Homeಮುಖಪುಟಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

- Advertisement -
- Advertisement -

‘ಡಾ. ರಾಜ್‌ಕುಮಾರ್‌’ ಕನ್ನಡ ಮತ್ತು ಕನ್ನಡಿಗರ ಮಟ್ಟಿಗೆ ಇದೊಂದು ಮಾಂತ್ರಿಕ ಶಬ್ಧವೇ ಸರಿ. ಕನ್ನಡಿಗರು ಮತ್ತು ಇಡೀ ಕನ್ನಡದ ಚಿತ್ರರಂಗದ ಪಾಲಿಗೆ ದಶಕಗಳ ಕಾಲ ಅಜಾತಶತೃವಿನಂತೆ ಮಿಂಚಿದ್ದ ರಾಜ್‌ಕುಮಾರ್‌ ಸಿನಿಮಾ ಆಚೆಗೂ ಮೇರು ವ್ಯಕ್ತಿತ್ವ. ಕನ್ನಡ ಚಳುವಳಿಗಳಲ್ಲಿ ಇಂದಿಗೂ ಸಹ ಅಳಿಸಿ ಹಾಕಲಾಗದ ಹೆಸರು-ವ್ಯಕ್ತಿತ್ವವಾಗಿದ್ದಾರೆ.

50ರ ದಶಕದಿಂದ ಕಳೆದ ಶತಮಾನದ ಕೊನೆಯ ದಶಕದವರೆಗೂ ರಾಜ್‌ಕುಮಾರ್‌ ನಾಯಕ ನಟನಾಗಿಯೇ ನಟಿಸಿದ್ದರು. ಈ ಅವಧಿಯಲ್ಲಿ ಸುಮಾರು 208 ಚಿತ್ರಗಳಲ್ಲಿ ನಟಿಸಿದ್ದ ಅವರ ಒಂದೊಂದು ಚಿತ್ರವೂ ಅವರ ಅಭಿಮಾನಿಗಳ ಪಾಲಿಗೆ ಪಾಠವೇ ಆಗಿ ಹೋಗಿದೆ. ಓರ್ವ ಮಗನಾಗಿ, ತಂದೆಯಾಗಿ, ಪ್ರಿಯತಮನಾಗಿ, ಸಮಾಜ ಸುಧಾರಕನಾಗಿ, ದೇಶ ಕಾಯುವ ಸೈನಿಕನಾಗಿ, ಸರ್ಕಾರಿ ಅಧಿಕಾರಿಯಾಗಿ, ಶಿಕ್ಷಕನಾಗಿ ಹೀಗೆ ಅವರು ನಿರ್ವಹಿಸಿದ ಎಲ್ಲಾ ಪಾತ್ರದಲ್ಲೂ ಒಂದು ಸಮಾಜಿಕ ಕಳಕಳಿಯನ್ನು ಈ ನಾಡಿಗೆ ಕೊಟ್ಟು ಹೋಗಿದ್ದಾರೆ.

ನೆನಪಿರಲಿ ರಾಜ್‌ಕುಮಾರ್ ನಿಜ ಜೀವನದಲ್ಲಿ ಸಿಗರೇಟ್‌ ಸೇದುತ್ತಿದ್ದರು. ಆದರೆ, ಅದು ತನ್ನ ಅಭಿಮಾನಿಗಳಿಗೆ ಕೆಟ್ಟ ಅನುಕರಣೆಯಾಗಬಾರದು ಎಂಬ ಏಕೈಕ ಕಾರಣಕ್ಕೆ ಅವರು ತೆರೆಯ ಮೇಲೆ ಎಂದಿಗೂ ಸಿಗರೇಟ್‌ ಸೇದುವ ಹಾಗೂ ಮದ್ಯಪಾನ ಮಾಡುವ ದೃಶ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದು ಅವರ ಸಾಮಾಜಿಕ ಬದ್ಧತೆಯನ್ನು ತೋರಿಸುತ್ತದೆ. ಇಂದು ಅವರ ಜನ್ಮದಿನ. ಆ ನೆಪದಲ್ಲಿ ಡಾ.ರಾಜ್‌ಕುಮಾರ್‌ ಅವರ ಟಾಪ್‌-5 ಅತ್ಯುತ್ತಮ ಚಲನ ಚಿತ್ರಗಳ ಪಟ್ಟಿ ಇಲ್ಲದೆ.

