Homeಮುಖಪುಟಹಿಂಗಿದ್ದ ನಮ್ಮ ರಾಮಣ್ಣ: ಭಾಗ-3; ನಿನ್ನ ಕತೆ ಕಾದಂಬರಿ, ಇವೇನು ಎಗ್ಸಾಮಿಗೆ ಬಂದವಾ?

ಹಿಂಗಿದ್ದ ನಮ್ಮ ರಾಮಣ್ಣ: ಭಾಗ-3; ನಿನ್ನ ಕತೆ ಕಾದಂಬರಿ, ಇವೇನು ಎಗ್ಸಾಮಿಗೆ ಬಂದವಾ?

- Advertisement -
- Advertisement -

ಆಗಿನ ಊರಬ್ಬಗಳು ಚನ್ನಾಗಿದ್ದೊ. ಹಬ್ಬ ಅಂದ ಕೂಡ್ಲೆ ಊರಿಗೆ ಓಡಿ ಬತ್ತಿದ್ದೊ. ಹಬ್ಬಕೆ ಅಂತ ಬಂದ ನಂಟ್ರನ್ಯಲ್ಲ ಮಾತಾಡಿಸಿ ಮೈಸೂರಲ್ಲಿ ಡಾಗುಟ್ರಾಗ್ತಾ ಅವುನೆ ಅಂತ ಅವುರಿವುರಿಂದ ಹೊಗಳಿಸಿಕಂಡು ಬರದು ಅಂದ್ರೆ ಭಾಳ ಖುಷಿಯಾಗದು. ಬರುವಾಗ ಹಬ್ಬದ ತಿಂಡಿನ್ಯಲ್ಲ ಗಂಟುಕಟ್ಟಿ ಕಳುಸರು. ನಾನು ತಂದ ಗಂಟ ರಾಮಣ್ಣ ನರಿ, ಕೋಳಿ ನೋಡಿದಂಗೆ ನೋಡಿ ಲಲ್ಲಲ್ಲಾ ಲಲ್ಲಲ್ಲಾ ಅಂತ ನಾಲಗೆಲೆ ಹಾಡೇಳನು. ಅವುನಿಗೆ ಖುಷಿಯಾದಾಗ ಲಿರಿಕ್ ಇಲ್ಲದ ಹಾಡು ಬರುವು. ಅದು ಬರಿ ಲಲ್ಲಲ್ಲಾ ಅಂತ. ನಾನದನ್ನ ನೆಗ್ಲೆಟ್ ಮಾಡಿದ್ರೆ, “ಅದೇನ್ಲ ಗಂಟು ಬಿಚ್ಚಲಾ, ವಬ್ನೆ ತಿನ್ನಕ್ಕೆ ಮಡಿಕಂಡಿದ್ದಿಯಾ” ಅನ್ನನು. ಆಗ ನಾನು, “ನಾನೂ ಹಂಚಿ ತಿನ್ನೋನು ಕನೊ, ವಬ್ನೆ ಯಾವತ್ತಾರ ತಿಂದಿದ್ದಿನಾ, ಗಂಟು ಬಿಚ್ಚಗಂಟ ವಸಿ ತಡಕೊ, ಅಂಗೆ ಬೊಬ್ಬೆ ವಾತನಂಗಾಡಬ್ಯಾಡ” ಅಂತಿದ್ದೆ.

