Homeಮುಖಪುಟಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಭಾರತದಲ್ಲಿ ದುರ್ಬಲ ವರ್ಗಗಳ ಪರ ಹೋರಾಟ ಮಾಡುವವರನ್ನು ಗುರಿಮಾಡಿ ಹಿಂಸಿಸಲಾಗುತ್ತಿದೆ. ಅವರ ಮೇಲೆ ಪೊಲೀಸ್ ಬಲ ಬಳಸಲಾಗುತ್ತಿದೆ. ಭಯೋತ್ಪಾದನೆಯಂತಹ ಪ್ರಕರಣಗಳನ್ನು ಹಾಕಿ ಕಟ್ಟಿಹಾಕಲಾಗುತ್ತಿದೆ..

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತರಾಗಿ ಇತ್ತೀಚೆಗೆ ಬಿಡುಗಡೆಯಾಗಿರುವ ಉತ್ತರ ಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆವರೆಗೂ ಕೊಂಡ್ಯೊಯ್ದಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ ಪತ್ರ ಬರೆದಿರುವ ಅವರು, ಭಾರತದಲ್ಲಿ ಅಂತರಾಷ್ಟ್ರೀಯ ನಿರ್ಧರಿತ ಮಾನವ ಹಕ್ಕುಗಳ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯೊಂದಿಗೆ ಭಿನ್ನಮತೀಯರನ್ನು ಹತ್ತಿಕ್ಕಲು ಎನ್‌ಎಸ್‌ಎ ಮತ್ತು ಯುಎಪಿಎಯಂತಹ ಕಠಿಣ ಕಾಯ್ದೆಗಳ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎರಡು ಬಾರಿ ಉತ್ತರ ಪ್ರದೇಶ ಪೊಲೀಸರಿಂದ ಬಂಧಿತರಾಗಿ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿಡುಗಡೆಗೊಂಡಿರುವ ಮಕ್ಕಳ ವೈದ್ಯ ಡಾ.ಕಫೀಲ್ ಖಾನ್ ತಮ್ಮ ವಿರುದ್ಧ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಕೀಯ ಹಗೆತನ ಸಾಧಿಸುತ್ತಿದ್ದಾರೆ ಎಂದು ಪತ್ರದಲ್ಲಿ ದೂರಿದ್ದಾರೆ.

ಭಾರತದಲ್ಲಿ ದುರ್ಬಲ ವರ್ಗಗಳ ಪರ ಹೋರಾಟ ಮಾಡುವವರನ್ನು ಗುರಿಮಾಡಿ ಹಿಂಸಿಸಲಾಗುತ್ತಿದೆ. ಅವರ ಮೇಲೆ ಪೊಲೀಸ್ ಬಲ ಬಳಸಲಾಗುತ್ತಿದೆ. ಭಯೋತ್ಪಾದನೆಯಂತಹ ಪ್ರಕರಣಗಳನ್ನು ಹಾಕಿ ಕಟ್ಟಿಹಾಕಲಾಗುತ್ತಿದೆ. ಎಲ್ಲಕ್ಕಿಂತ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ಖಾನ್ ಪ್ರಸ್ತಾಪಿಸಿದ್ದಾರೆ.

ಜೂನ್ 25ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವೇದಿಕೆಯು ಭಾರತ ಸರ್ಕಾರಕ್ಕೆ ಪತ್ರ ಬರೆದು 11 ಜನ ಹೋರಾಟಗಾರರ ಮೇಲಿನ ಪ್ರಭುತ್ವ ಹಿಂಸೆಯನ್ನು ನಿಲ್ಲಿಸುವಂತೆ ಒತ್ತಾಯಿಸಿತ್ತು. ಅದರಲ್ಲಿ ಡಾ.ಕಫೀಲ್ ಖಾನ್ ಮತ್ತು ಶಾರ್ಜಲ್ ಇಮಾಮ್ ಸಹ ಸೇರಿದ್ದರು. ಜೈಲಿನಲ್ಲಿರುವ ಈ ಹೋರಾಟಗಾರರನ್ನು ಹಿಂಸಿಸಲಾಗುತ್ತಿದೆ ಮತ್ತು ಸಮರ್ಪಕ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ದೂರಿತ್ತು.