1. ಕಸ್ತೂರಿ ನಿವಾಸ (1971)
ನಿರ್ದೇಶಕ – ದೊರೈ-ಭಗವಾನ್
ಸಂಗೀತ – ಜಿ.ಕೆ.ವೆಂಕಟೇಶ್
ನಿರ್ಮಾಪಕ – ಕೆ.ಸಿ.ಎನ್.ಗೌಡ
ತಾರಾಗಣ – ಡಾ.ರಾಜ್‌ಕುಮಾರ್, ಕೆ.ಎಸ್.ಅಶ್ವತ್, ಜಯಂತಿ, ಭಾರತಿ.

ಕನ್ನಡಿಗರು ಎಂದೂ ಮರೆಯದ ಚಿತ್ರ “ಕಸ್ತೂರಿ ನಿವಾಸ”. ಈ ಚಿತ್ರಕ್ಕಿಂತಲೂ ಹಿಂದೆ ಡಾ.ರಾಜ್‌ಕುಮಾರ್, ಬೇಡರ ಕಣ್ಣಪ್ಪ, ಸತ್ಯ ಹರಿಶ್ಚಂದ್ರ ನಂತಹ ಅದ್ಭುತವಾದ ಪೌರಾಣಿಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ರೂ ಸಹ ಕಸ್ತೂರಿ ನಿವಾಸ ಸಿನಿಮಾ ಸೃಷ್ಠಿ ಮಾಡಿದಷ್ಟು ಭಾವನಾತ್ಮಕ ಅಲೆಯನ್ನು ಭಾಗಶಃ ಆ ಕಾಲಘಟ್ಟದಲ್ಲಿ ಯಾವ ಚಿತ್ರವೂ ಸೃಷ್ಠಿಸಿರಲಾರದು.

ಅಣ್ಣಾವ್ರ ಅದ್ಭುತವಾದ ನಟನೆಗೆ ಪ್ರೇಕ್ಷಕರ ಕಣ್ಣಂಚಲ್ಲಿ ನೀರು ಜಿನುಗಿತ್ತು. ಆ ಕಾಲದಲ್ಲೇ ಈ ಚಿತ್ರ ದಾಖಲೆಯ ಗಳಿಕೆ ಕಂಡಿತ್ತು. ಕನ್ನಡ ಚಿತ್ರೋದ್ಯಮದ ಪಾಲಿಗೆ ಈ ಚಿತ್ರ ಈಗಲೂ ಮೈಲುಗಲ್ಲಾದ್ರೆ, ಕನ್ನಡಿಗರು ಹಾಗೂ ಅಣ್ಣಾವ್ರ ಅಭಿಮಾನಿಗಳ ಪಾಲಿಗೆ ಕಸ್ತೂರಿ ನಿವಾಸ ಎಂದೂ ಮರೆಯಲಾರದ ಚಿತ್ರವೇ ಸರಿ.

2 . ಬಂಗಾರದ ಮನುಷ್ಯ (1972)
ನಿರ್ದೇಶನ – ಸಿದ್ದಲಿಂಗಯ್ಯ
ನಿರ್ಮಾಪಕ – ಆರ್.ಲಕ್ಷ್ಮಣ ಗೋಪಾಲ್
ಸಂಗೀತ – ಜಿ.ಕೆ.ವೆಂಕಟೇಶ್
ತಾರಾಗಣ – ಡಾ.ರಾಜ್‌ಕುಮಾರ್, ಭಾರತಿ, ಎಂ.ಎನ್.ಲಕ್ಷ್ಮೀದೇವಿ

“ಬಂಗಾರದ ಮನುಷ್ಯ” ಕನ್ನಡ ಚಿತ್ರರಂಗದ ಪಾಲಿಗೆ ಮೈಲುಗಲ್ಲಾದ ಚಿತ್ರ. ಡಾ.ರಾಜ್‌ಕುಮಾರ್‌ರವರಿಗೆ ಬಂಗಾರದ ಮನುಷ್ಯ ಎಂಬ ಬಿರುದು ತಂದುಕೊಟ್ಟ ಚಿತ್ರ. ನಿರ್ದೇಶಕ ಸಿದ್ದಲಿಂಗಯ್ಯನವರ ಕಲ್ಪನೆಯಲ್ಲಿ ಮೂಡಿಬಂದಿದ್ದ ಬಂಗಾರದ ಮನುಷ್ಯ ಕೃಷಿ ಹಾಗೂ ಅದರ ಮಹತ್ವವನ್ನು ಸಾರುವ ಚಿತ್ರವಾಗಿದ್ದು, ಆ ಕಾಲಕ್ಕೆ ಭಾರೀ ಜನಪ್ರಿಯತೆ ಗಳಿಸಿತ್ತು.

