Homeಮುಖಪುಟಹಿಂಗಿದ್ದ ನಮ್ಮ ರಾಮಣ್ಣ: ಭಾಗ-3; ನಿನ್ನ ಕತೆ ಕಾದಂಬರಿ, ಇವೇನು ಎಗ್ಸಾಮಿಗೆ ಬಂದವಾ?

ಹಿಂಗಿದ್ದ ನಮ್ಮ ರಾಮಣ್ಣ: ಭಾಗ-3; ನಿನ್ನ ಕತೆ ಕಾದಂಬರಿ, ಇವೇನು ಎಗ್ಸಾಮಿಗೆ ಬಂದವಾ?

- Advertisement -
- Advertisement -

ಆಗಿನ ಊರಬ್ಬಗಳು ಚನ್ನಾಗಿದ್ದೊ. ಹಬ್ಬ ಅಂದ ಕೂಡ್ಲೆ ಊರಿಗೆ ಓಡಿ ಬತ್ತಿದ್ದೊ. ಹಬ್ಬಕೆ ಅಂತ ಬಂದ ನಂಟ್ರನ್ಯಲ್ಲ ಮಾತಾಡಿಸಿ ಮೈಸೂರಲ್ಲಿ ಡಾಗುಟ್ರಾಗ್ತಾ ಅವುನೆ ಅಂತ ಅವುರಿವುರಿಂದ ಹೊಗಳಿಸಿಕಂಡು ಬರದು ಅಂದ್ರೆ ಭಾಳ ಖುಷಿಯಾಗದು. ಬರುವಾಗ ಹಬ್ಬದ ತಿಂಡಿನ್ಯಲ್ಲ ಗಂಟುಕಟ್ಟಿ ಕಳುಸರು. ನಾನು ತಂದ ಗಂಟ ರಾಮಣ್ಣ ನರಿ, ಕೋಳಿ ನೋಡಿದಂಗೆ ನೋಡಿ ಲಲ್ಲಲ್ಲಾ ಲಲ್ಲಲ್ಲಾ ಅಂತ ನಾಲಗೆಲೆ ಹಾಡೇಳನು. ಅವುನಿಗೆ ಖುಷಿಯಾದಾಗ ಲಿರಿಕ್ ಇಲ್ಲದ ಹಾಡು ಬರುವು. ಅದು ಬರಿ ಲಲ್ಲಲ್ಲಾ ಅಂತ. ನಾನದನ್ನ ನೆಗ್ಲೆಟ್ ಮಾಡಿದ್ರೆ, “ಅದೇನ್ಲ ಗಂಟು ಬಿಚ್ಚಲಾ, ವಬ್ನೆ ತಿನ್ನಕ್ಕೆ ಮಡಿಕಂಡಿದ್ದಿಯಾ” ಅನ್ನನು. ಆಗ ನಾನು, “ನಾನೂ ಹಂಚಿ ತಿನ್ನೋನು ಕನೊ, ವಬ್ನೆ ಯಾವತ್ತಾರ ತಿಂದಿದ್ದಿನಾ, ಗಂಟು ಬಿಚ್ಚಗಂಟ ವಸಿ ತಡಕೊ, ಅಂಗೆ ಬೊಬ್ಬೆ ವಾತನಂಗಾಡಬ್ಯಾಡ” ಅಂತಿದ್ದೆ.

