Homeಮುಖಪುಟಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಭಾರತದಲ್ಲಿ ದುರ್ಬಲ ವರ್ಗಗಳ ಪರ ಹೋರಾಟ ಮಾಡುವವರನ್ನು ಗುರಿಮಾಡಿ ಹಿಂಸಿಸಲಾಗುತ್ತಿದೆ. ಅವರ ಮೇಲೆ ಪೊಲೀಸ್ ಬಲ ಬಳಸಲಾಗುತ್ತಿದೆ. ಭಯೋತ್ಪಾದನೆಯಂತಹ ಪ್ರಕರಣಗಳನ್ನು ಹಾಕಿ ಕಟ್ಟಿಹಾಕಲಾಗುತ್ತಿದೆ..

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತರಾಗಿ ಇತ್ತೀಚೆಗೆ ಬಿಡುಗಡೆಯಾಗಿರುವ ಉತ್ತರ ಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆವರೆಗೂ ಕೊಂಡ್ಯೊಯ್ದಿದ್ದಾರೆ. ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಮಿತಿಗೆ ಪತ್ರ ಬರೆದಿರುವ ಅವರು, ಭಾರತದಲ್ಲಿ ಅಂತರಾಷ್ಟ್ರೀಯ ನಿರ್ಧರಿತ ಮಾನವ ಹಕ್ಕುಗಳ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯೊಂದಿಗೆ ಭಿನ್ನಮತೀಯರನ್ನು ಹತ್ತಿಕ್ಕಲು ಎನ್‌ಎಸ್‌ಎ ಮತ್ತು ಯುಎಪಿಎಯಂತಹ ಕಠಿಣ ಕಾಯ್ದೆಗಳ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಎರಡು ಬಾರಿ ಉತ್ತರ ಪ್ರದೇಶ ಪೊಲೀಸರಿಂದ ಬಂಧಿತರಾಗಿ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿಡುಗಡೆಗೊಂಡಿರುವ ಮಕ್ಕಳ ವೈದ್ಯ ಡಾ.ಕಫೀಲ್ ಖಾನ್ ತಮ್ಮ ವಿರುದ್ಧ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಕೀಯ ಹಗೆತನ ಸಾಧಿಸುತ್ತಿದ್ದಾರೆ ಎಂದು ಪತ್ರದಲ್ಲಿ ದೂರಿದ್ದಾರೆ.

ಭಾರತದಲ್ಲಿ ದುರ್ಬಲ ವರ್ಗಗಳ ಪರ ಹೋರಾಟ ಮಾಡುವವರನ್ನು ಗುರಿಮಾಡಿ ಹಿಂಸಿಸಲಾಗುತ್ತಿದೆ. ಅವರ ಮೇಲೆ ಪೊಲೀಸ್ ಬಲ ಬಳಸಲಾಗುತ್ತಿದೆ. ಭಯೋತ್ಪಾದನೆಯಂತಹ ಪ್ರಕರಣಗಳನ್ನು ಹಾಕಿ ಕಟ್ಟಿಹಾಕಲಾಗುತ್ತಿದೆ. ಎಲ್ಲಕ್ಕಿಂತ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ ಎಂದು ತಮ್ಮ ಪತ್ರದಲ್ಲಿ ಖಾನ್ ಪ್ರಸ್ತಾಪಿಸಿದ್ದಾರೆ.

ಜೂನ್ 25ರಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವೇದಿಕೆಯು ಭಾರತ ಸರ್ಕಾರಕ್ಕೆ ಪತ್ರ ಬರೆದು 11 ಜನ ಹೋರಾಟಗಾರರ ಮೇಲಿನ ಪ್ರಭುತ್ವ ಹಿಂಸೆಯನ್ನು ನಿಲ್ಲಿಸುವಂತೆ ಒತ್ತಾಯಿಸಿತ್ತು. ಅದರಲ್ಲಿ ಡಾ.ಕಫೀಲ್ ಖಾನ್ ಮತ್ತು ಶಾರ್ಜಲ್ ಇಮಾಮ್ ಸಹ ಸೇರಿದ್ದರು. ಜೈಲಿನಲ್ಲಿರುವ ಈ ಹೋರಾಟಗಾರರನ್ನು ಹಿಂಸಿಸಲಾಗುತ್ತಿದೆ ಮತ್ತು ಸಮರ್ಪಕ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ದೂರಿತ್ತು.