ತಮ್ಮ ಪತ್ರದಲ್ಲಿ ವಿಶ್ವಸಂಸ್ಥೆಯ ಈ ಕ್ರಮಕ್ಕೆ ಧನ್ಯವಾದ ತಿಳಿಸಿರುವ ಡಾ.ಖಾನ್ ಜೈಲಿನಲ್ಲಿ ತಮಗಾದ ಕಹಿ ಅನುಭವಗಳನ್ನು ಪಟ್ಟಿ ಮಾಡಿದ್ದಾರೆ. ತನ್ನನ್ನು ತುಂಬಿ ತುಳುಕುತ್ತಿದ್ದ ಮಥುರಾ ಜೈಲಿನಲ್ಲಿ ಕೂಡಿಹಾಕಲಾಗಿತ್ತು. ಹಲವು ದಿನಗಳವರೆಗೆ ಊಟ, ನೀರು ಸಹ ನೀಡಲಿಲ್ಲ. ಅಮಾನವೀಯವಾಗಿ ವರ್ತಿಸುತ್ತಿದ್ದ ಜೈಲು ಅಧಿಕಾರಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದರು. ಒಟ್ಟಿನಲ್ಲಿ 7 ತಿಂಗಳ ಜೈಲುವಾಸದಲ್ಲಿ ಜರ್ಜರಿತಗೊಂಡಿದ್ದೆ ಎಂದು ಖಾನ್ ತಿಳಿಸಿದ್ದಾರೆ.

ಅಲ್ಲದೇ ಆಗಸ್ಟ್ 10, 2017ರ ತಮ್ಮ ಗೋರಕ್‌ಪುರದ ಬಿಆರ್‌ಡಿ ಆಸ್ಪತ್ರೆಯ ಪ್ರಕರಣದ ಬಗ್ಗೆಯೂ ತಮ್ಮ ಪತ್ರದಲ್ಲಿ ಖಾನ್ ಉಲ್ಲೇಖಿಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆಮ್ಲಜನಕ ಕೊರತೆ ಉಂಟಾಗಿ ಹಲವು ಮಕ್ಕಳು ಸಾವಿಗೀಡಾದ ಪರಿಸ್ಥಿತಿಯಲ್ಲಿ ತನ್ನನ್ನು ಹೇಗೆ ಆರೋಪಿಯನ್ನಾಗಿ ಮಾಡಲಾಯಿತು ಎಂದು ಅವರು ಬರೆದಿದ್ದಾರೆ. ಜೊತೆಗೆ 2018ರ ಏಪ್ರಿಲ್ 25ರ ಕೋರ್ಟ್ ತೀರ್ಪನ್ನು ಸಹ ಖಾನ್ ಉಲ್ಲೇಖಿಸಿ, “ವೈದ್ಯಕೀಯ ನಿರ್ಲಕ್ಷ್ಯಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದು ಕೋರ್ಟ್ ಹೇಳಿದೆ. ಆದರೂ ಯುಪಿ ಸರ್ಕಾರ ಮಾತ್ರ ತನ್ನನ್ನು ಗುರಿಯಾಗಿಸಿ ತೊಂದರೆ ನೀಡುವುದು ನಿಂತಿಲ್ಲ ಎಂದು ಖಾನ್ ಹೇಳಿದ್ದಾರೆ.

ಈ ಕುರಿತು ಇದುವರೆಗೂ 8 ಪ್ರತ್ಯೇಕ ತನಿಖೆಗಳು ನಡೆದಿವೆ. ಎಲ್ಲಾ ತನಿಖೆಗಳಲ್ಲಿಯೂ ತಾನು ನಿರ್ದೋಷಿ ಎಂಬುದು ಸಾಬೀತಾಗಿದೆ. ಆದರೆ ಯುಪಿ ಸರ್ಕಾರ ತನ್ನ ಮೇಲೆ ಹೇರಿರುವ ಅಮಾನತ್ತಿನ್ನು ಹಿಂಪಡೆದಿಲ್ಲ. ಇದು ರಾಜಕೀಯ ಹಗೆತನವನ್ನು ತೋರಿಸುತ್ತದೆ. ನಾನು ವೈದ್ಯನಾಗಿ ಸೇವೆಗೆ ಮರಳಲು ಸಿದ್ದನಿದ್ದೇನೆ. ಸರ್ಕಾರ ತನ್ನ ಮೇಲಿನ ಅಮಾನತ್ತು ಹಿಂಪಡೆಯಬೇಕು ಎಂದು ಸದ್ಯ ರಾಜಸ್ಥಾನದಲ್ಲಿ ವಾಸವಿರುವ ಡಾ.ಕಫೀಲ್ ಖಾನ್ ತಿಳಿಸಿದ್ದಾರೆ.


ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...