Homeಕರ್ನಾಟಕಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ: ಮಂಗಳೂರಿನಲ್ಲಿ ಕನ್ಹಯ್ಯ ಕುಮಾರ್ ಭಾಷಣ

- Advertisement -
- Advertisement -

ಬಿ.ವಿ. ಕಕ್ಕಿಲ್ಲಾಯ ಜನ್ಮಶತಾಬ್ದಿ ಕಾರ್ಯಕ್ರಮವು ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ನಡೆಯಿತು. ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಡಾ. ಕನ್ನಯ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ‘ಕವಲು ದಾರಿಯಲ್ಲಿ ಭಾರತದ ಯುವಜನರು’ ವಿಷಯದ ಕುರಿತು ಮಾತನಾಡಿದರು. ಅವರ ಭಾಷಣದ ವಿವರ ಇಲ್ಲಿದೆ.

ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹಕ್ಕೆ ತುತ್ತಾಗ ಜನರಿಗೆ ಶ್ರದ್ದಾಂಜಲಿಯನ್ನು ಸಲ್ಲಿಸುತ್ತೇನೆ. ಬಿ.ವಿ. ಕಕ್ಕಿಲ್ಲಾಯರವರಿಗೆ ಗೌರವಗಳನ್ನು ಸಲ್ಲಿಸುತ್ತೇನೆ. ಕವಲು ದಾರಿಯಲ್ಲಿ ಭಾರತದ ಯುವಜನರು ಎಂಬ ವಿಷಯದ ಬಗ್ಗೆ ನಾನೀಗ ಮಾತಾಡಲಿದ್ದೇನೆ. ಅದಕ್ಕಿಂತ ಮುಂಚೆ ನಿಮ್ಮ ಅನುಮತಿಯೊಂದಿಗೆ ಹಿಂದಿಯಲ್ಲಿ ಮಾತಾಡುತ್ತೇನೆ. ಏಕೆಂದರೆ ನನಗೆ ಇಂಗ್ಲಿಷ್ ಅಷ್ಟು ಚೆನ್ನಾಗಿ ಮಾತನಾಡಲು ಬರುವುದಿಲ್ಲ.

ನಾನು ಖಂಡಿತಾ ಹಿಂದಿಯನ್ನು ನಿಮ್ಮ ಮೇಲೆ ಹೇರುವುದಿಲ್ಲ. ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಅಷ್ಟೇ. ಅದಕ್ಕಾಗಿ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನಮ್ಮ ಪೀಳೀಗೆಯ ಯುವಜನರ ಸಮಸ್ಯೆ ಇತಿಹಾಸವನ್ನು ಸರಿಯಾಗಿ ಓದಿಲ್ಲದಿರುವುದು. ಸ್ವಾತಂತ್ರ್ಯ ಪೂರ್ವದಲ್ಲಿ ಇದೇ ಮಂಗಳೂರಿನಲ್ಲಿ ಮಸ್ಲೊಂಕಿ ಎಂಬುವ ಎ.ಐ.ಎಸ್.ಎಫ್ ನ ವಿದ್ಯಾರ್ಥಿ ನಾಯಕ ಮತ್ತು ಆತನ ಸಂಗಾತಿಗಳನ್ನು ಒಂದು ಪ್ರತಿಭಟನೆಯ ನಂತರ ಬ್ರಿಟಿಷ್ ಪೊಲೀಸರು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದರು. ನನಗೂ ಅವನಿಗೂ ಒಳ್ಳೇಯ ಸಂಬಂಧವಿದೆ ಅನ್ನಿಸಿತು. ಈಗಲೂ ನಮ್ಮ ದೇಶದಲ್ಲಿ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದರೆ ಅವರನ್ನು ಬಂಧಿಸಿ ದೇಶದ್ರೋಹಿ ಎಂಬ ಕೇಸನ್ನು ದಾಖಲಿಸಿದ್ದಾರೆ. 70 ವರ್ಷದಲ್ಲಿ ಹಾಗೆಯೇ ಇದೆ. ಈಗ ಬ್ರಿಟಿಷ್ ಪೊಲೀಸರ ಬದಲಾಗಿ ನಮ್ಮದೇ ಸೈನಿಕರಿದ್ದಾರೆ ಅಷ್ಟೇ.

