Homeಮುಖಪುಟಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

- Advertisement -
- Advertisement -

‘ಡಾ. ರಾಜ್‌ಕುಮಾರ್‌’ ಕನ್ನಡ ಮತ್ತು ಕನ್ನಡಿಗರ ಮಟ್ಟಿಗೆ ಇದೊಂದು ಮಾಂತ್ರಿಕ ಶಬ್ಧವೇ ಸರಿ. ಕನ್ನಡಿಗರು ಮತ್ತು ಇಡೀ ಕನ್ನಡದ ಚಿತ್ರರಂಗದ ಪಾಲಿಗೆ ದಶಕಗಳ ಕಾಲ ಅಜಾತಶತೃವಿನಂತೆ ಮಿಂಚಿದ್ದ ರಾಜ್‌ಕುಮಾರ್‌ ಸಿನಿಮಾ ಆಚೆಗೂ ಮೇರು ವ್ಯಕ್ತಿತ್ವ. ಕನ್ನಡ ಚಳುವಳಿಗಳಲ್ಲಿ ಇಂದಿಗೂ ಸಹ ಅಳಿಸಿ ಹಾಕಲಾಗದ ಹೆಸರು-ವ್ಯಕ್ತಿತ್ವವಾಗಿದ್ದಾರೆ.

50ರ ದಶಕದಿಂದ ಕಳೆದ ಶತಮಾನದ ಕೊನೆಯ ದಶಕದವರೆಗೂ ರಾಜ್‌ಕುಮಾರ್‌ ನಾಯಕ ನಟನಾಗಿಯೇ ನಟಿಸಿದ್ದರು. ಈ ಅವಧಿಯಲ್ಲಿ ಸುಮಾರು 208 ಚಿತ್ರಗಳಲ್ಲಿ ನಟಿಸಿದ್ದ ಅವರ ಒಂದೊಂದು ಚಿತ್ರವೂ ಅವರ ಅಭಿಮಾನಿಗಳ ಪಾಲಿಗೆ ಪಾಠವೇ ಆಗಿ ಹೋಗಿದೆ. ಓರ್ವ ಮಗನಾಗಿ, ತಂದೆಯಾಗಿ, ಪ್ರಿಯತಮನಾಗಿ, ಸಮಾಜ ಸುಧಾರಕನಾಗಿ, ದೇಶ ಕಾಯುವ ಸೈನಿಕನಾಗಿ, ಸರ್ಕಾರಿ ಅಧಿಕಾರಿಯಾಗಿ, ಶಿಕ್ಷಕನಾಗಿ ಹೀಗೆ ಅವರು ನಿರ್ವಹಿಸಿದ ಎಲ್ಲಾ ಪಾತ್ರದಲ್ಲೂ ಒಂದು ಸಮಾಜಿಕ ಕಳಕಳಿಯನ್ನು ಈ ನಾಡಿಗೆ ಕೊಟ್ಟು ಹೋಗಿದ್ದಾರೆ.

ನೆನಪಿರಲಿ ರಾಜ್‌ಕುಮಾರ್ ನಿಜ ಜೀವನದಲ್ಲಿ ಸಿಗರೇಟ್‌ ಸೇದುತ್ತಿದ್ದರು. ಆದರೆ, ಅದು ತನ್ನ ಅಭಿಮಾನಿಗಳಿಗೆ ಕೆಟ್ಟ ಅನುಕರಣೆಯಾಗಬಾರದು ಎಂಬ ಏಕೈಕ ಕಾರಣಕ್ಕೆ ಅವರು ತೆರೆಯ ಮೇಲೆ ಎಂದಿಗೂ ಸಿಗರೇಟ್‌ ಸೇದುವ ಹಾಗೂ ಮದ್ಯಪಾನ ಮಾಡುವ ದೃಶ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದು ಅವರ ಸಾಮಾಜಿಕ ಬದ್ಧತೆಯನ್ನು ತೋರಿಸುತ್ತದೆ. ಇಂದು ಅವರ ಜನ್ಮದಿನ. ಆ ನೆಪದಲ್ಲಿ ಡಾ.ರಾಜ್‌ಕುಮಾರ್‌ ಅವರ ಟಾಪ್‌-5 ಅತ್ಯುತ್ತಮ ಚಲನ ಚಿತ್ರಗಳ ಪಟ್ಟಿ ಇಲ್ಲದೆ.