“ಸುಮ್ಮನಂಗಂದೆ ಕಲ, ಆಟೊಂತರ ವಬ್ನೆ ತಿನ್ನಕೋದಿಯಾ. ನಿಮ್ಮ ಕಡೆ ಕರ್ಜಿಕಾಯಿ, ಚಿಕ್ಕಿನುಂಡೆ, ವಡಕಜ್ಜಾಯ ಚನ್ನಾಗಿರತವೆ ಕಲ. ವಯಿಸಾದೆಂಗೆಸರ ಕೈಯೇ ಚಂದ ಕಲ. ಹದ ಹಿಡಿದಿರತವೆ; ಅವುರು ಯಡಗೈಲಿ ಉಪ್ಪಾಕಿದ್ರೂ ಕರಟ್ಟಾಗಾಕ್ತರೆ. ವಡೆ ಅಗಿತ ಅಗಿತ ರುಚಿ ಬತ್ತವೆ.” ಅಂತ ನಮ್ಮಳ್ಳಿ ಹೆಂಗಸರ ಹೊಗಳೋನು. ಊರಿನಿಂದ ಏನಾರ ಬಾಡಿನೆಸರು ಕಳಿಸಿದ್ರೆ, “ಇರ್‍ಲ ವಸಿಯ, ಇಲ್ಲೆ ಬಂದೆ” ಅಂತ ಒಂದೇ ಉಸುರಿಗೋಡೋಗಿ ತ್ರಿಬಲ್ಲೆಕ್ಸ್ ರಂ ತರೋನು. ಅದೇನಾಗ ಐದು ರೂಪಾಯಿಗೊಂದು ಸೀಸ ಸಿಗದು. ಅದ ತಂದು ಮಟ್ಟವಾಗಿ ಕೂತಗಂಡು ಭಾಳ ಸ್ಟೈಲಾಗಿ ಜಾದೂ ಮಾಡೋನಂಗೆ ಮುಚ್ಚಳ ತಗದು ಗ್ಲಾಸಿಗುಯ್ಕಂಡು ಕುಡಿವಾಗ ನನ್ನ ಕಡಿಗೆ ಕಣ್ಣು ಬುಡೋನು. ಮದ್ಲೆ ಅವುನವು ಕೆಂಪುಕಣ್ಣು. ಯಣ್ಣೆ ಹೀರತ ಸುಖಪಡೊ ಭಂಗಿಯ ಈಗ್ಲು ಮರಿಯಂಗಿಲ್ಲ. ಅಮ್ಯಾಲೆ ಬಾಡಿನಿಲಕ ತಗದು ಬಾಯಿಗೆಸಗಳನು, ಅಂಗೆ ಅಣ್ಣೆಕಲ್ಯಸದಂಗೆ ಗುರಿಯಿಟ್ಟು ಅಂಗಳಿಗೆ ತಾಕಂಗೆ ಯಸಿಯನು. ಬಾಡಿನೆಸರು ಅಂದ್ರು ಸಾಕು ಮರಿಯನಂಗೆಯ. ನಮ್ಮ ಜನಗಳ ಆಗಿನಿಂದ್ಲೂ ನೋಡಿದ್ದಿನಿ, ವಡೆ ಪಯಸದ ಊಟ ಅಂದ್ರೆ ಅಂಗಾಡದಿಲ್ಲ. ಅಲ್ಲಿ ಯಾವ ಜಗಳನೂ ಇರದಿಲ್ಲ. ಅದೇ ಬಾಡಿನೆಸರು ಮಾಡಿದ ಪಾಸಾಲೆನೆ ಪ್ರಕ್ಷುಬ್ದವಾಗಿರತದೆ. ಈಗಂತು ಅಂತ ಜಾಗಕ್ಕೆ ಹೋಗಕ್ಕೆ ಭಯಾಯ್ತದೆ. ಬಾಡಿನೆಸರೂಟಕ್ಕೆ ಜನ ತಯಾರಾಗಿ ಬಂದಿರತರೆ. ರಾಮಣ್ಣಂಗೆ ಆಗಾಗ್ಗೆ ಬಾಡಿನೆಸರು ಮೆಸ್‌ಗೋಗಬೇಕು ಅನ್ಸದು. ಆಗ ನನ್ನ ಕರದು “ಬಾಲ ಬಾಯಿಕೆಟ್ಟದೆ ಹೋಗಮು” ಅನ್ನೋನು.

ರಾಮಣ್ಣ ಮೆಡಿಕಲ್ ಪುಸ್ತಕ ಓದದಕಿಂತ ಕತೆ ಕಾದಂಬರಿ ಓದೊನು. ಅವುನು ಮೆಡಿಕಲ್ ಓದಕ್ಕೆ ಅಂತ ಬಂದಿರಂಗೆ ಕಾಣ್ತಾಯಿರಲಿಲ್ಲ. ಅವುನು ಸುತ್ತ ಬ್ಯಾರೆ ಪುಸ್ತಕನೆ ಇರವು. ಹೊಸಹೊಸ ಪುಸ್ತಕ ತಂದು. ಮುಗಿಯೊವರಿಗೂ ಬುಡ್ತಿರಲಿಲ್ಲ. ಇದ ನೋಡಿದ ನಾವು “ಅದೇನು ಓದ್ತಿಯೋ, ಮೊದಲು ಸಬ್‌ಜೆಕ್ಟೋದು, ಅಮ್ಯಾಲೆ ನಿನ್ನ ಕತೆ ಕಾದಂಬರಿ, ಇವೇನು ಎಗ್ಸಾಮಿಗೆ ಬಂದವಾ” ಅಂದೆ, ಅವುನಿಗೆ ಸಿಟ್ಟು ಬಂದು, “ಅದೇನು ಕೇಮಿದ್ರ ಕೆಯಿಲ, ನಿನಿಗೇನು ಗೊತ್ತಾದತೂ ಸಾಯಿತ್ಯ ಅಂತಿದ್ದ.

