Homeಮುಖಪುಟಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಭಾರತದಲ್ಲಿ ದುರ್ಬಲ ವರ್ಗಗಳ ಪರ ಹೋರಾಟ ಮಾಡುವವರನ್ನು ಗುರಿಮಾಡಿ ಹಿಂಸಿಸಲಾಗುತ್ತಿದೆ. ಅವರ ಮೇಲೆ ಪೊಲೀಸ್ ಬಲ ಬಳಸಲಾಗುತ್ತಿದೆ. ಭಯೋತ್ಪಾದನೆಯಂತಹ ಪ್ರಕರಣಗಳನ್ನು ಹಾಕಿ ಕಟ್ಟಿಹಾಕಲಾಗುತ್ತಿದೆ..

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತರಾಗಿ ಇತ್ತೀಚೆಗೆ ಬಿಡುಗಡೆಯಾಗಿರುವ ಉತ್ತರ ಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆವರೆಗೂ ಕೊಂಡ್ಯೊಯ್ದಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ ಪತ್ರ ಬರೆದಿರುವ ಅವರು, ಭಾರತದಲ್ಲಿ ಅಂತರಾಷ್ಟ್ರೀಯ ನಿರ್ಧರಿತ ಮಾನವ ಹಕ್ಕುಗಳ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯೊಂದಿಗೆ ಭಿನ್ನಮತೀಯರನ್ನು ಹತ್ತಿಕ್ಕಲು ಎನ್‌ಎಸ್‌ಎ ಮತ್ತು ಯುಎಪಿಎಯಂತಹ ಕಠಿಣ ಕಾಯ್ದೆಗಳ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎರಡು ಬಾರಿ ಉತ್ತರ ಪ್ರದೇಶ ಪೊಲೀಸರಿಂದ ಬಂಧಿತರಾಗಿ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿಡುಗಡೆಗೊಂಡಿರುವ ಮಕ್ಕಳ ವೈದ್ಯ ಡಾ.ಕಫೀಲ್ ಖಾನ್ ತಮ್ಮ ವಿರುದ್ಧ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಕೀಯ ಹಗೆತನ ಸಾಧಿಸುತ್ತಿದ್ದಾರೆ ಎಂದು ಪತ್ರದಲ್ಲಿ ದೂರಿದ್ದಾರೆ.

ಭಾರತದಲ್ಲಿ ದುರ್ಬಲ ವರ್ಗಗಳ ಪರ ಹೋರಾಟ ಮಾಡುವವರನ್ನು ಗುರಿಮಾಡಿ ಹಿಂಸಿಸಲಾಗುತ್ತಿದೆ. ಅವರ ಮೇಲೆ ಪೊಲೀಸ್ ಬಲ ಬಳಸಲಾಗುತ್ತಿದೆ. ಭಯೋತ್ಪಾದನೆಯಂತಹ ಪ್ರಕರಣಗಳನ್ನು ಹಾಕಿ ಕಟ್ಟಿಹಾಕಲಾಗುತ್ತಿದೆ. ಎಲ್ಲಕ್ಕಿಂತ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ಖಾನ್ ಪ್ರಸ್ತಾಪಿಸಿದ್ದಾರೆ.

ಜೂನ್ 25ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವೇದಿಕೆಯು ಭಾರತ ಸರ್ಕಾರಕ್ಕೆ ಪತ್ರ ಬರೆದು 11 ಜನ ಹೋರಾಟಗಾರರ ಮೇಲಿನ ಪ್ರಭುತ್ವ ಹಿಂಸೆಯನ್ನು ನಿಲ್ಲಿಸುವಂತೆ ಒತ್ತಾಯಿಸಿತ್ತು. ಅದರಲ್ಲಿ ಡಾ.ಕಫೀಲ್ ಖಾನ್ ಮತ್ತು ಶಾರ್ಜಲ್ ಇಮಾಮ್ ಸಹ ಸೇರಿದ್ದರು. ಜೈಲಿನಲ್ಲಿರುವ ಈ ಹೋರಾಟಗಾರರನ್ನು ಹಿಂಸಿಸಲಾಗುತ್ತಿದೆ ಮತ್ತು ಸಮರ್ಪಕ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ದೂರಿತ್ತು.

