Homeಕರ್ನಾಟಕಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

- Advertisement -
- Advertisement -

ಬಿ.ವಿ. ಕಕ್ಕಿಲ್ಲಾಯ ಜನ್ಮಶತಾಬ್ದಿ ಕಾರ್ಯಕ್ರಮವು ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ನಡೆಯಿತು. ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಡಾ. ಕನ್ನಯ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ‘ಕವಲು ದಾರಿಯಲ್ಲಿ ಭಾರತದ ಯುವಜನರು’ ವಿಷಯದ ಕುರಿತು ಮಾತನಾಡಿದರು. ಅವರ ಭಾಷಣದ ವಿವರ ಇಲ್ಲಿದೆ.

ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹಕ್ಕೆ ತುತ್ತಾಗ ಜನರಿಗೆ ಶ್ರದ್ದಾಂಜಲಿಯನ್ನು ಸಲ್ಲಿಸುತ್ತೇನೆ. ಬಿ.ವಿ. ಕಕ್ಕಿಲ್ಲಾಯರವರಿಗೆ ಗೌರವಗಳನ್ನು ಸಲ್ಲಿಸುತ್ತೇನೆ. ಕವಲು ದಾರಿಯಲ್ಲಿ ಭಾರತದ ಯುವಜನರು ಎಂಬ ವಿಷಯದ ಬಗ್ಗೆ ನಾನೀಗ ಮಾತಾಡಲಿದ್ದೇನೆ. ಅದಕ್ಕಿಂತ ಮುಂಚೆ ನಿಮ್ಮ ಅನುಮತಿಯೊಂದಿಗೆ ಹಿಂದಿಯಲ್ಲಿ ಮಾತಾಡುತ್ತೇನೆ. ಏಕೆಂದರೆ ನನಗೆ ಇಂಗ್ಲಿಷ್ ಅಷ್ಟು ಚೆನ್ನಾಗಿ ಮಾತನಾಡಲು ಬರುವುದಿಲ್ಲ.

ನಾನು ಖಂಡಿತಾ ಹಿಂದಿಯನ್ನು ನಿಮ್ಮ ಮೇಲೆ ಹೇರುವುದಿಲ್ಲ. ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಅಷ್ಟೇ. ಅದಕ್ಕಾಗಿ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನಮ್ಮ ಪೀಳೀಗೆಯ ಯುವಜನರ ಸಮಸ್ಯೆ ಇತಿಹಾಸವನ್ನು ಸರಿಯಾಗಿ ಓದಿಲ್ಲದಿರುವುದು. ಸ್ವಾತಂತ್ರ್ಯ ಪೂರ್ವದಲ್ಲಿ ಇದೇ ಮಂಗಳೂರಿನಲ್ಲಿ ಮಸ್ಲೊಂಕಿ ಎಂಬುವ ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಮತ್ತು ಆತನ ಸಂಗಾತಿಗಳನ್ನು ಒಂದು ಪ್ರತಿಭಟನೆಯ ನಂತರ ಬ್ರಿಟಿಷ್ ಪೊಲೀಸರು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದರು. ನನಗೂ ಅವನಿಗೂ ಒಳ್ಳೇಯ ಸಂಬಂಧವಿದೆ ಅನ್ನಿಸಿತು. ಈಗಲೂ ನಮ್ಮ ದೇಶದಲ್ಲಿ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ ಅವರನ್ನು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದಾರೆ. 70 ವರ್ಷದಲ್ಲಿ ಹಾಗೆಯೇ ಇದೆ. ಈಗ ಬ್ರಿಟಿಷ್ ಪೊಲೀಸರ ಬದಲಾಗಿ ನಮ್ಮದೇ ಸೈನಿಕರಿದ್ದಾರೆ ಅಷ್ಟೇ.

ಎ.ಐ.ಎಸ್.ಎಫ್ ಭಾರತದ ಮೊದಲ ವಿದ್ಯಾರ್ಥಿ ಸಂಘಟನೆಯಾಗಿದೆ. 1936ರಲ್ಲಿಯೇ ಪ್ರಾರಂಭವಾಗಿದೆ. ಇದು ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದೆ. ಬ್ರಿಟಿಷರೊಡನೆ ಹೋರಾಟ ಮಾಡಿದೆ. 1952 ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿಯೂ ಭಾಗವಹಿಸಿದದ ಇತಿಹಾಸ ಇದೆ. ದೇಶ ನಿರ್ಮಾನದಲ್ಲಿ ತೊಡಗಿಸಿಕೊಂಡಿದೆ. ಸಿನೆಮಾ, ವಿಜ್ಞಾನ, ಕಲೆ, ಸಾಹಿತ್ಯ, ತಂತ್ರಜ್ಞಾನ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಎ.ಐ.ಎಸ್.ಎಫ್ ನ ಹೆಸರು ಇದೆ.

