Homeಕರ್ನಾಟಕಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

- Advertisement -
- Advertisement -

ಬಿ.ವಿ. ಕಕ್ಕಿಲ್ಲಾಯ ಜನ್ಮಶತಾಬ್ದಿ ಕಾರ್ಯಕ್ರಮವು ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ನಡೆಯಿತು. ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಡಾ. ಕನ್ನಯ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ‘ಕವಲು ದಾರಿಯಲ್ಲಿ ಭಾರತದ ಯುವಜನರು’ ವಿಷಯದ ಕುರಿತು ಮಾತನಾಡಿದರು. ಅವರ ಭಾಷಣದ ವಿವರ ಇಲ್ಲಿದೆ.

ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹಕ್ಕೆ ತುತ್ತಾಗ ಜನರಿಗೆ ಶ್ರದ್ದಾಂಜಲಿಯನ್ನು ಸಲ್ಲಿಸುತ್ತೇನೆ. ಬಿ.ವಿ. ಕಕ್ಕಿಲ್ಲಾಯರವರಿಗೆ ಗೌರವಗಳನ್ನು ಸಲ್ಲಿಸುತ್ತೇನೆ. ಕವಲು ದಾರಿಯಲ್ಲಿ ಭಾರತದ ಯುವಜನರು ಎಂಬ ವಿಷಯದ ಬಗ್ಗೆ ನಾನೀಗ ಮಾತಾಡಲಿದ್ದೇನೆ. ಅದಕ್ಕಿಂತ ಮುಂಚೆ ನಿಮ್ಮ ಅನುಮತಿಯೊಂದಿಗೆ ಹಿಂದಿಯಲ್ಲಿ ಮಾತಾಡುತ್ತೇನೆ. ಏಕೆಂದರೆ ನನಗೆ ಇಂಗ್ಲಿಷ್ ಅಷ್ಟು ಚೆನ್ನಾಗಿ ಮಾತನಾಡಲು ಬರುವುದಿಲ್ಲ.

ನಾನು ಖಂಡಿತಾ ಹಿಂದಿಯನ್ನು ನಿಮ್ಮ ಮೇಲೆ ಹೇರುವುದಿಲ್ಲ. ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಅಷ್ಟೇ. ಅದಕ್ಕಾಗಿ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನಮ್ಮ ಪೀಳೀಗೆಯ ಯುವಜನರ ಸಮಸ್ಯೆ ಇತಿಹಾಸವನ್ನು ಸರಿಯಾಗಿ ಓದಿಲ್ಲದಿರುವುದು. ಸ್ವಾತಂತ್ರ್ಯ ಪೂರ್ವದಲ್ಲಿ ಇದೇ ಮಂಗಳೂರಿನಲ್ಲಿ ಮಸ್ಲೊಂಕಿ ಎಂಬುವ ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಮತ್ತು ಆತನ ಸಂಗಾತಿಗಳನ್ನು ಒಂದು ಪ್ರತಿಭಟನೆಯ ನಂತರ ಬ್ರಿಟಿಷ್ ಪೊಲೀಸರು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದರು. ನನಗೂ ಅವನಿಗೂ ಒಳ್ಳೇಯ ಸಂಬಂಧವಿದೆ ಅನ್ನಿಸಿತು. ಈಗಲೂ ನಮ್ಮ ದೇಶದಲ್ಲಿ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ ಅವರನ್ನು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದಾರೆ. 70 ವರ್ಷದಲ್ಲಿ ಹಾಗೆಯೇ ಇದೆ. ಈಗ ಬ್ರಿಟಿಷ್ ಪೊಲೀಸರ ಬದಲಾಗಿ ನಮ್ಮದೇ ಸೈನಿಕರಿದ್ದಾರೆ ಅಷ್ಟೇ.

ಎ.ಐ.ಎಸ್.ಎಫ್ ಭಾರತದ ಮೊದಲ ವಿದ್ಯಾರ್ಥಿ ಸಂಘಟನೆಯಾಗಿದೆ. 1936ರಲ್ಲಿಯೇ ಪ್ರಾರಂಭವಾಗಿದೆ. ಇದು ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದೆ. ಬ್ರಿಟಿಷರೊಡನೆ ಹೋರಾಟ ಮಾಡಿದೆ. 1952 ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿಯೂ ಭಾಗವಹಿಸಿದದ ಇತಿಹಾಸ ಇದೆ. ದೇಶ ನಿರ್ಮಾನದಲ್ಲಿ ತೊಡಗಿಸಿಕೊಂಡಿದೆ. ಸಿನೆಮಾ, ವಿಜ್ಞಾನ, ಕಲೆ, ಸಾಹಿತ್ಯ, ತಂತ್ರಜ್ಞಾನ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಎ.ಐ.ಎಸ್.ಎಫ್ ನ ಹೆಸರು ಇದೆ.

