Homeಮುಖಪುಟಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಭಾರತದಲ್ಲಿ ದುರ್ಬಲ ವರ್ಗಗಳ ಪರ ಹೋರಾಟ ಮಾಡುವವರನ್ನು ಗುರಿಮಾಡಿ ಹಿಂಸಿಸಲಾಗುತ್ತಿದೆ. ಅವರ ಮೇಲೆ ಪೊಲೀಸ್ ಬಲ ಬಳಸಲಾಗುತ್ತಿದೆ. ಭಯೋತ್ಪಾದನೆಯಂತಹ ಪ್ರಕರಣಗಳನ್ನು ಹಾಕಿ ಕಟ್ಟಿಹಾಕಲಾಗುತ್ತಿದೆ..

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತರಾಗಿ ಇತ್ತೀಚೆಗೆ ಬಿಡುಗಡೆಯಾಗಿರುವ ಉತ್ತರ ಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆವರೆಗೂ ಕೊಂಡ್ಯೊಯ್ದಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ ಪತ್ರ ಬರೆದಿರುವ ಅವರು, ಭಾರತದಲ್ಲಿ ಅಂತರಾಷ್ಟ್ರೀಯ ನಿರ್ಧರಿತ ಮಾನವ ಹಕ್ಕುಗಳ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯೊಂದಿಗೆ ಭಿನ್ನಮತೀಯರನ್ನು ಹತ್ತಿಕ್ಕಲು ಎನ್‌ಎಸ್‌ಎ ಮತ್ತು ಯುಎಪಿಎಯಂತಹ ಕಠಿಣ ಕಾಯ್ದೆಗಳ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎರಡು ಬಾರಿ ಉತ್ತರ ಪ್ರದೇಶ ಪೊಲೀಸರಿಂದ ಬಂಧಿತರಾಗಿ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿಡುಗಡೆಗೊಂಡಿರುವ ಮಕ್ಕಳ ವೈದ್ಯ ಡಾ.ಕಫೀಲ್ ಖಾನ್ ತಮ್ಮ ವಿರುದ್ಧ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಕೀಯ ಹಗೆತನ ಸಾಧಿಸುತ್ತಿದ್ದಾರೆ ಎಂದು ಪತ್ರದಲ್ಲಿ ದೂರಿದ್ದಾರೆ.

ಭಾರತದಲ್ಲಿ ದುರ್ಬಲ ವರ್ಗಗಳ ಪರ ಹೋರಾಟ ಮಾಡುವವರನ್ನು ಗುರಿಮಾಡಿ ಹಿಂಸಿಸಲಾಗುತ್ತಿದೆ. ಅವರ ಮೇಲೆ ಪೊಲೀಸ್ ಬಲ ಬಳಸಲಾಗುತ್ತಿದೆ. ಭಯೋತ್ಪಾದನೆಯಂತಹ ಪ್ರಕರಣಗಳನ್ನು ಹಾಕಿ ಕಟ್ಟಿಹಾಕಲಾಗುತ್ತಿದೆ. ಎಲ್ಲಕ್ಕಿಂತ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ಖಾನ್ ಪ್ರಸ್ತಾಪಿಸಿದ್ದಾರೆ.

ಜೂನ್ 25ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವೇದಿಕೆಯು ಭಾರತ ಸರ್ಕಾರಕ್ಕೆ ಪತ್ರ ಬರೆದು 11 ಜನ ಹೋರಾಟಗಾರರ ಮೇಲಿನ ಪ್ರಭುತ್ವ ಹಿಂಸೆಯನ್ನು ನಿಲ್ಲಿಸುವಂತೆ ಒತ್ತಾಯಿಸಿತ್ತು. ಅದರಲ್ಲಿ ಡಾ.ಕಫೀಲ್ ಖಾನ್ ಮತ್ತು ಶಾರ್ಜಲ್ ಇಮಾಮ್ ಸಹ ಸೇರಿದ್ದರು. ಜೈಲಿನಲ್ಲಿರುವ ಈ ಹೋರಾಟಗಾರರನ್ನು ಹಿಂಸಿಸಲಾಗುತ್ತಿದೆ ಮತ್ತು ಸಮರ್ಪಕ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ದೂರಿತ್ತು.

