Homeಕರ್ನಾಟಕಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

- Advertisement -
- Advertisement -

ಬಿ.ವಿ. ಕಕ್ಕಿಲ್ಲಾಯ ಜನ್ಮಶತಾಬ್ದಿ ಕಾರ್ಯಕ್ರಮವು ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ನಡೆಯಿತು. ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಡಾ. ಕನ್ನಯ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ‘ಕವಲು ದಾರಿಯಲ್ಲಿ ಭಾರತದ ಯುವಜನರು’ ವಿಷಯದ ಕುರಿತು ಮಾತನಾಡಿದರು. ಅವರ ಭಾಷಣದ ವಿವರ ಇಲ್ಲಿದೆ.

ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹಕ್ಕೆ ತುತ್ತಾಗ ಜನರಿಗೆ ಶ್ರದ್ದಾಂಜಲಿಯನ್ನು ಸಲ್ಲಿಸುತ್ತೇನೆ. ಬಿ.ವಿ. ಕಕ್ಕಿಲ್ಲಾಯರವರಿಗೆ ಗೌರವಗಳನ್ನು ಸಲ್ಲಿಸುತ್ತೇನೆ. ಕವಲು ದಾರಿಯಲ್ಲಿ ಭಾರತದ ಯುವಜನರು ಎಂಬ ವಿಷಯದ ಬಗ್ಗೆ ನಾನೀಗ ಮಾತಾಡಲಿದ್ದೇನೆ. ಅದಕ್ಕಿಂತ ಮುಂಚೆ ನಿಮ್ಮ ಅನುಮತಿಯೊಂದಿಗೆ ಹಿಂದಿಯಲ್ಲಿ ಮಾತಾಡುತ್ತೇನೆ. ಏಕೆಂದರೆ ನನಗೆ ಇಂಗ್ಲಿಷ್ ಅಷ್ಟು ಚೆನ್ನಾಗಿ ಮಾತನಾಡಲು ಬರುವುದಿಲ್ಲ.

ನಾನು ಖಂಡಿತಾ ಹಿಂದಿಯನ್ನು ನಿಮ್ಮ ಮೇಲೆ ಹೇರುವುದಿಲ್ಲ. ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಅಷ್ಟೇ. ಅದಕ್ಕಾಗಿ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನಮ್ಮ ಪೀಳೀಗೆಯ ಯುವಜನರ ಸಮಸ್ಯೆ ಇತಿಹಾಸವನ್ನು ಸರಿಯಾಗಿ ಓದಿಲ್ಲದಿರುವುದು. ಸ್ವಾತಂತ್ರ್ಯ ಪೂರ್ವದಲ್ಲಿ ಇದೇ ಮಂಗಳೂರಿನಲ್ಲಿ ಮಸ್ಲೊಂಕಿ ಎಂಬುವ ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಮತ್ತು ಆತನ ಸಂಗಾತಿಗಳನ್ನು ಒಂದು ಪ್ರತಿಭಟನೆಯ ನಂತರ ಬ್ರಿಟಿಷ್ ಪೊಲೀಸರು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದರು. ನನಗೂ ಅವನಿಗೂ ಒಳ್ಳೇಯ ಸಂಬಂಧವಿದೆ ಅನ್ನಿಸಿತು. ಈಗಲೂ ನಮ್ಮ ದೇಶದಲ್ಲಿ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ ಅವರನ್ನು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದಾರೆ. 70 ವರ್ಷದಲ್ಲಿ ಹಾಗೆಯೇ ಇದೆ. ಈಗ ಬ್ರಿಟಿಷ್ ಪೊಲೀಸರ ಬದಲಾಗಿ ನಮ್ಮದೇ ಸೈನಿಕರಿದ್ದಾರೆ ಅಷ್ಟೇ.

ಎ.ಐ.ಎಸ್.ಎಫ್ ಭಾರತದ ಮೊದಲ ವಿದ್ಯಾರ್ಥಿ ಸಂಘಟನೆಯಾಗಿದೆ. 1936ರಲ್ಲಿಯೇ ಪ್ರಾರಂಭವಾಗಿದೆ. ಇದು ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದೆ. ಬ್ರಿಟಿಷರೊಡನೆ ಹೋರಾಟ ಮಾಡಿದೆ. 1952 ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿಯೂ ಭಾಗವಹಿಸಿದದ ಇತಿಹಾಸ ಇದೆ. ದೇಶ ನಿರ್ಮಾನದಲ್ಲಿ ತೊಡಗಿಸಿಕೊಂಡಿದೆ. ಸಿನೆಮಾ, ವಿಜ್ಞಾನ, ಕಲೆ, ಸಾಹಿತ್ಯ, ತಂತ್ರಜ್ಞಾನ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಎ.ಐ.ಎಸ್.ಎಫ್ ನ ಹೆಸರು ಇದೆ.