ಆಗ ಅದು ಭಾರತದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳಿರಬೇಕು. ಎಲ್ಲರಿಗೂ ಗೌರದ ಉದ್ಯೋಗ ಸಿಗಬೇಕು. ನಮ್ಮ ದೇಶದ ವೈವಿಧ್ಯತೆಯನ್ನು ಸ್ಪೀಕರಿಸಬೇಕು. ಭಾರತದ ಪರಿಕಲ್ಪನೆಯಲ್ಲ ಜಾತಿ, ಲಿಂಗ, ಭಾಷೆ, ಧರ್ಮದ ಆಧಾರದಲ್ಲಿ ತಾರತಮ್ಯ ಇರಬಾರದು ಎಂಬ ಕನಸು ಕಂಡಿತು. ನಾನು ಹಲವು ಪ್ರಗತಿಪರರನ್ನು ಭೇಟಿಯಾಗುತ್ತಿದ್ದೇನೆ. ಅವರು ಬೇಸರದಿಂದ ಮಾತಾಡುತ್ತಿದ್ದಾರೆ, ಎಲ್ಲಾ ಹಾಳಾಗುತ್ತಿದೆ, ಏನು ಬದಲಾವಣೆ ಆಗುತ್ತಿಲ್ಲವೆನ್ನುವುದು ಅವರ ಆರೋಪ. 70 ವರ್ಷದಲ್ಲಿ ಏನು ಆಗಿಲ್ಲ ಎಂದು. ನಾನು ಹೇಳುತ್ತೇನೆ ಈ 70 ವರ್ಷದಲ್ಲಿ ಬಹಳಷ್ಟು ಆಗಿದೆ. ಪ್ರಜಾಪ್ರಭುತ್ವ ಸ್ಪಲ್ಪ ಪ್ರಬುದ್ಧಗೊಂಡಿದೆ. ಹಲವು ಸಂವಿಧಾನದ ತಿದ್ದುಪಡಿಗಳಾಗಿವೆ. ಆದರೆ ಎಷ್ಟು ಬದಲಾವಣೆಗಳಾಗಬೇಕಿತ್ತೋ ಅಷ್ಟು ಬದಲಾಗಿಲ್ಲ. ಜೊತೆಗೆ ಕೆಲವು ವಿಷಯಗಳಲ್ಲಿ ಮುಂದೆ ಸಾಗುವ ಬದಲು ನಾವು ಹಿಂದೆ ಚಲಿಸುತ್ತಿದ್ದೇವೆ. ಇಂದು ನಾನು ಇಲ್ಲಿ ಯುವಜನರು ಮತ್ತು ಪ್ರಸ್ತುತ ಪರಿಸ್ಥಿತಿಯ ಕುರಿತು ಮಾತನಾಡುವಾಗ ನನಗನಿಸುತ್ತದೆ ದೇಶದಲ್ಲಿ ಪ್ರಗತಿಯಾಗುತ್ತಿಲ್ಲ. ನಾವು ಮುದೆ ಸಾಗುವ ಬದಲು ಹಿಂದೆ ಚಲಿಸುತ್ತಿದ್ದೇವೆ.

ಬಾಲ್ಯನಲ್ಲಿ ನಮಗೆ ಹೇಳುತ್ತಿದ್ದು ರಾಜಕಾರಣಿ ಬಹಳ ಕೆಟ್ಟದ್ದು ಅಂತ. ಯಾರಾದರೂ ರಾಜಕಾರಣಿಗಳು ಒಳ್ಳೆಯದು ಮಾಡಲು ಹೊರಟರೆ ಅವರನ್ನು ಮುಗಿಸಿಬಿಡುತ್ತಾರೆ ಎಂದು. ಅದಕ್ಕಾಗಿಯೇ ಇಂದು ಹಲವು ಮಧ್ಯಮವರ್ಗದ ಪೋಷಕರು ತಮ್ಮ ಮಕ್ಕಳು ರಾಜಕಾರಣಿಗಳಾಗಬೇಕೆಂದು ಬಯಸುವುದಿಲ್ಲ. ಬದಲಿಗೆ ವೈದ್ಯರೋ, ಇಂಜಿನಿಯರ್, ಆಟಗಾರರೋ ಆಗಬೇಕು ಎನ್ನುತ್ತಾರೆ. ಏನಾದರೂ ಆಗಲಿ ರಾಜಕಾರಣಿಯಾಗುವುದು ಬೇಡ ಎಂಬುದು ಸಾಮಾನ್ಯವಾಗಿದೆ. ಈ ಸಾಮಾಜಿಕ ಪರಿಸ್ಥಿಯಲ್ಲಿ ನಮ್ಮ ಹಕ್ಕುಗಳೇನು? ಎಂಬುದು ಯಾರಿಗೆ ಗೊತ್ತಿದೆ. ನಿನ್ನ ಹಕ್ಕುಗಳಿಗಾಗಿ ಹೋರಾಡು ಎಂದು ಯಾವ ಪೋಷಕರು ಹೇಳುವುದಿಲ್ಲ. ಹಾಗಾಗಿ ಯುವಜನರಿಗೆ ರಾಜನೀತಿ ಅರ್ಥವಾಗುತ್ತಿಲ್ಲ ಮಾತ್ರವಲ್ಲ ಅವರು ಯಾರನ್ನ ಪ್ರಶ್ನಿಸುತ್ತಿಲ್ಲ.

