Homeಕರ್ನಾಟಕಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

- Advertisement -
- Advertisement -

ಬಿ.ವಿ. ಕಕ್ಕಿಲ್ಲಾಯ ಜನ್ಮಶತಾಬ್ದಿ ಕಾರ್ಯಕ್ರಮವು ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ನಡೆಯಿತು. ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಡಾ. ಕನ್ನಯ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ‘ಕವಲು ದಾರಿಯಲ್ಲಿ ಭಾರತದ ಯುವಜನರು’ ವಿಷಯದ ಕುರಿತು ಮಾತನಾಡಿದರು. ಅವರ ಭಾಷಣದ ವಿವರ ಇಲ್ಲಿದೆ.

ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹಕ್ಕೆ ತುತ್ತಾಗ ಜನರಿಗೆ ಶ್ರದ್ದಾಂಜಲಿಯನ್ನು ಸಲ್ಲಿಸುತ್ತೇನೆ. ಬಿ.ವಿ. ಕಕ್ಕಿಲ್ಲಾಯರವರಿಗೆ ಗೌರವಗಳನ್ನು ಸಲ್ಲಿಸುತ್ತೇನೆ. ಕವಲು ದಾರಿಯಲ್ಲಿ ಭಾರತದ ಯುವಜನರು ಎಂಬ ವಿಷಯದ ಬಗ್ಗೆ ನಾನೀಗ ಮಾತಾಡಲಿದ್ದೇನೆ. ಅದಕ್ಕಿಂತ ಮುಂಚೆ ನಿಮ್ಮ ಅನುಮತಿಯೊಂದಿಗೆ ಹಿಂದಿಯಲ್ಲಿ ಮಾತಾಡುತ್ತೇನೆ. ಏಕೆಂದರೆ ನನಗೆ ಇಂಗ್ಲಿಷ್ ಅಷ್ಟು ಚೆನ್ನಾಗಿ ಮಾತನಾಡಲು ಬರುವುದಿಲ್ಲ.

ನಾನು ಖಂಡಿತಾ ಹಿಂದಿಯನ್ನು ನಿಮ್ಮ ಮೇಲೆ ಹೇರುವುದಿಲ್ಲ. ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಅಷ್ಟೇ. ಅದಕ್ಕಾಗಿ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನಮ್ಮ ಪೀಳೀಗೆಯ ಯುವಜನರ ಸಮಸ್ಯೆ ಇತಿಹಾಸವನ್ನು ಸರಿಯಾಗಿ ಓದಿಲ್ಲದಿರುವುದು. ಸ್ವಾತಂತ್ರ್ಯ ಪೂರ್ವದಲ್ಲಿ ಇದೇ ಮಂಗಳೂರಿನಲ್ಲಿ ಮಸ್ಲೊಂಕಿ ಎಂಬುವ ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಮತ್ತು ಆತನ ಸಂಗಾತಿಗಳನ್ನು ಒಂದು ಪ್ರತಿಭಟನೆಯ ನಂತರ ಬ್ರಿಟಿಷ್ ಪೊಲೀಸರು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದರು. ನನಗೂ ಅವನಿಗೂ ಒಳ್ಳೇಯ ಸಂಬಂಧವಿದೆ ಅನ್ನಿಸಿತು. ಈಗಲೂ ನಮ್ಮ ದೇಶದಲ್ಲಿ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ ಅವರನ್ನು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದಾರೆ. 70 ವರ್ಷದಲ್ಲಿ ಹಾಗೆಯೇ ಇದೆ. ಈಗ ಬ್ರಿಟಿಷ್ ಪೊಲೀಸರ ಬದಲಾಗಿ ನಮ್ಮದೇ ಸೈನಿಕರಿದ್ದಾರೆ ಅಷ್ಟೇ.

ಎ.ಐ.ಎಸ್.ಎಫ್ ಭಾರತದ ಮೊದಲ ವಿದ್ಯಾರ್ಥಿ ಸಂಘಟನೆಯಾಗಿದೆ. 1936ರಲ್ಲಿಯೇ ಪ್ರಾರಂಭವಾಗಿದೆ. ಇದು ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದೆ. ಬ್ರಿಟಿಷರೊಡನೆ ಹೋರಾಟ ಮಾಡಿದೆ. 1952 ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿಯೂ ಭಾಗವಹಿಸಿದದ ಇತಿಹಾಸ ಇದೆ. ದೇಶ ನಿರ್ಮಾನದಲ್ಲಿ ತೊಡಗಿಸಿಕೊಂಡಿದೆ. ಸಿನೆಮಾ, ವಿಜ್ಞಾನ, ಕಲೆ, ಸಾಹಿತ್ಯ, ತಂತ್ರಜ್ಞಾನ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಎ.ಐ.ಎಸ್.ಎಫ್ ನ ಹೆಸರು ಇದೆ.

