Homeಕರ್ನಾಟಕಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

- Advertisement -
- Advertisement -

ಬಿ.ವಿ. ಕಕ್ಕಿಲ್ಲಾಯ ಜನ್ಮಶತಾಬ್ದಿ ಕಾರ್ಯಕ್ರಮವು ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ನಡೆಯಿತು. ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಡಾ. ಕನ್ನಯ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ‘ಕವಲು ದಾರಿಯಲ್ಲಿ ಭಾರತದ ಯುವಜನರು’ ವಿಷಯದ ಕುರಿತು ಮಾತನಾಡಿದರು. ಅವರ ಭಾಷಣದ ವಿವರ ಇಲ್ಲಿದೆ.

ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹಕ್ಕೆ ತುತ್ತಾಗ ಜನರಿಗೆ ಶ್ರದ್ದಾಂಜಲಿಯನ್ನು ಸಲ್ಲಿಸುತ್ತೇನೆ. ಬಿ.ವಿ. ಕಕ್ಕಿಲ್ಲಾಯರವರಿಗೆ ಗೌರವಗಳನ್ನು ಸಲ್ಲಿಸುತ್ತೇನೆ. ಕವಲು ದಾರಿಯಲ್ಲಿ ಭಾರತದ ಯುವಜನರು ಎಂಬ ವಿಷಯದ ಬಗ್ಗೆ ನಾನೀಗ ಮಾತಾಡಲಿದ್ದೇನೆ. ಅದಕ್ಕಿಂತ ಮುಂಚೆ ನಿಮ್ಮ ಅನುಮತಿಯೊಂದಿಗೆ ಹಿಂದಿಯಲ್ಲಿ ಮಾತಾಡುತ್ತೇನೆ. ಏಕೆಂದರೆ ನನಗೆ ಇಂಗ್ಲಿಷ್ ಅಷ್ಟು ಚೆನ್ನಾಗಿ ಮಾತನಾಡಲು ಬರುವುದಿಲ್ಲ.

ನಾನು ಖಂಡಿತಾ ಹಿಂದಿಯನ್ನು ನಿಮ್ಮ ಮೇಲೆ ಹೇರುವುದಿಲ್ಲ. ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಅಷ್ಟೇ. ಅದಕ್ಕಾಗಿ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನಮ್ಮ ಪೀಳೀಗೆಯ ಯುವಜನರ ಸಮಸ್ಯೆ ಇತಿಹಾಸವನ್ನು ಸರಿಯಾಗಿ ಓದಿಲ್ಲದಿರುವುದು. ಸ್ವಾತಂತ್ರ್ಯ ಪೂರ್ವದಲ್ಲಿ ಇದೇ ಮಂಗಳೂರಿನಲ್ಲಿ ಮಸ್ಲೊಂಕಿ ಎಂಬುವ ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಮತ್ತು ಆತನ ಸಂಗಾತಿಗಳನ್ನು ಒಂದು ಪ್ರತಿಭಟನೆಯ ನಂತರ ಬ್ರಿಟಿಷ್ ಪೊಲೀಸರು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದರು. ನನಗೂ ಅವನಿಗೂ ಒಳ್ಳೇಯ ಸಂಬಂಧವಿದೆ ಅನ್ನಿಸಿತು. ಈಗಲೂ ನಮ್ಮ ದೇಶದಲ್ಲಿ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ ಅವರನ್ನು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದಾರೆ. 70 ವರ್ಷದಲ್ಲಿ ಹಾಗೆಯೇ ಇದೆ. ಈಗ ಬ್ರಿಟಿಷ್ ಪೊಲೀಸರ ಬದಲಾಗಿ ನಮ್ಮದೇ ಸೈನಿಕರಿದ್ದಾರೆ ಅಷ್ಟೇ.

ಎ.ಐ.ಎಸ್.ಎಫ್ ಭಾರತದ ಮೊದಲ ವಿದ್ಯಾರ್ಥಿ ಸಂಘಟನೆಯಾಗಿದೆ. 1936ರಲ್ಲಿಯೇ ಪ್ರಾರಂಭವಾಗಿದೆ. ಇದು ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದೆ. ಬ್ರಿಟಿಷರೊಡನೆ ಹೋರಾಟ ಮಾಡಿದೆ. 1952 ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿಯೂ ಭಾಗವಹಿಸಿದದ ಇತಿಹಾಸ ಇದೆ. ದೇಶ ನಿರ್ಮಾನದಲ್ಲಿ ತೊಡಗಿಸಿಕೊಂಡಿದೆ. ಸಿನೆಮಾ, ವಿಜ್ಞಾನ, ಕಲೆ, ಸಾಹಿತ್ಯ, ತಂತ್ರಜ್ಞಾನ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಎ.ಐ.ಎಸ್.ಎಫ್ ನ ಹೆಸರು ಇದೆ.

