Homeಮುಖಪುಟಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಭಾರತದಲ್ಲಿ ದುರ್ಬಲ ವರ್ಗಗಳ ಪರ ಹೋರಾಟ ಮಾಡುವವರನ್ನು ಗುರಿಮಾಡಿ ಹಿಂಸಿಸಲಾಗುತ್ತಿದೆ. ಅವರ ಮೇಲೆ ಪೊಲೀಸ್ ಬಲ ಬಳಸಲಾಗುತ್ತಿದೆ. ಭಯೋತ್ಪಾದನೆಯಂತಹ ಪ್ರಕರಣಗಳನ್ನು ಹಾಕಿ ಕಟ್ಟಿಹಾಕಲಾಗುತ್ತಿದೆ..

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತರಾಗಿ ಇತ್ತೀಚೆಗೆ ಬಿಡುಗಡೆಯಾಗಿರುವ ಉತ್ತರ ಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆವರೆಗೂ ಕೊಂಡ್ಯೊಯ್ದಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ ಪತ್ರ ಬರೆದಿರುವ ಅವರು, ಭಾರತದಲ್ಲಿ ಅಂತರಾಷ್ಟ್ರೀಯ ನಿರ್ಧರಿತ ಮಾನವ ಹಕ್ಕುಗಳ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯೊಂದಿಗೆ ಭಿನ್ನಮತೀಯರನ್ನು ಹತ್ತಿಕ್ಕಲು ಎನ್‌ಎಸ್‌ಎ ಮತ್ತು ಯುಎಪಿಎಯಂತಹ ಕಠಿಣ ಕಾಯ್ದೆಗಳ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎರಡು ಬಾರಿ ಉತ್ತರ ಪ್ರದೇಶ ಪೊಲೀಸರಿಂದ ಬಂಧಿತರಾಗಿ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿಡುಗಡೆಗೊಂಡಿರುವ ಮಕ್ಕಳ ವೈದ್ಯ ಡಾ.ಕಫೀಲ್ ಖಾನ್ ತಮ್ಮ ವಿರುದ್ಧ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಕೀಯ ಹಗೆತನ ಸಾಧಿಸುತ್ತಿದ್ದಾರೆ ಎಂದು ಪತ್ರದಲ್ಲಿ ದೂರಿದ್ದಾರೆ.

ಭಾರತದಲ್ಲಿ ದುರ್ಬಲ ವರ್ಗಗಳ ಪರ ಹೋರಾಟ ಮಾಡುವವರನ್ನು ಗುರಿಮಾಡಿ ಹಿಂಸಿಸಲಾಗುತ್ತಿದೆ. ಅವರ ಮೇಲೆ ಪೊಲೀಸ್ ಬಲ ಬಳಸಲಾಗುತ್ತಿದೆ. ಭಯೋತ್ಪಾದನೆಯಂತಹ ಪ್ರಕರಣಗಳನ್ನು ಹಾಕಿ ಕಟ್ಟಿಹಾಕಲಾಗುತ್ತಿದೆ. ಎಲ್ಲಕ್ಕಿಂತ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ಖಾನ್ ಪ್ರಸ್ತಾಪಿಸಿದ್ದಾರೆ.

ಜೂನ್ 25ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವೇದಿಕೆಯು ಭಾರತ ಸರ್ಕಾರಕ್ಕೆ ಪತ್ರ ಬರೆದು 11 ಜನ ಹೋರಾಟಗಾರರ ಮೇಲಿನ ಪ್ರಭುತ್ವ ಹಿಂಸೆಯನ್ನು ನಿಲ್ಲಿಸುವಂತೆ ಒತ್ತಾಯಿಸಿತ್ತು. ಅದರಲ್ಲಿ ಡಾ.ಕಫೀಲ್ ಖಾನ್ ಮತ್ತು ಶಾರ್ಜಲ್ ಇಮಾಮ್ ಸಹ ಸೇರಿದ್ದರು. ಜೈಲಿನಲ್ಲಿರುವ ಈ ಹೋರಾಟಗಾರರನ್ನು ಹಿಂಸಿಸಲಾಗುತ್ತಿದೆ ಮತ್ತು ಸಮರ್ಪಕ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ದೂರಿತ್ತು.