ಎ.ಐ.ಎಸ್.ಎಫ್ ಭಾರತದ ಮೊದಲ ವಿದ್ಯಾರ್ಥಿ ಸಂಘಟನೆಯಾಗಿದೆ. 1936ರಲ್ಲಿಯೇ ಪ್ರಾರಂಭವಾಗಿದೆ. ಇದು ಈ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದೆ. ಬ್ರಿಟಿಷರೊಡನೆ ಹೋರಾಟ ಮಾಡಿದೆ. 1952 ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿಯೂ ಭಾಗವಹಿಸಿದದ ಇತಿಹಾಸ ಇದೆ. ದೇಶ ನಿರ್ಮಾನದಲ್ಲಿ ತೊಡಗಿಸಿಕೊಂಡಿದೆ. ಸಿನೆಮಾ, ವಿಜ್ಞಾನ, ಕಲೆ, ಸಾಹಿತ್ಯ, ತಂತ್ರಜ್ಞಾನ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಎ.ಐ.ಎಸ್.ಎಫ್ ನ ಹೆಸರು ಇದೆ.

ಆಗ ಅದು ಭಾರತದಲ್ಲಿ ಎಲ್ಲರಿಗೂ ಸಮಾನ ಹಕ್ಕುಗಳಿರಬೇಕು. ಎಲ್ಲರಿಗೂ ಗೌರದ ಉದ್ಯೋಗ ಸಿಗಬೇಕು. ನಮ್ಮ ದೇಶದ ವೈವಿಧ್ಯತೆಯನ್ನು ಸ್ಪೀಕರಿಸಬೇಕು. ಭಾರತದ ಪರಿಕಲ್ಪನೆಯಲ್ಲ ಜಾತಿ, ಲಿಂಗ, ಭಾಷೆ, ಧರ್ಮದ ಆಧಾರದಲ್ಲಿ ತಾರತಮ್ಯ ಇರಬಾರದು ಎಂಬ ಕನಸು ಕಂಡಿತು. ನಾನು ಹಲವು ಪ್ರಗತಿಪರರನ್ನು ಭೇಟಿಯಾಗುತ್ತಿದ್ದೇನೆ. ಅವರು ಬೇಸರದಿಂದ ಮಾತಾಡುತ್ತಿದ್ದಾರೆ, ಎಲ್ಲಾ ಹಾಳಾಗುತ್ತಿದೆ, ಏನು ಬದಲಾವಣೆ ಆಗುತ್ತಿಲ್ಲವೆನ್ನುವುದು ಅವರ ಆರೋಪ. 70 ವರ್ಷದಲ್ಲಿ ಏನು ಆಗಿಲ್ಲ ಎಂದು. ನಾನು ಹೇಳುತ್ತೇನೆ ಈ 70 ವರ್ಷದಲ್ಲಿ ಬಹಳಷ್ಟು ಆಗಿದೆ. ಪ್ರಜಾಪ್ರಭುತ್ವ ಸ್ಪಲ್ಪ ಪ್ರಬುದ್ಧಗೊಂಡಿದೆ. ಹಲವು ಸಂವಿಧಾನದ ತಿದ್ದುಪಡಿಗಳಾಗಿವೆ. ಆದರೆ ಎಷ್ಟು ಬದಲಾವಣೆಗಳಾಗಬೇಕಿತ್ತೋ ಅಷ್ಟು ಬದಲಾಗಿಲ್ಲ. ಜೊತೆಗೆ ಕೆಲವು ವಿಷಯಗಳಲ್ಲಿ ಮುಂದೆ ಸಾಗುವ ಬದಲು ನಾವು ಹಿಂದೆ ಚಲಿಸುತ್ತಿದ್ದೇವೆ. ಇಂದು ನಾನು ಇಲ್ಲಿ ಯುವಜನರು ಮತ್ತು ಪ್ರಸ್ತುತ ಪರಿಸ್ಥಿತಿಯ ಕುರಿತು ಮಾತನಾಡುವಾಗ ನನಗನಿಸುತ್ತದೆ ದೇಶದಲ್ಲಿ ಪ್ರಗತಿಯಾಗುತ್ತಿಲ್ಲ. ನಾವು ಮುದೆ ಸಾಗುವ ಬದಲು ಹಿಂದೆ ಚಲಿಸುತ್ತಿದ್ದೇವೆ.