ಆಗ ಅದು ಭಾರತದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳಿರಬೇಕು. ಎಲ್ಲರಿಗೂ ಗೌರದ ಉದ್ಯೋಗ ಸಿಗಬೇಕು. ನಮ್ಮ ದೇಶದ ವೈವಿಧ್ಯತೆಯನ್ನು ಸ್ಪೀಕರಿಸಬೇಕು. ಭಾರತದ ಪರಿಕಲ್ಪನೆಯಲ್ಲ ಜಾತಿ, ಲಿಂಗ, ಭಾಷೆ, ಧರ್ಮದ ಆಧಾರದಲ್ಲಿ ತಾರತಮ್ಯ ಇರಬಾರದು ಎಂಬ ಕನಸು ಕಂಡಿತು. ನಾನು ಹಲವು ಪ್ರಗತಿಪರರನ್ನು ಭೇಟಿಯಾಗುತ್ತಿದ್ದೇನೆ. ಅವರು ಬೇಸರದಿಂದ ಮಾತಾಡುತ್ತಿದ್ದಾರೆ, ಎಲ್ಲಾ ಹಾಳಾಗುತ್ತಿದೆ, ಏನು ಬದಲಾವಣೆ ಆಗುತ್ತಿಲ್ಲವೆನ್ನುವುದು ಅವರ ಆರೋಪ. 70 ವರ್ಷದಲ್ಲಿ ಏನು ಆಗಿಲ್ಲ ಎಂದು. ನಾನು ಹೇಳುತ್ತೇನೆ ಈ 70 ವರ್ಷದಲ್ಲಿ ಬಹಳಷ್ಟು ಆಗಿದೆ. ಪ್ರಜಾಪ್ರಭುತ್ವ ಸ್ಪಲ್ಪ ಪ್ರಬುದ್ಧಗೊಂಡಿದೆ. ಹಲವು ಸಂವಿಧಾನದ ತಿದ್ದುಪಡಿಗಳಾಗಿವೆ. ಆದರೆ ಎಷ್ಟು ಬದಲಾವಣೆಗಳಾಗಬೇಕಿತ್ತೋ ಅಷ್ಟು ಬದಲಾಗಿಲ್ಲ. ಜೊತೆಗೆ ಕೆಲವು ವಿಷಯಗಳಲ್ಲಿ ಮುಂದೆ ಸಾಗುವ ಬದಲು ನಾವು ಹಿಂದೆ ಚಲಿಸುತ್ತಿದ್ದೇವೆ. ಇಂದು ನಾನು ಇಲ್ಲಿ ಯುವಜನರು ಮತ್ತು ಪ್ರಸ್ತುತ ಪರಿಸ್ಥಿತಿಯ ಕುರಿತು ಮಾತನಾಡುವಾಗ ನನಗನಿಸುತ್ತದೆ ದೇಶದಲ್ಲಿ ಪ್ರಗತಿಯಾಗುತ್ತಿಲ್ಲ. ನಾವು ಮುದೆ ಸಾಗುವ ಬದಲು ಹಿಂದೆ ಚಲಿಸುತ್ತಿದ್ದೇವೆ.

ಬಾಲ್ಯನಲ್ಲಿ ನಮಗೆ ಹೇಳುತ್ತಿದ್ದು ರಾಜಕಾರಣಿ ಬಹಳ ಕೆಟ್ಟದ್ದು ಅಂತ. ಯಾರಾದರೂ ರಾಜಕಾರಣಿಗಳು ಒಳ್ಳೆಯದು ಮಾಡಲು ಹೊರಟರೆ ಅವರನ್ನು ಮುಗಿಸಿಬಿಡುತ್ತಾರೆ ಎಂದು. ಅದಕ್ಕಾಗಿಯೇ ಇಂದು ಹಲವು ಮಧ್ಯಮವರ್ಗದ ಪೋಷಕರು ತಮ್ಮ ಮಕ್ಕಳು ರಾಜಕಾರಣಿಗಳಾಗಬೇಕೆಂದು ಬಯಸುವುದಿಲ್ಲ. ಬದಲಿಗೆ ವೈದ್ಯರೋ, ಇಂಜಿನಿಯರ್, ಆಟಗಾರರೋ ಆಗಬೇಕು ಎನ್ನುತ್ತಾರೆ. ಏನಾದರೂ ಆಗಲಿ ರಾಜಕಾರಣಿಯಾಗುವುದು ಬೇಡ ಎಂಬುದು ಸಾಮಾನ್ಯವಾಗಿದೆ. ಈ ಸಾಮಾಜಿಕ ಪರಿಸ್ಥಿಯಲ್ಲಿ ನಮ್ಮ ಹಕ್ಕುಗಳೇನು? ಎಂಬುದು ಯಾರಿಗೆ ಗೊತ್ತಿದೆ. ನಿನ್ನ ಹಕ್ಕುಗಳಿಗಾಗಿ ಹೋರಾಡು ಎಂದು ಯಾವ ಪೋಷಕರು ಹೇಳುವುದಿಲ್ಲ. ಹಾಗಾಗಿ ಯುವಜನರಿಗೆ ರಾಜನೀತಿ ಅರ್ಥವಾಗುತ್ತಿಲ್ಲ ಮಾತ್ರವಲ್ಲ ಅವರು ಯಾರನ್ನ ಪ್ರಶ್ನಿಸುತ್ತಿಲ್ಲ.