ತಮ್ಮ ಪತ್ರದಲ್ಲಿ ವಿಶ್ವಸಂಸ್ಥೆಯ ಈ ಕ್ರಮಕ್ಕೆ ಧನ್ಯವಾದ ತಿಳಿಸಿರುವ ಡಾ.ಖಾನ್ ಜೈಲಿನಲ್ಲಿ ತಮಗಾದ ಕಹಿ ಅನುಭವಗಳನ್ನು ಪಟ್ಟಿ ಮಾಡಿದ್ದಾರೆ. ತನ್ನನ್ನು ತುಂಬಿ ತುಳುಕುತ್ತಿದ್ದ ಮಥುರಾ ಜೈಲಿನಲ್ಲಿ ಕೂಡಿಹಾಕಲಾಗಿತ್ತು. ಹಲವು ದಿನಗಳವರೆಗೆ ಊಟ, ನೀರು ಸಹ ನೀಡಲಿಲ್ಲ. ಅಮಾನವೀಯವಾಗಿ ವರ್ತಿಸುತ್ತಿದ್ದ ಜೈಲು ಅಧಿಕಾರಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದರು. ಒಟ್ಟಿನಲ್ಲಿ 7 ತಿಂಗಳ ಜೈಲುವಾಸದಲ್ಲಿ ಜರ್ಜರಿತಗೊಂಡಿದ್ದೆ ಎಂದು ಖಾನ್ ತಿಳಿಸಿದ್ದಾರೆ.

ಅಲ್ಲದೇ ಆಗಸ್ಟ್ 10, 2017ರ ತಮ್ಮ ಗೋರಕ್‌ಪುರದ ಬಿಆರ್‌ಡಿ ಆಸ್ಪತ್ರೆಯ ಪ್ರಕರಣದ ಬಗ್ಗೆಯೂ ತಮ್ಮ ಪತ್ರದಲ್ಲಿ ಖಾನ್ ಉಲ್ಲೇಖಿಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆಮ್ಲಜನಕ ಕೊರತೆ ಉಂಟಾಗಿ ಹಲವು ಮಕ್ಕಳು ಸಾವಿಗೀಡಾದ ಪರಿಸ್ಥಿತಿಯಲ್ಲಿ ತನ್ನನ್ನು ಹೇಗೆ ಆರೋಪಿಯನ್ನಾಗಿ ಮಾಡಲಾಯಿತು ಎಂದು ಅವರು ಬರೆದಿದ್ದಾರೆ. ಜೊತೆಗೆ 2018ರ ಏಪ್ರಿಲ್ 25ರ ಕೋರ್ಟ್ ತೀರ್ಪನ್ನು ಸಹ ಖಾನ್ ಉಲ್ಲೇಖಿಸಿ, “ವೈದ್ಯಕೀಯ ನಿರ್ಲಕ್ಷ್ಯಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದು ಕೋರ್ಟ್ ಹೇಳಿದೆ. ಆದರೂ ಯುಪಿ ಸರ್ಕಾರ ಮಾತ್ರ ತನ್ನನ್ನು ಗುರಿಯಾಗಿಸಿ ತೊಂದರೆ ನೀಡುವುದು ನಿಂತಿಲ್ಲ ಎಂದು ಖಾನ್ ಹೇಳಿದ್ದಾರೆ.

ಈ ಕುರಿತು ಇದುವರೆಗೂ 8 ಪ್ರತ್ಯೇಕ ತನಿಖೆಗಳು ನಡೆದಿವೆ. ಎಲ್ಲಾ ತನಿಖೆಗಳಲ್ಲಿಯೂ ತಾನು ನಿರ್ದೋಷಿ ಎಂಬುದು ಸಾಬೀತಾಗಿದೆ. ಆದರೆ ಯುಪಿ ಸರ್ಕಾರ ತನ್ನ ಮೇಲೆ ಹೇರಿರುವ ಅಮಾನತ್ತಿನ್ನು ಹಿಂಪಡೆದಿಲ್ಲ. ಇದು ರಾಜಕೀಯ ಹಗೆತನವನ್ನು ತೋರಿಸುತ್ತದೆ. ನಾನು ವೈದ್ಯನಾಗಿ ಸೇವೆಗೆ ಮರಳಲು ಸಿದ್ದನಿದ್ದೇನೆ. ಸರ್ಕಾರ ತನ್ನ ಮೇಲಿನ ಅಮಾನತ್ತು ಹಿಂಪಡೆಯಬೇಕು ಎಂದು ಸದ್ಯ ರಾಜಸ್ಥಾನದಲ್ಲಿ ವಾಸವಿರುವ ಡಾ.ಕಫೀಲ್ ಖಾನ್ ತಿಳಿಸಿದ್ದಾರೆ.


ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...