್ಥೆ ಮಾಡಲು ಲಭ್ಯವಿರುವ ಎಲ್ಲಾ ಬಾಗಿಲುಗಳನ್ನೂ ಬಡಿದರು. ಒಬ್ಬ ಅಪಾರ ಬದ್ಧತೆಯಿರುವ ಮಕ್ಕಳ ವೈದ್ಯರಾಗಿ ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಲಷ್ಟೇ ಅವರು ಪ್ರಯಾಸಪಟ್ಟದ್ದು. ಅವರು ಹೋರಾಟ ನಡೆಸಿ ಅನೇಕ ಜೀವಗಳನ್ನು ಕಾಪಾಡಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿದವು. ಹೀಗಾಗಿ ಬೆಳಗಾಗುವುದರೊಳಗೆ ಅವರೊಬ್ಬ ‘ಹೀರೊ’ ಆಗಿ ಅಥವಾ ಮಕ್ಕಳ ಪಾಲಿನ ದೇವದೂತನಾಗಿ ಉದಯಿಸಿದರು.

ಯೋಗಿ ಅವರಿಗೆ ಈ ವಿಷಯ ತಿಳಿದುಬಂದಾಗ ಜೀವ ಕಳೆದುಕೊಂಡವರಿಗೆ ಪರಿಹಾರ ನೀಡುವುದು ಅಥವಾ ಸರ್ಕಾರದ ವೈಫಲ್ಯಕ್ಕೆ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದಕ್ಕೆ ಬದಲಾಗಿ ಅವರು ಮಾಡಿದ್ದೇನೆಂದರೆ, “ನಿನ್ನನ್ನು ನೀನು ಹೀರೊ ಎಂದು ತಿಳಿದಿದ್ದೀಯಾ, ನಿನ್ನನ್ನು ನೋಡಿಕೊಳ್ಳುತ್ತೇನೆ” ಎಂದದ್ದು. ಡಾ. ಕಫೀಲ್‌ಖಾನ್ ಮತ್ತು ಅವರ ಕುಟುಂಬದವರಿಗೆ ಕಿರುಕುಳ ನೀಡುವ ಮತ್ತು ಅವರನ್ನು ಅಪರಾಧಿಗಳನ್ನಾಗಿಸುವ ಸರಣಿ ಪ್ರಯತ್ನಗಳು ಶುರುವಾಗಿದ್ದು ಅಂದಿನಿಂದಲೇ. ಅವರನ್ನು ಬಲಿಪಶು ಮಾಡಲಾಯಿತು ಮತ್ತು ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಅಂದಿನ ಪ್ರಾಂಶುಪಾಲರು ಮತ್ತವರ ಪತ್ನಿ ಹಾಗೂ ಅವರ ಕೆಲ ಸಹೋದ್ಯೋಗಿ ವೈದ್ಯರು ಮತ್ತು ಸಿಬ್ಬಂದಿಯೊಂದಿಗೆ ಜೈಲಿಗೆ ಕಳುಹಿಸಲಾಯಿತು.

ಅವರನ್ನು ಒಂಭತ್ತು ತಿಂಗಳ ಸುದೀರ್ಘ ಅವಧಿಗೆ ಸೆರೆಮನೆಗೆ ತಳ್ಳಲಾಯಿತು. ಮಕ್ಕಳ ಪ್ರಾಣ ಉಳಿಸಲು ತನ್ನೆಲ್ಲಾ ಶಕ್ತಿಮೀರಿ ಶ್ರಮಿಸಿದ ಅವರನ್ನು ಕರ್ತವ್ಯದಿಂದ ವಜಾಮಾಡಲಾಯಿತು. ಅವರಿಗೆ ಕಿರುಕುಳ ನೀಡುತ್ತಾ ಬಂದಿರುವುದು ಮತ್ತು ಆತನ ಕುಟುಂಬ, ಆತನ ತಾಯಿ, ಹೆಂಡತಿ ಮತ್ತು ಮಕ್ಕಳು ಕಷ್ಟಪಡುವಂತಾಗಿದ್ದು ನಿಜಕ್ಕೂ ದುರಂತ, ಅಕ್ಷಮ್ಯ ಮತ್ತು ಅಮಾನವೀಯ.