“ಮದ್ಲು ಸಬ್‌ಜೆಕ್ಟು ಆಮ್ಯಾಲೆ ಸಾಹಿತ್ಯ ಕಣೊ” ಅಂದ್ರೆ “ಅಮಿಕ್ಕಂಡು ಕುತಗಳ್ಳ, ನಾನೀಗ ಚಂಬಲ್ ಕಣಿವೆ ಮಂಗಳ್ ಸಿಂಗ್ ಒತ್ತಾಯಿದ್ದಿನಿ ಕಲ. ಈ ನಮ್ಮ ವಿದ್ವಾಂಸರು ಕತೆ ಕಾದಂಬರಿ ತರನೆ ಸಬ್‌ಜಕ್ಟ್ ಬುಕ್ಕುನೂ ಬರದಿದ್ರೆ ಎಷ್ಟು ಚನ್ನಾಗಿರದ್ಲ” ಅಂದ.

“ಏನೋತ್ತಾಯಿದ್ದಿ ನೀನು?”

“ಹೇಳ್ಳಿಲವೇನ್ಲ ಚಂಬಲ್ ಕಣಿವೆ ಮಂಗಳ್ ಸಿಂಗ್ ಒತ್ತಾಯಿದ್ದಿನಿ. ಅವುನಕ್ಕನ್ ಏನ್ ಜನರಯ್ಯ ಅವುರು”.

“ಸರಿಯಪ್ಪ ಅದರ್‍ವಳಿಕೆನಿನ್ನ ಮೆಡಿಕಲ್ ಯಂಗೆ ಸೇರಸಮ?”

“ವಿಜ್ಞಾನ ಓದಿದೋನು ಸಾಯಿತಿಯಾದ್ರೆ ಬರಿಬವುದು ಕಲ” ಅಂದ.

“ಆಯ್ತು ನೀನೆ ಅಂತ ವಿಜ್ಞಾನದ ಸಾಯಿತಿ ಯಾರಾಗಬಾರದು” ಅಂದೆ.

“ಸುಮ್ಮನೆ ನಿಂದೇನದೆ ಅದ ಓದ್‌ಕಲ” ಅಂದ.

ರಾಮಣ್ಣ ಯಂತ ಗಿರಾಕಿ ಅಂದ್ರೇ, ಅವುನ ಸಬ್‌ಜೆಕ್ಟ್‌ನ ನನ್ನ ಕೈಲಿ ಜೋರಾಗಿ ಓದಕ್ಕೆ ಕೊಟ್ಟು ಸುಮ್ಮನೆ ಜಂತಿಗೆ ಕಣ್ಣು ಬುಟುಗಂಡು ನೋಡನು. ಅಮ್ಯಾಲೆ ನನ್ನ ಓದಿನ ಯಥಾವತ್ ಪದ ಬಳಸಿ ಬರಿತಿದ್ದ. ಕೇಳಿದ್ದನ್ನ ನ್ಯಾಪಗ ಇಟ್ಗಳದ್ರಲ್ಲಿ ನಿಸ್ಸೀಮ ಅವುನು. ಆದ್ರು ಪೇಲಾಗೋನು.

