Homeಮುಖಪುಟಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಭಾರತದಲ್ಲಿ ದುರ್ಬಲ ವರ್ಗಗಳ ಪರ ಹೋರಾಟ ಮಾಡುವವರನ್ನು ಗುರಿಮಾಡಿ ಹಿಂಸಿಸಲಾಗುತ್ತಿದೆ. ಅವರ ಮೇಲೆ ಪೊಲೀಸ್ ಬಲ ಬಳಸಲಾಗುತ್ತಿದೆ. ಭಯೋತ್ಪಾದನೆಯಂತಹ ಪ್ರಕರಣಗಳನ್ನು ಹಾಕಿ ಕಟ್ಟಿಹಾಕಲಾಗುತ್ತಿದೆ..

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತರಾಗಿ ಇತ್ತೀಚೆಗೆ ಬಿಡುಗಡೆಯಾಗಿರುವ ಉತ್ತರ ಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆವರೆಗೂ ಕೊಂಡ್ಯೊಯ್ದಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ ಪತ್ರ ಬರೆದಿರುವ ಅವರು, ಭಾರತದಲ್ಲಿ ಅಂತರಾಷ್ಟ್ರೀಯ ನಿರ್ಧರಿತ ಮಾನವ ಹಕ್ಕುಗಳ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯೊಂದಿಗೆ ಭಿನ್ನಮತೀಯರನ್ನು ಹತ್ತಿಕ್ಕಲು ಎನ್‌ಎಸ್‌ಎ ಮತ್ತು ಯುಎಪಿಎಯಂತಹ ಕಠಿಣ ಕಾಯ್ದೆಗಳ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎರಡು ಬಾರಿ ಉತ್ತರ ಪ್ರದೇಶ ಪೊಲೀಸರಿಂದ ಬಂಧಿತರಾಗಿ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿಡುಗಡೆಗೊಂಡಿರುವ ಮಕ್ಕಳ ವೈದ್ಯ ಡಾ.ಕಫೀಲ್ ಖಾನ್ ತಮ್ಮ ವಿರುದ್ಧ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಕೀಯ ಹಗೆತನ ಸಾಧಿಸುತ್ತಿದ್ದಾರೆ ಎಂದು ಪತ್ರದಲ್ಲಿ ದೂರಿದ್ದಾರೆ.

ಭಾರತದಲ್ಲಿ ದುರ್ಬಲ ವರ್ಗಗಳ ಪರ ಹೋರಾಟ ಮಾಡುವವರನ್ನು ಗುರಿಮಾಡಿ ಹಿಂಸಿಸಲಾಗುತ್ತಿದೆ. ಅವರ ಮೇಲೆ ಪೊಲೀಸ್ ಬಲ ಬಳಸಲಾಗುತ್ತಿದೆ. ಭಯೋತ್ಪಾದನೆಯಂತಹ ಪ್ರಕರಣಗಳನ್ನು ಹಾಕಿ ಕಟ್ಟಿಹಾಕಲಾಗುತ್ತಿದೆ. ಎಲ್ಲಕ್ಕಿಂತ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ಖಾನ್ ಪ್ರಸ್ತಾಪಿಸಿದ್ದಾರೆ.

ಜೂನ್ 25ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವೇದಿಕೆಯು ಭಾರತ ಸರ್ಕಾರಕ್ಕೆ ಪತ್ರ ಬರೆದು 11 ಜನ ಹೋರಾಟಗಾರರ ಮೇಲಿನ ಪ್ರಭುತ್ವ ಹಿಂಸೆಯನ್ನು ನಿಲ್ಲಿಸುವಂತೆ ಒತ್ತಾಯಿಸಿತ್ತು. ಅದರಲ್ಲಿ ಡಾ.ಕಫೀಲ್ ಖಾನ್ ಮತ್ತು ಶಾರ್ಜಲ್ ಇಮಾಮ್ ಸಹ ಸೇರಿದ್ದರು. ಜೈಲಿನಲ್ಲಿರುವ ಈ ಹೋರಾಟಗಾರರನ್ನು ಹಿಂಸಿಸಲಾಗುತ್ತಿದೆ ಮತ್ತು ಸಮರ್ಪಕ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ದೂರಿತ್ತು.