ಆಗ ಅದು ಭಾರತದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳಿರಬೇಕು. ಎಲ್ಲರಿಗೂ ಗೌರದ ಉದ್ಯೋಗ ಸಿಗಬೇಕು. ನಮ್ಮ ದೇಶದ ವೈವಿಧ್ಯತೆಯನ್ನು ಸ್ಪೀಕರಿಸಬೇಕು. ಭಾರತದ ಪರಿಕಲ್ಪನೆಯಲ್ಲ ಜಾತಿ, ಲಿಂಗ, ಭಾಷೆ, ಧರ್ಮದ ಆಧಾರದಲ್ಲಿ ತಾರತಮ್ಯ ಇರಬಾರದು ಎಂಬ ಕನಸು ಕಂಡಿತು. ನಾನು ಹಲವು ಪ್ರಗತಿಪರರನ್ನು ಭೇಟಿಯಾಗುತ್ತಿದ್ದೇನೆ. ಅವರು ಬೇಸರದಿಂದ ಮಾತಾಡುತ್ತಿದ್ದಾರೆ, ಎಲ್ಲಾ ಹಾಳಾಗುತ್ತಿದೆ, ಏನು ಬದಲಾವಣೆ ಆಗುತ್ತಿಲ್ಲವೆನ್ನುವುದು ಅವರ ಆರೋಪ. 70 ವರ್ಷದಲ್ಲಿ ಏನು ಆಗಿಲ್ಲ ಎಂದು. ನಾನು ಹೇಳುತ್ತೇನೆ ಈ 70 ವರ್ಷದಲ್ಲಿ ಬಹಳಷ್ಟು ಆಗಿದೆ. ಪ್ರಜಾಪ್ರಭುತ್ವ ಸ್ಪಲ್ಪ ಪ್ರಬುದ್ಧಗೊಂಡಿದೆ. ಹಲವು ಸಂವಿಧಾನದ ತಿದ್ದುಪಡಿಗಳಾಗಿವೆ. ಆದರೆ ಎಷ್ಟು ಬದಲಾವಣೆಗಳಾಗಬೇಕಿತ್ತೋ ಅಷ್ಟು ಬದಲಾಗಿಲ್ಲ. ಜೊತೆಗೆ ಕೆಲವು ವಿಷಯಗಳಲ್ಲಿ ಮುಂದೆ ಸಾಗುವ ಬದಲು ನಾವು ಹಿಂದೆ ಚಲಿಸುತ್ತಿದ್ದೇವೆ. ಇಂದು ನಾನು ಇಲ್ಲಿ ಯುವಜನರು ಮತ್ತು ಪ್ರಸ್ತುತ ಪರಿಸ್ಥಿತಿಯ ಕುರಿತು ಮಾತನಾಡುವಾಗ ನನಗನಿಸುತ್ತದೆ ದೇಶದಲ್ಲಿ ಪ್ರಗತಿಯಾಗುತ್ತಿಲ್ಲ. ನಾವು ಮುದೆ ಸಾಗುವ ಬದಲು ಹಿಂದೆ ಚಲಿಸುತ್ತಿದ್ದೇವೆ.

ಬಾಲ್ಯನಲ್ಲಿ ನಮಗೆ ಹೇಳುತ್ತಿದ್ದು ರಾಜಕಾರಣಿ ಬಹಳ ಕೆಟ್ಟದ್ದು ಅಂತ. ಯಾರಾದರೂ ರಾಜಕಾರಣಿಗಳು ಒಳ್ಳೆಯದು ಮಾಡಲು ಹೊರಟರೆ ಅವರನ್ನು ಮುಗಿಸಿಬಿಡುತ್ತಾರೆ ಎಂದು. ಅದಕ್ಕಾಗಿಯೇ ಇಂದು ಹಲವು ಮಧ್ಯಮವರ್ಗದ ಪೋಷಕರು ತಮ್ಮ ಮಕ್ಕಳು ರಾಜಕಾರಣಿಗಳಾಗಬೇಕೆಂದು ಬಯಸುವುದಿಲ್ಲ. ಬದಲಿಗೆ ವೈದ್ಯರೋ, ಇಂಜಿನಿಯರ್, ಆಟಗಾರರೋ ಆಗಬೇಕು ಎನ್ನುತ್ತಾರೆ. ಏನಾದರೂ ಆಗಲಿ ರಾಜಕಾರಣಿಯಾಗುವುದು ಬೇಡ ಎಂಬುದು ಸಾಮಾನ್ಯವಾಗಿದೆ. ಈ ಸಾಮಾಜಿಕ ಪರಿಸ್ಥಿಯಲ್ಲಿ ನಮ್ಮ ಹಕ್ಕುಗಳೇನು? ಎಂಬುದು ಯಾರಿಗೆ ಗೊತ್ತಿದೆ. ನಿನ್ನ ಹಕ್ಕುಗಳಿಗಾಗಿ ಹೋರಾಡು ಎಂದು ಯಾವ ಪೋಷಕರು ಹೇಳುವುದಿಲ್ಲ. ಹಾಗಾಗಿ ಯುವಜನರಿಗೆ ರಾಜನೀತಿ ಅರ್ಥವಾಗುತ್ತಿಲ್ಲ ಮಾತ್ರವಲ್ಲ ಅವರು ಯಾರನ್ನ ಪ್ರಶ್ನಿಸುತ್ತಿಲ್ಲ.