“ಸರಿಯಪ್ಪ ಇಷ್ಟು ಬುದ್ದಿವಂತ ಅದ್ಯಾಕ್ ಪೇಲಾಯ್ತೀ” ಅಂದ್ರೆ, “ಅದೇ ಕಲ ನನಿಗೂ ಆಶ್ಚರ್ಯ” ಅನ್ನೋನು. ಆದರೆ ನಿಜವಾಗಿ ಅವುನು ಪ್ರಾಕ್ಟಿಕಲ್‌ನಲ್ಲಿ ಡಲ್ಲಾಗಿದ್ದ. ಯಾಕಂದ್ರೆ ಪ್ರಾಕ್ಟಿಕಲ್ ಚಕ್ಕರ್ ಹೊಡದು ಊರಿಗೋಗಿಬುಡತಿದ್ದ. ಆಗ ಊರು ಅಂಗೇ ಇರತಿದ್ದೊ. ಅಲ್ಲಿನ ಬಾಂಧವ್ಯ ಸಮಂಧಿಕರ ಮಾತುಕತೆಯಿಂದ ಮನಸ್ಸು ತಣದಮ್ಯಾಲೆ ಮೈಸೂರಿಗೆ ಬರೋನು. ಈ ಸಮಂಧಕಿಂತ ಅವುನಿಗೆ ಪ್ರಾಕ್ಟಿಕಲ್ ಮುಖ್ಯ ಅನ್ನಸತಿರಲಿಲ್ಲ. ಆದ್ರೆ ಮೆಡಿಕಲ್ಲಲ್ಲಿ ಅದು ಬಹಳ ಮುಖ್ಯ. ಬೆಡ್ಡಲ್ಲಿರೊ ಪೇಷಂಟ್ ಮುಂಖಾಂತರ ಕಲಿಯೋದು ಬಹಳ ಮುಖ್ಯ. ಒಂಥರ ಅಕ್ಕಸಾಲಿಗ ಒಡವೆ ಹಿಡಕಂಡು ಉಜ್ಜತನೆ ನೋಡು, ಅಂಗೆ ಬೆಡ್ಡಲ್ಲಿರೊ ಪೇಷಂಟ್ ತಪಾಸಣೆ ಬಹಳ ಮುಖ್ಯ. ಆದ್ರಿಂದ ರಜ ಸಿಕ್ಕಿದೇಟಿಗೆ ಊರಿಗೋಗೊ ರಾಮಣ್ಣ ಪ್ರಾಕ್ಟಿಕಲಲ್ಲಿ ಡಲ್ಲಾಗಿದ್ದ. ಒಂದು ವೇಳೆ ಅವುನು ಊರಿಗೋಡೋಗದು, ಕತೆ ಬರಿಯ ಶ್ರಮನ್ಯಲ್ಲ ಇಲ್ಲಾಕಿದ್ರೆ ನಮ್ಮನ್ಯಲ್ಲ ಮೀರಿ ಒಳ್ಳೆ ಡಾಕ್ಟರಾಗೋನು.

“ಅಂಗಾಗಿದ್ರೆ ಕನ್ನಡಕ್ಕೆ ಒಬ್ಬ ಒಳ್ಳೆ ಕತೆಗಾರ ಸಿಗತಿರಲಿಲ್ಲ ಕಣಣ್ಣ. ಈ ನಾಡಲ್ಲಿ ಬೇಕಾದಷ್ಟು ಜನ ಡಾಕ್ಟರವುರೆ. ಆದ್ರೆ ಕನ್ನಡ ಸಾಹಿತ್ಯದಲ್ಲಿ ರಾಮಣ್ಣನಂತ ಕತೆಗಾರ ಇದ್ದುದ್ದು ಅವುನೊಬ್ಬನೆ. ಅದೂ ಯಂಥಾ ಕಾಲದಲ್ಲಿ ಅಂತೀ. ಅವುನು ಬರಿತಿದ್ದ ಕಾಲದಲ್ಲಿ ಕನ್ನಡದ ಮುಖ್ಯ ಕತೆಗಾರರೆಲ್ಲ ನವ್ಯ ಸಂವೇದನೆ ಮೈಮ್ಯಾಲ್ಯಳಕಂಡು ವಿಮರ್ಶಕರ ಮುಖಾಂತರ ನಮಗೆ ಅರ್ಥವಾಗದಂಗೆ ಕತೆ ಬರಿತಿದ್ರು. ಆದ್ರೆ ರಾಮಣ್ಣ ಈ ನ್ಯಲಕ್ಕೆ ನಿಷ್ಟನಾಗಿ ಬರದು ನೇರವಾಗಿ ನಮ್ಮ ಹೃದಯನ ತಟ್ಟೋನು. ಮನ ಮುಟ್ಟಂಗೆ ಬರತಿದ್ದ. ನಮಿಗ್ಯಲ್ಲ ಬರಿಯದ ಕಲಿಸಿದೋನೆ ಅವುನು. ಒಂದು ಕತೆಯಂತೂ ಇವತ್ನೋಡಿದ್ರು ನಮ್ಮನ್ನು ಅಲ್ಲಾಡಿಸಿಬುಡ್ತದೆ ಕಣಣ್ಣ, ಗಾಂಧಿ ಕತೆ ಓದಿದ್ದಿಯಾ. ಅದರಲ್ಲಿ ಗಾಂಧಿ ಹೆಸರಿನ ಹುಡುಗನ್ನ ಉಳಿಸಗಳಕ್ಕಾಗದಿಲ್ಲ. ಕರಿಸಿದ್ದೇಗೌಡ ದನನೊ ಅಥವಾ ಮರನೋ ಮಾರಿ ದುಡ್ಡು ತತ್ತನೆ. ಅಷ್ಟ್ರಲ್ಲಿ ಗಾಂಧಿ ಅವ್ವ ಅಳತಾ ಬಾಗಲಲ್ಲಿ ನಿಂತಿರತಳೆ. ಕರಿಸಿದ್ದೇಗೌಡ ಬಂದು ’ಜೀವ ಯಾವಾಗೊಯ್ತು’ ಅಂತನೆ. ಅಳನೆ ಅವಳುತ್ತರವಾಯ್ತದೆ. ಆಗ ಕರಿಸಿದ್ದೇಗೌಡ, ’ಮನುಸ್ರು ಸಾಯ್ದೆ ಕಲ್ಲು ಸತ್ತವಾ ಸುಮ್ನಿರು’ ಅಂತ ಗಾಂಧಿ ಶವ ತಗಳಕ್ಕೆ ಅಂತ ಡಾಕ್ಟರು ಕೇಳಕ್ಕೋಯ್ತನೆ. ರಾಮಣ್ಣ ಬರದ ಈ ಸಾಲು ಕನ್ನಡ ಸಾಹಿತ್ಯನೆ ಆಳ್ಳಾಡಿಸಿಬುಡ್ತು ಕಣಣ್ಣ.”