ಈ ಚಿತ್ರವನ್ನು ವೀಕ್ಷಿಸಿದ ಅಸಂಖ್ಯಾತ ಯುವಕರು ಮತ್ತೆ ಹಳ್ಳಿಗಳಿಗೆ ಮರಳಿ ಕೃಷಿಯಲ್ಲಿ ತೊಡಗಿಕೊಂಡರು ಎಂಬುದು ಇತಿಹಾಸ. ಹೀಗೆ ಒಂದು ಚಿತ್ರದ ಮೂಲಕ ಸಾಮಾಜಿಕ ಕ್ರಾಂತಿ ಸಾಧ್ಯ ಎಂಬ ಸಾಧ್ಯತೆಯನ್ನು ಕನ್ನಡಿಗರ ಪಾಲಿಗೆ ಸಾಧಿಸಿ ತೋರಿಸಿದ ಕೀರ್ತಿ ಈ ಚಿತ್ರಕ್ಕೆ ಮತ್ತು ಡಾ.ರಾಜ್‌ಕುಮಾರ್‌ ಎಂಬ ಎರಡು ಶಬ್ಧದ ಶಕ್ತಿಗೆ ಸಲ್ಲುತ್ತದೆ.

3. ಗಂಧದಗುಡಿ (1973)
ನಿರ್ದೇಶಕ – ವಿಜಯ್
ನಿರ್ಮಾಪಕ – ಎಂ.ಪಿ.ಶಂಕರ್
ಸಂಗೀತ – ರಾಜನ್-ನಾಗೇಂದ್ರ
ತಾರಾಗಣ – ಡಾ.ರಾಜ್‌ಕುಮಾರ್, ಡಾ.ವಿಷ್ಣುವರ್ಧನ್, ಕಲ್ಪನಾ.

ಕನ್ನಡ ರಾಜ್ಯೋತ್ಸವ ಸಮಾರಂಭಗಳಲ್ಲಿ ಈಗಲೂ ಕಡ್ಡಾಯ ಹಾಡಾಗಿರುವ “ನಾವಾಡುವ ನುಡಿಯೇ ಕನ್ನಡ ನುಡಿ” ಎಂಬ ಹಾಡು ಎಲ್ಲಿಯವರೆಗೆ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿರುತ್ತದೆಯೋ ಅಲ್ಲಿಯ ವರೆಗೆ “ಗಂಧದಗುಡಿ” ಎಂಬ ಚಿತ್ರ ಜನರ ಸ್ಮೃತಿ ಪಟಲದಿಂದ ಮರೆಯಾಗಲು ಸಾಧ್ಯವೇ ಇಲ್ಲ.

ಇದು ಸ್ಯಾಂಡಲ್‌ವುಡ್ ಇತಿಹಾಸದಲ್ಲಿ ಎರಡು ಮೇರು ಪರ್ವತಗಳಾಗಿರುವ ಡಾ.ರಾಜ್‌ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಒಟ್ಟಿಗೆ ನಟಿಸಿದ ಏಕೈಕ ಚಿತ್ರವೂ ಹೌದು. ಅರಣ್ಯ ಸಂರಕ್ಷಣೆ ಕುರಿತು ಜನರಲ್ಲಿ ಪ್ರಜ್ಞೆ ಮೂಡಿಸಿದ ಈ ಚಿತ್ರ ಆ ಕಾಲದಲ್ಲಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು. ಹಿರಿಯ ನಿರ್ದೇಶಕ ವಿಜಯ್ ವೃತ್ತಿ ಬದುಕಿನ ಅತ್ಯಂತ ಶ್ರೇಷ್ಠ ಚಿತ್ರಗಳ ಪೈಕಿ ಇದಕ್ಕೆ ಅಗ್ರಸ್ಥಾನ. ಆದರೆ ಭವಿಷ್ಯದಲ್ಲಿ ಡಾ.ರಾಜ್‌ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಮತ್ತೊಮ್ಮೆ ಜತೆಯಾಗಿ ನಟಿಸದಿರುವುದು ಕನ್ನಡಿಗರ ಪಾಲಿಗೆ ದುರಾದೃಷ್ಟವೇ ಸರಿ.

