Homeಮುಖಪುಟರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು - ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

"ದಿನದ 24 ಗಂಟೆಯೂ ನನ್ನ ಮೇಲೆ ನಿಗಾಯಿರಿಸಲು ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳನ್ನೂ ಒದಗಿಸಿ. ಇದರಿಂದ ಕನಿಷ್ಠ್ಧ ಸುಳ್ಳು ಪ್ರಕರಣಗಳಿಂದ ನಾನು ತಪ್ಪಿಸಿಕೊಳ್ಳಲು ಸಾಧ್ಯವಾಗಬಹುದು"

- Advertisement -
- Advertisement -

ಸಿಎಎ ವಿರುದ್ಧ ಹೋರಾಟ ಮಾಡಿದ್ದ ಉತ್ತರಪ್ರದೇಶದ ವೈದ್ಯ ಡಾ. ಕಫೀಲ್‌ ಖಾನ್ ಅವರ ಹೆಸರನ್ನು ಗೋರಖ್‌ಪುರ ಜಿಲ್ಲೆಯ ಪೊಲೀಸರು ರೌಡಿಶೀಟರ್‌ ಪಟ್ಟಿಗೆ ಸೇರಿಸಿದ್ದಾರೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜೋಗೇಂದ್ರ ಕುಮಾರ್ ಅವರ ಸೂಚನೆಯ ಮೇರೆಗೆ ಕಫೀಲ್ ಖಾನ್ ಸೇರಿದಂತೆ ಇತರೆ 81 ಜನರ ಹೆಸರನ್ನು 2020ರ ಜೂನ್‌ 18 ರಂದು ಸೇರಿಸಲಾಗಿದ್ದು, ಇವರ ಮೇಲೆ ಪೊಲೀಸರು ಇನ್ನುಮುಂದೆ ನಿಗಾ ವಹಿಸಲಿದ್ದಾರೆ.

ಗೊರಖ್‌ಪುರ್ ಜಿಲ್ಲೆಯಲ್ಲಿ ಒಟ್ಟು 1,543 ರೌಡಿಶೀಟರ್‌ಗಳಿದ್ದಾರೆ. ಅವರ ಪಟ್ಟಿಯಲ್ಲಿ ಕಫೀಲ್‌ ಖಾನ್‌ ಕೂಡ ಸೇರಿದ್ದಾರೆ. ಕಳೆದ ಜೂನ್‌ನಲ್ಲಿಯೇ ಅವರನ್ನು ರೌಡಿಶೀಟರ್‌ ಎಂದು ಉಲ್ಲೇಖಿಸಲಾಗಿದ್ದು, ಈಗಷ್ಟೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಡಾ.ಕಫೀಲ್ ಖಾನ್‌ಗೆ ಅವರ ಹುದ್ದೆ ಹಿಂತಿರುಗಿಸಿ- ಯುಪಿ ಸರ್ಕಾರಕ್ಕೆ ಪತ್ರ ಬರೆದ ವೈದ್ಯಕೀಯ ಸಂಘ

“ಉತ್ತರ ಪ್ರದೇಶ ಸರಕಾರವು ನನ್ನನ್ನು ರೌಡಿ ಶೀಟರ್‌ಗಳ ಪಟ್ಟಿಯಲ್ಲಿ ಸೇರಿಸಿದೆ. ಜೀವನಪರ್ಯಂತ ನನ್ನ ಮೇಲೆ ನಿಗಾ ಇರಿಸುತ್ತಾರಂತೆ. ಅದು ಒಳ್ಳೆಯದೇ ಆಗಿದೆ. ದಿನದ 24 ಗಂಟೆಯೂ ನನ್ನ ಮೇಲೆ ನಿಗಾ ಇರಿಸಲು ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳನ್ನೂ ಒದಗಿಸಿ. ಇದರಿಂದ ಕನಿಷ್ಠ ಸುಳ್ಳು ಪ್ರಕರಣಗಳಿಂದ ನಾನು ತಪ್ಪಿಸಿಕೊಳ್ಳಲು ಸಾಧ್ಯವಾಗಬಹುದು” ಎಂದು ಕಫೀಲ್‌ ಖಾನ್ ಹೇಳಿದ್ದಾರೆ.

ಕ್ರಿಮಿನಲ್‌ಗಳ ಮೇಲೆ ನಿಗಾ ಇಡಲಾಗದ ಸರ್ಕಾರ, ಅಮಾಯಕರ ವಿರುದ್ದ ರೌಡಿ ಶೀಟ್‌ಗಳನ್ನು ದಾಖಲಿಸುತ್ತಿದೆ. ಇದು ಉತ್ತರ ಪ್ರದೇಶದ ಪರಿಸ್ಥಿತಿ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಪೌರತ್ವ ತಿದ್ದುಪಡಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅಲಿಗಡ್‌ ಮುಸ್ಲಿಂ ವಿವಿಯಲ್ಲಿ 2019 ಡಿ. 10 ರಂದು ಡಾ ಕಫೀಲ್‌ ಖಾನ್‌ ಅವರು ಭಾಷಣ ಮಾಡಿದ್ದರು. ಅವರ ಭಾಷಣವು ದ್ವೇಷ ಅಥವಾ ಹಿಂಸೆಗೆ ಪ್ರಚೋದನೆ ನೀಡುತ್ತದೆ ಎಂದು 2020ರ ಜನವರಿಯಲ್ಲಿ ಡಾ.ಖಾನ್ ಅವರನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯಡಿ ಪ್ರಕರಣವನ್ನು ದಾಖಲಿಸಲಾಗಿತ್ತು.

ಆದರೆ, ಪ್ರಕರಣದ ವಿಚಾರಣೆ ನಡೆಸಿದ್ದ ಅಲಹಾಬಾದ್‌ ಹೈಕೋರ್ಟ್‌, ಎನ್‌ಎಸ್‌ಎ ಅಡಿಯಲ್ಲಿ ಕಫೀಲ್‌ ಖಾನ್‌ ಅವರ ಬಂಧನವನ್ನು 2020ರ ಸೆಪ್ಟೆಂಬರ್‌ 1ರಂದು ರದ್ದುಗೊಳಿಸಿ, ಬಿಡುಗಡೆಗೊಳಿಸಿತ್ತು.


ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ದೇಶದಲ್ಲೀಗ ವೈದ್ಯರು ರೌಡಿ ಶಿಟರ್ಗಳಾಗುತ್ತಿದ್ದಾರೆ. ಇದರ ಮುಂದುವರಿದ ಬಾಗ, ರೌಡಿ ಶೀಟರ್ಗಳು ಡಾಕ್ಟರ್ ಗಳಾಗಬಹುದಾ?

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...