Homeಮುಖಪುಟರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು - ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

"ದಿನದ 24 ಗಂಟೆಯೂ ನನ್ನ ಮೇಲೆ ನಿಗಾಯಿರಿಸಲು ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳನ್ನೂ ಒದಗಿಸಿ. ಇದರಿಂದ ಕನಿಷ್ಠ್ಧ ಸುಳ್ಳು ಪ್ರಕರಣಗಳಿಂದ ನಾನು ತಪ್ಪಿಸಿಕೊಳ್ಳಲು ಸಾಧ್ಯವಾಗಬಹುದು"

- Advertisement -
- Advertisement -

ಸಿಎಎ ವಿರುದ್ಧ ಹೋರಾಟ ಮಾಡಿದ್ದ ಉತ್ತರಪ್ರದೇಶದ ವೈದ್ಯ ಡಾ. ಕಫೀಲ್‌ ಖಾನ್ ಅವರ ಹೆಸರನ್ನು ಗೋರಖ್‌ಪುರ ಜಿಲ್ಲೆಯ ಪೊಲೀಸರು ರೌಡಿಶೀಟರ್‌ ಪಟ್ಟಿಗೆ ಸೇರಿಸಿದ್ದಾರೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜೋಗೇಂದ್ರ ಕುಮಾರ್ ಅವರ ಸೂಚನೆಯ ಮೇರೆಗೆ ಕಫೀಲ್ ಖಾನ್ ಸೇರಿದಂತೆ ಇತರೆ 81 ಜನರ ಹೆಸರನ್ನು 2020ರ ಜೂನ್‌ 18 ರಂದು ಸೇರಿಸಲಾಗಿದ್ದು, ಇವರ ಮೇಲೆ ಪೊಲೀಸರು ಇನ್ನುಮುಂದೆ ನಿಗಾ ವಹಿಸಲಿದ್ದಾರೆ.

ಗೊರಖ್‌ಪುರ್ ಜಿಲ್ಲೆಯಲ್ಲಿ ಒಟ್ಟು 1,543 ರೌಡಿಶೀಟರ್‌ಗಳಿದ್ದಾರೆ. ಅವರ ಪಟ್ಟಿಯಲ್ಲಿ ಕಫೀಲ್‌ ಖಾನ್‌ ಕೂಡ ಸೇರಿದ್ದಾರೆ. ಕಳೆದ ಜೂನ್‌ನಲ್ಲಿಯೇ ಅವರನ್ನು ರೌಡಿಶೀಟರ್‌ ಎಂದು ಉಲ್ಲೇಖಿಸಲಾಗಿದ್ದು, ಈಗಷ್ಟೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಡಾ.ಕಫೀಲ್ ಖಾನ್‌ಗೆ ಅವರ ಹುದ್ದೆ ಹಿಂತಿರುಗಿಸಿ- ಯುಪಿ ಸರ್ಕಾರಕ್ಕೆ ಪತ್ರ ಬರೆದ ವೈದ್ಯಕೀಯ ಸಂಘ

“ಉತ್ತರ ಪ್ರದೇಶ ಸರಕಾರವು ನನ್ನನ್ನು ರೌಡಿ ಶೀಟರ್‌ಗಳ ಪಟ್ಟಿಯಲ್ಲಿ ಸೇರಿಸಿದೆ. ಜೀವನಪರ್ಯಂತ ನನ್ನ ಮೇಲೆ ನಿಗಾ ಇರಿಸುತ್ತಾರಂತೆ. ಅದು ಒಳ್ಳೆಯದೇ ಆಗಿದೆ. ದಿನದ 24 ಗಂಟೆಯೂ ನನ್ನ ಮೇಲೆ ನಿಗಾ ಇರಿಸಲು ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳನ್ನೂ ಒದಗಿಸಿ. ಇದರಿಂದ ಕನಿಷ್ಠ ಸುಳ್ಳು ಪ್ರಕರಣಗಳಿಂದ ನಾನು ತಪ್ಪಿಸಿಕೊಳ್ಳಲು ಸಾಧ್ಯವಾಗಬಹುದು” ಎಂದು ಕಫೀಲ್‌ ಖಾನ್ ಹೇಳಿದ್ದಾರೆ.

ಕ್ರಿಮಿನಲ್‌ಗಳ ಮೇಲೆ ನಿಗಾ ಇಡಲಾಗದ ಸರ್ಕಾರ, ಅಮಾಯಕರ ವಿರುದ್ದ ರೌಡಿ ಶೀಟ್‌ಗಳನ್ನು ದಾಖಲಿಸುತ್ತಿದೆ. ಇದು ಉತ್ತರ ಪ್ರದೇಶದ ಪರಿಸ್ಥಿತಿ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಪೌರತ್ವ ತಿದ್ದುಪಡಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅಲಿಗಡ್‌ ಮುಸ್ಲಿಂ ವಿವಿಯಲ್ಲಿ 2019 ಡಿ. 10 ರಂದು ಡಾ ಕಫೀಲ್‌ ಖಾನ್‌ ಅವರು ಭಾಷಣ ಮಾಡಿದ್ದರು. ಅವರ ಭಾಷಣವು ದ್ವೇಷ ಅಥವಾ ಹಿಂಸೆಗೆ ಪ್ರಚೋದನೆ ನೀಡುತ್ತದೆ ಎಂದು 2020ರ ಜನವರಿಯಲ್ಲಿ ಡಾ.ಖಾನ್ ಅವರನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯಡಿ ಪ್ರಕರಣವನ್ನು ದಾಖಲಿಸಲಾಗಿತ್ತು.

ಆದರೆ, ಪ್ರಕರಣದ ವಿಚಾರಣೆ ನಡೆಸಿದ್ದ ಅಲಹಾಬಾದ್‌ ಹೈಕೋರ್ಟ್‌, ಎನ್‌ಎಸ್‌ಎ ಅಡಿಯಲ್ಲಿ ಕಫೀಲ್‌ ಖಾನ್‌ ಅವರ ಬಂಧನವನ್ನು 2020ರ ಸೆಪ್ಟೆಂಬರ್‌ 1ರಂದು ರದ್ದುಗೊಳಿಸಿ, ಬಿಡುಗಡೆಗೊಳಿಸಿತ್ತು.


ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ದೇಶದಲ್ಲೀಗ ವೈದ್ಯರು ರೌಡಿ ಶಿಟರ್ಗಳಾಗುತ್ತಿದ್ದಾರೆ. ಇದರ ಮುಂದುವರಿದ ಬಾಗ, ರೌಡಿ ಶೀಟರ್ಗಳು ಡಾಕ್ಟರ್ ಗಳಾಗಬಹುದಾ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...