Homeಕರ್ನಾಟಕಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

- Advertisement -
- Advertisement -

ಬಿ.ವಿ. ಕಕ್ಕಿಲ್ಲಾಯ ಜನ್ಮಶತಾಬ್ದಿ ಕಾರ್ಯಕ್ರಮವು ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ನಡೆಯಿತು. ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಡಾ. ಕನ್ನಯ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ‘ಕವಲು ದಾರಿಯಲ್ಲಿ ಭಾರತದ ಯುವಜನರು’ ವಿಷಯದ ಕುರಿತು ಮಾತನಾಡಿದರು. ಅವರ ಭಾಷಣದ ವಿವರ ಇಲ್ಲಿದೆ.

ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹಕ್ಕೆ ತುತ್ತಾಗ ಜನರಿಗೆ ಶ್ರದ್ದಾಂಜಲಿಯನ್ನು ಸಲ್ಲಿಸುತ್ತೇನೆ. ಬಿ.ವಿ. ಕಕ್ಕಿಲ್ಲಾಯರವರಿಗೆ ಗೌರವಗಳನ್ನು ಸಲ್ಲಿಸುತ್ತೇನೆ. ಕವಲು ದಾರಿಯಲ್ಲಿ ಭಾರತದ ಯುವಜನರು ಎಂಬ ವಿಷಯದ ಬಗ್ಗೆ ನಾನೀಗ ಮಾತಾಡಲಿದ್ದೇನೆ. ಅದಕ್ಕಿಂತ ಮುಂಚೆ ನಿಮ್ಮ ಅನುಮತಿಯೊಂದಿಗೆ ಹಿಂದಿಯಲ್ಲಿ ಮಾತಾಡುತ್ತೇನೆ. ಏಕೆಂದರೆ ನನಗೆ ಇಂಗ್ಲಿಷ್ ಅಷ್ಟು ಚೆನ್ನಾಗಿ ಮಾತನಾಡಲು ಬರುವುದಿಲ್ಲ.

ನಾನು ಖಂಡಿತಾ ಹಿಂದಿಯನ್ನು ನಿಮ್ಮ ಮೇಲೆ ಹೇರುವುದಿಲ್ಲ. ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಅಷ್ಟೇ. ಅದಕ್ಕಾಗಿ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನಮ್ಮ ಪೀಳೀಗೆಯ ಯುವಜನರ ಸಮಸ್ಯೆ ಇತಿಹಾಸವನ್ನು ಸರಿಯಾಗಿ ಓದಿಲ್ಲದಿರುವುದು. ಸ್ವಾತಂತ್ರ್ಯ ಪೂರ್ವದಲ್ಲಿ ಇದೇ ಮಂಗಳೂರಿನಲ್ಲಿ ಮಸ್ಲೊಂಕಿ ಎಂಬುವ ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಮತ್ತು ಆತನ ಸಂಗಾತಿಗಳನ್ನು ಒಂದು ಪ್ರತಿಭಟನೆಯ ನಂತರ ಬ್ರಿಟಿಷ್ ಪೊಲೀಸರು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದರು. ನನಗೂ ಅವನಿಗೂ ಒಳ್ಳೇಯ ಸಂಬಂಧವಿದೆ ಅನ್ನಿಸಿತು. ಈಗಲೂ ನಮ್ಮ ದೇಶದಲ್ಲಿ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ ಅವರನ್ನು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದಾರೆ. 70 ವರ್ಷದಲ್ಲಿ ಹಾಗೆಯೇ ಇದೆ. ಈಗ ಬ್ರಿಟಿಷ್ ಪೊಲೀಸರ ಬದಲಾಗಿ ನಮ್ಮದೇ ಸೈನಿಕರಿದ್ದಾರೆ ಅಷ್ಟೇ.

ಎ.ಐ.ಎಸ್.ಎಫ್ ಭಾರತದ ಮೊದಲ ವಿದ್ಯಾರ್ಥಿ ಸಂಘಟನೆಯಾಗಿದೆ. 1936ರಲ್ಲಿಯೇ ಪ್ರಾರಂಭವಾಗಿದೆ. ಇದು ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದೆ. ಬ್ರಿಟಿಷರೊಡನೆ ಹೋರಾಟ ಮಾಡಿದೆ. 1952 ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿಯೂ ಭಾಗವಹಿಸಿದದ ಇತಿಹಾಸ ಇದೆ. ದೇಶ ನಿರ್ಮಾನದಲ್ಲಿ ತೊಡಗಿಸಿಕೊಂಡಿದೆ. ಸಿನೆಮಾ, ವಿಜ್ಞಾನ, ಕಲೆ, ಸಾಹಿತ್ಯ, ತಂತ್ರಜ್ಞಾನ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಎ.ಐ.ಎಸ್.ಎಫ್ ನ ಹೆಸರು ಇದೆ.