1. ಕಸ್ತೂರಿ ನಿವಾಸ (1971)
ನಿರ್ದೇಶಕ – ದೊರೈ-ಭಗವಾನ್
ಸಂಗೀತ – ಜಿ.ಕೆ.ವೆಂಕಟೇಶ್
ನಿರ್ಮಾಪಕ – ಕೆ.ಸಿ.ಎನ್.ಗೌಡ
ತಾರಾಗಣ – ಡಾ.ರಾಜ್‌ಕುಮಾರ್, ಕೆ.ಎಸ್.ಅಶ್ವತ್, ಜಯಂತಿ, ಭಾರತಿ.

ಕನ್ನಡಿಗರು ಎಂದೂ ಮರೆಯದ ಚಿತ್ರ “ಕಸ್ತೂರಿ ನಿವಾಸ”. ಈ ಚಿತ್ರಕ್ಕಿಂತಲೂ ಹಿಂದೆ ಡಾ.ರಾಜ್‌ಕುಮಾರ್, ಬೇಡರ ಕಣ್ಣಪ್ಪ, ಸತ್ಯ ಹರಿಶ್ಚಂದ್ರ ನಂತಹ ಅದ್ಭುತವಾದ ಪೌರಾಣಿಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ರೂ ಸಹ ಕಸ್ತೂರಿ ನಿವಾಸ ಸಿನಿಮಾ ಸೃಷ್ಠಿ ಮಾಡಿದಷ್ಟು ಭಾವನಾತ್ಮಕ ಅಲೆಯನ್ನು ಭಾಗಶಃ ಆ ಕಾಲಘಟ್ಟದಲ್ಲಿ ಯಾವ ಚಿತ್ರವೂ ಸೃಷ್ಠಿಸಿರಲಾರದು.

ಅಣ್ಣಾವ್ರ ಅದ್ಭುತವಾದ ನಟನೆಗೆ ಪ್ರೇಕ್ಷಕರ ಕಣ್ಣಂಚಲ್ಲಿ ನೀರು ಜಿನುಗಿತ್ತು. ಆ ಕಾಲದಲ್ಲೇ ಈ ಚಿತ್ರ ದಾಖಲೆಯ ಗಳಿಕೆ ಕಂಡಿತ್ತು. ಕನ್ನಡ ಚಿತ್ರೋದ್ಯಮದ ಪಾಲಿಗೆ ಈ ಚಿತ್ರ ಈಗಲೂ ಮೈಲುಗಲ್ಲಾದ್ರೆ, ಕನ್ನಡಿಗರು ಹಾಗೂ ಅಣ್ಣಾವ್ರ ಅಭಿಮಾನಿಗಳ ಪಾಲಿಗೆ ಕಸ್ತೂರಿ ನಿವಾಸ ಎಂದೂ ಮರೆಯಲಾರದ ಚಿತ್ರವೇ ಸರಿ.

2 . ಬಂಗಾರದ ಮನುಷ್ಯ (1972)
ನಿರ್ದೇಶನ – ಸಿದ್ದಲಿಂಗಯ್ಯ
ನಿರ್ಮಾಪಕ – ಆರ್.ಲಕ್ಷ್ಮಣ ಗೋಪಾಲ್
ಸಂಗೀತ – ಜಿ.ಕೆ.ವೆಂಕಟೇಶ್
ತಾರಾಗಣ – ಡಾ.ರಾಜ್‌ಕುಮಾರ್, ಭಾರತಿ, ಎಂ.ಎನ್.ಲಕ್ಷ್ಮೀದೇವಿ

“ಬಂಗಾರದ ಮನುಷ್ಯ” ಕನ್ನಡ ಚಿತ್ರರಂಗದ ಪಾಲಿಗೆ ಮೈಲುಗಲ್ಲಾದ ಚಿತ್ರ. ಡಾ.ರಾಜ್‌ಕುಮಾರ್‌ರವರಿಗೆ ಬಂಗಾರದ ಮನುಷ್ಯ ಎಂಬ ಬಿರುದು ತಂದುಕೊಟ್ಟ ಚಿತ್ರ. ನಿರ್ದೇಶಕ ಸಿದ್ದಲಿಂಗಯ್ಯನವರ ಕಲ್ಪನೆಯಲ್ಲಿ ಮೂಡಿಬಂದಿದ್ದ ಬಂಗಾರದ ಮನುಷ್ಯ ಕೃಷಿ ಹಾಗೂ ಅದರ ಮಹತ್ವವನ್ನು ಸಾರುವ ಚಿತ್ರವಾಗಿದ್ದು, ಆ ಕಾಲಕ್ಕೆ ಭಾರೀ ಜನಪ್ರಿಯತೆ ಗಳಿಸಿತ್ತು.