ಬಾಲ್ಯನಲ್ಲಿ ನಮಗೆ ಹೇಳುತ್ತಿದ್ದು ರಾಜಕಾರಣಿ ಬಹಳ ಕೆಟ್ಟದ್ದು ಅಂತ. ಯಾರಾದರೂ ರಾಜಕಾರಣಿಗಳು ಒಳ್ಳೆಯದು ಮಾಡಲು ಹೊರಟರೆ ಅವರನ್ನು ಮುಗಿಸಿಬಿಡುತ್ತಾರೆ ಎಂದು. ಅದಕ್ಕಾಗಿಯೇ ಇಂದು ಹಲವು ಮಧ್ಯಮವರ್ಗದ ಪೋಷಕರು ತಮ್ಮ ಮಕ್ಕಳು ರಾಜಕಾರಣಿಗಳಾಗಬೇಕೆಂದು ಬಯಸುವುದಿಲ್ಲ. ಬದಲಿಗೆ ವೈದ್ಯರೋ, ಇಂಜಿನಿಯರ್, ಆಟಗಾರರೋ ಆಗಬೇಕು ಎನ್ನುತ್ತಾರೆ. ಏನಾದರೂ ಆಗಲಿ ರಾಜಕಾರಣಿಯಾಗುವುದು ಬೇಡ ಎಂಬುದು ಸಾಮಾನ್ಯವಾಗಿದೆ. ಈ ಸಾಮಾಜಿಕ ಪರಿಸ್ಥಿಯಲ್ಲಿ ನಮ್ಮ ಹಕ್ಕುಗಳೇನು? ಎಂಬುದು ಯಾರಿಗೆ ಗೊತ್ತಿದೆ. ನಿನ್ನ ಹಕ್ಕುಗಳಿಗಾಗಿ ಹೋರಾಡು ಎಂದು ಯಾವ ಪೋಷಕರು ಹೇಳುವುದಿಲ್ಲ. ಹಾಗಾಗಿ ಯುವಜನರಿಗೆ ರಾಜನೀತಿ ಅರ್ಥವಾಗುತ್ತಿಲ್ಲ ಮಾತ್ರವಲ್ಲ ಅವರು ಯಾರನ್ನ ಪ್ರಶ್ನಿಸುತ್ತಿಲ್ಲ.