ಆಗ ಅದು ಭಾರತದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳಿರಬೇಕು. ಎಲ್ಲರಿಗೂ ಗೌರದ ಉದ್ಯೋಗ ಸಿಗಬೇಕು. ನಮ್ಮ ದೇಶದ ವೈವಿಧ್ಯತೆಯನ್ನು ಸ್ಪೀಕರಿಸಬೇಕು. ಭಾರತದ ಪರಿಕಲ್ಪನೆಯಲ್ಲ ಜಾತಿ, ಲಿಂಗ, ಭಾಷೆ, ಧರ್ಮದ ಆಧಾರದಲ್ಲಿ ತಾರತಮ್ಯ ಇರಬಾರದು ಎಂಬ ಕನಸು ಕಂಡಿತು. ನಾನು ಹಲವು ಪ್ರಗತಿಪರರನ್ನು ಭೇಟಿಯಾಗುತ್ತಿದ್ದೇನೆ. ಅವರು ಬೇಸರದಿಂದ ಮಾತಾಡುತ್ತಿದ್ದಾರೆ, ಎಲ್ಲಾ ಹಾಳಾಗುತ್ತಿದೆ, ಏನು ಬದಲಾವಣೆ ಆಗುತ್ತಿಲ್ಲವೆನ್ನುವುದು ಅವರ ಆರೋಪ. 70 ವರ್ಷದಲ್ಲಿ ಏನು ಆಗಿಲ್ಲ ಎಂದು. ನಾನು ಹೇಳುತ್ತೇನೆ ಈ 70 ವರ್ಷದಲ್ಲಿ ಬಹಳಷ್ಟು ಆಗಿದೆ. ಪ್ರಜಾಪ್ರಭುತ್ವ ಸ್ಪಲ್ಪ ಪ್ರಬುದ್ಧಗೊಂಡಿದೆ. ಹಲವು ಸಂವಿಧಾನದ ತಿದ್ದುಪಡಿಗಳಾಗಿವೆ. ಆದರೆ ಎಷ್ಟು ಬದಲಾವಣೆಗಳಾಗಬೇಕಿತ್ತೋ ಅಷ್ಟು ಬದಲಾಗಿಲ್ಲ. ಜೊತೆಗೆ ಕೆಲವು ವಿಷಯಗಳಲ್ಲಿ ಮುಂದೆ ಸಾಗುವ ಬದಲು ನಾವು ಹಿಂದೆ ಚಲಿಸುತ್ತಿದ್ದೇವೆ. ಇಂದು ನಾನು ಇಲ್ಲಿ ಯುವಜನರು ಮತ್ತು ಪ್ರಸ್ತುತ ಪರಿಸ್ಥಿತಿಯ ಕುರಿತು ಮಾತನಾಡುವಾಗ ನನಗನಿಸುತ್ತದೆ ದೇಶದಲ್ಲಿ ಪ್ರಗತಿಯಾಗುತ್ತಿಲ್ಲ. ನಾವು ಮುದೆ ಸಾಗುವ ಬದಲು ಹಿಂದೆ ಚಲಿಸುತ್ತಿದ್ದೇವೆ.

ಬಾಲ್ಯನಲ್ಲಿ ನಮಗೆ ಹೇಳುತ್ತಿದ್ದು ರಾಜಕಾರಣಿ ಬಹಳ ಕೆಟ್ಟದ್ದು ಅಂತ. ಯಾರಾದರೂ ರಾಜಕಾರಣಿಗಳು ಒಳ್ಳೆಯದು ಮಾಡಲು ಹೊರಟರೆ ಅವರನ್ನು ಮುಗಿಸಿಬಿಡುತ್ತಾರೆ ಎಂದು. ಅದಕ್ಕಾಗಿಯೇ ಇಂದು ಹಲವು ಮಧ್ಯಮವರ್ಗದ ಪೋಷಕರು ತಮ್ಮ ಮಕ್ಕಳು ರಾಜಕಾರಣಿಗಳಾಗಬೇಕೆಂದು ಬಯಸುವುದಿಲ್ಲ. ಬದಲಿಗೆ ವೈದ್ಯರೋ, ಇಂಜಿನಿಯರ್, ಆಟಗಾರರೋ ಆಗಬೇಕು ಎನ್ನುತ್ತಾರೆ. ಏನಾದರೂ ಆಗಲಿ ರಾಜಕಾರಣಿಯಾಗುವುದು ಬೇಡ ಎಂಬುದು ಸಾಮಾನ್ಯವಾಗಿದೆ. ಈ ಸಾಮಾಜಿಕ ಪರಿಸ್ಥಿಯಲ್ಲಿ ನಮ್ಮ ಹಕ್ಕುಗಳೇನು? ಎಂಬುದು ಯಾರಿಗೆ ಗೊತ್ತಿದೆ. ನಿನ್ನ ಹಕ್ಕುಗಳಿಗಾಗಿ ಹೋರಾಡು ಎಂದು ಯಾವ ಪೋಷಕರು ಹೇಳುವುದಿಲ್ಲ. ಹಾಗಾಗಿ ಯುವಜನರಿಗೆ ರಾಜನೀತಿ ಅರ್ಥವಾಗುತ್ತಿಲ್ಲ ಮಾತ್ರವಲ್ಲ ಅವರು ಯಾರನ್ನ ಪ್ರಶ್ನಿಸುತ್ತಿಲ್ಲ.