“ಸುಮ್ಮನಂಗಂದೆ ಕಲ, ಆಟೊಂತರ ವಬ್ನೆ ತಿನ್ನಕೋದಿಯಾ. ನಿಮ್ಮ ಕಡೆ ಕರ್ಜಿಕಾಯಿ, ಚಿಕ್ಕಿನುಂಡೆ, ವಡಕಜ್ಜಾಯ ಚನ್ನಾಗಿರತವೆ ಕಲ. ವಯಿಸಾದೆಂಗೆಸರ ಕೈಯೇ ಚಂದ ಕಲ. ಹದ ಹಿಡಿದಿರತವೆ; ಅವುರು ಯಡಗೈಲಿ ಉಪ್ಪಾಕಿದ್ರೂ ಕರಟ್ಟಾಗಾಕ್ತರೆ. ವಡೆ ಅಗಿತ ಅಗಿತ ರುಚಿ ಬತ್ತವೆ.” ಅಂತ ನಮ್ಮಳ್ಳಿ ಹೆಂಗಸರ ಹೊಗಳೋನು. ಊರಿನಿಂದ ಏನಾರ ಬಾಡಿನೆಸರು ಕಳಿಸಿದ್ರೆ, “ಇರ್‍ಲ ವಸಿಯ, ಇಲ್ಲೆ ಬಂದೆ” ಅಂತ ಒಂದೇ ಉಸುರಿಗೋಡೋಗಿ ತ್ರಿಬಲ್ಲೆಕ್ಸ್ ರಂ ತರೋನು. ಅದೇನಾಗ ಐದು ರೂಪಾಯಿಗೊಂದು ಸೀಸ ಸಿಗದು. ಅದ ತಂದು ಮಟ್ಟವಾಗಿ ಕೂತಗಂಡು ಭಾಳ ಸ್ಟೈಲಾಗಿ ಜಾದೂ ಮಾಡೋನಂಗೆ ಮುಚ್ಚಳ ತಗದು ಗ್ಲಾಸಿಗುಯ್ಕಂಡು ಕುಡಿವಾಗ ನನ್ನ ಕಡಿಗೆ ಕಣ್ಣು ಬುಡೋನು. ಮದ್ಲೆ ಅವುನವು ಕೆಂಪುಕಣ್ಣು. ಯಣ್ಣೆ ಹೀರತ ಸುಖಪಡೊ ಭಂಗಿಯ ಈಗ್ಲು ಮರಿಯಂಗಿಲ್ಲ. ಅಮ್ಯಾಲೆ ಬಾಡಿನಿಲಕ ತಗದು ಬಾಯಿಗೆಸಗಳನು, ಅಂಗೆ ಅಣ್ಣೆಕಲ್ಯಸದಂಗೆ ಗುರಿಯಿಟ್ಟು ಅಂಗಳಿಗೆ ತಾಕಂಗೆ ಯಸಿಯನು. ಬಾಡಿನೆಸರು ಅಂದ್ರು ಸಾಕು ಮರಿಯನಂಗೆಯ. ನಮ್ಮ ಜನಗಳ ಆಗಿನಿಂದ್ಲೂ ನೋಡಿದ್ದಿನಿ, ವಡೆ ಪಯಸದ ಊಟ ಅಂದ್ರೆ ಅಂಗಾಡದಿಲ್ಲ. ಅಲ್ಲಿ ಯಾವ ಜಗಳನೂ ಇರದಿಲ್ಲ. ಅದೇ ಬಾಡಿನೆಸರು ಮಾಡಿದ ಪಾಸಾಲೆನೆ ಪ್ರಕ್ಷುಬ್ದವಾಗಿರತದೆ. ಈಗಂತು ಅಂತ ಜಾಗಕ್ಕೆ ಹೋಗಕ್ಕೆ ಭಯಾಯ್ತದೆ. ಬಾಡಿನೆಸರೂಟಕ್ಕೆ ಜನ ತಯಾರಾಗಿ ಬಂದಿರತರೆ. ರಾಮಣ್ಣಂಗೆ ಆಗಾಗ್ಗೆ ಬಾಡಿನೆಸರು ಮೆಸ್‌ಗೋಗಬೇಕು ಅನ್ಸದು. ಆಗ ನನ್ನ ಕರದು “ಬಾಲ ಬಾಯಿಕೆಟ್ಟದೆ ಹೋಗಮು” ಅನ್ನೋನು.

ರಾಮಣ್ಣ ಮೆಡಿಕಲ್ ಪುಸ್ತಕ ಓದದಕಿಂತ ಕತೆ ಕಾದಂಬರಿ ಓದೊನು. ಅವುನು ಮೆಡಿಕಲ್ ಓದಕ್ಕೆ ಅಂತ ಬಂದಿರಂಗೆ ಕಾಣ್ತಾಯಿರಲಿಲ್ಲ. ಅವುನು ಸುತ್ತ ಬ್ಯಾರೆ ಪುಸ್ತಕನೆ ಇರವು. ಹೊಸಹೊಸ ಪುಸ್ತಕ ತಂದು. ಮುಗಿಯೊವರಿಗೂ ಬುಡ್ತಿರಲಿಲ್ಲ. ಇದ ನೋಡಿದ ನಾವು “ಅದೇನು ಓದ್ತಿಯೋ, ಮೊದಲು ಸಬ್‌ಜೆಕ್ಟೋದು, ಅಮ್ಯಾಲೆ ನಿನ್ನ ಕತೆ ಕಾದಂಬರಿ, ಇವೇನು ಎಗ್ಸಾಮಿಗೆ ಬಂದವಾ” ಅಂದೆ, ಅವುನಿಗೆ ಸಿಟ್ಟು ಬಂದು, “ಅದೇನು ಕೇಮಿದ್ರ ಕೆಯಿಲ, ನಿನಿಗೇನು ಗೊತ್ತಾದತೂ ಸಾಯಿತ್ಯ ಅಂತಿದ್ದ.