ಬದಲಿಗೆ ನಿನ್ನ ಆಸಕ್ತಿಯ ವಿಷಯ ಆಯ್ಕೆ ಮಾಡಿಕೊಂಡು ಚೆನ್ನಾಗಿ ಓದು, ಕೆರೀರ್ ರೂಪಿಸಿಕೊ ಎಂದು ಹೇಳುತ್ತಾರೆ. ಮಾರುಕಟ್ಟೆಯಲ್ಲಿ ಯಾವುದು ಡಿಮಾಂಡ್ ಇದೆಯೋ ಅದನ್ನು ಓದು ಎನ್ನುತ್ತಾರೆ. ಈ ರೀತಿ ಕೆರೀರ್ ಒತ್ತಡ ಹಾಕಿ ನಮ್ಮನ್ನು ಮೇಶಿನ್ ರೀತಿ ಮಾಡುತ್ತಿದ್ದಾರೆ. ಹಾಗಾಗಿ ಯುವಜನರಿಗೆ ರಾಜಕೀಯ ಪ್ರಬುದ್ಧತೆ ಬಂದಿಲ್ಲ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಬೇಸರಪಟ್ಟುಕೊಳ್ಳಬೇಕಿಲ್ಲ. ಇದರಿಂದಲೇ ನಮಗೆ ಜಾತ್ಯಾತೀತತೆಯ ಅರ್ಥ ಮತ್ತು ಮಹತ್ವ ಗೊತ್ತಾಗಿದೆ. ವೈವಿಧ್ಯತೆ ಮತ್ತು ಪ್ರಜಾಪ್ರಭುತ್ವ ಮಹತ್ವ ಮನವರಿಕೆಯಾಗಿದೆ. ದೇಶದ ಹಲವು ಸಮಸ್ಯೆಗಳು ಮುನ್ನಲೆಗೆ ಬಂದಿವೆ. ರಾಜಕೀಯ ಪ್ರಶ್ನೆಗಳು ಕೇಳಿಬರುತ್ತಿವೆ. ಇದರಿಂದಾಗಿ ಮುಂದೊಂದು ದಿನ ನೈಜ ರಾಜಕೀಯ ಅರಿವು ಎಲ್ಲರಿಗೂ ದಕ್ಕಲು ಸಾಧ್ಯ.

ಅರ್ಥಶಾಸ್ತ್ರದ ಮೇಲೆ ಧರ್ಮಶಾಸ್ತ್ರ ಬಂದು ಕುಳಿತಿದೆ. ಹಾಗಾಗಿ ಇಂದು ದೊಡ್ಡ ಮಟ್ಟದ ಆರ್ಥಿಕ ಕುಸಿತ ಎದುರಾಗಿದ್ದರೂ ಪ್ರಧಾನಿ ಏನೂ ಮಾಡಲಾಗುತ್ತಿಲ್ಲ. ಆದ್ದರಿಂದ ಅವರು ಮತ್ತಷ್ಟು ಧರ್ಮದ ಮೊರೆ ಹೋಗುತ್ತಿದ್ದಾರೆ.

ಇಂದು ದೇಶಭಕ್ತಿಯ ಹೆಸರಿನಲ್ಲಿ ಅಂಧಭಕ್ತಿಯನ್ನು ತುರುಕಲಾಗುತ್ತಿದೆ. ದೇಶವನ್ನು ಹಾಳುಮಾಡುತ್ತಿರುವ ಬಲಾಢ್ಯರನ್ನು ಪ್ರಶ್ನಿಸಿದರೆ ಅದು ದೇಶಪ್ರೇಮ. ಅದು ಬಿಟ್ಟು ಅಮಾಯಕರನ್ನು, ದುರ್ಬಲರನ್ನು ಪ್ರಶ್ನಿಸುವುದಲ್ಲ. ಸರ್ಕಾರವನ್ನು ಪ್ರಶ್ನಿಸಬೇಕೆ ಹೊರತು ವಿರೋಧ ಪಕ್ಷಗಳನ್ನಲ್ಲ.

ಪ್ರಶ್ನಿಸುವ ಮನೋಭಾವ ನಮ್ಮ ಮನೆಗಳಿಂದಲೇ ಆರಂಭವಾಗಬೇಕು. ಶಿಕ್ಷಣ, ಉದ್ಯೋಗ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪ್ರಜಾಪ್ರಭುತ್ವ ವಾತವರಣವನ್ನು ಸೃಷ್ಟಿಸಬೇಕಿದೆ. ಎಲ್ಲರನ್ನು ಪ್ರಶ್ನಿಸುವ ಮನೋಭಾವವಿದ್ದಾಗ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಗೌರವ ಎಂದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...