Homeಮುಖಪುಟರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು - ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

ರೌಡಿಶೀಟರ್ ಪಟ್ಟಿಯಲ್ಲಿ ಡಾ.ಕಫೀಲ್ ಖಾನ್ ಹೆಸರು – ಒಳ್ಳೆಯದೇ ಆಯ್ತು ಎಂದ ಕಫೀಲ್ ಖಾನ್!

"ದಿನದ 24 ಗಂಟೆಯೂ ನನ್ನ ಮೇಲೆ ನಿಗಾಯಿರಿಸಲು ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳನ್ನೂ ಒದಗಿಸಿ. ಇದರಿಂದ ಕನಿಷ್ಠ್ಧ ಸುಳ್ಳು ಪ್ರಕರಣಗಳಿಂದ ನಾನು ತಪ್ಪಿಸಿಕೊಳ್ಳಲು ಸಾಧ್ಯವಾಗಬಹುದು"

- Advertisement -
- Advertisement -

ಸಿಎಎ ವಿರುದ್ಧ ಹೋರಾಟ ಮಾಡಿದ್ದ ಉತ್ತರಪ್ರದೇಶದ ವೈದ್ಯ ಡಾ. ಕಫೀಲ್‌ ಖಾನ್ ಅವರ ಹೆಸರನ್ನು ಗೋರಖ್‌ಪುರ ಜಿಲ್ಲೆಯ ಪೊಲೀಸರು ರೌಡಿಶೀಟರ್‌ ಪಟ್ಟಿಗೆ ಸೇರಿಸಿದ್ದಾರೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜೋಗೇಂದ್ರ ಕುಮಾರ್ ಅವರ ಸೂಚನೆಯ ಮೇರೆಗೆ ಕಫೀಲ್ ಖಾನ್ ಸೇರಿದಂತೆ ಇತರೆ 81 ಜನರ ಹೆಸರನ್ನು 2020ರ ಜೂನ್‌ 18 ರಂದು ಸೇರಿಸಲಾಗಿದ್ದು, ಇವರ ಮೇಲೆ ಪೊಲೀಸರು ಇನ್ನುಮುಂದೆ ನಿಗಾ ವಹಿಸಲಿದ್ದಾರೆ.

ಗೊರಖ್‌ಪುರ್ ಜಿಲ್ಲೆಯಲ್ಲಿ ಒಟ್ಟು 1,543 ರೌಡಿಶೀಟರ್‌ಗಳಿದ್ದಾರೆ. ಅವರ ಪಟ್ಟಿಯಲ್ಲಿ ಕಫೀಲ್‌ ಖಾನ್‌ ಕೂಡ ಸೇರಿದ್ದಾರೆ. ಕಳೆದ ಜೂನ್‌ನಲ್ಲಿಯೇ ಅವರನ್ನು ರೌಡಿಶೀಟರ್‌ ಎಂದು ಉಲ್ಲೇಖಿಸಲಾಗಿದ್ದು, ಈಗಷ್ಟೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಡಾ.ಕಫೀಲ್ ಖಾನ್‌ಗೆ ಅವರ ಹುದ್ದೆ ಹಿಂತಿರುಗಿಸಿ- ಯುಪಿ ಸರ್ಕಾರಕ್ಕೆ ಪತ್ರ ಬರೆದ ವೈದ್ಯಕೀಯ ಸಂಘ