ತಮ್ಮ ಪತ್ರದಲ್ಲಿ ವಿಶ್ವಸಂಸ್ಥೆಯ ಈ ಕ್ರಮಕ್ಕೆ ಧನ್ಯವಾದ ತಿಳಿಸಿರುವ ಡಾ.ಖಾನ್ ಜೈಲಿನಲ್ಲಿ ತಮಗಾದ ಕಹಿ ಅನುಭವಗಳನ್ನು ಪಟ್ಟಿ ಮಾಡಿದ್ದಾರೆ. ತನ್ನನ್ನು ತುಂಬಿ ತುಳುಕುತ್ತಿದ್ದ ಮಥುರಾ ಜೈಲಿನಲ್ಲಿ ಕೂಡಿಹಾಕಲಾಗಿತ್ತು. ಹಲವು ದಿನಗಳವರೆಗೆ ಊಟ, ನೀರು ಸಹ ನೀಡಲಿಲ್ಲ. ಅಮಾನವೀಯವಾಗಿ ವರ್ತಿಸುತ್ತಿದ್ದ ಜೈಲು ಅಧಿಕಾರಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದರು. ಒಟ್ಟಿನಲ್ಲಿ 7 ತಿಂಗಳ ಜೈಲುವಾಸದಲ್ಲಿ ಜರ್ಜರಿತಗೊಂಡಿದ್ದೆ ಎಂದು ಖಾನ್ ತಿಳಿಸಿದ್ದಾರೆ.

ಅಲ್ಲದೇ ಆಗಸ್ಟ್ 10, 2017ರ ತಮ್ಮ ಗೋರಕ್‌ಪುರದ ಬಿಆರ್‌ಡಿ ಆಸ್ಪತ್ರೆಯ ಪ್ರಕರಣದ ಬಗ್ಗೆಯೂ ತಮ್ಮ ಪತ್ರದಲ್ಲಿ ಖಾನ್ ಉಲ್ಲೇಖಿಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆಮ್ಲಜನಕ ಕೊರತೆ ಉಂಟಾಗಿ ಹಲವು ಮಕ್ಕಳು ಸಾವಿಗೀಡಾದ ಪರಿಸ್ಥಿತಿಯಲ್ಲಿ ತನ್ನನ್ನು ಹೇಗೆ ಆರೋಪಿಯನ್ನಾಗಿ ಮಾಡಲಾಯಿತು ಎಂದು ಅವರು ಬರೆದಿದ್ದಾರೆ. ಜೊತೆಗೆ 2018ರ ಏಪ್ರಿಲ್ 25ರ ಕೋರ್ಟ್ ತೀರ್ಪನ್ನು ಸಹ ಖಾನ್ ಉಲ್ಲೇಖಿಸಿ, “ವೈದ್ಯಕೀಯ ನಿರ್ಲಕ್ಷ್ಯಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದು ಕೋರ್ಟ್ ಹೇಳಿದೆ. ಆದರೂ ಯುಪಿ ಸರ್ಕಾರ ಮಾತ್ರ ತನ್ನನ್ನು ಗುರಿಯಾಗಿಸಿ ತೊಂದರೆ ನೀಡುವುದು ನಿಂತಿಲ್ಲ ಎಂದು ಖಾನ್ ಹೇಳಿದ್ದಾರೆ.

ಈ ಕುರಿತು ಇದುವರೆಗೂ 8 ಪ್ರತ್ಯೇಕ ತನಿಖೆಗಳು ನಡೆದಿವೆ. ಎಲ್ಲಾ ತನಿಖೆಗಳಲ್ಲಿಯೂ ತಾನು ನಿರ್ದೋಷಿ ಎಂಬುದು ಸಾಬೀತಾಗಿದೆ. ಆದರೆ ಯುಪಿ ಸರ್ಕಾರ ತನ್ನ ಮೇಲೆ ಹೇರಿರುವ ಅಮಾನತ್ತಿನ್ನು ಹಿಂಪಡೆದಿಲ್ಲ. ಇದು ರಾಜಕೀಯ ಹಗೆತನವನ್ನು ತೋರಿಸುತ್ತದೆ. ನಾನು ವೈದ್ಯನಾಗಿ ಸೇವೆಗೆ ಮರಳಲು ಸಿದ್ದನಿದ್ದೇನೆ. ಸರ್ಕಾರ ತನ್ನ ಮೇಲಿನ ಅಮಾನತ್ತು ಹಿಂಪಡೆಯಬೇಕು ಎಂದು ಸದ್ಯ ರಾಜಸ್ಥಾನದಲ್ಲಿ ವಾಸವಿರುವ ಡಾ.ಕಫೀಲ್ ಖಾನ್ ತಿಳಿಸಿದ್ದಾರೆ.


ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...