ಈ ಚಿತ್ರವನ್ನು ವೀಕ್ಷಿಸಿದ ಅಸಂಖ್ಯಾತ ಯುವಕರು ಮತ್ತೆ ಹಳ್ಳಿಗಳಿಗೆ ಮರಳಿ ಕೃಷಿಯಲ್ಲಿ ತೊಡಗಿಕೊಂಡರು ಎಂಬುದು ಇತಿಹಾಸ. ಹೀಗೆ ಒಂದು ಚಿತ್ರದ ಮೂಲಕ ಸಾಮಾಜಿಕ ಕ್ರಾಂತಿ ಸಾಧ್ಯ ಎಂಬ ಸಾಧ್ಯತೆಯನ್ನು ಕನ್ನಡಿಗರ ಪಾಲಿಗೆ ಸಾಧಿಸಿ ತೋರಿಸಿದ ಕೀರ್ತಿ ಈ ಚಿತ್ರಕ್ಕೆ ಮತ್ತು ಡಾ.ರಾಜ್‌ಕುಮಾರ್‌ ಎಂಬ ಎರಡು ಶಬ್ಧದ ಶಕ್ತಿಗೆ ಸಲ್ಲುತ್ತದೆ.

3. ಗಂಧದಗುಡಿ (1973)
ನಿರ್ದೇಶಕ – ವಿಜಯ್
ನಿರ್ಮಾಪಕ – ಎಂ.ಪಿ.ಶಂಕರ್
ಸಂಗೀತ – ರಾಜನ್-ನಾಗೇಂದ್ರ
ತಾರಾಗಣ – ಡಾ.ರಾಜ್‌ಕುಮಾರ್, ಡಾ.ವಿಷ್ಣುವರ್ಧನ್, ಕಲ್ಪನಾ.

ಕನ್ನಡ ರಾಜ್ಯೋತ್ಸವ ಸಮಾರಂಭಗಳಲ್ಲಿ ಈಗಲೂ ಕಡ್ಡಾಯ ಹಾಡಾಗಿರುವ “ನಾವಾಡುವ ನುಡಿಯೇ ಕನ್ನಡ ನುಡಿ” ಎಂಬ ಹಾಡು ಎಲ್ಲಿಯವರೆಗೆ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿರುತ್ತದೆಯೋ ಅಲ್ಲಿಯ ವರೆಗೆ “ಗಂಧದಗುಡಿ” ಎಂಬ ಚಿತ್ರ ಜನರ ಸ್ಮೃತಿ ಪಟಲದಿಂದ ಮರೆಯಾಗಲು ಸಾಧ್ಯವೇ ಇಲ್ಲ.

ಇದು ಸ್ಯಾಂಡಲ್‌ವುಡ್ ಇತಿಹಾಸದಲ್ಲಿ ಎರಡು ಮೇರು ಪರ್ವತಗಳಾಗಿರುವ ಡಾ.ರಾಜ್‌ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಒಟ್ಟಿಗೆ ನಟಿಸಿದ ಏಕೈಕ ಚಿತ್ರವೂ ಹೌದು. ಅರಣ್ಯ ಸಂರಕ್ಷಣೆ ಕುರಿತು ಜನರಲ್ಲಿ ಪ್ರಜ್ಞೆ ಮೂಡಿಸಿದ ಈ ಚಿತ್ರ ಆ ಕಾಲದಲ್ಲಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಹಿರಿಯ ನಿರ್ದೇಶಕ ವಿಜಯ್ ವೃತ್ತಿ ಬದುಕಿನ ಅತ್ಯಂತ ಶ್ರೇಷ್ಠ ಚಿತ್ರಗಳ ಪೈಕಿ ಇದಕ್ಕೆ ಅಗ್ರಸ್ಥಾನ. ಆದರೆ ಭವಿಷ್ಯದಲ್ಲಿ ಡಾ.ರಾಜ್‌ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಮತ್ತೊಮ್ಮೆ ಜತೆಯಾಗಿ ನಟಿಸದಿರುವುದು ಕನ್ನಡಿಗರ ಪಾಲಿಗೆ ದುರಾದೃಷ್ಟವೇ ಸರಿ.