ಬದಲಿಗೆ ನಿನ್ನ ಆಸಕ್ತಿಯ ವಿಷಯ ಆಯ್ಕೆ ಮಾಡಿಕೊಂಡು ಚೆನ್ನಾಗಿ ಓದು, ಕೆರೀರ್ ರೂಪಿಸಿಕೊ ಎಂದು ಹೇಳುತ್ತಾರೆ. ಮಾರುಕಟ್ಟೆಯಲ್ಲಿ ಯಾವುದು ಡಿಮಾಂಡ್ ಇದೆಯೋ ಅದನ್ನು ಓದು ಎನ್ನುತ್ತಾರೆ. ಈ ರೀತಿ ಕೆರೀರ್ ಒತ್ತಡ ಹಾಕಿ ನಮ್ಮನ್ನು ಮೇಶಿನ್ ರೀತಿ ಮಾಡುತ್ತಿದ್ದಾರೆ. ಹಾಗಾಗಿ ಯುವಜನರಿಗೆ ರಾಜಕೀಯ ಪ್ರಬುದ್ಧತೆ ಬಂದಿಲ್ಲ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಬೇಸರಪಟ್ಟುಕೊಳ್ಳಬೇಕಿಲ್ಲ. ಇದರಿಂದಲೇ ನಮಗೆ ಜಾತ್ಯಾತೀತತೆಯ ಅರ್ಥ ಮತ್ತು ಮಹತ್ವ ಗೊತ್ತಾಗಿದೆ. ವೈವಿಧ್ಯತೆ ಮತ್ತು ಪ್ರಜಾಪ್ರಭುತ್ವ ಮಹತ್ವ ಮನವರಿಕೆಯಾಗಿದೆ. ದೇಶದ ಹಲವು ಸಮಸ್ಯೆಗಳು ಮುನ್ನಲೆಗೆ ಬಂದಿವೆ. ರಾಜಕೀಯ ಪ್ರಶ್ನೆಗಳು ಕೇಳಿಬರುತ್ತಿವೆ. ಇದರಿಂದಾಗಿ ಮುಂದೊಂದು ದಿನ ನೈಜ ರಾಜಕೀಯ ಅರಿವು ಎಲ್ಲರಿಗೂ ದಕ್ಕಲು ಸಾಧ್ಯ.

ಅರ್ಥಶಾಸ್ತ್ರದ ಮೇಲೆ ಧರ್ಮಶಾಸ್ತ್ರ ಬಂದು ಕುಳಿತಿದೆ. ಹಾಗಾಗಿ ಇಂದು ದೊಡ್ಡ ಮಟ್ಟದ ಆರ್ಥಿಕ ಕುಸಿತ ಎದುರಾಗಿದ್ದರೂ ಪ್ರಧಾನಿ ಏನೂ ಮಾಡಲಾಗುತ್ತಿಲ್ಲ. ಆದ್ದರಿಂದ ಅವರು ಮತ್ತಷ್ಟು ಧರ್ಮದ ಮೊರೆ ಹೋಗುತ್ತಿದ್ದಾರೆ.

ಇಂದು ದೇಶಭಕ್ತಿಯ ಹೆಸರಿನಲ್ಲಿ ಅಂಧಭಕ್ತಿಯನ್ನು ತುರುಕಲಾಗುತ್ತಿದೆ. ದೇಶವನ್ನು ಹಾಳುಮಾಡುತ್ತಿರುವ ಬಲಾಢ್ಯರನ್ನು ಪ್ರಶ್ನಿಸಿದರೆ ಅದು ದೇಶಪ್ರೇಮ. ಅದು ಬಿಟ್ಟು ಅಮಾಯಕರನ್ನು, ದುರ್ಬಲರನ್ನು ಪ್ರಶ್ನಿಸುವುದಲ್ಲ. ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ.

ಪ್ರಶ್ನಿಸುವ ಮನೋಭಾವ ನಮ್ಮ ಮನೆಗಳಿಂದಲೇ ಆರಂಭವಾಗಬೇಕು. ಶಿಕ್ಷಣ, ಉದ್ಯೋಗ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರಜಾಪ್ರಭುತ್ವ ವಾತವರಣವನ್ನು ಸೃಷ್ಟಿಸಬೇಕಿದೆ. ಎಲ್ಲರನ್ನು ಪ್ರಶ್ನಿಸುವ ಮನೋಭಾವವಿದ್ದಾಗ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಗೌರವ ಎಂದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...