ಆಗ ಅದು ಭಾರತದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳಿರಬೇಕು. ಎಲ್ಲರಿಗೂ ಗೌರದ ಉದ್ಯೋಗ ಸಿಗಬೇಕು. ನಮ್ಮ ದೇಶದ ವೈವಿಧ್ಯತೆಯನ್ನು ಸ್ಪೀಕರಿಸಬೇಕು. ಭಾರತದ ಪರಿಕಲ್ಪನೆಯಲ್ಲ ಜಾತಿ, ಲಿಂಗ, ಭಾಷೆ, ಧರ್ಮದ ಆಧಾರದಲ್ಲಿ ತಾರತಮ್ಯ ಇರಬಾರದು ಎಂಬ ಕನಸು ಕಂಡಿತು. ನಾನು ಹಲವು ಪ್ರಗತಿಪರರನ್ನು ಭೇಟಿಯಾಗುತ್ತಿದ್ದೇನೆ. ಅವರು ಬೇಸರದಿಂದ ಮಾತಾಡುತ್ತಿದ್ದಾರೆ, ಎಲ್ಲಾ ಹಾಳಾಗುತ್ತಿದೆ, ಏನು ಬದಲಾವಣೆ ಆಗುತ್ತಿಲ್ಲವೆನ್ನುವುದು ಅವರ ಆರೋಪ. 70 ವರ್ಷದಲ್ಲಿ ಏನು ಆಗಿಲ್ಲ ಎಂದು. ನಾನು ಹೇಳುತ್ತೇನೆ ಈ 70 ವರ್ಷದಲ್ಲಿ ಬಹಳಷ್ಟು ಆಗಿದೆ. ಪ್ರಜಾಪ್ರಭುತ್ವ ಸ್ಪಲ್ಪ ಪ್ರಬುದ್ಧಗೊಂಡಿದೆ. ಹಲವು ಸಂವಿಧಾನದ ತಿದ್ದುಪಡಿಗಳಾಗಿವೆ. ಆದರೆ ಎಷ್ಟು ಬದಲಾವಣೆಗಳಾಗಬೇಕಿತ್ತೋ ಅಷ್ಟು ಬದಲಾಗಿಲ್ಲ. ಜೊತೆಗೆ ಕೆಲವು ವಿಷಯಗಳಲ್ಲಿ ಮುಂದೆ ಸಾಗುವ ಬದಲು ನಾವು ಹಿಂದೆ ಚಲಿಸುತ್ತಿದ್ದೇವೆ. ಇಂದು ನಾನು ಇಲ್ಲಿ ಯುವಜನರು ಮತ್ತು ಪ್ರಸ್ತುತ ಪರಿಸ್ಥಿತಿಯ ಕುರಿತು ಮಾತನಾಡುವಾಗ ನನಗನಿಸುತ್ತದೆ ದೇಶದಲ್ಲಿ ಪ್ರಗತಿಯಾಗುತ್ತಿಲ್ಲ. ನಾವು ಮುದೆ ಸಾಗುವ ಬದಲು ಹಿಂದೆ ಚಲಿಸುತ್ತಿದ್ದೇವೆ.

ಬಾಲ್ಯನಲ್ಲಿ ನಮಗೆ ಹೇಳುತ್ತಿದ್ದು ರಾಜಕಾರಣಿ ಬಹಳ ಕೆಟ್ಟದ್ದು ಅಂತ. ಯಾರಾದರೂ ರಾಜಕಾರಣಿಗಳು ಒಳ್ಳೆಯದು ಮಾಡಲು ಹೊರಟರೆ ಅವರನ್ನು ಮುಗಿಸಿಬಿಡುತ್ತಾರೆ ಎಂದು. ಅದಕ್ಕಾಗಿಯೇ ಇಂದು ಹಲವು ಮಧ್ಯಮವರ್ಗದ ಪೋಷಕರು ತಮ್ಮ ಮಕ್ಕಳು ರಾಜಕಾರಣಿಗಳಾಗಬೇಕೆಂದು ಬಯಸುವುದಿಲ್ಲ. ಬದಲಿಗೆ ವೈದ್ಯರೋ, ಇಂಜಿನಿಯರ್, ಆಟಗಾರರೋ ಆಗಬೇಕು ಎನ್ನುತ್ತಾರೆ. ಏನಾದರೂ ಆಗಲಿ ರಾಜಕಾರಣಿಯಾಗುವುದು ಬೇಡ ಎಂಬುದು ಸಾಮಾನ್ಯವಾಗಿದೆ. ಈ ಸಾಮಾಜಿಕ ಪರಿಸ್ಥಿಯಲ್ಲಿ ನಮ್ಮ ಹಕ್ಕುಗಳೇನು? ಎಂಬುದು ಯಾರಿಗೆ ಗೊತ್ತಿದೆ. ನಿನ್ನ ಹಕ್ಕುಗಳಿಗಾಗಿ ಹೋರಾಡು ಎಂದು ಯಾವ ಪೋಷಕರು ಹೇಳುವುದಿಲ್ಲ. ಹಾಗಾಗಿ ಯುವಜನರಿಗೆ ರಾಜನೀತಿ ಅರ್ಥವಾಗುತ್ತಿಲ್ಲ ಮಾತ್ರವಲ್ಲ ಅವರು ಯಾರನ್ನ ಪ್ರಶ್ನಿಸುತ್ತಿಲ್ಲ.