“ಮದ್ಲು ಸಬ್‌ಜೆಕ್ಟು ಆಮ್ಯಾಲೆ ಸಾಹಿತ್ಯ ಕಣೊ” ಅಂದ್ರೆ “ಅಮಿಕ್ಕಂಡು ಕುತಗಳ್ಳ, ನಾನೀಗ ಚಂಬಲ್ ಕಣಿವೆ ಮಂಗಳ್ ಸಿಂಗ್ ಒತ್ತಾಯಿದ್ದಿನಿ ಕಲ. ಈ ನಮ್ಮ ವಿದ್ವಾಂಸರು ಕತೆ ಕಾದಂಬರಿ ತರನೆ ಸಬ್‌ಜಕ್ಟ್ ಬುಕ್ಕುನೂ ಬರದಿದ್ರೆ ಎಷ್ಟು ಚನ್ನಾಗಿರದ್ಲ” ಅಂದ.

“ಏನೋತ್ತಾಯಿದ್ದಿ ನೀನು?”

“ಹೇಳ್ಳಿಲವೇನ್ಲ ಚಂಬಲ್ ಕಣಿವೆ ಮಂಗಳ್ ಸಿಂಗ್ ಒತ್ತಾಯಿದ್ದಿನಿ. ಅವುನಕ್ಕನ್ ಏನ್ ಜನರಯ್ಯ ಅವುರು”.

“ಸರಿಯಪ್ಪ ಅದರ್‍ವಳಿಕೆನಿನ್ನ ಮೆಡಿಕಲ್ ಯಂಗೆ ಸೇರಸಮ?”

“ವಿಜ್ಞಾನ ಓದಿದೋನು ಸಾಯಿತಿಯಾದ್ರೆ ಬರಿಬವುದು ಕಲ” ಅಂದ.

“ಆಯ್ತು ನೀನೆ ಅಂತ ವಿಜ್ಞಾನದ ಸಾಯಿತಿ ಯಾರಾಗಬಾರದು” ಅಂದೆ.

“ಸುಮ್ಮನೆ ನಿಂದೇನದೆ ಅದ ಓದ್‌ಕಲ” ಅಂದ.

ರಾಮಣ್ಣ ಯಂತ ಗಿರಾಕಿ ಅಂದ್ರೇ, ಅವುನ ಸಬ್‌ಜೆಕ್ಟ್‌ನ ನನ್ನ ಕೈಲಿ ಜೋರಾಗಿ ಓದಕ್ಕೆ ಕೊಟ್ಟು ಸುಮ್ಮನೆ ಜಂತಿಗೆ ಕಣ್ಣು ಬುಟುಗಂಡು ನೋಡನು. ಅಮ್ಯಾಲೆ ನನ್ನ ಓದಿನ ಯಥಾವತ್ ಪದ ಬಳಸಿ ಬರಿತಿದ್ದ. ಕೇಳಿದ್ದನ್ನ ನ್ಯಾಪಗ ಇಟ್ಗಳದ್ರಲ್ಲಿ ನಿಸ್ಸೀಮ ಅವುನು. ಆದ್ರು ಪೇಲಾಗೋನು.