ಬದಲಿಗೆ ನಿನ್ನ ಆಸಕ್ತಿಯ ವಿಷಯ ಆಯ್ಕೆ ಮಾಡಿಕೊಂಡು ಚೆನ್ನಾಗಿ ಓದು, ಕೆರೀರ್ ರೂಪಿಸಿಕೊ ಎಂದು ಹೇಳುತ್ತಾರೆ. ಮಾರುಕಟ್ಟೆಯಲ್ಲಿ ಯಾವುದು ಡಿಮಾಂಡ್ ಇದೆಯೋ ಅದನ್ನು ಓದು ಎನ್ನುತ್ತಾರೆ. ಈ ರೀತಿ ಕೆರೀರ್ ಒತ್ತಡ ಹಾಕಿ ನಮ್ಮನ್ನು ಮೇಶಿನ್ ರೀತಿ ಮಾಡುತ್ತಿದ್ದಾರೆ. ಹಾಗಾಗಿ ಯುವಜನರಿಗೆ ರಾಜಕೀಯ ಪ್ರಬುದ್ಧತೆ ಬಂದಿಲ್ಲ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಬೇಸರಪಟ್ಟುಕೊಳ್ಳಬೇಕಿಲ್ಲ. ಇದರಿಂದಲೇ ನಮಗೆ ಜಾತ್ಯಾತೀತತೆಯ ಅರ್ಥ ಮತ್ತು ಮಹತ್ವ ಗೊತ್ತಾಗಿದೆ. ವೈವಿಧ್ಯತೆ ಮತ್ತು ಪ್ರಜಾಪ್ರಭುತ್ವ ಮಹತ್ವ ಮನವರಿಕೆಯಾಗಿದೆ. ದೇಶದ ಹಲವು ಸಮಸ್ಯೆಗಳು ಮುನ್ನಲೆಗೆ ಬಂದಿವೆ. ರಾಜಕೀಯ ಪ್ರಶ್ನೆಗಳು ಕೇಳಿಬರುತ್ತಿವೆ. ಇದರಿಂದಾಗಿ ಮುಂದೊಂದು ದಿನ ನೈಜ ರಾಜಕೀಯ ಅರಿವು ಎಲ್ಲರಿಗೂ ದಕ್ಕಲು ಸಾಧ್ಯ.

ಅರ್ಥಶಾಸ್ತ್ರದ ಮೇಲೆ ಧರ್ಮಶಾಸ್ತ್ರ ಬಂದು ಕುಳಿತಿದೆ. ಹಾಗಾಗಿ ಇಂದು ದೊಡ್ಡ ಮಟ್ಟದ ಆರ್ಥಿಕ ಕುಸಿತ ಎದುರಾಗಿದ್ದರೂ ಪ್ರಧಾನಿ ಏನೂ ಮಾಡಲಾಗುತ್ತಿಲ್ಲ. ಆದ್ದರಿಂದ ಅವರು ಮತ್ತಷ್ಟು ಧರ್ಮದ ಮೊರೆ ಹೋಗುತ್ತಿದ್ದಾರೆ.

ಇಂದು ದೇಶಭಕ್ತಿಯ ಹೆಸರಿನಲ್ಲಿ ಅಂಧಭಕ್ತಿಯನ್ನು ತುರುಕಲಾಗುತ್ತಿದೆ. ದೇಶವನ್ನು ಹಾಳುಮಾಡುತ್ತಿರುವ ಬಲಾಢ್ಯರನ್ನು ಪ್ರಶ್ನಿಸಿದರೆ ಅದು ದೇಶಪ್ರೇಮ. ಅದು ಬಿಟ್ಟು ಅಮಾಯಕರನ್ನು, ದುರ್ಬಲರನ್ನು ಪ್ರಶ್ನಿಸುವುದಲ್ಲ. ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ.

ಪ್ರಶ್ನಿಸುವ ಮನೋಭಾವ ನಮ್ಮ ಮನೆಗಳಿಂದಲೇ ಆರಂಭವಾಗಬೇಕು. ಶಿಕ್ಷಣ, ಉದ್ಯೋಗ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರಜಾಪ್ರಭುತ್ವ ವಾತವರಣವನ್ನು ಸೃಷ್ಟಿಸಬೇಕಿದೆ. ಎಲ್ಲರನ್ನು ಪ್ರಶ್ನಿಸುವ ಮನೋಭಾವವಿದ್ದಾಗ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಗೌರವ ಎಂದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...