ಬದಲಿಗೆ ನಿನ್ನ ಆಸಕ್ತಿಯ ವಿಷಯ ಆಯ್ಕೆ ಮಾಡಿಕೊಂಡು ಚೆನ್ನಾಗಿ ಓದು, ಕೆರೀರ್ ರೂಪಿಸಿಕೊ ಎಂದು ಹೇಳುತ್ತಾರೆ. ಮಾರುಕಟ್ಟೆಯಲ್ಲಿ ಯಾವುದು ಡಿಮಾಂಡ್ ಇದೆಯೋ ಅದನ್ನು ಓದು ಎನ್ನುತ್ತಾರೆ. ಈ ರೀತಿ ಕೆರೀರ್ ಒತ್ತಡ ಹಾಕಿ ನಮ್ಮನ್ನು ಮೇಶಿನ್ ರೀತಿ ಮಾಡುತ್ತಿದ್ದಾರೆ. ಹಾಗಾಗಿ ಯುವಜನರಿಗೆ ರಾಜಕೀಯ ಪ್ರಬುದ್ಧತೆ ಬಂದಿಲ್ಲ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಬೇಸರಪಟ್ಟುಕೊಳ್ಳಬೇಕಿಲ್ಲ. ಇದರಿಂದಲೇ ನಮಗೆ ಜಾತ್ಯಾತೀತತೆಯ ಅರ್ಥ ಮತ್ತು ಮಹತ್ವ ಗೊತ್ತಾಗಿದೆ. ವೈವಿಧ್ಯತೆ ಮತ್ತು ಪ್ರಜಾಪ್ರಭುತ್ವ ಮಹತ್ವ ಮನವರಿಕೆಯಾಗಿದೆ. ದೇಶದ ಹಲವು ಸಮಸ್ಯೆಗಳು ಮುನ್ನಲೆಗೆ ಬಂದಿವೆ. ರಾಜಕೀಯ ಪ್ರಶ್ನೆಗಳು ಕೇಳಿಬರುತ್ತಿವೆ. ಇದರಿಂದಾಗಿ ಮುಂದೊಂದು ದಿನ ನೈಜ ರಾಜಕೀಯ ಅರಿವು ಎಲ್ಲರಿಗೂ ದಕ್ಕಲು ಸಾಧ್ಯ.

ಅರ್ಥಶಾಸ್ತ್ರದ ಮೇಲೆ ಧರ್ಮಶಾಸ್ತ್ರ ಬಂದು ಕುಳಿತಿದೆ. ಹಾಗಾಗಿ ಇಂದು ದೊಡ್ಡ ಮಟ್ಟದ ಆರ್ಥಿಕ ಕುಸಿತ ಎದುರಾಗಿದ್ದರೂ ಪ್ರಧಾನಿ ಏನೂ ಮಾಡಲಾಗುತ್ತಿಲ್ಲ. ಆದ್ದರಿಂದ ಅವರು ಮತ್ತಷ್ಟು ಧರ್ಮದ ಮೊರೆ ಹೋಗುತ್ತಿದ್ದಾರೆ.

ಇಂದು ದೇಶಭಕ್ತಿಯ ಹೆಸರಿನಲ್ಲಿ ಅಂಧಭಕ್ತಿಯನ್ನು ತುರುಕಲಾಗುತ್ತಿದೆ. ದೇಶವನ್ನು ಹಾಳುಮಾಡುತ್ತಿರುವ ಬಲಾಢ್ಯರನ್ನು ಪ್ರಶ್ನಿಸಿದರೆ ಅದು ದೇಶಪ್ರೇಮ. ಅದು ಬಿಟ್ಟು ಅಮಾಯಕರನ್ನು, ದುರ್ಬಲರನ್ನು ಪ್ರಶ್ನಿಸುವುದಲ್ಲ. ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ.

ಪ್ರಶ್ನಿಸುವ ಮನೋಭಾವ ನಮ್ಮ ಮನೆಗಳಿಂದಲೇ ಆರಂಭವಾಗಬೇಕು. ಶಿಕ್ಷಣ, ಉದ್ಯೋಗ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರಜಾಪ್ರಭುತ್ವ ವಾತವರಣವನ್ನು ಸೃಷ್ಟಿಸಬೇಕಿದೆ. ಎಲ್ಲರನ್ನು ಪ್ರಶ್ನಿಸುವ ಮನೋಭಾವವಿದ್ದಾಗ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಗೌರವ ಎಂದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...