“ನಿಜ ರಾಮಣ್ಣನ ಕತೆಗಳು ಓದುಗರ ಮನಸ ಮುಟ್ಟಿದ್ಕೆ ಅಲವೆ ಅವುನು ವಳ್ಳೆ ಕತೆಗಾರ ಅನ್ನಿಸಿಗಂಡಿದ್ದು.”

“ರಾಮಣ್ಣ ನಮ್ಮ ಏರಿಯಾದ ಭಾಷೆನ ಯಾವುದೆ ಸಂಕೋಚವಿಲ್ಲದೆ ಬಳಸಿದ. ಲೇ ಆ ಕರ ಹಿಡಿಕಂಡೋಗಿ ಬಿತ್ತ ಕೆಚ್ಚಿಸಿಗಂಡು ಬಾರ್ಲ. ಸಿಕ್ಕಿದ ಹಸಿನ ಮ್ಯಾಲ್ಯಲ್ಲ ನ್ಯಗಿತದೆ” ಅಂತ ರಾಮಣ್ಣ ಬರದಿದ್ರಿಂದ ನಾವ್ಯಲ್ಲ ನಮ್ಮೂರ ಭಾಷೆ ಬಳಸಕ್ಕೆ ಧೈರ್ಯ ಮಾಡಿದ್ದು.”

“ಅಂತ ಮಾತು ಅವುನ ಕತೆಲಿ ತುಂಬಾ ಬತ್ತವೆ. ಆಲನಹಳ್ಳಿ ಕೃಷ್ಣ ಹಳ್ಳಿ ಕತೆ ಬರುದ್ರು, ರಾಮಣ್ಣನೇ ಬ್ಯಾರೆ ತರ ಬರಿಯೋನು. ಅವುನ ಕತೆ ಜನಪ್ರಗತಿಲೊ ಮಯೂರದಲ್ಲೊ ಪ್ರಜಾವಾಣಿಲೋ ಬಂದ್ರೆ ಅದೇ ಒಂದು ಸುದ್ದಿಯಾಗದು ಆ ಟೈಮಲ್ಲಿ. ಆಲನಹಳ್ಳಿ ’ಏನ್ಲ ರಾಮಣ್ಣ ಯಂಗಿದ್ದಿಲ’ ಅಂತ ಬಂದುಬುಡೋನು. ಅವುನು ಬಂದೇಟಿಗೆ ವಾಕ್ ಮಾಡೋರು. ನನಿಗೆ ರಾಮಣ್ಣ, ’ಹೋಗ್ಲಾ ಒಂದು ಮೂರು ಕಾಳು ಚೌಚೌ ತಗಂಬಾಲ ಅನ್ನೋನು’. ನಾನು ಹೋಗಿ ಕತೆಗಾರರಿಗೆ ಚೌಚೌ ಕಟ್ಟಿಸಿಗಂಡು ಬರಿವೆ”.

ಹೇಳ್ದವ್ರು: ಡಾ. ಕಮಲಾಕ್ಷಣ್ಣ
ಬರ್ಕಂಡವ್ರು: ಬಿ ಚಂದ್ರೇಗೌಡ


ಇದನ್ನೂ ಓದಿ: ಹಿಂಗಿದ್ದ ನಮ್ಮ ರಾಮಣ್ಣ-2; ಮಂಡ್ಯಜಿಲ್ಲೆ ಒರಟುತನ ಇಲವಲ್ಲಾ, ಇಷ್ಟು ನಯವಂತಿಕೆ ಯಂಗೆ ಬತ್ತೂ ಅನ್ನಕಂಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....