ಬದಲಿಗೆ ನಿನ್ನ ಆಸಕ್ತಿಯ ವಿಷಯ ಆಯ್ಕೆ ಮಾಡಿಕೊಂಡು ಚೆನ್ನಾಗಿ ಓದು, ಕೆರೀರ್ ರೂಪಿಸಿಕೊ ಎಂದು ಹೇಳುತ್ತಾರೆ. ಮಾರುಕಟ್ಟೆಯಲ್ಲಿ ಯಾವುದು ಡಿಮಾಂಡ್ ಇದೆಯೋ ಅದನ್ನು ಓದು ಎನ್ನುತ್ತಾರೆ. ಈ ರೀತಿ ಕೆರೀರ್ ಒತ್ತಡ ಹಾಕಿ ನಮ್ಮನ್ನು ಮೇಶಿನ್ ರೀತಿ ಮಾಡುತ್ತಿದ್ದಾರೆ. ಹಾಗಾಗಿ ಯುವಜನರಿಗೆ ರಾಜಕೀಯ ಪ್ರಬುದ್ಧತೆ ಬಂದಿಲ್ಲ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಬೇಸರಪಟ್ಟುಕೊಳ್ಳಬೇಕಿಲ್ಲ. ಇದರಿಂದಲೇ ನಮಗೆ ಜಾತ್ಯಾತೀತತೆಯ ಅರ್ಥ ಮತ್ತು ಮಹತ್ವ ಗೊತ್ತಾಗಿದೆ. ವೈವಿಧ್ಯತೆ ಮತ್ತು ಪ್ರಜಾಪ್ರಭುತ್ವ ಮಹತ್ವ ಮನವರಿಕೆಯಾಗಿದೆ. ದೇಶದ ಹಲವು ಸಮಸ್ಯೆಗಳು ಮುನ್ನಲೆಗೆ ಬಂದಿವೆ. ರಾಜಕೀಯ ಪ್ರಶ್ನೆಗಳು ಕೇಳಿಬರುತ್ತಿವೆ. ಇದರಿಂದಾಗಿ ಮುಂದೊಂದು ದಿನ ನೈಜ ರಾಜಕೀಯ ಅರಿವು ಎಲ್ಲರಿಗೂ ದಕ್ಕಲು ಸಾಧ್ಯ.

ಅರ್ಥಶಾಸ್ತ್ರದ ಮೇಲೆ ಧರ್ಮಶಾಸ್ತ್ರ ಬಂದು ಕುಳಿತಿದೆ. ಹಾಗಾಗಿ ಇಂದು ದೊಡ್ಡ ಮಟ್ಟದ ಆರ್ಥಿಕ ಕುಸಿತ ಎದುರಾಗಿದ್ದರೂ ಪ್ರಧಾನಿ ಏನೂ ಮಾಡಲಾಗುತ್ತಿಲ್ಲ. ಆದ್ದರಿಂದ ಅವರು ಮತ್ತಷ್ಟು ಧರ್ಮದ ಮೊರೆ ಹೋಗುತ್ತಿದ್ದಾರೆ.

ಇಂದು ದೇಶಭಕ್ತಿಯ ಹೆಸರಿನಲ್ಲಿ ಅಂಧಭಕ್ತಿಯನ್ನು ತುರುಕಲಾಗುತ್ತಿದೆ. ದೇಶವನ್ನು ಹಾಳುಮಾಡುತ್ತಿರುವ ಬಲಾಢ್ಯರನ್ನು ಪ್ರಶ್ನಿಸಿದರೆ ಅದು ದೇಶಪ್ರೇಮ. ಅದು ಬಿಟ್ಟು ಅಮಾಯಕರನ್ನು, ದುರ್ಬಲರನ್ನು ಪ್ರಶ್ನಿಸುವುದಲ್ಲ. ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ.

ಪ್ರಶ್ನಿಸುವ ಮನೋಭಾವ ನಮ್ಮ ಮನೆಗಳಿಂದಲೇ ಆರಂಭವಾಗಬೇಕು. ಶಿಕ್ಷಣ, ಉದ್ಯೋಗ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರಜಾಪ್ರಭುತ್ವ ವಾತವರಣವನ್ನು ಸೃಷ್ಟಿಸಬೇಕಿದೆ. ಎಲ್ಲರನ್ನು ಪ್ರಶ್ನಿಸುವ ಮನೋಭಾವವಿದ್ದಾಗ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಗೌರವ ಎಂದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...