4. ಒಂದು ಮುತ್ತಿನ ಕಥೆ (1987)
ನಿರ್ದೇಶಕ – ಶಂಕರ್‌ನಾಗ್
ನಿರ್ಮಾಪಕ – ಎ.ದ್ವಾರಕಾನಾಥ್
ಸಂಗೀತ – ಎಲ್.ವೈದ್ಯನಾಥ್
ತಾರಾಗಣ – ಡಾ.ರಾಜ್, ಅರ್ಚನಾ

ಒಂದು ಮುತ್ತಿನ ಕಥೆ” ಶಂಕರ್‌ನಾಗ್ ನಿರ್ದೇಶನದ ಕೊನೆಯ ಚಿತ್ರ. ಅನೇಕ ಕಾರಣಗಳಿಗಾಗಿ ಇದು ಕನ್ನಡದ ಮಹತ್ವದ ಚಿತ್ರಗಳಲ್ಲೊಂದು. ಕನ್ನಡದ ಕ್ರಿಯಾಶೀಲ ಕಲಾವಿದ ಹಾಗೂ ನಿರ್ದೇಶಕ ಎಂದೇ ಹೆಸರಾದ ಶಂಕರ್‌ನಾಗ್ ಈ ಚಿತ್ರದ ಮೂಲಕ ಕನ್ನಡದ ಚಿತ್ರರಂಗವನ್ನು ತಾಂತ್ರಿಕವಾಗಿ ಉನ್ನತ ಮಟ್ಟಕ್ಕೆ ಏರಿಸಿದ್ದರು.

ಡಾ.ರಾಜ್‌ಕುಮಾರ್ ಅಭಿನಯದ ಈ ಚಿತ್ರದಲ್ಲಿ ಮೊದಲ ಬಾರಿಗೆ ನೀರಿನ ಆಳದಲ್ಲಿ ಚಿತ್ರಿಸಲಾಗಿತ್ತು. ಸಮುದ್ರದಾಳದಲ್ಲಿ ನಾಯಕ ಕೃತಕ ಆಕ್ಟೋಪಸ್ ಜತೆಗೆ ಸಾಹಸ ಮಾಡುವ ಹಲವು ದೃಶ್ಯಗಳನ್ನು ಸೆರೆ ಹಿಡಿಯಲಾಗಿತ್ತು. ಆ ಕಾಲಕ್ಕೆ ಇದು ಕನ್ನಡ ಚಿತ್ರರಂಗಕ್ಕೆ ತಾಂತ್ರಿಕವಾಗಿ ಹೊಸ ಭಾಷ್ಯ ಬರೆದ ಚಿತ್ರವಾಗಿತ್ತು.

ತಾಂತ್ರಿಕವಾಗಿ ಮಾತ್ರವಲ್ಲದೆ ಚಿತ್ರದ ಕಥೆಯನ್ನೂ ಸಹ ಶಂಕರ್‌ನಾಗ್ ಮನೋಜ್ಞವಾಗಿ ಚಿತ್ರಿಸಿದ್ದರು. ಮುತ್ತಿನ ಶಿಕಾರಿಗೆ ಹೋಗುವ ನಾಯಕನಿಗೆ ದೊಡ್ಡ ಗಾತ್ರದ ಅಪರೂಪದ ಮುತ್ತು ಸಿಗುತ್ತಿದೆ. ಆದರೆ ಅನಕ್ಷರಸ್ಥರಾದ ಈ ಬುಡಕಟ್ಟು ಸಮಾಜದವರನ್ನು ವ್ಯಾಪಾರಿಗಳು ಹೇಗೆಲ್ಲ ಮೋಸ ಮಾಡಿ ಕೊಳ್ಳೆ ಹೊಡೆಯಲು ಪ್ರಯತ್ನಿಸುತ್ತಾರೆ. ಕೊನೆಗೆ ನಾಯಕ ಆ ಮುತ್ತನ್ನು ಏನು ಮಾಡುತ್ತಾನೆ ಎಂಬ ಅಂಶವನ್ನು ಮನಮುಟ್ಟುವಂತೆ ಚಿತ್ರಿಸಲಾಗಿತ್ತು.