4. ಒಂದು ಮುತ್ತಿನ ಕಥೆ (1987)
ನಿರ್ದೇಶಕ – ಶಂಕರ್‌ನಾಗ್
ನಿರ್ಮಾಪಕ – ಎ.ದ್ವಾರಕಾನಾಥ್
ಸಂಗೀತ – ಎಲ್.ವೈದ್ಯನಾಥ್
ತಾರಾಗಣ – ಡಾ.ರಾಜ್, ಅರ್ಚನಾ

ಒಂದು ಮುತ್ತಿನ ಕಥೆ” ಶಂಕರ್‌ನಾಗ್ ನಿರ್ದೇಶನದ ಕೊನೆಯ ಚಿತ್ರ. ಅನೇಕ ಕಾರಣಗಳಿಗಾಗಿ ಇದು ಕನ್ನಡದ ಮಹತ್ವದ ಚಿತ್ರಗಳಲ್ಲೊಂದು. ಕನ್ನಡದ ಕ್ರಿಯಾಶೀಲ ಕಲಾವಿದ ಹಾಗೂ ನಿರ್ದೇಶಕ ಎಂದೇ ಹೆಸರಾದ ಶಂಕರ್‌ನಾಗ್ ಈ ಚಿತ್ರದ ಮೂಲಕ ಕನ್ನಡದ ಚಿತ್ರರಂಗವನ್ನು ತಾಂತ್ರಿಕವಾಗಿ ಉನ್ನತ ಮಟ್ಟಕ್ಕೆ ಏರಿಸಿದ್ದರು.

ಡಾ.ರಾಜ್‌ಕುಮಾರ್ ಅಭಿನಯದ ಈ ಚಿತ್ರದಲ್ಲಿ ಮೊದಲ ಬಾರಿಗೆ ನೀರಿನ ಆಳದಲ್ಲಿ ಚಿತ್ರಿಸಲಾಗಿತ್ತು. ಸಮುದ್ರದಾಳದಲ್ಲಿ ನಾಯಕ ಕೃತಕ ಆಕ್ಟೋಪಸ್ ಜತೆಗೆ ಸಾಹಸ ಮಾಡುವ ಹಲವು ದೃಶ್ಯಗಳನ್ನು ಸೆರೆ ಹಿಡಿಯಲಾಗಿತ್ತು. ಆ ಕಾಲಕ್ಕೆ ಇದು ಕನ್ನಡ ಚಿತ್ರರಂಗಕ್ಕೆ ತಾಂತ್ರಿಕವಾಗಿ ಹೊಸ ಭಾಷ್ಯ ಬರೆದ ಚಿತ್ರವಾಗಿತ್ತು.

ತಾಂತ್ರಿಕವಾಗಿ ಮಾತ್ರವಲ್ಲದೆ ಚಿತ್ರದ ಕಥೆಯನ್ನೂ ಸಹ ಶಂಕರ್‌ನಾಗ್ ಮನೋಜ್ಞವಾಗಿ ಚಿತ್ರಿಸಿದ್ದರು. ಮುತ್ತಿನ ಶಿಕಾರಿಗೆ ಹೋಗುವ ನಾಯಕನಿಗೆ ದೊಡ್ಡ ಗಾತ್ರದ ಅಪರೂಪದ ಮುತ್ತು ಸಿಗುತ್ತಿದೆ. ಆದರೆ ಅನಕ್ಷರಸ್ಥರಾದ ಈ ಬುಡಕಟ್ಟು ಸಮಾಜದವರನ್ನು ವ್ಯಾಪಾರಿಗಳು ಹೇಗೆಲ್ಲ ಮೋಸ ಮಾಡಿ ಕೊಳ್ಳೆ ಹೊಡೆಯಲು ಪ್ರಯತ್ನಿಸುತ್ತಾರೆ. ಕೊನೆಗೆ ನಾಯಕ ಆ ಮುತ್ತನ್ನು ಏನು ಮಾಡುತ್ತಾನೆ ಎಂಬ ಅಂಶವನ್ನು ಮನಮುಟ್ಟುವಂತೆ ಚಿತ್ರಿಸಲಾಗಿತ್ತು.