ತೊಂದರೆಗೀಡಾದ ಅವರು ನಿರ್ದೋಷಿಯೆಂದು ಸಾಬೀತಾದಮೇಲೂ ಮುಸ್ಲಿಂ ವೈದ್ಯನೆಂಬ ಕಾರಣಕ್ಕೆ ಕಷ್ಟಕೋಟಲೆಗಳು ಕೊನೆಗೊಳ್ಳಲಿಲ್ಲ. ಮುಖ್ಯಮಂತ್ರಿಗಳು ಗೋರಖ್‌ಪುರದಲ್ಲಿ ಹಾಜರಿದ್ದ ಸಂದರ್ಭದಲ್ಲೇ ಗೋರಖನಾಥ ದೇವಸ್ಥಾನದ ಬಳಿಯಲ್ಲಿ ಅವರ ಕಿರಿಯ ಸಹೋದರನಿಗೆ ಪುಂಡರು ಗುಂಡು ಹೊಡೆದರು. ಅಷ್ಟೇ ಅಲ್ಲ ಆಸ್ಪತ್ರೆಯಲ್ಲಿ ಅವರಿಗೆ ಕೂಡಲೇ ಶುಶ್ರೂಷೆ ದೊರೆಯದಂತೆ ತಡೆಯಲು ಪೊಲೀಸರು ಯತ್ನಿಸಿದರು. 2018ರಲ್ಲಿ ಬಹ್ರೈಚ್‌ನಲ್ಲಿ ಎನ್‌ಸೆಫಲೈಟಿಸ್ ಕಾಯಿಲೆಗೀಡಾದ ರೋಗಿಗಳ ಸ್ಥಿತಿಯನ್ನು ಬಹಿರಂಗಗೊಳಿಸಲು ಯತ್ನಿಸಿದ ಅವರನ್ನು ಅವರ ಹಿರಿಯ ಸೋದರ ಅದೀಲ್ ಅಹಮದ್ ಖಾನ್ ಅವರೊಂದಿಗೆ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ಬಂಧಿಸಿದರು. ಇದರಿಂದ ಮತ್ತೊಮ್ಮೆ ಅವರ ಕುಟುಂಬದ ಸದಸ್ಯರು ಕೆಲ ತಿಂಗಳ ಕಾಲ ಮಾನಸಿಕ ಹಿಂಸೆಯನ್ನು ಅನುಭವಿಸುವಂತಾಯಿತು.

ಸತತ ಪರಿಶ್ರಮದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ತೇರ್ಗಡೆಯಾದ ಆನಂತರ ಕರ್ನಾಟಕದ ಅತ್ಯುತ್ತಮ ವೈದ್ಯಕೀಯ ಕಾಲೇಜೊಂದರಲ್ಲಿ ಪರಿಶ್ರಮಪಟ್ಟು ಓದಿದ ಹೀರೊ ವೈದ್ಯರವರು. ಭಾರತದ ಜನರಿಗೆ ಸೇವೆ ಸಲ್ಲಿಸುವುದನ್ನೇ ತನ್ನ ಬದುಕಿನ ಗುರಿ ಮತ್ತು ಧ್ಯೇಯವಾಗಿಸಿಕೊಂಡ ವೈದ್ಯರು. ವಿಕೋಪಗಳಿಗೀಡಾದಾಗ ಭಾರತದ ಬಹುಪಾಲು ಎಲ್ಲಾ ರಾಜ್ಯಗಳಲ್ಲೂ ಅವರು ಹಲವಾರು ಆರೋಗ್ಯ ಶಿಬಿರಗಳನ್ನು ನಡೆಸಿದ್ದಾರೆ. ಬಿಹಾರದ ಚಮ್ಕಿ ಜ್ವರ ಪೀಡಿತರು, ಅಸ್ಸಾಂನ ಪ್ರವಾಹಪೀಡಿತ ಪ್ರದೇಶಗಳು, ಉತ್ತರಪ್ರದೇಶದ ಗ್ರಾಮೀಣಾ ಪ್ರಾಂತ್ಯಗಳ ಮೂಲೆ ಮುಡುಕುಗಳಲ್ಲೂ ಅವರು ಶಿಬಿರಗಳನ್ನು ನಡೆಸಿದ್ದಾರೆ. ತಮ್ಮ ಜೀವವನ್ನೇ ಪಣಕ್ಕೊಡ್ಡಿ ದೇಶಸೇವೆ ಮಾಡಿದ್ದಾರೆ. ಸಮಸ್ತ ವೈದ್ಯಕೀಯ ಸಮುದಾಯ ಅವರ ಬಗ್ಗೆ ಹೆಮ್ಮೆಪಡುವಂತೆ ಮಾಡಿದ್ದಾರೆ.

ಕೊರೊನಾ ಸಾಂಕ್ರಾಮಿಕ ಜೀವಗಳನ್ನು ಬಲಿತೆಗೆದುಕೊಳ್ಳುತ್ತಿರುವ ಹೊತ್ತಲ್ಲಿ ಭಾರತಕ್ಕೆ ಸ್ವಚ್ಛ ಮನಸ್ಸಿನ, ಅತ್ಯಂತ ಪ್ರತಿಭಾನ್ವಿತ ಮತ್ತು ಪ್ರಾಮಾಣಿಕನಾದ ಶ್ರಮಜೀವಿ ಮಕ್ಕಳ ವೈದ್ಯನ ಅಗತ್ಯವಿದೆ.
ಆದರೆ ಈ ಕರ್ತವ್ಯನಿಷ್ಠ, ಪ್ರಾಮಾಣಿಕ ನಾಗರಿಕನೀಗ ಸೆರೆಮನೆಯಲ್ಲಿ ಕೊಳೆಯುತ್ತಿದ್ದಾರೆ. ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಟೆಯೇ ಅವರಲ್ಲಿರುವ ದೋಷ. ಇಂತಹ ಅತ್ಯುತ್ತಮ ವ್ಯಕ್ತಿಯೊಬ್ಬ ದೇಶಕ್ಕೆ ಹೇಗೆ ಬೆದರಿಕೆಯಾಗುತ್ತಾನೆ ಎಂಬ ಬಗ್ಗೆ ಕೊಂಚ ಯೋಚಿಸಿ.

– ಅದೀಲ್ ಖಾನ್
ಕನ್ನಡಕ್ಕೆ: ಮಾಧವಿ


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...