ಬದಲಿಗೆ ನಿನ್ನ ಆಸಕ್ತಿಯ ವಿಷಯ ಆಯ್ಕೆ ಮಾಡಿಕೊಂಡು ಚೆನ್ನಾಗಿ ಓದು, ಕೆರೀರ್ ರೂಪಿಸಿಕೊ ಎಂದು ಹೇಳುತ್ತಾರೆ. ಮಾರುಕಟ್ಟೆಯಲ್ಲಿ ಯಾವುದು ಡಿಮಾಂಡ್ ಇದೆಯೋ ಅದನ್ನು ಓದು ಎನ್ನುತ್ತಾರೆ. ಈ ರೀತಿ ಕೆರೀರ್ ಒತ್ತಡ ಹಾಕಿ ನಮ್ಮನ್ನು ಮೇಶಿನ್ ರೀತಿ ಮಾಡುತ್ತಿದ್ದಾರೆ. ಹಾಗಾಗಿ ಯುವಜನರಿಗೆ ರಾಜಕೀಯ ಪ್ರಬುದ್ಧತೆ ಬಂದಿಲ್ಲ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಬೇಸರಪಟ್ಟುಕೊಳ್ಳಬೇಕಿಲ್ಲ. ಇದರಿಂದಲೇ ನಮಗೆ ಜಾತ್ಯಾತೀತತೆಯ ಅರ್ಥ ಮತ್ತು ಮಹತ್ವ ಗೊತ್ತಾಗಿದೆ. ವೈವಿಧ್ಯತೆ ಮತ್ತು ಪ್ರಜಾಪ್ರಭುತ್ವ ಮಹತ್ವ ಮನವರಿಕೆಯಾಗಿದೆ. ದೇಶದ ಹಲವು ಸಮಸ್ಯೆಗಳು ಮುನ್ನಲೆಗೆ ಬಂದಿವೆ. ರಾಜಕೀಯ ಪ್ರಶ್ನೆಗಳು ಕೇಳಿಬರುತ್ತಿವೆ. ಇದರಿಂದಾಗಿ ಮುಂದೊಂದು ದಿನ ನೈಜ ರಾಜಕೀಯ ಅರಿವು ಎಲ್ಲರಿಗೂ ದಕ್ಕಲು ಸಾಧ್ಯ.

ಅರ್ಥಶಾಸ್ತ್ರದ ಮೇಲೆ ಧರ್ಮಶಾಸ್ತ್ರ ಬಂದು ಕುಳಿತಿದೆ. ಹಾಗಾಗಿ ಇಂದು ದೊಡ್ಡ ಮಟ್ಟದ ಆರ್ಥಿಕ ಕುಸಿತ ಎದುರಾಗಿದ್ದರೂ ಪ್ರಧಾನಿ ಏನೂ ಮಾಡಲಾಗುತ್ತಿಲ್ಲ. ಆದ್ದರಿಂದ ಅವರು ಮತ್ತಷ್ಟು ಧರ್ಮದ ಮೊರೆ ಹೋಗುತ್ತಿದ್ದಾರೆ.

ಇಂದು ದೇಶಭಕ್ತಿಯ ಹೆಸರಿನಲ್ಲಿ ಅಂಧಭಕ್ತಿಯನ್ನು ತುರುಕಲಾಗುತ್ತಿದೆ. ದೇಶವನ್ನು ಹಾಳುಮಾಡುತ್ತಿರುವ ಬಲಾಢ್ಯರನ್ನು ಪ್ರಶ್ನಿಸಿದರೆ ಅದು ದೇಶಪ್ರೇಮ. ಅದು ಬಿಟ್ಟು ಅಮಾಯಕರನ್ನು, ದುರ್ಬಲರನ್ನು ಪ್ರಶ್ನಿಸುವುದಲ್ಲ. ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ.

ಪ್ರಶ್ನಿಸುವ ಮನೋಭಾವ ನಮ್ಮ ಮನೆಗಳಿಂದಲೇ ಆರಂಭವಾಗಬೇಕು. ಶಿಕ್ಷಣ, ಉದ್ಯೋಗ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರಜಾಪ್ರಭುತ್ವ ವಾತವರಣವನ್ನು ಸೃಷ್ಟಿಸಬೇಕಿದೆ. ಎಲ್ಲರನ್ನು ಪ್ರಶ್ನಿಸುವ ಮನೋಭಾವವಿದ್ದಾಗ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಗೌರವ ಎಂದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...