Homeಮುಖಪುಟರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು - ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

"ದಿನದ 24 ಗಂಟೆಯೂ ನನ್ನ ಮೇಲೆ ನಿಗಾಯಿರಿಸಲು ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳನ್ನೂ ಒದಗಿಸಿ. ಇದರಿಂದ ಕನಿಷ್ಠ್ಧ ಸುಳ್ಳು ಪ್ರಕರಣಗಳಿಂದ ನಾನು ತಪ್ಪಿಸಿಕೊಳ್ಳಲು ಸಾಧ್ಯವಾಗಬಹುದು"

- Advertisement -
- Advertisement -

ಸಿಎಎ ವಿರುದ್ಧ ಹೋರಾಟ ಮಾಡಿದ್ದ ಉತ್ತರಪ್ರದೇಶದ ವೈದ್ಯ ಡಾ. ಕಫೀಲ್‌ ಖಾನ್ ಅವರ ಹೆಸರನ್ನು ಗೋರಖ್‌ಪುರ ಜಿಲ್ಲೆಯ ಪೊಲೀಸರು ರೌಡಿಶೀಟರ್‌ ಪಟ್ಟಿಗೆ ಸೇರಿಸಿದ್ದಾರೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜೋಗೇಂದ್ರ ಕುಮಾರ್ ಅವರ ಸೂಚನೆಯ ಮೇರೆಗೆ ಕಫೀಲ್ ಖಾನ್ ಸೇರಿದಂತೆ ಇತರೆ 81 ಜನರ ಹೆಸರನ್ನು 2020ರ ಜೂನ್‌ 18 ರಂದು ಸೇರಿಸಲಾಗಿದ್ದು, ಇವರ ಮೇಲೆ ಪೊಲೀಸರು ಇನ್ನುಮುಂದೆ ನಿಗಾ ವಹಿಸಲಿದ್ದಾರೆ.

ಗೊರಖ್‌ಪುರ್ ಜಿಲ್ಲೆಯಲ್ಲಿ ಒಟ್ಟು 1,543 ರೌಡಿಶೀಟರ್‌ಗಳಿದ್ದಾರೆ. ಅವರ ಪಟ್ಟಿಯಲ್ಲಿ ಕಫೀಲ್‌ ಖಾನ್‌ ಕೂಡ ಸೇರಿದ್ದಾರೆ. ಕಳೆದ ಜೂನ್‌ನಲ್ಲಿಯೇ ಅವರನ್ನು ರೌಡಿಶೀಟರ್‌ ಎಂದು ಉಲ್ಲೇಖಿಸಲಾಗಿದ್ದು, ಈಗಷ್ಟೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಡಾ.ಕಫೀಲ್ ಖಾನ್‌ಗೆ ಅವರ ಹುದ್ದೆ ಹಿಂತಿರುಗಿಸಿ- ಯುಪಿ ಸರ್ಕಾರಕ್ಕೆ ಪತ್ರ ಬರೆದ ವೈದ್ಯಕೀಯ ಸಂಘ

“ಉತ್ತರ ಪ್ರದೇಶ ಸರಕಾರವು ನನ್ನನ್ನು ರೌಡಿ ಶೀಟರ್‌ಗಳ ಪಟ್ಟಿಯಲ್ಲಿ ಸೇರಿಸಿದೆ. ಜೀವನಪರ್ಯಂತ ನನ್ನ ಮೇಲೆ ನಿಗಾ ಇರಿಸುತ್ತಾರಂತೆ. ಅದು ಒಳ್ಳೆಯದೇ ಆಗಿದೆ. ದಿನದ 24 ಗಂಟೆಯೂ ನನ್ನ ಮೇಲೆ ನಿಗಾ ಇರಿಸಲು ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳನ್ನೂ ಒದಗಿಸಿ. ಇದರಿಂದ ಕನಿಷ್ಠ ಸುಳ್ಳು ಪ್ರಕರಣಗಳಿಂದ ನಾನು ತಪ್ಪಿಸಿಕೊಳ್ಳಲು ಸಾಧ್ಯವಾಗಬಹುದು” ಎಂದು ಕಫೀಲ್‌ ಖಾನ್ ಹೇಳಿದ್ದಾರೆ.

ಕ್ರಿಮಿನಲ್‌ಗಳ ಮೇಲೆ ನಿಗಾ ಇಡಲಾಗದ ಸರ್ಕಾರ, ಅಮಾಯಕರ ವಿರುದ್ದ ರೌಡಿ ಶೀಟ್‌ಗಳನ್ನು ದಾಖಲಿಸುತ್ತಿದೆ. ಇದು ಉತ್ತರ ಪ್ರದೇಶದ ಪರಿಸ್ಥಿತಿ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಪೌರತ್ವ ತಿದ್ದುಪಡಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅಲಿಗಡ್‌ ಮುಸ್ಲಿಂ ವಿವಿಯಲ್ಲಿ 2019 ಡಿ. 10 ರಂದು ಡಾ ಕಫೀಲ್‌ ಖಾನ್‌ ಅವರು ಭಾಷಣ ಮಾಡಿದ್ದರು. ಅವರ ಭಾಷಣವು ದ್ವೇಷ ಅಥವಾ ಹಿಂಸೆಗೆ ಪ್ರಚೋದನೆ ನೀಡುತ್ತದೆ ಎಂದು 2020ರ ಜನವರಿಯಲ್ಲಿ ಡಾ.ಖಾನ್ ಅವರನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯಡಿ ಪ್ರಕರಣವನ್ನು ದಾಖಲಿಸಲಾಗಿತ್ತು.

ಆದರೆ, ಪ್ರಕರಣದ ವಿಚಾರಣೆ ನಡೆಸಿದ್ದ ಅಲಹಾಬಾದ್‌ ಹೈಕೋರ್ಟ್‌, ಎನ್‌ಎಸ್‌ಎ ಅಡಿಯಲ್ಲಿ ಕಫೀಲ್‌ ಖಾನ್‌ ಅವರ ಬಂಧನವನ್ನು 2020ರ ಸೆಪ್ಟೆಂಬರ್‌ 1ರಂದು ರದ್ದುಗೊಳಿಸಿ, ಬಿಡುಗಡೆಗೊಳಿಸಿತ್ತು.


ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ದೇಶದಲ್ಲೀಗ ವೈದ್ಯರು ರೌಡಿ ಶಿಟರ್ಗಳಾಗುತ್ತಿದ್ದಾರೆ. ಇದರ ಮುಂದುವರಿದ ಬಾಗ, ರೌಡಿ ಶೀಟರ್ಗಳು ಡಾಕ್ಟರ್ ಗಳಾಗಬಹುದಾ?

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....