ಚಿತ್ರ ಬಿಡುಗಡೆಯಾದಾಗ ಡಾ.ರಾಜ್ ನಟನೆ ಹಾಗೂ ಶಂಕರ್‌ನಾಗ್ ಕ್ರಿಯಾಶೀಲತೆಗೆ ವಿಮರ್ಶಕರಿಂದ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಆದ್ರೆ ಡಾ.ರಾಜ್‌ಕುಮಾರ್ ರಂತಹ ಘಟಾನುಘಟಿ ನಟಿಸಿಯೂ ಸಹ ಈ ಚಿತ್ರ ನಿರೀಕ್ಷಿತ ಗೆಲುವು ಸಾಧಿಸುವಲ್ಲಿ ವಿಫಲವಾಗಿತ್ತು. ಒಟ್ಟಾರೆ ಕನ್ನಡಿಗರು ನೋಡಲೇಬೇಕಿದ್ದ ಗೆಲ್ಲಿಸಲೇಬೇಕಿದ್ದ ಅಪರೂಪದ ಚಿತ್ರವೊಂದು ಸೋಲಿನ ರುಚಿ ಕಂಡಿದ್ದು ಮಾತ್ರ ವಿಪರ್ಯಾಸ.

5. ಜೀವನ ಚೈತ್ರ (1992)
ನಿರ್ದೇಶಕ – ದೊರೆ-ಭಗವಾನ್
ನಿರ್ಮಾಪಕರು – ಪಾರ್ವತಮ್ಮ ರಾಜ್‌ಕುಮಾರ್
ಸಂಗೀತ – ಉಪೇಂದ್ರ ಕುಮಾರ್
ತಾರಾಗಣ – ಡಾ.ರಾಜ್, ಮಾಧವಿ, ಸುಧಾರಾಣಿ

ಕನ್ನಡ ಚಿತ್ರರಂಗದಲ್ಲಿ ಸಾಮಾಜಿಕ ಕಳಕಳಿಯನ್ನು ಪರಿಣಾಮಕಾರಿಯಾಗಿ ಜನರಿಗೆ ಮುಟ್ಟಿಸಿದ ಹಾಗೂ ಆ ಮೂಲಕ ಕೆಲವು ಪರಿಣಾಮಕಾರಿ ಸಾಮಾಜಿಕ ಬದಲಾವಣೆಗೆ ಕಾರಣವಾದ ಕೆಲವೇ ಕೆಲವು ಚಿತ್ರಗಳ ಪೈಕಿ ಜೀವನ ಚೈತ್ರ ಸಹ ಒಂದು.

ಈ ಚಿತ್ರದಲ್ಲಿ ಡಾ.ರಾಜ್‌ಕುಮಾರ್ ಮದ್ಯ ಸೇವನೆಯ ವಿರುದ್ಧ ಹೋರಾಡುವ ಪಾತ್ರದಲ್ಲಿಅಭಿನಯಿಸಿದ್ದರು. ಚಿತ್ರದ ನಾಯಕಿ ಮಾಧವಿ. ಸತತ ಮೂರು ವರ್ಷ ಯಾವುದೇ ಸಿನಿಮಾದಲ್ಲಿ ನಟಿಸದ ರಾಜ್‌ಕುಮಾರ್‌ ಈ ಚಿತ್ರದ ಮೂಲಕ ತೆರೆಗೆ ಮರಳಿದ್ದರು. ಅಲ್ಲದೆ, ಈ ಚಿತ್ರ ವರ್ಷಗಳ ಕಾಲ ಚಿತ್ರಮಂದಿರದಲ್ಲಿ ಪ್ರದರ್ಶನ ಕಾಣುವ ಮೂಲಕ ದಾಖಲೆ ಬರೆದಿತ್ತು.

ಈ ಚಿತ್ರ ವಿಶಾಲಾಕ್ಷಿ ದಕ್ಷಿಣಾಮೂರ್ತಿ ಅವರ ಇದೇ ಹೆಸರಿನ ಕಾದಂಬರಿ ಆಧಾರಿತ ಚಲನಚಿತ್ರ ಎಂಬುದು ವಿಶೇಷ. ಈ ಚಿತ್ರದ ಪರಿಣಾಮವಾಗಿ ಕರ್ನಾಟಕದಲ್ಲಿ ಹಲವಾರು ಹೆಂಡದಂಗಡಿಗಳು ಮುಚ್ಚಲ್ಪಟ್ಟವು ಹಾಗೂ ಡಾ.ರಾಜ್ ಹಲವು ಅಭಿಮಾನಿಗಳು ಮದ್ಯಪಾನ ತ್ಯಜಿಸಿದರೆಂದು ಅಂದಿನ ದಿನಪತ್ರಿಕೆಗಳಲ್ಲಿ ಪ್ರಕಟವಾಗಿತ್ತು.

ಈ ಚಿತ್ರದ “ನಾದಮಯ” ಗೀತೆಗಾಗಿ ರಾಜ್ ಕುಮಾರ್ 40ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿಗೆ ಭಾಜನರಾದರು.


ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...