ಚಿತ್ರ ಬಿಡುಗಡೆಯಾದಾಗ ಡಾ.ರಾಜ್ ನಟನೆ ಹಾಗೂ ಶಂಕರ್‌ನಾಗ್ ಕ್ರಿಯಾಶೀಲತೆಗೆ ವಿಮರ್ಶಕರಿಂದ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಆದ್ರೆ ಡಾ.ರಾಜ್‌ಕುಮಾರ್ ರಂತಹ ಘಟಾನುಘಟಿ ನಟಿಸಿಯೂ ಸಹ ಈ ಚಿತ್ರ ನಿರೀಕ್ಷಿತ ಗೆಲುವು ಸಾಧಿಸುವಲ್ಲಿ ವಿಫಲವಾಗಿತ್ತು. ಒಟ್ಟಾರೆ ಕನ್ನಡಿಗರು ನೋಡಲೇಬೇಕಿದ್ದ ಗೆಲ್ಲಿಸಲೇಬೇಕಿದ್ದ ಅಪರೂಪದ ಚಿತ್ರವೊಂದು ಸೋಲಿನ ರುಚಿ ಕಂಡಿದ್ದು ಮಾತ್ರ ವಿಪರ್ಯಾಸ.

5. ಜೀವನ ಚೈತ್ರ (1992)
ನಿರ್ದೇಶಕ – ದೊರೆ-ಭಗವಾನ್
ನಿರ್ಮಾಪಕರು – ಪಾರ್ವತಮ್ಮ ರಾಜ್‌ಕುಮಾರ್
ಸಂಗೀತ – ಉಪೇಂದ್ರ ಕುಮಾರ್
ತಾರಾಗಣ – ಡಾ.ರಾಜ್, ಮಾಧವಿ, ಸುಧಾರಾಣಿ

ಕನ್ನಡ ಚಿತ್ರರಂಗದಲ್ಲಿ ಸಾಮಾಜಿಕ ಕಳಕಳಿಯನ್ನು ಪರಿಣಾಮಕಾರಿಯಾಗಿ ಜನರಿಗೆ ಮುಟ್ಟಿಸಿದ ಹಾಗೂ ಆ ಮೂಲಕ ಕೆಲವು ಪರಿಣಾಮಕಾರಿ ಸಾಮಾಜಿಕ ಬದಲಾವಣೆಗೆ ಕಾರಣವಾದ ಕೆಲವೇ ಕೆಲವು ಚಿತ್ರಗಳ ಪೈಕಿ ಜೀವನ ಚೈತ್ರ ಸಹ ಒಂದು.

ಈ ಚಿತ್ರದಲ್ಲಿ ಡಾ.ರಾಜ್‌ಕುಮಾರ್ ಮದ್ಯ ಸೇವನೆಯ ವಿರುದ್ಧ ಹೋರಾಡುವ ಪಾತ್ರದಲ್ಲಿಅಭಿನಯಿಸಿದ್ದರು. ಚಿತ್ರದ ನಾಯಕಿ ಮಾಧವಿ. ಸತತ ಮೂರು ವರ್ಷ ಯಾವುದೇ ಸಿನಿಮಾದಲ್ಲಿ ನಟಿಸದ ರಾಜ್‌ಕುಮಾರ್‌ ಈ ಚಿತ್ರದ ಮೂಲಕ ತೆರೆಗೆ ಮರಳಿದ್ದರು. ಅಲ್ಲದೆ, ಈ ಚಿತ್ರ ವರ್ಷಗಳ ಕಾಲ ಚಿತ್ರಮಂದಿರದಲ್ಲಿ ಪ್ರದರ್ಶನ ಕಾಣುವ ಮೂಲಕ ದಾಖಲೆ ಬರೆದಿತ್ತು.

ಈ ಚಿತ್ರ ವಿಶಾಲಾಕ್ಷಿ ದಕ್ಷಿಣಾಮೂರ್ತಿ ಅವರ ಇದೇ ಹೆಸರಿನ ಕಾದಂಬರಿ ಆಧಾರಿತ ಚಲನಚಿತ್ರ ಎಂಬುದು ವಿಶೇಷ. ಈ ಚಿತ್ರದ ಪರಿಣಾಮವಾಗಿ ಕರ್ನಾಟಕದಲ್ಲಿ ಹಲವಾರು ಹೆಂಡದಂಗಡಿಗಳು ಮುಚ್ಚಲ್ಪಟ್ಟವು ಹಾಗೂ ಡಾ.ರಾಜ್ ಹಲವು ಅಭಿಮಾನಿಗಳು ಮದ್ಯಪಾನ ತ್ಯಜಿಸಿದರೆಂದು ಅಂದಿನ ದಿನಪತ್ರಿಕೆಗಳಲ್ಲಿ ಪ್ರಕಟವಾಗಿತ್ತು.

ಈ ಚಿತ್ರದ “ನಾದಮಯ” ಗೀತೆಗಾಗಿ ರಾಜ್ ಕುಮಾರ್ 40ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಗೆ ಭಾಜನರಾದರು.


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...