ಆಗ ಅದು ಭಾರತದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳಿರಬೇಕು. ಎಲ್ಲರಿಗೂ ಗೌರದ ಉದ್ಯೋಗ ಸಿಗಬೇಕು. ನಮ್ಮ ದೇಶದ ವೈವಿಧ್ಯತೆಯನ್ನು ಸ್ಪೀಕರಿಸಬೇಕು. ಭಾರತದ ಪರಿಕಲ್ಪನೆಯಲ್ಲ ಜಾತಿ, ಲಿಂಗ, ಭಾಷೆ, ಧರ್ಮದ ಆಧಾರದಲ್ಲಿ ತಾರತಮ್ಯ ಇರಬಾರದು ಎಂಬ ಕನಸು ಕಂಡಿತು. ನಾನು ಹಲವು ಪ್ರಗತಿಪರರನ್ನು ಭೇಟಿಯಾಗುತ್ತಿದ್ದೇನೆ. ಅವರು ಬೇಸರದಿಂದ ಮಾತಾಡುತ್ತಿದ್ದಾರೆ, ಎಲ್ಲಾ ಹಾಳಾಗುತ್ತಿದೆ, ಏನು ಬದಲಾವಣೆ ಆಗುತ್ತಿಲ್ಲವೆನ್ನುವುದು ಅವರ ಆರೋಪ. 70 ವರ್ಷದಲ್ಲಿ ಏನು ಆಗಿಲ್ಲ ಎಂದು. ನಾನು ಹೇಳುತ್ತೇನೆ ಈ 70 ವರ್ಷದಲ್ಲಿ ಬಹಳಷ್ಟು ಆಗಿದೆ. ಪ್ರಜಾಪ್ರಭುತ್ವ ಸ್ಪಲ್ಪ ಪ್ರಬುದ್ಧಗೊಂಡಿದೆ. ಹಲವು ಸಂವಿಧಾನದ ತಿದ್ದುಪಡಿಗಳಾಗಿವೆ. ಆದರೆ ಎಷ್ಟು ಬದಲಾವಣೆಗಳಾಗಬೇಕಿತ್ತೋ ಅಷ್ಟು ಬದಲಾಗಿಲ್ಲ. ಜೊತೆಗೆ ಕೆಲವು ವಿಷಯಗಳಲ್ಲಿ ಮುಂದೆ ಸಾಗುವ ಬದಲು ನಾವು ಹಿಂದೆ ಚಲಿಸುತ್ತಿದ್ದೇವೆ. ಇಂದು ನಾನು ಇಲ್ಲಿ ಯುವಜನರು ಮತ್ತು ಪ್ರಸ್ತುತ ಪರಿಸ್ಥಿತಿಯ ಕುರಿತು ಮಾತನಾಡುವಾಗ ನನಗನಿಸುತ್ತದೆ ದೇಶದಲ್ಲಿ ಪ್ರಗತಿಯಾಗುತ್ತಿಲ್ಲ. ನಾವು ಮುದೆ ಸಾಗುವ ಬದಲು ಹಿಂದೆ ಚಲಿಸುತ್ತಿದ್ದೇವೆ.

ಬಾಲ್ಯನಲ್ಲಿ ನಮಗೆ ಹೇಳುತ್ತಿದ್ದು ರಾಜಕಾರಣಿ ಬಹಳ ಕೆಟ್ಟದ್ದು ಅಂತ. ಯಾರಾದರೂ ರಾಜಕಾರಣಿಗಳು ಒಳ್ಳೆಯದು ಮಾಡಲು ಹೊರಟರೆ ಅವರನ್ನು ಮುಗಿಸಿಬಿಡುತ್ತಾರೆ ಎಂದು. ಅದಕ್ಕಾಗಿಯೇ ಇಂದು ಹಲವು ಮಧ್ಯಮವರ್ಗದ ಪೋಷಕರು ತಮ್ಮ ಮಕ್ಕಳು ರಾಜಕಾರಣಿಗಳಾಗಬೇಕೆಂದು ಬಯಸುವುದಿಲ್ಲ. ಬದಲಿಗೆ ವೈದ್ಯರೋ, ಇಂಜಿನಿಯರ್, ಆಟಗಾರರೋ ಆಗಬೇಕು ಎನ್ನುತ್ತಾರೆ. ಏನಾದರೂ ಆಗಲಿ ರಾಜಕಾರಣಿಯಾಗುವುದು ಬೇಡ ಎಂಬುದು ಸಾಮಾನ್ಯವಾಗಿದೆ. ಈ ಸಾಮಾಜಿಕ ಪರಿಸ್ಥಿಯಲ್ಲಿ ನಮ್ಮ ಹಕ್ಕುಗಳೇನು? ಎಂಬುದು ಯಾರಿಗೆ ಗೊತ್ತಿದೆ. ನಿನ್ನ ಹಕ್ಕುಗಳಿಗಾಗಿ ಹೋರಾಡು ಎಂದು ಯಾವ ಪೋಷಕರು ಹೇಳುವುದಿಲ್ಲ. ಹಾಗಾಗಿ ಯುವಜನರಿಗೆ ರಾಜನೀತಿ ಅರ್ಥವಾಗುತ್ತಿಲ್ಲ ಮಾತ್ರವಲ್ಲ ಅವರು ಯಾರನ್ನ ಪ್ರಶ್ನಿಸುತ್ತಿಲ್ಲ.