“ಸರಿಯಪ್ಪ ಇಷ್ಟು ಬುದ್ದಿವಂತ ಅದ್ಯಾಕ್ ಪೇಲಾಯ್ತೀ” ಅಂದ್ರೆ, “ಅದೇ ಕಲ ನನಿಗೂ ಆಶ್ಚರ್ಯ” ಅನ್ನೋನು. ಆದರೆ ನಿಜವಾಗಿ ಅವುನು ಪ್ರಾಕ್ಟಿಕಲ್‌ನಲ್ಲಿ ಡಲ್ಲಾಗಿದ್ದ. ಯಾಕಂದ್ರೆ ಪ್ರಾಕ್ಟಿಕಲ್ ಚಕ್ಕರ್ ಹೊಡದು ಊರಿಗೋಗಿಬುಡತಿದ್ದ. ಆಗ ಊರು ಅಂಗೇ ಇರತಿದ್ದೊ. ಅಲ್ಲಿನ ಬಾಂಧವ್ಯ ಸಮಂಧಿಕರ ಮಾತುಕತೆಯಿಂದ ಮನಸ್ಸು ತಣದಮ್ಯಾಲೆ ಮೈಸೂರಿಗೆ ಬರೋನು. ಈ ಸಮಂಧಕಿಂತ ಅವುನಿಗೆ ಪ್ರಾಕ್ಟಿಕಲ್ ಮುಖ್ಯ ಅನ್ನಸತಿರಲಿಲ್ಲ. ಆದ್ರೆ ಮೆಡಿಕಲ್ಲಲ್ಲಿ ಅದು ಬಹಳ ಮುಖ್ಯ. ಬೆಡ್ಡಲ್ಲಿರೊ ಪೇಷಂಟ್ ಮುಂಖಾಂತರ ಕಲಿಯೋದು ಬಹಳ ಮುಖ್ಯ. ಒಂಥರ ಅಕ್ಕಸಾಲಿಗ ಒಡವೆ ಹಿಡಕಂಡು ಉಜ್ಜತನೆ ನೋಡು, ಅಂಗೆ ಬೆಡ್ಡಲ್ಲಿರೊ ಪೇಷಂಟ್ ತಪಾಸಣೆ ಬಹಳ ಮುಖ್ಯ. ಆದ್ರಿಂದ ರಜ ಸಿಕ್ಕಿದೇಟಿಗೆ ಊರಿಗೋಗೊ ರಾಮಣ್ಣ ಪ್ರಾಕ್ಟಿಕಲಲ್ಲಿ ಡಲ್ಲಾಗಿದ್ದ. ಒಂದು ವೇಳೆ ಅವುನು ಊರಿಗೋಡೋಗದು, ಕತೆ ಬರಿಯ ಶ್ರಮನ್ಯಲ್ಲ ಇಲ್ಲಾಕಿದ್ರೆ ನಮ್ಮನ್ಯಲ್ಲ ಮೀರಿ ಒಳ್ಳೆ ಡಾಕ್ಟರಾಗೋನು.

“ಅಂಗಾಗಿದ್ರೆ ಕನ್ನಡಕ್ಕೆ ಒಬ್ಬ ಒಳ್ಳೆ ಕತೆಗಾರ ಸಿಗತಿರಲಿಲ್ಲ ಕಣಣ್ಣ. ಈ ನಾಡಲ್ಲಿ ಬೇಕಾದಷ್ಟು ಜನ ಡಾಕ್ಟರವುರೆ. ಆದ್ರೆ ಕನ್ನಡ ಸಾಹಿತ್ಯದಲ್ಲಿ ರಾಮಣ್ಣನಂತ ಕತೆಗಾರ ಇದ್ದುದ್ದು ಅವುನೊಬ್ಬನೆ. ಅದೂ ಯಂಥಾ ಕಾಲದಲ್ಲಿ ಅಂತೀ. ಅವುನು ಬರಿತಿದ್ದ ಕಾಲದಲ್ಲಿ ಕನ್ನಡದ ಮುಖ್ಯ ಕತೆಗಾರರೆಲ್ಲ ನವ್ಯ ಸಂವೇದನೆ ಮೈಮ್ಯಾಲ್ಯಳಕಂಡು ವಿಮರ್ಶಕರ ಮುಖಾಂತರ ನಮಗೆ ಅರ್ಥವಾಗದಂಗೆ ಕತೆ ಬರಿತಿದ್ರು. ಆದ್ರೆ ರಾಮಣ್ಣ ಈ ನ್ಯಲಕ್ಕೆ ನಿಷ್ಟನಾಗಿ ಬರದು ನೇರವಾಗಿ ನಮ್ಮ ಹೃದಯನ ತಟ್ಟೋನು. ಮನ ಮುಟ್ಟಂಗೆ ಬರತಿದ್ದ. ನಮಿಗ್ಯಲ್ಲ ಬರಿಯದ ಕಲಿಸಿದೋನೆ ಅವುನು. ಒಂದು ಕತೆಯಂತೂ ಇವತ್ನೋಡಿದ್ರು ನಮ್ಮನ್ನು ಅಲ್ಲಾಡಿಸಿಬುಡ್ತದೆ ಕಣಣ್ಣ, ಗಾಂಧಿ ಕತೆ ಓದಿದ್ದಿಯಾ. ಅದರಲ್ಲಿ ಗಾಂಧಿ ಹೆಸರಿನ ಹುಡುಗನ್ನ ಉಳಿಸಗಳಕ್ಕಾಗದಿಲ್ಲ. ಕರಿಸಿದ್ದೇಗೌಡ ದನನೊ ಅಥವಾ ಮರನೋ ಮಾರಿ ದುಡ್ಡು ತತ್ತನೆ. ಅಷ್ಟ್ರಲ್ಲಿ ಗಾಂಧಿ ಅವ್ವ ಅಳತಾ ಬಾಗಲಲ್ಲಿ ನಿಂತಿರತಳೆ. ಕರಿಸಿದ್ದೇಗೌಡ ಬಂದು ’ಜೀವ ಯಾವಾಗೊಯ್ತು’ ಅಂತನೆ. ಅಳನೆ ಅವಳುತ್ತರವಾಯ್ತದೆ. ಆಗ ಕರಿಸಿದ್ದೇಗೌಡ, ’ಮನುಸ್ರು ಸಾಯ್ದೆ ಕಲ್ಲು ಸತ್ತವಾ ಸುಮ್ನಿರು’ ಅಂತ ಗಾಂಧಿ ಶವ ತಗಳಕ್ಕೆ ಅಂತ ಡಾಕ್ಟರು ಕೇಳಕ್ಕೋಯ್ತನೆ. ರಾಮಣ್ಣ ಬರದ ಈ ಸಾಲು ಕನ್ನಡ ಸಾಹಿತ್ಯನೆ ಆಳ್ಳಾಡಿಸಿಬುಡ್ತು ಕಣಣ್ಣ.”