ತಮ್ಮ ಪತ್ರದಲ್ಲಿ ವಿಶ್ವಸಂಸ್ಥೆಯ ಈ ಕ್ರಮಕ್ಕೆ ಧನ್ಯವಾದ ತಿಳಿಸಿರುವ ಡಾ.ಖಾನ್ ಜೈಲಿನಲ್ಲಿ ತಮಗಾದ ಕಹಿ ಅನುಭವಗಳನ್ನು ಪಟ್ಟಿ ಮಾಡಿದ್ದಾರೆ. ತನ್ನನ್ನು ತುಂಬಿ ತುಳುಕುತ್ತಿದ್ದ ಮಥುರಾ ಜೈಲಿನಲ್ಲಿ ಕೂಡಿಹಾಕಲಾಗಿತ್ತು. ಹಲವು ದಿನಗಳವರೆಗೆ ಊಟ, ನೀರು ಸಹ ನೀಡಲಿಲ್ಲ. ಅಮಾನವೀಯವಾಗಿ ವರ್ತಿಸುತ್ತಿದ್ದ ಜೈಲು ಅಧಿಕಾರಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದರು. ಒಟ್ಟಿನಲ್ಲಿ 7 ತಿಂಗಳ ಜೈಲುವಾಸದಲ್ಲಿ ಜರ್ಜರಿತಗೊಂಡಿದ್ದೆ ಎಂದು ಖಾನ್ ತಿಳಿಸಿದ್ದಾರೆ.

ಅಲ್ಲದೇ ಆಗಸ್ಟ್ 10, 2017ರ ತಮ್ಮ ಗೋರಕ್‌ಪುರದ ಬಿಆರ್‌ಡಿ ಆಸ್ಪತ್ರೆಯ ಪ್ರಕರಣದ ಬಗ್ಗೆಯೂ ತಮ್ಮ ಪತ್ರದಲ್ಲಿ ಖಾನ್ ಉಲ್ಲೇಖಿಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆಮ್ಲಜನಕ ಕೊರತೆ ಉಂಟಾಗಿ ಹಲವು ಮಕ್ಕಳು ಸಾವಿಗೀಡಾದ ಪರಿಸ್ಥಿತಿಯಲ್ಲಿ ತನ್ನನ್ನು ಹೇಗೆ ಆರೋಪಿಯನ್ನಾಗಿ ಮಾಡಲಾಯಿತು ಎಂದು ಅವರು ಬರೆದಿದ್ದಾರೆ. ಜೊತೆಗೆ 2018ರ ಏಪ್ರಿಲ್ 25ರ ಕೋರ್ಟ್ ತೀರ್ಪನ್ನು ಸಹ ಖಾನ್ ಉಲ್ಲೇಖಿಸಿ, “ವೈದ್ಯಕೀಯ ನಿರ್ಲಕ್ಷ್ಯಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದು ಕೋರ್ಟ್ ಹೇಳಿದೆ. ಆದರೂ ಯುಪಿ ಸರ್ಕಾರ ಮಾತ್ರ ತನ್ನನ್ನು ಗುರಿಯಾಗಿಸಿ ತೊಂದರೆ ನೀಡುವುದು ನಿಂತಿಲ್ಲ ಎಂದು ಖಾನ್ ಹೇಳಿದ್ದಾರೆ.

ಈ ಕುರಿತು ಇದುವರೆಗೂ 8 ಪ್ರತ್ಯೇಕ ತನಿಖೆಗಳು ನಡೆದಿವೆ. ಎಲ್ಲಾ ತನಿಖೆಗಳಲ್ಲಿಯೂ ತಾನು ನಿರ್ದೋಷಿ ಎಂಬುದು ಸಾಬೀತಾಗಿದೆ. ಆದರೆ ಯುಪಿ ಸರ್ಕಾರ ತನ್ನ ಮೇಲೆ ಹೇರಿರುವ ಅಮಾನತ್ತಿನ್ನು ಹಿಂಪಡೆದಿಲ್ಲ. ಇದು ರಾಜಕೀಯ ಹಗೆತನವನ್ನು ತೋರಿಸುತ್ತದೆ. ನಾನು ವೈದ್ಯನಾಗಿ ಸೇವೆಗೆ ಮರಳಲು ಸಿದ್ದನಿದ್ದೇನೆ. ಸರ್ಕಾರ ತನ್ನ ಮೇಲಿನ ಅಮಾನತ್ತು ಹಿಂಪಡೆಯಬೇಕು ಎಂದು ಸದ್ಯ ರಾಜಸ್ಥಾನದಲ್ಲಿ ವಾಸವಿರುವ ಡಾ.ಕಫೀಲ್ ಖಾನ್ ತಿಳಿಸಿದ್ದಾರೆ.


ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...