ಬದಲಿಗೆ ನಿನ್ನ ಆಸಕ್ತಿಯ ವಿಷಯ ಆಯ್ಕೆ ಮಾಡಿಕೊಂಡು ಚೆನ್ನಾಗಿ ಓದು, ಕೆರೀರ್ ರೂಪಿಸಿಕೊ ಎಂದು ಹೇಳುತ್ತಾರೆ. ಮಾರುಕಟ್ಟೆಯಲ್ಲಿ ಯಾವುದು ಡಿಮಾಂಡ್ ಇದೆಯೋ ಅದನ್ನು ಓದು ಎನ್ನುತ್ತಾರೆ. ಈ ರೀತಿ ಕೆರೀರ್ ಒತ್ತಡ ಹಾಕಿ ನಮ್ಮನ್ನು ಮೇಶಿನ್ ರೀತಿ ಮಾಡುತ್ತಿದ್ದಾರೆ. ಹಾಗಾಗಿ ಯುವಜನರಿಗೆ ರಾಜಕೀಯ ಪ್ರಬುದ್ಧತೆ ಬಂದಿಲ್ಲ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಬೇಸರಪಟ್ಟುಕೊಳ್ಳಬೇಕಿಲ್ಲ. ಇದರಿಂದಲೇ ನಮಗೆ ಜಾತ್ಯಾತೀತತೆಯ ಅರ್ಥ ಮತ್ತು ಮಹತ್ವ ಗೊತ್ತಾಗಿದೆ. ವೈವಿಧ್ಯತೆ ಮತ್ತು ಪ್ರಜಾಪ್ರಭುತ್ವ ಮಹತ್ವ ಮನವರಿಕೆಯಾಗಿದೆ. ದೇಶದ ಹಲವು ಸಮಸ್ಯೆಗಳು ಮುನ್ನಲೆಗೆ ಬಂದಿವೆ. ರಾಜಕೀಯ ಪ್ರಶ್ನೆಗಳು ಕೇಳಿಬರುತ್ತಿವೆ. ಇದರಿಂದಾಗಿ ಮುಂದೊಂದು ದಿನ ನೈಜ ರಾಜಕೀಯ ಅರಿವು ಎಲ್ಲರಿಗೂ ದಕ್ಕಲು ಸಾಧ್ಯ.

ಅರ್ಥಶಾಸ್ತ್ರದ ಮೇಲೆ ಧರ್ಮಶಾಸ್ತ್ರ ಬಂದು ಕುಳಿತಿದೆ. ಹಾಗಾಗಿ ಇಂದು ದೊಡ್ಡ ಮಟ್ಟದ ಆರ್ಥಿಕ ಕುಸಿತ ಎದುರಾಗಿದ್ದರೂ ಪ್ರಧಾನಿ ಏನೂ ಮಾಡಲಾಗುತ್ತಿಲ್ಲ. ಆದ್ದರಿಂದ ಅವರು ಮತ್ತಷ್ಟು ಧರ್ಮದ ಮೊರೆ ಹೋಗುತ್ತಿದ್ದಾರೆ.

ಇಂದು ದೇಶಭಕ್ತಿಯ ಹೆಸರಿನಲ್ಲಿ ಅಂಧಭಕ್ತಿಯನ್ನು ತುರುಕಲಾಗುತ್ತಿದೆ. ದೇಶವನ್ನು ಹಾಳುಮಾಡುತ್ತಿರುವ ಬಲಾಢ್ಯರನ್ನು ಪ್ರಶ್ನಿಸಿದರೆ ಅದು ದೇಶಪ್ರೇಮ. ಅದು ಬಿಟ್ಟು ಅಮಾಯಕರನ್ನು, ದುರ್ಬಲರನ್ನು ಪ್ರಶ್ನಿಸುವುದಲ್ಲ. ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ.

ಪ್ರಶ್ನಿಸುವ ಮನೋಭಾವ ನಮ್ಮ ಮನೆಗಳಿಂದಲೇ ಆರಂಭವಾಗಬೇಕು. ಶಿಕ್ಷಣ, ಉದ್ಯೋಗ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರಜಾಪ್ರಭುತ್ವ ವಾತವರಣವನ್ನು ಸೃಷ್ಟಿಸಬೇಕಿದೆ. ಎಲ್ಲರನ್ನು ಪ್ರಶ್ನಿಸುವ ಮನೋಭಾವವಿದ್ದಾಗ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಗೌರವ ಎಂದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...