“ನಿಜ ರಾಮಣ್ಣನ ಕತೆಗಳು ಓದುಗರ ಮನಸ ಮುಟ್ಟಿದ್ಕೆ ಅಲವೆ ಅವುನು ವಳ್ಳೆ ಕತೆಗಾರ ಅನ್ನಿಸಿಗಂಡಿದ್ದು.”

“ರಾಮಣ್ಣ ನಮ್ಮ ಏರಿಯಾದ ಭಾಷೆನ ಯಾವುದೆ ಸಂಕೋಚವಿಲ್ಲದೆ ಬಳಸಿದ. ಲೇ ಆ ಕರ ಹಿಡಿಕಂಡೋಗಿ ಬಿತ್ತ ಕೆಚ್ಚಿಸಿಗಂಡು ಬಾರ್ಲ. ಸಿಕ್ಕಿದ ಹಸಿನ ಮ್ಯಾಲ್ಯಲ್ಲ ನ್ಯಗಿತದೆ” ಅಂತ ರಾಮಣ್ಣ ಬರದಿದ್ರಿಂದ ನಾವ್ಯಲ್ಲ ನಮ್ಮೂರ ಭಾಷೆ ಬಳಸಕ್ಕೆ ಧೈರ್ಯ ಮಾಡಿದ್ದು.”

“ಅಂತ ಮಾತು ಅವುನ ಕತೆಲಿ ತುಂಬಾ ಬತ್ತವೆ. ಆಲನಹಳ್ಳಿ ಕೃಷ್ಣ ಹಳ್ಳಿ ಕತೆ ಬರುದ್ರು, ರಾಮಣ್ಣನೇ ಬ್ಯಾರೆ ತರ ಬರಿಯೋನು. ಅವುನ ಕತೆ ಜನಪ್ರಗತಿಲೊ ಮಯೂರದಲ್ಲೊ ಪ್ರಜಾವಾಣಿಲೋ ಬಂದ್ರೆ ಅದೇ ಒಂದು ಸುದ್ದಿಯಾಗದು ಆ ಟೈಮಲ್ಲಿ. ಆಲನಹಳ್ಳಿ ’ಏನ್ಲ ರಾಮಣ್ಣ ಯಂಗಿದ್ದಿಲ’ ಅಂತ ಬಂದುಬುಡೋನು. ಅವುನು ಬಂದೇಟಿಗೆ ವಾಕ್ ಮಾಡೋರು. ನನಿಗೆ ರಾಮಣ್ಣ, ’ಹೋಗ್ಲಾ ಒಂದು ಮೂರು ಕಾಳು ಚೌಚೌ ತಗಂಬಾಲ ಅನ್ನೋನು’. ನಾನು ಹೋಗಿ ಕತೆಗಾರರಿಗೆ ಚೌಚೌ ಕಟ್ಟಿಸಿಗಂಡು ಬರಿವೆ”.

ಹೇಳ್ದವ್ರು: ಡಾ. ಕಮಲಾಕ್ಷಣ್ಣ
ಬರ್ಕಂಡವ್ರು: ಬಿ ಚಂದ್ರೇಗೌಡ


ಇದನ್ನೂ ಓದಿ: ಹಿಂಗಿದ್ದ ನಮ್ಮ ರಾಮಣ್ಣ-2; ಮಂಡ್ಯಜಿಲ್ಲೆ ಒರಟುತನ ಇಲವಲ್ಲಾ, ಇಷ್ಟು ನಯವಂತಿಕೆ ಯಂಗೆ ಬತ್ತೂ ಅನ್ನಕಂಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...