“ಉತ್ತರ ಪ್ರದೇಶ ಸರಕಾರವು ನನ್ನನ್ನು ರೌಡಿ ಶೀಟರ್‌ಗಳ ಪಟ್ಟಿಯಲ್ಲಿ ಸೇರಿಸಿದೆ. ಜೀವನಪರ್ಯಂತ ನನ್ನ ಮೇಲೆ ನಿಗಾ ಇರಿಸುತ್ತಾರಂತೆ. ಅದು ಒಳ್ಳೆಯದೇ ಆಗಿದೆ. ದಿನದ 24 ಗಂಟೆಯೂ ನನ್ನ ಮೇಲೆ ನಿಗಾ ಇರಿಸಲು ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳನ್ನೂ ಒದಗಿಸಿ. ಇದರಿಂದ ಕನಿಷ್ಠ ಸುಳ್ಳು ಪ್ರಕರಣಗಳಿಂದ ನಾನು ತಪ್ಪಿಸಿಕೊಳ್ಳಲು ಸಾಧ್ಯವಾಗಬಹುದು” ಎಂದು ಕಫೀಲ್‌ ಖಾನ್ ಹೇಳಿದ್ದಾರೆ.

ಕ್ರಿಮಿನಲ್‌ಗಳ ಮೇಲೆ ನಿಗಾ ಇಡಲಾಗದ ಸರ್ಕಾರ, ಅಮಾಯಕರ ವಿರುದ್ದ ರೌಡಿ ಶೀಟ್‌ಗಳನ್ನು ದಾಖಲಿಸುತ್ತಿದೆ. ಇದು ಉತ್ತರ ಪ್ರದೇಶದ ಪರಿಸ್ಥಿತಿ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಯೋಗಿ ಆದಿತ್ಯನಾಥ್ ವಿರುದ್ಧದ ಹೋರಾಟವನ್ನು ವಿಶ್ವಸಂಸ್ಥೆಗೆ ಕೊಂಡ್ಯೊಯ್ದ ಡಾ.ಕಫೀಲ್ ಖಾನ್!

ಪೌರತ್ವ ತಿದ್ದುಪಡಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅಲಿಗಡ್‌ ಮುಸ್ಲಿಂ ವಿವಿಯಲ್ಲಿ 2019 ಡಿ. 10 ರಂದು ಡಾ ಕಫೀಲ್‌ ಖಾನ್‌ ಅವರು ಭಾಷಣ ಮಾಡಿದ್ದರು. ಅವರ ಭಾಷಣವು ದ್ವೇಷ ಅಥವಾ ಹಿಂಸೆಗೆ ಪ್ರಚೋದನೆ ನೀಡುತ್ತದೆ ಎಂದು 2020ರ ಜನವರಿಯಲ್ಲಿ ಡಾ.ಖಾನ್ ಅವರನ್ನು ಬಂಧಿಸಲಾಗಿತ್ತು. ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ)ಯಡಿ ಪ್ರಕರಣವನ್ನು ದಾಖಲಿಸಲಾಗಿತ್ತು.

ಆದರೆ, ಪ್ರಕರಣದ ವಿಚಾರಣೆ ನಡೆಸಿದ್ದ ಅಲಹಾಬಾದ್‌ ಹೈಕೋರ್ಟ್‌, ಎನ್‌ಎಸ್‌ಎ ಅಡಿಯಲ್ಲಿ ಕಫೀಲ್‌ ಖಾನ್‌ ಅವರ ಬಂಧನವನ್ನು 2020ರ ಸೆಪ್ಟೆಂಬರ್‌ 1ರಂದು ರದ್ದುಗೊಳಿಸಿ, ಬಿಡುಗಡೆಗೊಳಿಸಿತ್ತು.


ಇದನ್ನೂ ಓದಿ: ತೋರಿಕೆಯ ದೇಶಭಕ್ತಿಗೂ ನಿಜವಾದ ದೇಶಭಕ್ತಿಗೂ ತುಂಬಾ ವ್ಯತ್ಯಾಸವಿದೆ – ಡಾ.ಕಫೀಲ್ ಖಾನ್ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಮ್ಮ ದೇಶದಲ್ಲೀಗ ವೈದ್ಯರು ರೌಡಿ ಶಿಟರ್ಗಳಾಗುತ್ತಿದ್ದಾರೆ. ಇದರ ಮುಂದುವರಿದ ಬಾಗ, ರೌಡಿ ಶೀಟರ್ಗಳು ಡಾಕ್ಟರ್ ಗಳಾಗಬಹುದಾ?

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...