ತಮ್ಮ ಪತ್ರದಲ್ಲಿ ವಿಶ್ವಸಂಸ್ಥೆಯ ಈ ಕ್ರಮಕ್ಕೆ ಧನ್ಯವಾದ ತಿಳಿಸಿರುವ ಡಾ.ಖಾನ್ ಜೈಲಿನಲ್ಲಿ ತಮಗಾದ ಕಹಿ ಅನುಭವಗಳನ್ನು ಪಟ್ಟಿ ಮಾಡಿದ್ದಾರೆ. ತನ್ನನ್ನು ತುಂಬಿ ತುಳುಕುತ್ತಿದ್ದ ಮಥುರಾ ಜೈಲಿನಲ್ಲಿ ಕೂಡಿಹಾಕಲಾಗಿತ್ತು. ಹಲವು ದಿನಗಳವರೆಗೆ ಊಟ, ನೀರು ಸಹ ನೀಡಲಿಲ್ಲ. ಅಮಾನವೀಯವಾಗಿ ವರ್ತಿಸುತ್ತಿದ್ದ ಜೈಲು ಅಧಿಕಾರಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದರು. ಒಟ್ಟಿನಲ್ಲಿ 7 ತಿಂಗಳ ಜೈಲುವಾಸದಲ್ಲಿ ಜರ್ಜರಿತಗೊಂಡಿದ್ದೆ ಎಂದು ಖಾನ್ ತಿಳಿಸಿದ್ದಾರೆ.

ಅಲ್ಲದೇ ಆಗಸ್ಟ್ 10, 2017ರ ತಮ್ಮ ಗೋರಕ್‌ಪುರದ ಬಿಆರ್‌ಡಿ ಆಸ್ಪತ್ರೆಯ ಪ್ರಕರಣದ ಬಗ್ಗೆಯೂ ತಮ್ಮ ಪತ್ರದಲ್ಲಿ ಖಾನ್ ಉಲ್ಲೇಖಿಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಆಮ್ಲಜನಕ ಕೊರತೆ ಉಂಟಾಗಿ ಹಲವು ಮಕ್ಕಳು ಸಾವಿಗೀಡಾದ ಪರಿಸ್ಥಿತಿಯಲ್ಲಿ ತನ್ನನ್ನು ಹೇಗೆ ಆರೋಪಿಯನ್ನಾಗಿ ಮಾಡಲಾಯಿತು ಎಂದು ಅವರು ಬರೆದಿದ್ದಾರೆ. ಜೊತೆಗೆ 2018ರ ಏಪ್ರಿಲ್ 25ರ ಕೋರ್ಟ್ ತೀರ್ಪನ್ನು ಸಹ ಖಾನ್ ಉಲ್ಲೇಖಿಸಿ, “ವೈದ್ಯಕೀಯ ನಿರ್ಲಕ್ಷ್ಯಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ” ಎಂದು ಕೋರ್ಟ್ ಹೇಳಿದೆ. ಆದರೂ ಯುಪಿ ಸರ್ಕಾರ ಮಾತ್ರ ತನ್ನನ್ನು ಗುರಿಯಾಗಿಸಿ ತೊಂದರೆ ನೀಡುವುದು ನಿಂತಿಲ್ಲ ಎಂದು ಖಾನ್ ಹೇಳಿದ್ದಾರೆ.

ಈ ಕುರಿತು ಇದುವರೆಗೂ 8 ಪ್ರತ್ಯೇಕ ತನಿಖೆಗಳು ನಡೆದಿವೆ. ಎಲ್ಲಾ ತನಿಖೆಗಳಲ್ಲಿಯೂ ತಾನು ನಿರ್ದೋಷಿ ಎಂಬುದು ಸಾಬೀತಾಗಿದೆ. ಆದರೆ ಯುಪಿ ಸರ್ಕಾರ ತನ್ನ ಮೇಲೆ ಹೇರಿರುವ ಅಮಾನತ್ತಿನ್ನು ಹಿಂಪಡೆದಿಲ್ಲ. ಇದು ರಾಜಕೀಯ ಹಗೆತನವನ್ನು ತೋರಿಸುತ್ತದೆ. ನಾನು ವೈದ್ಯನಾಗಿ ಸೇವೆಗೆ ಮರಳಲು ಸಿದ್ದನಿದ್ದೇನೆ. ಸರ್ಕಾರ ತನ್ನ ಮೇಲಿನ ಅಮಾನತ್ತು ಹಿಂಪಡೆಯಬೇಕು ಎಂದು ಸದ್ಯ ರಾಜಸ್ಥಾನದಲ್ಲಿ ವಾಸವಿರುವ ಡಾ.ಕಫೀಲ್ ಖಾನ್ ತಿಳಿಸಿದ್ದಾರೆ.


ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...