ತಮ್ಮ ಪತ್ರದಲ್ಲಿ ವಿಶ್ವಸಂಸ್ಥೆಯ ಈ ಕ್ರಮಕ್ಕೆ ಧನ್ಯವಾದ ತಿಳಿಸಿರುವ ಡಾ.ಖಾನ್ ಜೈಲಿನಲ್ಲಿ ತಮಗಾದ ಕಹಿ ಅನುಭವಗಳನ್ನು ಪಟ್ಟಿ ಮಾಡಿದ್ದಾರೆ. ತನ್ನನ್ನು ತುಂಬಿ ತುಳುಕುತ್ತಿದ್ದ ಮಥುರಾ ಜೈಲಿನಲ್ಲಿ ಕೂಡಿಹಾಕಲಾಗಿತ್ತು. ಹಲವು ದಿನಗಳವರೆಗೆ ಊಟ, ನೀರು ಸಹ ನೀಡಲಿಲ್ಲ. ಅಮಾನವೀಯವಾಗಿ ವರ್ತಿಸುತ್ತಿದ್ದ ಜೈಲು ಅಧಿಕಾರಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದರು. ಒಟ್ಟಿನಲ್ಲಿ 7 ತಿಂಗಳ ಜೈಲುವಾಸದಲ್ಲಿ ಜರ್ಜರಿತಗೊಂಡಿದ್ದೆ ಎಂದು ಖಾನ್ ತಿಳಿಸಿದ್ದಾರೆ.

ಅಲ್ಲದೇ ಆಗಸ್ಟ್ 10, 2017ರ ತಮ್ಮ ಗೋರಕ್‌ಪುರದ ಬಿಆರ್‌ಡಿ ಆಸ್ಪತ್ರೆಯ ಪ್ರಕರಣದ ಬಗ್ಗೆಯೂ ತಮ್ಮ ಪತ್ರದಲ್ಲಿ ಖಾನ್ ಉಲ್ಲೇಖಿಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆಮ್ಲಜನಕ ಕೊರತೆ ಉಂಟಾಗಿ ಹಲವು ಮಕ್ಕಳು ಸಾವಿಗೀಡಾದ ಪರಿಸ್ಥಿತಿಯಲ್ಲಿ ತನ್ನನ್ನು ಹೇಗೆ ಆರೋಪಿಯನ್ನಾಗಿ ಮಾಡಲಾಯಿತು ಎಂದು ಅವರು ಬರೆದಿದ್ದಾರೆ. ಜೊತೆಗೆ 2018ರ ಏಪ್ರಿಲ್ 25ರ ಕೋರ್ಟ್ ತೀರ್ಪನ್ನು ಸಹ ಖಾನ್ ಉಲ್ಲೇಖಿಸಿ, “ವೈದ್ಯಕೀಯ ನಿರ್ಲಕ್ಷ್ಯಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದು ಕೋರ್ಟ್ ಹೇಳಿದೆ. ಆದರೂ ಯುಪಿ ಸರ್ಕಾರ ಮಾತ್ರ ತನ್ನನ್ನು ಗುರಿಯಾಗಿಸಿ ತೊಂದರೆ ನೀಡುವುದು ನಿಂತಿಲ್ಲ ಎಂದು ಖಾನ್ ಹೇಳಿದ್ದಾರೆ.

ಈ ಕುರಿತು ಇದುವರೆಗೂ 8 ಪ್ರತ್ಯೇಕ ತನಿಖೆಗಳು ನಡೆದಿವೆ. ಎಲ್ಲಾ ತನಿಖೆಗಳಲ್ಲಿಯೂ ತಾನು ನಿರ್ದೋಷಿ ಎಂಬುದು ಸಾಬೀತಾಗಿದೆ. ಆದರೆ ಯುಪಿ ಸರ್ಕಾರ ತನ್ನ ಮೇಲೆ ಹೇರಿರುವ ಅಮಾನತ್ತಿನ್ನು ಹಿಂಪಡೆದಿಲ್ಲ. ಇದು ರಾಜಕೀಯ ಹಗೆತನವನ್ನು ತೋರಿಸುತ್ತದೆ. ನಾನು ವೈದ್ಯನಾಗಿ ಸೇವೆಗೆ ಮರಳಲು ಸಿದ್ದನಿದ್ದೇನೆ. ಸರ್ಕಾರ ತನ್ನ ಮೇಲಿನ ಅಮಾನತ್ತು ಹಿಂಪಡೆಯಬೇಕು ಎಂದು ಸದ್ಯ ರಾಜಸ್ಥಾನದಲ್ಲಿ ವಾಸವಿರುವ ಡಾ.ಕಫೀಲ್ ಖಾನ್ ತಿಳಿಸಿದ್ದಾರೆ.


ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...